ಪರಿವರ್ತನೆ ತಂದ ಸದ್ಗುರು; ಶ್ರೀಲಂಕಾ ಕ್ರಿಕೆಟಿಗ ಅರವಿಂದ ಡಿ ಸಿಲ್ವ

Sadhguru who brought transformation; Sri Lankan cricketer Aravinda de Silva

ಚಿಕ್ಕಬಳ್ಳಾಪುರ: ದಿನೇ ದಿನೇ ಬೆಳೆಯುತ್ತಿರುವ ಒಂದು ಜಗತ್ತು ಒಂದು ಕುಟುಂಬ ಮಿಷನ್ ಅದ್ಭುತ ಸಂಸ್ಥೆಯಾಗಿದ್ದು, ಇದರ ಭಾಗವಾಗಲು ನನಗೆ ತುಂಬಾ ಸಂತೋಷವಾಗಿದೆ. ಮಾನವೀಯತೆಯ ವಿಚಾರದಲ್ಲಿ ನನ್ನಲ್ಲಿ ದೊಡ್ಡ ಪರಿವರ್ತನೆಯನ್ನು ತಂದಿದೆ ಎಂದು ಶ್ರೀಲಂಕಾದ ಮಾಜಿ ಕ್ರಿಕೆಟ್ ಆಟಗಾರ ಅರವಿಂದ ಡಿ ಸಿಲ್ವ (Aravinda de Silva) ತಿಳಿಸಿದರು.

ತಾಲ್ಲೂಕಿನ ಮುದ್ದೇನಹಳ್ಳಿಯ ಸತ್ಯ ಸಾಯಿ ಗ್ರಾಮದಲ್ಲಿ ನಡೆಯುತ್ತಿರುವ ”ಒಂದು ಜಗತ್ತು ಒಂದು ಕುಟುಂಬ ವಿಶ್ವ ಸಾಂಸ್ಕೃತಿಕ ಉತ್ಸವ”ದ 91ನೇ ದಿನದಂದು ಪಾಲ್ಗೊಂಡು ಸದ್ಗುರು ಶ್ರೀ ಮಧುಸೂಧನ ಸಾಯಿ ಅವರು ಪ್ರೇರಕ ಶಕ್ತಿಯಾಗಿದ್ದಾರೆ. ಈ ಸಂಸ್ಥೆಯ ಭಾಗವಾದ ಬಳಿಕ ನನ್ನಲ್ಲಿ ದೊಡ್ಡ ಬದಲಾವಣೆಯನ್ನು ಕಂಡುಕೊಂಡಿದ್ದೇನೆ ಎಂದು ವಿವರಿಸಿದರು.

ಬೌದ್ಧ ಗುರು ಬಟ್ಟರಮುಲ್ಲೆ ಅಮದಾಸನ ಥಿರೋ ಮಾತನಾಡಿ, ನಮ್ಮೆಲ್ಲರ ಹೃದಯಗಳು ಒಂದು ಲಯದಲ್ಲಿ ಇರುವುದರಿಂದ ನಾವೆಲ್ಲರೂ ಒಟ್ಟಿಗೆ ಸೇರಿದ್ದೇವೆ. ನೀವು ಕಪ್ಪು ಅಥವಾ ಬಿಳಿ,ಪುರುಷ ಅಥವಾ ಮಹಿಳೆ, ಬಡವ ಅಥವಾ ಶ್ರೀಮಂತ ಎಂಬುದು ಮುಖ್ಯವಲ್ಲ. ಆದರೆ ನಾವೆಲ್ಲರೂ ಇಲ್ಲಿ ಬಂದಿರುವುದಕ್ಕೆ ಒಂದು ಉದ್ದೇಶವಿದೆ. ಅದೇ ಒಂದು ಜಗತ್ತು ಒಂದು ಕುಟುಂಬ. ಇದೊಂದು ಸುಂದರವಾದ ಸ್ಫೂರ್ತಿ ನೀಡುವ ಮಿಷನ್ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಸಾಧಕರಿಗೆ ಪುರಸ್ಕಾರ, ಸನ್ಮಾನ

ಗ್ರಾನುಲೆಸ್ ಇಂಡಿಯಾ ಲಿಮಿಟೆಡ್ ನ ಅಧ್ಯಕ್ಷರು ಮತ್ತು ವ್ಯವಸ್ಥಾಪಕ ನಿರ್ದೇಶಕ ಡಾ.ಕೃಷ್ಣಪ್ರಸಾದ್ ಚಿಗುರುಪಾಟಿ ಮತ್ತು ಮಹೀಂದ್ರಾ ಫೈನಾನ್ಸ್ ನ ಮಾಜಿ ಉಪಾಧ್ಯಕ್ಷ, ವ್ಯವಸ್ಥಾಪಕ ನಿರ್ದೇಶಕರಾದ ರಮೇಶ್ ಜಿ ಅಯ್ಯರ್ ಅವರಿಗೆ ”ಒಂದು ಜಗತ್ತು ಒಂದು ಕುಟುಂಬ ಜಾಗತಿಕ ನಾಯಕತ್ವ ಪುರಸ್ಕಾರ” ನೀಡಿ ಗೌರವಿಸಲಾಯಿತು.

ಈಚ್ ಒನ್ ಎಜುಕೇಟ್ ಒನ್ ಸ್ಕಾಲರ್ ಶಿಪ್ ಕಾರ್ಯಕ್ರಮಕ್ಕೆ ಬೆಂಬಲ ನೀಡುತ್ತಿರುವ ”ವಿಲೋ ಮೆಟರ್ ಅಂಡ್ ಪ್ಲಾಟ್ ಪಂಪ್ಸ್ ಪ್ರೈವೇಟ್ ಲಿಮಿಟೆಡ್” ಗೆ ”ಸಿಎಸ್ಆರ್ ಸರ್ಕಲ್ ಆಫ್ ಹಾನರ್ ಪುರಸ್ಕಾರ” ನೀಡಿ ಗೌರವಿಸಲಾಯಿತು. ಕಂಪನಿಯ ಹಿರಿಯ ವ್ಯವಸ್ಥಾಪಕರಾದ ಬಿ ಸೆಂಥಿಲ್ ಕುಮಾರ್ ಪ್ರಶಸ್ತಿ ಸ್ವೀಕರಿಸಿದರು.

ಶ್ರೀ ಮಧುಸೂದನ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಗೆ ಬೆಂಬಲ ನೀಡುತ್ತಿರುವ ”ಲಕ್ಷಕ ಟೆಕ್ಸ್ ಎಲ್ಎಲ್ಪಿ” ಕಂಪನಿಗೆ ”ಸಿಎಸ್ಆರ್ ಸರ್ಕಲ್ ಆಫ್ ಹಾನರ್ ಪುರಸ್ಕಾರ” ನೀಡಿ ಗೌರವಿಸಲಾಯಿತು. ಕಂಪನಿಯ ವ್ಯವಸ್ಥಾಪಕ ನಿರ್ದೇಶಕರಾದ ಎಂಎನ್ ಪದ್ಮನಾಭನ್ ಪ್ರಶಸ್ತಿ ಸ್ವೀಕರಿಸಿದರು.

ಅನ್ನಪೂರ್ಣ ಟ್ರಸ್ಟ್ ಗೆ ಬೆಂಬಲ ನೀಡುತ್ತಿರುವ ನಾಟ್ ಸಲೂಷನ್ಸ್ ಪ್ರೈವೇಟ್ ಲಿಮಿಟೆಡ್ ಗೆ ”ಸಿಎಸ್ಆರ್ ಸರ್ಕಲ್ ಆಫ್ ಹಾನರ್ ಪುರಸ್ಕಾರ” ನೀಡಿ ಗೌರವಿಸಲಾಯಿತು. ಕಂಪನಿಯ ಸಂಸ್ಥಾಪಕರು ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುಮಂತ್ ಕುಮಾರ್ ಕೊನೂರು ಅವರು ಪ್ರಶಸ್ತಿ ಸ್ವೀಕರಿಸಿದರು.

ಶ್ರೀಲಂಕಾದಲ್ಲಿ ಆರೋಗ್ಯ ಕ್ಷೇತ್ರಕ್ಕೆ ಕೊಡುಗೆ ನೀಡುತ್ತಿರುವ ಡಾ ಕ್ರಿಸ್ಟೋಫರ್ ಸ್ಟಬ್ಸ್ ಮತ್ತು ರಂಜಿ ಸ್ಟಬ್ಸ್ ಅವರಿಗೆ ಒಂದು ಜಗತ್ತು ಒಂದು ಕುಟುಂಬ ಮಾನವೀಯ ಪುರಸ್ಕಾರ ನೀಡಿ ಗೌರವಿಸಲಾಯಿತು. ಶ್ರೀಲಂಕಾದಲ್ಲಿ ಕಾರ್ಪೊರೇಟ್ ಆಡಳಿತಕ್ಕೆ ಉತ್ತಮ ಕೊಡುಗೆ ನೀಡುತ್ತಿರುವ ಕುಶೀಲ್ ಗುಣಶೇಖರ ಅವರಿಗೆ ಒಂದು ಜಗತ್ತು ಒಂದು ಕುಟುಂಬ ಮಾನವೀಯ ಪುರಸ್ಕಾರ ನೀಡಿ ಗೌರವಿಸಲಾಯಿತು.

ಶ್ರೀಲಂಕಾದ ಪ್ರತಿನಿಧಿ ಡಾ ಮಿನಾಲಿ ಉತ್ಪಾಲ ಡಿಸ್ಸಾನಾಯಕೆ ಅವರು ತಮ್ಮ ದೇಶದ ಕಲೆ, ಸಂಸ್ಕೃತಿ, ಸಂಗೀತ, ಭಾಷೆ, ಪ್ರಸಿದ್ಧ ತಾಣಗಳು, ಖಾದ್ಯಗಳು, ಸಾಂಪ್ರದಾಯಿಕ ಉಡುಪು, ಅಧಾತ್ಮ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಮಾಹಿತಿ ನೀಡಿದರು.

ಮತ್ತೊಬ್ಬ ಪ್ರತಿನಿಧಿ ಮಹೇಶ್ವರಶರ್ಮಾ ಪ್ರತೀಪನ್ ಮಾತನಾಡಿ, ತಮ್ಮ ಜೀವನದಲ್ಲಿನ ಆಧ್ಯಾತ್ಮಿಕ ಪರಿವರ್ತನೆಯ ಅನುಭವ ಹಂಚಿಕೊಂಡರು.

ಈ ವೇಳೆ ಸದ್ಗುರು ಶ್ರೀ ಮಧುಸೂಧನ ಸಾಯಿ ಆರ್ಶೀವಚನ ನೀಡಿದರು.

ರಾಜಕೀಯ

ದೊಡ್ಡಬಳ್ಳಾಪುರದಲ್ಲಿ JDS ಪ್ರತಿಭಟನೆ..!: ಕಾಂಗ್ರೆಸ್ ವಿರುದ್ಧ ಹರೀಶ್ ಗೌಡ ವಾಗ್ದಾಳಿ

ದೊಡ್ಡಬಳ್ಳಾಪುರದಲ್ಲಿ JDS ಪ್ರತಿಭಟನೆ..!: ಕಾಂಗ್ರೆಸ್ ವಿರುದ್ಧ ಹರೀಶ್ ಗೌಡ ವಾಗ್ದಾಳಿ

ರಾಜಕೀಯದಲ್ಲಿ ಮಹಿಳೆಯರ ಭಾಗವಹಿಸುವಿಕೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕೈಗೊಂಡಿದ್ದ ಮಹಿಳಾ ಮೀಸಲಾತಿ ಮಸೂದೆಯನ್ನು ಜಾರಿ ಮಾಡಲು ಅವಕಾಶ ಕೊಡದ ಕಾಂಗ್ರೆಸ್, ಮಹಿಳಾ ವಿರೋಧಿ ಎಂಬುದು ಸಾಬೀತು ಮಾಡಿದೆ ಎಂದು ಜೆಡಿಎಸ್ (JDS) ಹಿರಿಯ ಮುಖಂಡ ಹರೀಶ್

[ccc_my_favorite_select_button post_id="121251"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಝಾಂಬಿ ಡ್ರಗ್ಸ್ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮಾಹಿತಿಯ ವಿಡಿಯೊ ಶೇರ್ ಮಾಡಿದ್ದ ನಟ ದುನಿಯಾ ವಿಜಯ್‌ಗೆ (Duniya Vijay) ಸಂಕಷ್ಟ ಎದುರಾಗಿದೆ.

[ccc_my_favorite_select_button post_id="121217"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!