World Diabetes Day celebrated at Sri Rama Hospital, Doddaballapura

ದೊಡ್ಡಬಳ್ಳಾಪುರದ ಶ್ರೀ ರಾಮ ಆಸ್ಪತ್ರೆಯಲ್ಲಿ ವಿಶ್ವ ಮಧುಮೇಹ ದಿನಾಚರಣೆ

ದೊಡ್ಡಬಳ್ಳಾಪುರ; ಭಾರತದಲ್ಲಿ ಚಿಕ್ಕ ಮಕ್ಕಳಿಗೂ ಸೇರಿದಂತೆ ದಿನೇ ದಿನೇ ಮಧುಮೇಹಿಗಳ (Diabetes) ಸಂಖ್ಯೆ ಹೆಚ್ಚಾಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದ್ದು, ಮಧುಮೇಹವನ್ನು ಆರಂಭದಲ್ಲಿಯೇ ಪತ್ತೆ ಹಚ್ಚಿ ಸೂಕ್ತ ಚಿಕಿತ್ಸೆ ಪಡೆದರೆ ನಿಯಂತ್ರಣದಲ್ಲಿಡಬಹುದು ಎಂದು ತಜ್ಞ ವೈದ್ಯರಾದ ಡಾ.ಕೆ.ವಿ.ರಾಘವೇಂದ್ರ ತಿಳಿಸಿದರು.

ಇಲ್ಲಿನ ಶ್ರೀ ರಾಮ ಆಸ್ಪತ್ರೆಯಲ್ಲಿ ಶ್ರೀ ರಾಮ ನರ್ಸಿಂಗ್ ಕಾಲೇಜಿನ ಸಹಯೋಗದಲ್ಲಿ ವಿಶ್ವ ಮಧುಮೇಹ ದಿನಾಚರಣೆ ಅಂಗವಾಗಿ ಮಧುಮೇಹ ಸತಪಾಸಣೆ ಶಿಬಿರ ಮತ್ತು ಆರೋಗ್ಯ ಶಿಕ್ಷಣ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮಧುಮೇಹದ ಲಕ್ಷಣಗಳು ಕಂಡ ಕೂಡಲೇ ವೈದ್ಯರನ್ನು ಸಂಪರ್ಕಿಸಬೇಕು. ಇದಕ್ಕೆ ಚಿಕಿತ್ಸೆಯೊಂದಿಗೆ ಸಮತೋಲನ ಆಹಾರ, ನಡಿಗೆ, ಸೂರ್ಯ ನಮಸ್ಕಾರದಂತಹ ನಿಯಮಿತ ವ್ಯಾಯಾಮ ಸಹ ಅವಶ್ಯವಾಗಿದೆ.

ಇಂದಿನ ಆಧುನಿಕ ಯುಗದಲ್ಲಿ ಒತ್ತಡದ ಬದುಕು, ನಾವು ದೇಹಕ್ಕೆ ಸಾಕಷ್ಟುವ್ಯಾಯಾಮ ನೀಡದ ಪರಿಣಾಮ, ಮಧುಮೇಹ ರಕ್ತದೊತ್ತಡಗಳು ಹೆಚ್ಚಾಗುತ್ತಿವೆ.

ಇತರೆ ಕಾಯಿಲೆಗಳಿಗೂ ಕಾರಣವಾಗಿರುವ ಮಧುಮೇಹದ ಬಗ್ಗೆ ಜಾಗೃತಿ ಮೂಡಿಸಿ, ರೋಗ ನಿಯಂತ್ರಣದ ಅಂಶಗಳನ್ನು ತಿಳಿಸುವ ಸಲುವಾಗಿ ಮಧುಮೇಹ ದಿನಾಚರಣೆ ಆಚರಿಸಲಾಗುತ್ತಿದ್ದು, ಈ ಬಗ್ಗೆ ಹೆಚ್ಚಿನ ಜಾಗೃತಿ ಮೂಡಬೇಕಿದೆ ಹಾಗೂ ಸಮತೋಲನ ಆಹಾರ ನೀಡುತ್ತಿಲ್ಲ. ಇದರ ಫಲವಾಗಿ ನಾನಾ ರೀತಿಯ ಸಮಸ್ಯೆಗಳು ಕಾಡುತ್ತಿವೆ. ಇದರಲ್ಲಿ ಮಧುಮೇಹವೂ ಒಂದಾಗಿದೆ.

ಮಧುಮೇಹ ಬರೀ ರಕ್ತ ಮೂತ್ರದಲ್ಲಿ ಕಾಣಿಸಿಕೊಂಡು ದೇಹವನ್ನು ನಿಶ್ಚಕ್ತಿ ಮಾಡುವುದಷ್ಟೇ ಅಲ್ಲದೇ, ಮಧುಮೇಹದಿಂದ ಹೃದಯ ಸಂಬಂಧಿ ಕಾಯಿಲೆಗಳು, ಮೂತ್ರಪಿಂಡಕ್ಕೆ ಹನಿ, ಕಣ್ಣಿನ ತೊಂದರೆ, ನರಗಳ ದೌರ್ಬಲ್ಯಗಳು ಕಾಣಿಸಿಕೊಳ್ಳುತ್ತವೆ.

ಗ್ರಾಮೀಣ ಪ್ರದೇಶಕ್ಕಿಂತ ನಗರ ಪ್ರದೇಶದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಧುಮೇಹಿಗಳಿದ್ದಾರೆ. ಮೇದೋಜೀರಕ ಗ್ರಂಥಿಯಲ್ಲಿ ಉತ್ಪತ್ತಿಯಾಗುವ ಇನ್ಸುಲಿನ್ ಪ್ರಮಾಣದಲ್ಲಿ ಕಡಿಮೆಯಾಗುವುದರಿಂದ ರಕ್ತದಲ್ಲಿರುವ ಸಿಹಿ ಅಂಶವನ್ನು ಸೂಕ್ತ ರೀತಿಯಲ್ಲಿ ನಿರ್ವಹಿಸುವುದು ಕಷ್ಟವಾಗುವ ಪರಿಸ್ಥಿತಿ ಎದುರಾಗುತ್ತದೆ.

ಮಕ್ಕಳಿಂದ ಹಿಡಿದು ಯಾವುದೇ ವಯೋಮಾನದವರಲ್ಲಿ ಮಧುಮೇಹ ಕಾಣಿಸಿಕೊಳ್ಳುವ ಸಾಧ್ಯತೆಗಳಿವೆ. ಆದರೆ ಅತಿ ಹೆಚ್ಚು ಅರುವತ್ತಕ್ಕೆ ಮೇಲ್ಪಟ್ಟವರಲ್ಲೇ ಮಧುಮೇಹ ಹೆಚ್ಚಾಗಿ ಬಾಧಿಸಲ್ಪಡುತ್ತಿದೆ. ಇನ್ಸುಲಿನ್ ಉತ್ಪತ್ತಿ ಸ್ಥಗಿತವಾದಲ್ಲಿ ರಕ್ತದಲ್ಲಿ ಸಕ್ಕರೆ ಅಂಶ ವಿಭಜನೆಗೊಳ್ಳುವುದಿಲ್ಲ. ಇದನ್ನೇ ಮಧುಮೇಹ ಎನ್ನುತ್ತೇವೆ.

ಇತ್ತೀಚಿನ ದಿನಗಳಲ್ಲಿ ಒಂದನೇ ಹಂತದ ಮಧುಮೇಹ ಸಾಮಾನ್ಯವಾಗಿ ನಿಯಂತ್ರಣದಲ್ಲಿಡಬಹುದು. ಆದರೆ ಎರಡನೇ ಹಂತದ ಮಧುಮೇಹಕ್ಕೆ ಕಾಲಕಾಲಕ್ಕೆ ತಪಾಸಣೆ ಅಗತ್ಯವಾಗಿದೆ.

ವೈದ್ಯರೊಂದಿಗೆ ನಿಮ್ಮ ಕಾಯಿಲೆಯ ಪೂರ್ಣ ವಿವರಗಳನ್ನು ತಿಳಿಸಿ ಸೂಕ್ತ ಚಿಕಿತ್ಸೆ ಪಡೆಯ ಬೇಕಿದೆ. ಔಷಧಿಯೊಂದಿಗೆ ಆಹಾರ ಪದ್ದತಿಯು ಅತಿ ಮುಖ್ಯವಾಗುತ್ತದೆ. ಮಧುಮೇಹದ ಕಾರಣಗಳನ್ನು ಸರಿಯಾಗಿ ತಿಳಿದುಕೊಂಡು ಮುಂಜಾಗ್ರತೆ ವಹಿಸಿದರೆ ಮಾತ್ರ ರೋಗ ನಿಯಂತ್ರಣದಲ್ಲಿಡಬಹುದು ಎಂದರು.

ಶ್ರೀ ರಾಮ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಡಾ.ಎಚ್.ಜಿ.ವಿಜಯ್ ಕುಮಾರ್ ಮಾತನಾಡಿ, ಜೀವನದ ಎಲ್ಲಾ ಹಂತಗಳಲ್ಲಿ ಮಧುಮೇಹ ಎಂಬುದು ಈ ವರ್ಷದ ಘೋಷವಾಕ್ಯವಾಗಿದೆ. ಮಧುಮೇಹ ನಿರ್ವಹಣೆಯ ಪ್ರಾಮುಖ್ಯತೆ ಹಾಗೂ ಬದ್ದತೆಯನ್ನು ಒತ್ತಿ ಹೇಳುವುದಾಗಿದೆ.

ಶುಶ್ರೂಷಾ ವಿದ್ಯಾರ್ಥಿಗಳು ಮತ್ತು ಭವಿಷ್ಯದ ಆರೋಗ್ಯ ವೃತ್ತಿಪರರಾಗಿ, ಇದನ್ನು ಮಾಡುವಲ್ಲಿ ನೀವು ಪ್ರಮುಖ ಪಾತ್ರ ವಹಿಸುತ್ತೀರಿ. ಮಧುಮೇಹ, ಅದರ ಅಪಾಯಗಳು ಮತ್ತು ನಿರ್ವಹಣೆಯ ಬಗ್ಗೆ ನಮಗೆ ಮತ್ತು ಇತರರಿಗೆ ಶಿಕ್ಷಣ ನೀಡೋಣ.

ಮಧುಮೇಹದಿಂದ ಬಳಲುತ್ತಿರುವವರನ್ನು ಬೆಂಬಲಿಸೋಣ, ಕಾಳಜಿ, ಸಹಾನುಭೂತಿ ಮತ್ತು ತಿಳುವಳಿಕೆಯನ್ನು ನೀಡೋಣ. ಎಲ್ಲರಿಗೂ ಮಧುಮೇಹ ಆರೈಕೆಯ ಪ್ರವೇಶವನ್ನು ಸುಧಾರಿಸುವ ನೀತಿಗಳು ಮತ್ತು ಉಪಕ್ರಮಗಳಿಗಾಗಿ ನಾವು ಪ್ರತಿಪಾದಿಸೋಣ ಎನ್ನುವ ಸಂಕಲ್ಪ ಮಾಡಬೇಕಿದೆ ಎಂದರು.

ಕಾರ್ಯಕ್ರಮದಲ್ಲಿ ಶ್ರೀ ರಾಮ ಆಸ್ಪತ್ರೆಯ ವೈದ್ಯೆ ಡಾ.ಮಾಲಾ ವಿಜಯಕುಮಾರ್, ಮತ್ತಿತರರು ಭಾಗವಹಿಸಿದ್ದರು.

ರಾಜಕೀಯ

ಕೇಂದ್ರ ಬಿಜೆಪಿ ಸರ್ಕಾರ ಕರ್ನಾಟಕಕ್ಕೆ ಕೊಟ್ಟ ಖಾಲಿ ಟ್ರಂಕ್ ಹಿಡಿದಿರುವ ತೇಜಸ್ವಿ ಸೂರ್ಯ: ಡಿ.ಕೆ. ಸುರೇಶ್ ವ್ಯಂಗ್ಯ

ಕೇಂದ್ರ ಬಿಜೆಪಿ ಸರ್ಕಾರ ಕರ್ನಾಟಕಕ್ಕೆ ಕೊಟ್ಟ ಖಾಲಿ ಟ್ರಂಕ್ ಹಿಡಿದಿರುವ ತೇಜಸ್ವಿ ಸೂರ್ಯ:

"ಕಳೆದ 12 ವರ್ಷಗಳಿಂದ ಕೇಂದ್ರ ಬಿಜೆಪಿ ಸರ್ಕಾರ ಕರ್ನಾಟಕಕ್ಕೆ ಕೊಟ್ಟಿರುವ ಖಾಲಿ ಟ್ರಂಕ್ ಅನ್ನು ಸಂಸದ ತೇಜಸ್ವಿ ಸೂರ್ಯ ಅವರು ಹಿಡಿದಿರುವುದು" ಎಂದು ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ (D.K. Suresh) ಅವರು ತಿರುಗೇಟು

[ccc_my_favorite_select_button post_id="119275"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

RCB: ಮತ್ತೆ ಕಪ್ ನಮ್ದು

RCB: ಮತ್ತೆ ಕಪ್ ನಮ್ದು

4ನೇ ಆವೃತ್ತಿಯ ಮಹಿಳಾ ಪ್ರೀಮಿ ಯರ್ ಲೀಗ್ (ಡಬ್ಲ್ಯೂಪಿ ಎಲ್) ಟೂರ್ನಿಯಲ್ಲಿ ಸ್ಮೃತಿ ಮಂಧಾನಾ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಚಾಂಪಿಯನ್ ಆಗಿ ಹೊರ ಹೊಮ್ಮಿದ್ದು, ಸಿಎಂ ಸಿದ್ದರಾಮಯ್ಯ (Cmsiddaramaiah), ಡಿಸಿಎಂ

[ccc_my_favorite_select_button post_id="119174"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ದೊಡ್ಡಬಳ್ಳಾಪುರ: ಪತ್ನಿಗೆ ಚಿಕಿತ್ಸೆ ಕೊಡಿಸಿ ಮನೆಗೆ ಕರೆದೊಯ್ಯುತ್ತಿದ್ದವ ಅಪಘಾತದಲ್ಲಿ ಸಾವು.‌.!

ದೊಡ್ಡಬಳ್ಳಾಪುರ: ಪತ್ನಿಗೆ ಚಿಕಿತ್ಸೆ ಕೊಡಿಸಿ ಮನೆಗೆ ಕರೆದೊಯ್ಯುತ್ತಿದ್ದವ ಅಪಘಾತದಲ್ಲಿ ಸಾವು.‌.!

ಮಡದಿಗೆ ಉಂಟಾಗಿದ್ದ ಅನಾರೋಗ್ಯ ಕಾರಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಮನೆಗೆ ಕರೆದೊಯ್ಯುತ್ತಿದ್ದ ವ್ಯಕ್ತಿ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಸಾವನಪ್ಪಿರುವ ಘಟನೆ (Accident) ತಾಲೂಕಿನಲ್ಲಿ ಸಂಭವಿಸಿದೆ.

[ccc_my_favorite_select_button post_id="119259"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!