Bihar election results: NDA takes a huge lead

ಬಿಹಾರ ಚುನಾವಣೆ ಫಲಿತಾಂಶ: NDAಗೆ ಭರ್ಜರಿ ಮುನ್ನಡೆ

ಬೆಂಗಳೂರು: ತೀವ್ರ ಜಿದ್ದಾಜಿದ್ದಿಯಿಂದ ನಡೆದ ಬಿಹಾರ ವಿಧಾನಸಭಾ ಚುನಾವಣೆ (Bihar election,) ಮತ ಎಣಿಕೆ ಕಾರ್ಯ ಆರಂಭವಾಗಿದ್ದು, ಎನ್‌ಡಿಎಗೆ ಭರ್ಜರಿ ಮುನ್ಸೂಚನೆ ದೊರೆತಿದೆ.

ವೋಟ್ ಚೋರಿ ಆರೋಪ, ನಿರುದ್ಯೋಗ ಸಮಸ್ಯೆ, ಉಚಿತ ಯೋಜನೆ, ಸರ್ಕಾರಿ ಉದ್ಯೋಗ ಘೋಷಣೆ ಸೇರಿದಂತೆ ತೀವ್ರ ಜಿದ್ದಾಜಿದ್ದಿಯಿಂದ ನಡೆದ ಬಿಹಾರ ವಿಧಾನಸಭಾ ಚುನಾವಣೆ (Bihar election,) ಮತ ಎಣಿಕೆ ಕಾರ್ಯ ತೀವ್ರಗತಿಯಲ್ಲಿ ಸಾಗಿದೆ.

ದೇಶದ ವಿಶ್ವಾಸಾರ್ಹ ಸುದ್ದಿ ಸಂಸ್ಥೆ ದೈನಿಕ್ ಬಾಸ್ಕರ್ ವರದಿ ಅನ್ವಯ ಇಂದು ಬೆಳಗ್ಗೆ 9.30ರಂತೆ 243 ಕ್ಷೇತ್ರಗಳಲ್ಲಿ 219 ಕ್ಷೇತ್ರಗಳ ಮತ ಎಣಿಕೆ ಅನ್ಚಯ ಆಡಳಿತಾರೂಢ ಎನ್‌ಡಿಎ 160 ಸ್ಥಾನಗಳಲ್ಲಿ ಮುನ್ನಡೆ ದೊರೆತಿದೆ.

ಉಳಿದಂತೆ ಮಹಾಘಟಬಂಧನ 62 ಸ್ಥಾನಗಳಲ್ಲಿ, ಇತರೆ 5 ಸ್ಥಾನಗಳಲ್ಲಿ ಮುಂದಿದ್ದಾರೆ.

ಇನ್ನೂ ಚುನಾವಣೆ ಆಯೋಗದ ಮಾಹಿತಿ ಅನ್ವಯ BJP – 25, JDU -16, RJD -10, LJPRV – 5, Cong -3, CPI (ML)(L) -1, TPLRSP -1 ಕ್ಷೇತ್ರದಲ್ಲಿ ಮುಂದಿದೆ ಎಂದು ವೆಬ್ಸೈಟ್ ಖಾತೆಯಲ್ಲಿ ಪ್ರಕಟಿಸಿದೆ.

ಚುನಾವಣೆ ಬಳಿಕ ಮುನ್ನ ಹಲವು ಸುದ್ದಿ ಸಂಸ್ಥೆಗಳು, ಬಿಹಾರ ವಿಧಾನಸಭೆ ಚುನಾವಣೆಯ ಚುನಾವಣೋತ್ತರ ಮತಗಟ್ಟೆ ಸಮೀಕ್ಷೆಗಳನ್ನು ಬಹಿರಂಗಗೊಳಿಸಿದ್ದು, ಹಲವು ಸಮೀಕ್ಷೆಗಳು ಎನ್‌ಡಿಎಗೆ ಬಹುಮತ ಸಿಗಲಿವೆ ಎಂದು ಅಂದಾಜಿಸಿವೆ.

ದೇಶದ ವಿಶ್ವಾಸಾರ್ಹ ದೈನಿಕ್ ಭಾಸ್ಕರ ಮೀಡಿಯಾ ಸಂಸ್ಥೆ ಬಿಹಾರ ಚುನಾವಣೆಯಲ್ಲಿ ಎನ್‌ಡಿಎಗೆ 145 ರಿಂದ 160 ಹಾಗೂ ಮಹಾಘಟಬಂಧನ್‌ಗೆ 73ರಿಂದ 91 ಸ್ಥಾನಗಳು ಲಭಿಸಲಿವೆ ಎಂದು ಭವಿಷ್ಯ ನುಡಿದಿದೆ.

ಉಳಿದಂತೆ News 24 ಮಹಾಘಟಬಂಧನ್‌ಗೆ 130-144, NDAಗೆ 95-109 ಇತರೆ 0-8 ಸ್ಥಾನ ಸಿಗಬಹುದು ಎಂದಿದೆ.

IANS-Matrize ಸಂಸ್ಥೆಯ ಪ್ರಕಾರ ಎನ್‌ಡಿಎಗೆ 147 ರಿಂದ 167 ಸ್ಥಾನಗಳು ಹಾಗೂ ಮಹಾಘಟಬಂಧನ್‌ಗೆ 70 ರಿಂದ 90 ಸ್ಥಾನಗಳು ಸಿಗಲಿವೆ ಎಂದು ಅಂದಾಜಿಸಿವೆ.

ಡಿವಿ ರಿಸರ್ಚ್ ಪ್ರಕಾರ, ಎನ್‌ಡಿಎ 137-152 ಸ್ಥಾನಗಳೊಂದಿಗೆ ಸರಕಾರ ರಚಿಸುವ ನಿರೀಕ್ಷೆಯಿದೆ. ಮತ್ತೊಂದೆಡೆ, ಮಹಾಘಟಬಂಧನ್ 83-98 ಸ್ಥಾನಗಳನ್ನು ಪಡೆಯುವ ನಿರೀಕ್ಷೆ ಇದೆ. ಜನ್ ಸುರಾಜ್ 2-4 ಸ್ಥಾನಗಳನ್ನು ಮತ್ತು ಇತರರು 1-8 ಸ್ಥಾನಗಳನ್ನು ಪಡೆಯಬಹುದು ಎನ್ನುತ್ತಿದೆ.

ಜೆವಿಸಿಯ ಸಮೀಕ್ಷೆಯ ಪ್ರಕಾರ, ಎನ್‌ಡಿಎ 142 ಸ್ಥಾನಗಳನ್ನು, ಎಂಜಿಬಿ 95 ಮತ್ತು ಜೆಎಸ್‌ಪಿ 1 ಮತ್ತು ಇತರರು 5 ಸ್ಥಾನಗಳನ್ನು ಪಡೆಯಲಿದ್ದಾರೆ ಎಂದು ಊಹಿಸಲಾಗಿದೆ.

ಮ್ಯಾಟ್ರಿಜ್ ಎಕ್ಸಿಟ್ ಪೋಲ್ ಸಮೀಕ್ಷೆಯು ಎನ್‌ಡಿಎಗೆ 147-167 ಸ್ಥಾನಗಳು ಸಿಗುವ ಸುಳಿವು ನೀಡಿದ್ದು, ಇದು ಆರಾಮದಾಯಕ ಬಹುಮತವಾಗಿದೆ. ಮ್ಯಾಟ್ರಿಜ್ ಪ್ರಕಾರ, ಮಹಾಘಟಬಂಧನ್ ಚುನಾವಣೆಯಲ್ಲಿ 70-90 ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದೆ.

ರಾಜಕೀಯ

ಬಿಹಾರ ಚುನಾವಣೆಯಲ್ಲಿ ಹಿನ್ನಡೆ.. ಜನರ ತೀರ್ಪನ್ನು ಒಪ್ಪಿಕೊಳ್ಳಬೇಕು; ಮುಖ್ಯಮಂತ್ರಿ ಸಿದ್ದರಾಮಯ್ಯ

ಬಿಹಾರ ಚುನಾವಣೆಯಲ್ಲಿ ಹಿನ್ನಡೆ.. ಜನರ ತೀರ್ಪನ್ನು ಒಪ್ಪಿಕೊಳ್ಳಬೇಕು; ಮುಖ್ಯಮಂತ್ರಿ ಸಿದ್ದರಾಮಯ್ಯ

ಬಿಹಾರ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟಕ್ಕೆ ಹಿನ್ನಡೆಯಾಗಿರುವ ಬಗ್ಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ (Cmsiddaramaiah) ಜನರ ತೀರ್ಪನ್ನು ಒಪ್ಪಿಕೊಳ್ಳಬೇಕು ಎಂದರು.

[ccc_my_favorite_select_button post_id="116170"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೆಹಲಿ ಕಾರು ಸ್ಫೋಟ: ಕೇಂದ್ರದ ವಿರುದ್ಧ ಆರೋಪ ಮಾಡೋ ಸಮಯ ಇದಲ್ಲ- ಡಿಸಿಎಂ ಡಿ.ಕೆ. ಶಿವಕುಮಾರ್

ದೆಹಲಿ ಕಾರು ಸ್ಫೋಟ: ಕೇಂದ್ರದ ವಿರುದ್ಧ ಆರೋಪ ಮಾಡೋ ಸಮಯ ಇದಲ್ಲ- ಡಿಸಿಎಂ

“ದೆಹಲಿಯಲ್ಲಿ ನಡೆದಿರುವ ಕಾರು ಸ್ಫೋಟ ಘಟನೆಯನ್ನು ಕಾಂಗ್ರೆಸ್ ಪಕ್ಷ ಖಂಡಿಸುತ್ತದೆ. ದೇಶದ ಐಕ್ಯತೆ, ಸಮಗ್ರತೆ, ಶಾಂತಿ ರಕ್ಷಣೆಗೆ ನಾವು ಉಗ್ರ ಚಟುವಟಿಕೆಗಳ ವಿರುದ್ದ ಬಹಳ ಜಾಗರೂಕರಾಗಿ ಇರಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K.

[ccc_my_favorite_select_button post_id="116009"]
ದೊಡ್ಡಬಳ್ಳಾಪುರ: ನಾಡ ಬಾಂಬ್ ಸ್ಪೋಟ.. ಮಹಿಳೆಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ನಾಡ ಬಾಂಬ್ ಸ್ಪೋಟ.. ಮಹಿಳೆಗೆ ಗಂಭೀರ ಪೆಟ್ಟು..!

ಕಾಡು ಹಂದಿಯ ಬೇಟೆಯಾಡಲು ಅರಣ್ಯ ಪ್ರದೇಶದಲ್ಲಿ ಇಡಲಾಗಿದ್ದ ನಾಡ ಬಾಂಬ್ ಸ್ಪೋಟಿಸಿ (Nada bomb blast) ಮಹಿಳೆಗೆ ಗಂಭೀರ ಪೆಟ್ಟಾಗಿರುವ ಘಟನೆ ತಾಲೂಕಿನ

[ccc_my_favorite_select_button post_id="116061"]
KSRTC ಬಸ್‌ನಿಂದ ಬಿದ್ದು ಯುವತಿ ಸಾವು.. ಕುಟುಂಬಕ್ಕೆ ಪರಿಹಾರ

KSRTC ಬಸ್‌ನಿಂದ ಬಿದ್ದು ಯುವತಿ ಸಾವು.. ಕುಟುಂಬಕ್ಕೆ ಪರಿಹಾರ

ಬಸ್‌ನಲ್ಲಿ ಪಯಣಿಸುತ್ತಿದ್ದ ಭದ್ರಾವತಿ ತಾಲೂಕು ಬೈಪಾಸ್ ರಸ್ತೆ, ಹಳೇ ಭಂಡಾರಹಳ್ಳಿ ಗ್ರಾಮ ವಾಸಿ ಹೇಮಾವತಿ ಎಂಬ 19 ವರ್ಷದ ಯುವತಿಯು KSRTC ಬಸ್‌ನಿಂದ ಕೆಳಗೆ ಬಿದ್ದು ಸ್ಥಳದಲ್ಲಿಯೇ ಮೃತಪಟ್ಟಿರುತ್ತಾರೆ.

[ccc_my_favorite_select_button post_id="116039"]

ಆರೋಗ್ಯ

ಸಿನಿಮಾ

ತಿಥಿ ಸಿನಿಮಾ ಖ್ಯಾತಿಯ ಗಡ್ಡಪ್ಪ ಇನ್ನಿಲ್ಲ

ತಿಥಿ ಸಿನಿಮಾ ಖ್ಯಾತಿಯ ಗಡ್ಡಪ್ಪ ಇನ್ನಿಲ್ಲ

ತಿಥಿ ಸಿನಿಮಾದ ಖ್ಯಾತಿಯ ಗಡ್ಡಪ್ಪ (Gaddappa) ಅಲಿಯಾಸ್‌ ಚನ್ನೇಗೌಡ ವಿಧಿವಶರಾಗಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು.

[ccc_my_favorite_select_button post_id="116057"]
error: Content is protected !!