ಕುಂಟನಹಳ್ಳಿಯಲ್ಲಿ ಸಂಭ್ರಮದ ಕನ್ನಡ ರಾಜ್ಯೋತ್ಸವ ಸಂಭ್ರಮ: 22 ದೇವತಾ ಮೂರ್ತಿಗಳ ಅದ್ಧೂರಿ ಪೂಜಾ ಉತ್ಸವ

Kannada Rajyotsava celebrations in Kuntanahalli

ದೊಡ್ಡಬಳ್ಳಾಪುರ: ತಾಲೂಕಿನ ಕುಂಟನಹಳ್ಳಿಯಲ್ಲಿ (Kuntanahalli) 70ನೇ ಕನ್ನಡ ರಾಜ್ಯೋತ್ಸವ ಹಾಗೂ 22 ದೇವತಾ ಮೂರ್ತಿಗಳ ಪೂಜಾ ಉತ್ಸವ ಸಂಭ್ರಮದಿಂದ ನಡೆಯಿತು.

ಕನ್ನಡ ರಾಜ್ಯೋತ್ಸವದ ಅಂಗವಾಗಿ ಗ್ರಾಮದಲ್ಲಿ ಕನ್ನಡ ಧ್ವಜಗಳು, ತೋರಣಗಳಿಂದ ಸಿಂಗರಿಸಲಾಗಿತ್ತು.

ಧ್ವಜಾರೋಹಣ ನೆರವೇರಿಸಿದ ಗ್ರಾಮಸ್ಥರು, ಗ್ರಾಮದ ಆಂಜನೇಯಸ್ವಾಮಿ ದೇವಾಲಯದಲ್ಲಿ ತಳಿರು ತೋರಣ, ದೀಪಾಲಂಕಾರ ಮಾಡಿದ್ದರು.

ದೇವಾಲಯದ ಆವರಣದಲ್ಲಿ ಇದೇ ಪ್ರಥಮ ಬಾರಿಗೆ 22 ದೇವತಾ ಮೂರ್ತಿಗಳನ್ನು ವಿವಿದೆಡೆಗಳಿಂದ ಕರೆತಂದು ಕೂರಿಸಿ, ವಿಶೇಷ ಅಲಂಕಾರ ಮಾಡಿ ಪೂಜೆ ಸಲ್ಲಿಸಿದರು.

22 ದೇವತಾ ಮೂರ್ತಿಗಳು

ಕುಂಟನಹಳ್ಳಿಯಲ್ಲಿ ಸಂಭ್ರಮದ ಕನ್ನಡ ರಾಜ್ಯೋತ್ಸವ ಸಂಭ್ರಮ: 22 ದೇವತಾ ಮೂರ್ತಿಗಳ ಅದ್ಧೂರಿ ಪೂಜಾ ಉತ್ಸವ

ಭೈರವೇಶ್ವರ (ಕೂಗೋನಹಳ್ಳಿ), ಆಂಜನೇಯ (ಕುಂಟನಹಳ್ಳಿ), ಆಂಜನೇಯ (ಬೋಮ್ಮನಹಳ್ಳಿ). ಮುನೇಶ್ವರ (ನಾಗೇನಹಳ್ಳಿ). ತಿಮ್ಮರಾಯಸ್ವಾಮಿ (ಅದ್ದೆ). ಮಾದೇಶ್ವರ (ಮೆಣಸಿ), ಚೆನ್ನಕೇಶವಸ್ವಾಮಿ (ಕಾಡನೂರು), ಭೈರವೇಶ್ವರ (ಬಿದನೂರು), ಶ್ರೀ ರಾಮ (ತಳಗ ವಾರ), ವೆಂಕಟರಮಣ (ಅಣಗಲಪುರ), ಶನಿಮಹಾತ್ಮ (ಹೊನ್ನಾಘಟ್ಟ), ಅಕ್ಕಮ್ಮ (ಹೊನ್ನಾಘಟ್ಟ), ಕೆಂಪಮ್ಮ. (ಬ್ಯಾಡಹಳ್ಳಿ), ದೊಡ್ಡಮ್ಮ (ದೊಡ್ಡಬಳ್ಳಾಪುರ ), ಮುತ್ಯಾಲಮ್ಮ (ದೊಡ್ಡಬಳ್ಳಾಪುರ) , ಲಕ್ಷ್ಮಿ (ಗೊರವನಹಳ್ಳಿ ), ಮಹೇಶ್ವರಮ್ಮ (ನೇರಳಘಟ್ಟ), ಲಕ್ಷ್ಮಿಕರಗದಮ್ಮ (ಸೊಮಶೆಟ್ಟಿಹಳ್ಳಿ), ಲಕ್ಷ್ಮಿ ನರಸಿಂಹ (ಲಿಂಗಾಪುರ), ಚನ್ನಕೇಶವ (ಆವತಿ), ಮೈಲಾರಲಿಂಗ (ದೊಡ್ಡಬಳ್ಳಾಪುರ) , ಪಟೇಲಮ್ಮ (ಅದ್ದಿಗಾನಹಳ್ಳಿ)ದೇವಾತಾ ಮೂರ್ತಿಗಳನ್ನು ಕೂರಿಸಲಾಗಿತ್ತು.

ಕಳಸಗಳನ್ನು ಹಿಡಿದ ನೂರಾರು ಮಹಿಳೆಯರು ಗ್ರಾಮದಲ್ಲಿ ಮೆರವಣಿಗೆ ಮೂಲಕ ಆಗಮಿಸಿ, ದೇವತಾ ಮೂರ್ತಿಗಳಿಗೆ ಪೂಜೆ ಸಲ್ಲಿಸಿದರು.

ನಾಡು ನುಡಿಗಳ ಬಗ್ಗೆ ಅಭಿಮಾನ ಮೂಡಿಸುವ ದಿಸೆಯಲ್ಲಿ ಕನ್ನಡ ರಾಜ್ಯೋತ್ಸವ ಹಾಗೂ ಗ್ರಾಮದ ಒಳಿತಿಗೆ ದೇವತಾ ಮೂರ್ತಿಗಳಿಗೆ ಪೂಜಾ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಹಮ್ಮಿಕೊಳ್ಳಲಾಗಿದೆ.

ಈ ಹಿಂದೆ ಗ್ರಾಮದಲ್ಲಿ 11 ದೇವತಾ ಮೂರ್ತಿಗಳನ್ನು ಕೂರಿಸಲಾಗಿತ್ತು. ಈಗ 22 ದೇವತಾ ಮೂರ್ತಿಗಳಿಗೆ ಪೂಜೆ ಸಲ್ಲಿಸಲಾಗುತ್ತಿದೆ. ಲೋಕ ಕಲ್ಯಾಣ, ಸಹಬಾಳ್ವೆ, ಸಾಮರಸ್ಯದ ಜೀವನಕ್ಕೆ ಇಂತಹ ಉತ್ಸಾಹಗಳು ಪೂರಕವಾಗಿವೆ ಎಂದು ಗ್ರಾಮದ ಹಿರಿಯರಾದ ರಘು, ಕುಂಟನಹಳ್ಳಿ ಮಂಜುನಾಥ್, ಮುರುಳಿ ತಿಳಿಸಿದರು.

ರಾಜಕೀಯ

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಝಾಂಬಿ ಡ್ರಗ್ಸ್ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮಾಹಿತಿಯ ವಿಡಿಯೊ ಶೇರ್ ಮಾಡಿದ್ದ ನಟ ದುನಿಯಾ ವಿಜಯ್‌ಗೆ (Duniya Vijay) ಸಂಕಷ್ಟ ಎದುರಾಗಿದೆ.

[ccc_my_favorite_select_button post_id="121217"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!