World Diabetes Day celebrated at Sri Rama Hospital, Doddaballapura

ದೊಡ್ಡಬಳ್ಳಾಪುರದ ಶ್ರೀ ರಾಮ ಆಸ್ಪತ್ರೆಯಲ್ಲಿ ವಿಶ್ವ ಮಧುಮೇಹ ದಿನಾಚರಣೆ

ದೊಡ್ಡಬಳ್ಳಾಪುರ; ಭಾರತದಲ್ಲಿ ಚಿಕ್ಕ ಮಕ್ಕಳಿಗೂ ಸೇರಿದಂತೆ ದಿನೇ ದಿನೇ ಮಧುಮೇಹಿಗಳ (Diabetes) ಸಂಖ್ಯೆ ಹೆಚ್ಚಾಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದ್ದು, ಮಧುಮೇಹವನ್ನು ಆರಂಭದಲ್ಲಿಯೇ ಪತ್ತೆ ಹಚ್ಚಿ ಸೂಕ್ತ ಚಿಕಿತ್ಸೆ ಪಡೆದರೆ ನಿಯಂತ್ರಣದಲ್ಲಿಡಬಹುದು ಎಂದು ತಜ್ಞ ವೈದ್ಯರಾದ ಡಾ.ಕೆ.ವಿ.ರಾಘವೇಂದ್ರ ತಿಳಿಸಿದರು.

ಇಲ್ಲಿನ ಶ್ರೀ ರಾಮ ಆಸ್ಪತ್ರೆಯಲ್ಲಿ ಶ್ರೀ ರಾಮ ನರ್ಸಿಂಗ್ ಕಾಲೇಜಿನ ಸಹಯೋಗದಲ್ಲಿ ವಿಶ್ವ ಮಧುಮೇಹ ದಿನಾಚರಣೆ ಅಂಗವಾಗಿ ಮಧುಮೇಹ ಸತಪಾಸಣೆ ಶಿಬಿರ ಮತ್ತು ಆರೋಗ್ಯ ಶಿಕ್ಷಣ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮಧುಮೇಹದ ಲಕ್ಷಣಗಳು ಕಂಡ ಕೂಡಲೇ ವೈದ್ಯರನ್ನು ಸಂಪರ್ಕಿಸಬೇಕು. ಇದಕ್ಕೆ ಚಿಕಿತ್ಸೆಯೊಂದಿಗೆ ಸಮತೋಲನ ಆಹಾರ, ನಡಿಗೆ, ಸೂರ್ಯ ನಮಸ್ಕಾರದಂತಹ ನಿಯಮಿತ ವ್ಯಾಯಾಮ ಸಹ ಅವಶ್ಯವಾಗಿದೆ.

ಇಂದಿನ ಆಧುನಿಕ ಯುಗದಲ್ಲಿ ಒತ್ತಡದ ಬದುಕು, ನಾವು ದೇಹಕ್ಕೆ ಸಾಕಷ್ಟುವ್ಯಾಯಾಮ ನೀಡದ ಪರಿಣಾಮ, ಮಧುಮೇಹ ರಕ್ತದೊತ್ತಡಗಳು ಹೆಚ್ಚಾಗುತ್ತಿವೆ.

ಇತರೆ ಕಾಯಿಲೆಗಳಿಗೂ ಕಾರಣವಾಗಿರುವ ಮಧುಮೇಹದ ಬಗ್ಗೆ ಜಾಗೃತಿ ಮೂಡಿಸಿ, ರೋಗ ನಿಯಂತ್ರಣದ ಅಂಶಗಳನ್ನು ತಿಳಿಸುವ ಸಲುವಾಗಿ ಮಧುಮೇಹ ದಿನಾಚರಣೆ ಆಚರಿಸಲಾಗುತ್ತಿದ್ದು, ಈ ಬಗ್ಗೆ ಹೆಚ್ಚಿನ ಜಾಗೃತಿ ಮೂಡಬೇಕಿದೆ ಹಾಗೂ ಸಮತೋಲನ ಆಹಾರ ನೀಡುತ್ತಿಲ್ಲ. ಇದರ ಫಲವಾಗಿ ನಾನಾ ರೀತಿಯ ಸಮಸ್ಯೆಗಳು ಕಾಡುತ್ತಿವೆ. ಇದರಲ್ಲಿ ಮಧುಮೇಹವೂ ಒಂದಾಗಿದೆ.

ಮಧುಮೇಹ ಬರೀ ರಕ್ತ ಮೂತ್ರದಲ್ಲಿ ಕಾಣಿಸಿಕೊಂಡು ದೇಹವನ್ನು ನಿಶ್ಚಕ್ತಿ ಮಾಡುವುದಷ್ಟೇ ಅಲ್ಲದೇ, ಮಧುಮೇಹದಿಂದ ಹೃದಯ ಸಂಬಂಧಿ ಕಾಯಿಲೆಗಳು, ಮೂತ್ರಪಿಂಡಕ್ಕೆ ಹನಿ, ಕಣ್ಣಿನ ತೊಂದರೆ, ನರಗಳ ದೌರ್ಬಲ್ಯಗಳು ಕಾಣಿಸಿಕೊಳ್ಳುತ್ತವೆ.

ಗ್ರಾಮೀಣ ಪ್ರದೇಶಕ್ಕಿಂತ ನಗರ ಪ್ರದೇಶದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಧುಮೇಹಿಗಳಿದ್ದಾರೆ. ಮೇದೋಜೀರಕ ಗ್ರಂಥಿಯಲ್ಲಿ ಉತ್ಪತ್ತಿಯಾಗುವ ಇನ್ಸುಲಿನ್ ಪ್ರಮಾಣದಲ್ಲಿ ಕಡಿಮೆಯಾಗುವುದರಿಂದ ರಕ್ತದಲ್ಲಿರುವ ಸಿಹಿ ಅಂಶವನ್ನು ಸೂಕ್ತ ರೀತಿಯಲ್ಲಿ ನಿರ್ವಹಿಸುವುದು ಕಷ್ಟವಾಗುವ ಪರಿಸ್ಥಿತಿ ಎದುರಾಗುತ್ತದೆ.

ಮಕ್ಕಳಿಂದ ಹಿಡಿದು ಯಾವುದೇ ವಯೋಮಾನದವರಲ್ಲಿ ಮಧುಮೇಹ ಕಾಣಿಸಿಕೊಳ್ಳುವ ಸಾಧ್ಯತೆಗಳಿವೆ. ಆದರೆ ಅತಿ ಹೆಚ್ಚು ಅರುವತ್ತಕ್ಕೆ ಮೇಲ್ಪಟ್ಟವರಲ್ಲೇ ಮಧುಮೇಹ ಹೆಚ್ಚಾಗಿ ಬಾಧಿಸಲ್ಪಡುತ್ತಿದೆ. ಇನ್ಸುಲಿನ್ ಉತ್ಪತ್ತಿ ಸ್ಥಗಿತವಾದಲ್ಲಿ ರಕ್ತದಲ್ಲಿ ಸಕ್ಕರೆ ಅಂಶ ವಿಭಜನೆಗೊಳ್ಳುವುದಿಲ್ಲ. ಇದನ್ನೇ ಮಧುಮೇಹ ಎನ್ನುತ್ತೇವೆ.

ಇತ್ತೀಚಿನ ದಿನಗಳಲ್ಲಿ ಒಂದನೇ ಹಂತದ ಮಧುಮೇಹ ಸಾಮಾನ್ಯವಾಗಿ ನಿಯಂತ್ರಣದಲ್ಲಿಡಬಹುದು. ಆದರೆ ಎರಡನೇ ಹಂತದ ಮಧುಮೇಹಕ್ಕೆ ಕಾಲಕಾಲಕ್ಕೆ ತಪಾಸಣೆ ಅಗತ್ಯವಾಗಿದೆ.

ವೈದ್ಯರೊಂದಿಗೆ ನಿಮ್ಮ ಕಾಯಿಲೆಯ ಪೂರ್ಣ ವಿವರಗಳನ್ನು ತಿಳಿಸಿ ಸೂಕ್ತ ಚಿಕಿತ್ಸೆ ಪಡೆಯ ಬೇಕಿದೆ. ಔಷಧಿಯೊಂದಿಗೆ ಆಹಾರ ಪದ್ದತಿಯು ಅತಿ ಮುಖ್ಯವಾಗುತ್ತದೆ. ಮಧುಮೇಹದ ಕಾರಣಗಳನ್ನು ಸರಿಯಾಗಿ ತಿಳಿದುಕೊಂಡು ಮುಂಜಾಗ್ರತೆ ವಹಿಸಿದರೆ ಮಾತ್ರ ರೋಗ ನಿಯಂತ್ರಣದಲ್ಲಿಡಬಹುದು ಎಂದರು.

ಶ್ರೀ ರಾಮ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಡಾ.ಎಚ್.ಜಿ.ವಿಜಯ್ ಕುಮಾರ್ ಮಾತನಾಡಿ, ಜೀವನದ ಎಲ್ಲಾ ಹಂತಗಳಲ್ಲಿ ಮಧುಮೇಹ ಎಂಬುದು ಈ ವರ್ಷದ ಘೋಷವಾಕ್ಯವಾಗಿದೆ. ಮಧುಮೇಹ ನಿರ್ವಹಣೆಯ ಪ್ರಾಮುಖ್ಯತೆ ಹಾಗೂ ಬದ್ದತೆಯನ್ನು ಒತ್ತಿ ಹೇಳುವುದಾಗಿದೆ.

ಶುಶ್ರೂಷಾ ವಿದ್ಯಾರ್ಥಿಗಳು ಮತ್ತು ಭವಿಷ್ಯದ ಆರೋಗ್ಯ ವೃತ್ತಿಪರರಾಗಿ, ಇದನ್ನು ಮಾಡುವಲ್ಲಿ ನೀವು ಪ್ರಮುಖ ಪಾತ್ರ ವಹಿಸುತ್ತೀರಿ. ಮಧುಮೇಹ, ಅದರ ಅಪಾಯಗಳು ಮತ್ತು ನಿರ್ವಹಣೆಯ ಬಗ್ಗೆ ನಮಗೆ ಮತ್ತು ಇತರರಿಗೆ ಶಿಕ್ಷಣ ನೀಡೋಣ.

ಮಧುಮೇಹದಿಂದ ಬಳಲುತ್ತಿರುವವರನ್ನು ಬೆಂಬಲಿಸೋಣ, ಕಾಳಜಿ, ಸಹಾನುಭೂತಿ ಮತ್ತು ತಿಳುವಳಿಕೆಯನ್ನು ನೀಡೋಣ. ಎಲ್ಲರಿಗೂ ಮಧುಮೇಹ ಆರೈಕೆಯ ಪ್ರವೇಶವನ್ನು ಸುಧಾರಿಸುವ ನೀತಿಗಳು ಮತ್ತು ಉಪಕ್ರಮಗಳಿಗಾಗಿ ನಾವು ಪ್ರತಿಪಾದಿಸೋಣ ಎನ್ನುವ ಸಂಕಲ್ಪ ಮಾಡಬೇಕಿದೆ ಎಂದರು.

ಕಾರ್ಯಕ್ರಮದಲ್ಲಿ ಶ್ರೀ ರಾಮ ಆಸ್ಪತ್ರೆಯ ವೈದ್ಯೆ ಡಾ.ಮಾಲಾ ವಿಜಯಕುಮಾರ್, ಮತ್ತಿತರರು ಭಾಗವಹಿಸಿದ್ದರು.

ರಾಜಕೀಯ

ಬಿಹಾರದಲ್ಲಿ NDAಗೆ ಭರ್ಜರಿ ಗೆಲುವು: ಸಿಎಂ ಕುರ್ಚಿ ಮೇಲೆ JDU ಟವೆಲ್, ಆದರೆ ಟ್ವೀಟ್ ಡಿಲೀಟ್ ಮಾಡಿದ್ದೇಕೆ..?!

ಬಿಹಾರದಲ್ಲಿ NDAಗೆ ಭರ್ಜರಿ ಗೆಲುವು: ಸಿಎಂ ಕುರ್ಚಿ ಮೇಲೆ JDU ಟವೆಲ್, ಆದರೆ

ಮಹಿಳೆಯರ ಖಾತೆಗೆ 10 ಸಾವಿರ, ಮನೆಗೊಂದು ಸರ್ಕಾರಿ ನೌಕರಿ ಘೋಷಣೆ, ವೋಟ್ ಚೋರಿ ಆರೋಪ, ನಿರುದ್ಯೋಗ ಸಮಸ್ಯೆ ಆರೋಪ ಸೇರಿದಂತೆ ತೀವ್ರ ಜಿದ್ದಾಜಿದ್ದಿಯಿಂದ ನಡೆದ ಬಿಹಾರ ವಿಧಾನಸಭಾ ಚುನಾವಣೆ (Bihar election)ಯಲ್ಲಿ NDA ಮೈತ್ರಿಕೂಟ

[ccc_my_favorite_select_button post_id="116212"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೆಹಲಿ ಕಾರು ಸ್ಫೋಟ: ಕೇಂದ್ರದ ವಿರುದ್ಧ ಆರೋಪ ಮಾಡೋ ಸಮಯ ಇದಲ್ಲ- ಡಿಸಿಎಂ ಡಿ.ಕೆ. ಶಿವಕುಮಾರ್

ದೆಹಲಿ ಕಾರು ಸ್ಫೋಟ: ಕೇಂದ್ರದ ವಿರುದ್ಧ ಆರೋಪ ಮಾಡೋ ಸಮಯ ಇದಲ್ಲ- ಡಿಸಿಎಂ

“ದೆಹಲಿಯಲ್ಲಿ ನಡೆದಿರುವ ಕಾರು ಸ್ಫೋಟ ಘಟನೆಯನ್ನು ಕಾಂಗ್ರೆಸ್ ಪಕ್ಷ ಖಂಡಿಸುತ್ತದೆ. ದೇಶದ ಐಕ್ಯತೆ, ಸಮಗ್ರತೆ, ಶಾಂತಿ ರಕ್ಷಣೆಗೆ ನಾವು ಉಗ್ರ ಚಟುವಟಿಕೆಗಳ ವಿರುದ್ದ ಬಹಳ ಜಾಗರೂಕರಾಗಿ ಇರಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K.

[ccc_my_favorite_select_button post_id="116009"]
ದೊಡ್ಡಬಳ್ಳಾಪುರ: ನಾಡ ಬಾಂಬ್ ಸ್ಪೋಟ.. ಮಹಿಳೆಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ನಾಡ ಬಾಂಬ್ ಸ್ಪೋಟ.. ಮಹಿಳೆಗೆ ಗಂಭೀರ ಪೆಟ್ಟು..!

ಕಾಡು ಹಂದಿಯ ಬೇಟೆಯಾಡಲು ಅರಣ್ಯ ಪ್ರದೇಶದಲ್ಲಿ ಇಡಲಾಗಿದ್ದ ನಾಡ ಬಾಂಬ್ ಸ್ಪೋಟಿಸಿ (Nada bomb blast) ಮಹಿಳೆಗೆ ಗಂಭೀರ ಪೆಟ್ಟಾಗಿರುವ ಘಟನೆ ತಾಲೂಕಿನ

[ccc_my_favorite_select_button post_id="116061"]
KSRTC ಬಸ್‌ನಿಂದ ಬಿದ್ದು ಯುವತಿ ಸಾವು.. ಕುಟುಂಬಕ್ಕೆ ಪರಿಹಾರ

KSRTC ಬಸ್‌ನಿಂದ ಬಿದ್ದು ಯುವತಿ ಸಾವು.. ಕುಟುಂಬಕ್ಕೆ ಪರಿಹಾರ

ಬಸ್‌ನಲ್ಲಿ ಪಯಣಿಸುತ್ತಿದ್ದ ಭದ್ರಾವತಿ ತಾಲೂಕು ಬೈಪಾಸ್ ರಸ್ತೆ, ಹಳೇ ಭಂಡಾರಹಳ್ಳಿ ಗ್ರಾಮ ವಾಸಿ ಹೇಮಾವತಿ ಎಂಬ 19 ವರ್ಷದ ಯುವತಿಯು KSRTC ಬಸ್‌ನಿಂದ ಕೆಳಗೆ ಬಿದ್ದು ಸ್ಥಳದಲ್ಲಿಯೇ ಮೃತಪಟ್ಟಿರುತ್ತಾರೆ.

[ccc_my_favorite_select_button post_id="116039"]

ಆರೋಗ್ಯ

ಸಿನಿಮಾ

ತಿಥಿ ಸಿನಿಮಾ ಖ್ಯಾತಿಯ ಗಡ್ಡಪ್ಪ ಇನ್ನಿಲ್ಲ

ತಿಥಿ ಸಿನಿಮಾ ಖ್ಯಾತಿಯ ಗಡ್ಡಪ್ಪ ಇನ್ನಿಲ್ಲ

ತಿಥಿ ಸಿನಿಮಾದ ಖ್ಯಾತಿಯ ಗಡ್ಡಪ್ಪ (Gaddappa) ಅಲಿಯಾಸ್‌ ಚನ್ನೇಗೌಡ ವಿಧಿವಶರಾಗಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು.

[ccc_my_favorite_select_button post_id="116057"]
error: Content is protected !!