Doddaballapur: Children's Day celebrations at Nalanda High School and Little Angels Anantha Schools

ದೊಡ್ಡಬಳ್ಳಾಪುರ: ನಳಂದ ಪ್ರೌಢಶಾಲೆ ಮತ್ತು ಲಿಟ್ಲ್ ಏಂಜೆಲ್ಸ್ ಅನಂತ ಶಾಲೆಗಳಲ್ಲಿ ಮಕ್ಕಳ ದಿನಾಚರಣೆ ಸಂಭ್ರಮ

ದೊಡ್ಡಬಳ್ಳಾಪುರ; ನಗರದ ಪ್ರತಿಷ್ಠಿತ ಶಾಲೆಗಳಾದ ನಳಂದ ಪ್ರೌಢಶಾಲೆ ಮತ್ತು ಲಿಟ್ಲ್ ಏಂಜೆಲ್ಸ್ ಅನಂತ ಶಾಲೆಗಳಲ್ಲಿ (Nalanda High School and Little Angels Anantha Schools) ಮಕ್ಕಳ ದಿನಾಚರಣೆಯನ್ನು (Children’s Day) ಆಕರ್ಷಕವಾಗಿ ಹಾಗೂ ವಿಜೃಂಭಣೆಯಿಂದ ಆಚರಿಸಲಾಯಿತು.

ಶಾಲೆಗಳ ಎಲ್ಲ ಮಕ್ಕಳು ಬಣ್ಣ ಬಣ್ಣದ ಉಡುಪಿನಲ್ಲಿ ಬಹಳ ಸಂಭ್ರಮದಿಂದ ಹಲವಾರು ಚಟುವಟಿಕೆಗಳಲ್ಲಿ ಭಾಗವಹಿಸಿದ್ದರು.

ಈ ವರ್ಷದ ಮಕ್ಕಳ ದಿನಾಚರಣೆ ಚಿಕ್ಕ ಕೈಗಳು ದೊಡ್ಡ ಕನಸುಗಳು(Little Hands Big Dreams) ಎಂಬ ಧ್ಯೇಯ ವಾಕ್ಯದೊಂದಿಗೆ ರೂಪಿಸಲಾಗಿತ್ತು.

ಈ ಸಂದರ್ಭದಲ್ಲಿ ಮಾತನಾಡಿದ ಶಾಲಾ ಕಾರ್ಯದರ್ಶಿ ಅನುರಾಧ ಕೆ ಆರ್ ಅವರು, ಪ್ರತಿ ವರ್ಷ ನವೆಂಬರ್ 14ರ ಮಕ್ಕಳ ದಿನಾಚರಣೆ ನಮಗೆಲ್ಲರಿಗೂ ಎಚ್ಚರಿಕೆಯ ಗಂಟೆಯಾಗಿದ್ದು ಮಕ್ಕಳ ಸಂತೋಷ, ಆರೋಗ್ಯ ಮತ್ತು ವಿದ್ಯಾಭ್ಯಾಸದ ರಕ್ಷಣೆ ಮಾಡಬೇಕೆಂದು ಎಚ್ಚರಿಸುತ್ತದೆ.

ಮಕ್ಕಳು ನಮ್ಮೆಲ್ಲರ ಭವಿಷ್ಯದ ಆಶಾಕಿರಣ, ನಮ್ಮೆಲ್ಲರ ಚೈತನ್ಯದಾಯಕ ಹಾಗೂ ನಮ್ಮೆಲ್ಲರ ನಗುವಿನ ಕಾರಣ. ಆದುದರಿಂದ ಅವರೆಲ್ಲರಿಗೂ ಉತ್ತಮ ಆರೋಗ್ಯ, ವಿದ್ಯೆ, ವಿವೇಕವನ್ನು ನೀಡುವುದರ ಮೂಲಕ ಅವರ ಭವಿಷ್ಯವನ್ನು ಬೆಳಗೋಣ.

ಈ ದಿನ ನಮ್ಮ ಶಾಲೆಗಳ ಎಲ್ಲಾ ಮಕ್ಕಳು ತಮ್ಮಲ್ಲಿ ಹುದುಗಿರುವ ಎಲ್ಲಾ ರೀತಿಯ ಕಲಾಪ್ರತಿಭೆಯನ್ನು ಹಾಡು, ನೃತ್ಯ, ಆಟ, ವರ್ಣಚಿತ್ರ, ಏಕಪಾತ್ರಾಭಿನಯ ಮುಂತಾದವುಗಳ ಮೂಲಕ ಅದ್ಭುತವಾಗಿ ಪ್ರದರ್ಶಿಸಿದ್ದು ಮನಸೂರೆಗೊಂಡಿದ್ದಾರೆ ಎಂದು ಹೇಳಿ ಮಕ್ಕಳೆಲ್ಲರಿಗೂ ಉಜ್ವಲ ಭವಿಷ್ಯವನ್ನು ಹಾರೈಸಿದರು.

ಇದೇ ಸಂದರ್ಭದಲ್ಲಿ ಶಾಲೆಗಳ ಎಲ್ಲಾ ವಿದ್ಯಾರ್ಥಿಗಳಿಗೂ ಕಿರು ಕಾಣಿಕೆಗಳನ್ನು ನೀಡಲಾಯಿತು.

ಶಾಲೆಗಳ ಮುಖ್ಯ ಶಿಕ್ಷಕರಾದ ಅನಿತಾ ಕೆ ಪಿ, ಸುನೀತಾ ಪಿ ಹಾಗೂ ಸಹಶಿಕ್ಷಕರೆಲ್ಲರೂ ಉಪಸ್ಥಿತರಿದ್ದರು.

ರಾಜಕೀಯ

ಬಿಹಾರ ಫಲಿತಾಂಶ; ಮತದಾರರ ತೀರ್ಪಿಗೆ ತಲೆಬಾಗುತ್ತೇವೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬಿಹಾರ ಫಲಿತಾಂಶ; ಮತದಾರರ ತೀರ್ಪಿಗೆ ತಲೆಬಾಗುತ್ತೇವೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬಿಹಾರ ಜನ ತಮ್ಮ ಆದೇಶ ನೀಡಿದ್ದು, ಅದನ್ನು ಪಾಠವಾಗಿ ಪರಿಗಣಿಸುತ್ತೇವೆ. ಮುಂದಿನ ಬಾರಿ ಕಾಂಗ್ರೆಸ್ ಪಕ್ಷ ಹಾಗೂ ಇಂಡಿಯಾ ಮೈತ್ರಿಕೂಟಕ್ಕೆ ಹೊಸ ತಂತ್ರಗಾರಿಕೆ ರೂಪಿಸುತ್ತೇವೆ; ಡಿ.ಕೆ. ಶಿವಕುಮಾರ್ (D.K. Shivakumar)

[ccc_my_favorite_select_button post_id="116190"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೆಹಲಿ ಕಾರು ಸ್ಫೋಟ: ಕೇಂದ್ರದ ವಿರುದ್ಧ ಆರೋಪ ಮಾಡೋ ಸಮಯ ಇದಲ್ಲ- ಡಿಸಿಎಂ ಡಿ.ಕೆ. ಶಿವಕುಮಾರ್

ದೆಹಲಿ ಕಾರು ಸ್ಫೋಟ: ಕೇಂದ್ರದ ವಿರುದ್ಧ ಆರೋಪ ಮಾಡೋ ಸಮಯ ಇದಲ್ಲ- ಡಿಸಿಎಂ

“ದೆಹಲಿಯಲ್ಲಿ ನಡೆದಿರುವ ಕಾರು ಸ್ಫೋಟ ಘಟನೆಯನ್ನು ಕಾಂಗ್ರೆಸ್ ಪಕ್ಷ ಖಂಡಿಸುತ್ತದೆ. ದೇಶದ ಐಕ್ಯತೆ, ಸಮಗ್ರತೆ, ಶಾಂತಿ ರಕ್ಷಣೆಗೆ ನಾವು ಉಗ್ರ ಚಟುವಟಿಕೆಗಳ ವಿರುದ್ದ ಬಹಳ ಜಾಗರೂಕರಾಗಿ ಇರಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K.

[ccc_my_favorite_select_button post_id="116009"]
ದೊಡ್ಡಬಳ್ಳಾಪುರ: ನಾಡ ಬಾಂಬ್ ಸ್ಪೋಟ.. ಮಹಿಳೆಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ನಾಡ ಬಾಂಬ್ ಸ್ಪೋಟ.. ಮಹಿಳೆಗೆ ಗಂಭೀರ ಪೆಟ್ಟು..!

ಕಾಡು ಹಂದಿಯ ಬೇಟೆಯಾಡಲು ಅರಣ್ಯ ಪ್ರದೇಶದಲ್ಲಿ ಇಡಲಾಗಿದ್ದ ನಾಡ ಬಾಂಬ್ ಸ್ಪೋಟಿಸಿ (Nada bomb blast) ಮಹಿಳೆಗೆ ಗಂಭೀರ ಪೆಟ್ಟಾಗಿರುವ ಘಟನೆ ತಾಲೂಕಿನ

[ccc_my_favorite_select_button post_id="116061"]
KSRTC ಬಸ್‌ನಿಂದ ಬಿದ್ದು ಯುವತಿ ಸಾವು.. ಕುಟುಂಬಕ್ಕೆ ಪರಿಹಾರ

KSRTC ಬಸ್‌ನಿಂದ ಬಿದ್ದು ಯುವತಿ ಸಾವು.. ಕುಟುಂಬಕ್ಕೆ ಪರಿಹಾರ

ಬಸ್‌ನಲ್ಲಿ ಪಯಣಿಸುತ್ತಿದ್ದ ಭದ್ರಾವತಿ ತಾಲೂಕು ಬೈಪಾಸ್ ರಸ್ತೆ, ಹಳೇ ಭಂಡಾರಹಳ್ಳಿ ಗ್ರಾಮ ವಾಸಿ ಹೇಮಾವತಿ ಎಂಬ 19 ವರ್ಷದ ಯುವತಿಯು KSRTC ಬಸ್‌ನಿಂದ ಕೆಳಗೆ ಬಿದ್ದು ಸ್ಥಳದಲ್ಲಿಯೇ ಮೃತಪಟ್ಟಿರುತ್ತಾರೆ.

[ccc_my_favorite_select_button post_id="116039"]

ಆರೋಗ್ಯ

ಸಿನಿಮಾ

ತಿಥಿ ಸಿನಿಮಾ ಖ್ಯಾತಿಯ ಗಡ್ಡಪ್ಪ ಇನ್ನಿಲ್ಲ

ತಿಥಿ ಸಿನಿಮಾ ಖ್ಯಾತಿಯ ಗಡ್ಡಪ್ಪ ಇನ್ನಿಲ್ಲ

ತಿಥಿ ಸಿನಿಮಾದ ಖ್ಯಾತಿಯ ಗಡ್ಡಪ್ಪ (Gaddappa) ಅಲಿಯಾಸ್‌ ಚನ್ನೇಗೌಡ ವಿಧಿವಶರಾಗಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು.

[ccc_my_favorite_select_button post_id="116057"]
error: Content is protected !!