Low-cost housing for slum dwellers: Minister K.J. George

ಕೊಳಗೇರಿ ನಿವಾಸಿಗಳಿಗೆ ಕಡಿಮೆ ವೆಚ್ಚದಲ್ಲಿ ವಸತಿ ಸೌಕರ್ಯ: ಸಚಿವ ಕೆ.ಜೆ.ಜಾರ್ಜ್

ಬೆಂಗಳೂರು ನಗರ ಜಿಲ್ಲೆ: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿರುವ ಕೊಳಗೇರಿ ನಿವಾಸಿಗಳಿಗೆ ಸರ್ಕಾರದ ವತಿಯಿಂದ ಕಡಿಮ ವೆಚ್ಚದಲ್ಲಿ ವಸತಿ ಸೌಕರ್ಯ ಕಲ್ಪಿಸಲಾಗುವುದು ಎಂದು ಇಂಧನ ಸಚಿವರಾದ ಕೆ.ಜೆ.ಜಾರ್ಜ್ (K.J. George) ಅವರು ತಿಳಿಸಿದರು.

ಶನಿವಾರ ಸರ್ವಜ್ಞ ನಗರದ ವಸತಿ ಸಂಕೀರ್ಣ ಹಾಗೂ ಕೊಳಗೇರಿ ಪ್ರದೇಶಗಳಿಗೆ ವಸತಿ ಸಚಿವ ಬಿ.ಝಡ್ ಜಮೀರ್ ಅಹ್ಮದ್ ಖಾನ್ ಅವರೊಂದಿಗೆ ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿ, ನಂತರ ಮಾತನಾಡಿದ ಅವರು ಕೊಳಗೇರಿ ಪ್ರದೇಶಗಳ ವಸ್ತುಸ್ಥಿತಿ ಪರಿಶೀಲಿಸದರಲ್ಲದೆ, ಕೊಳೇರಿ ನಿವಾಸಿಗಳಿಗೆ ತುರ್ತಾಗಿ ಆಗಬೇಕಿರುವ ವಸತಿ ಸೌಕರ್ಯಗಳು ಹಾಗೂ ಅದಕ್ಕೆ ಅಗತ್ಯವಿರುವ ಹಣಕಾಸಿನ ಕುರಿತು ಚರ್ಚಿಸಿದರು.

ವಸತಿ ಇಲಾಖೆಯು ಕರ್ನಾಟಕ ಗೃಹಮಂಡಳಿ ಮೂಲಕ ನಿರ್ಮಿಸಿದ ವಸತಿ ಸಂಕೀರ್ಣದಲ್ಲಿರುವ ಸಮಸ್ಯೆಗಳನ್ನು ಬಗೆಹರಿಸಿ ಆದಷ್ಟು ಬೇಗ ವಸತಿ ಸೌಕರ್ಯವನ್ನು ಅಭಿವೃದ್ದಿಪಡಿಸಬೇಕಿದೆ. ಈ ನಿಟ್ಟಿನಲ್ಲಿ 684 ಮನೆಗಳನ್ನು ಗುರುತಿಸಿದ್ದು, ತಕ್ಷಣವೇ ಅಗತ್ಯ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಬೇಕಿದೆ ಎಂದು ವಸತಿ ಸಚಿವರಿಗೆ ವಿವರಿಸಿದರು.

ಕಾಚರಕನಹಳ್ಳಿಗೆ ಹೊಂದಿಕೊಂಡಿರುವ ಕೊಳಗೇರಿ ಪ್ರದೇಶಕ್ಕೆ ಭೇಟಿ ನೀಡಿ ಅಲ್ಲಿನ ನಿವಾಸಿಗಳ ವಸತಿ ಸೌಕರ್ಯದ ಬಗ್ಗೆಯೂ ಚರ್ಚೆ ನಡೆಸಿ, ಈ ವೇಳೆ ಮಾತನಾಡಿದ ಇಂದನ ಸಚಿವ ಕೆ.ಜೆ.ಜಾರ್ಜ್, “ಕಲಬುರಗಿ, ಯಾದಗಿರಿ ಹಾಗೂ ರಾಯಚೂರು ಮೂಲದ ಶ್ರಮಿಕ ಜನರೇ ಹೆಚ್ಚಾಗಿ ವಾಸವಿದ್ದಾರೆ. 457 ಕುಟುಂಬಗಳು ಹಲವು ದಶಕಗಳಿಂದ ಸಾಕಷ್ಟು ಸಮಸ್ಯೆ ಎದುರಿಸುತ್ತಿದ್ದು, ಕೆಲವು ವರ್ಷಗಳ ಹಿಂದೆ ಬೆಂಕಿ ಅವಘಡದಲ್ಲಿ ತಮ್ಮ ದಾಖಲೆಗಳನ್ನು ಕಳೆದುಕೊಂಡಿದ್ದಾರೆ. ಹೀಗಾಗಿ ವಸತಿ ಇಲಾಖೆಯು ಮತದಾರರ ಗುರುತಿನ ಚೀಟಿಯನ್ನೇ ಪ್ರಮುಖ ದಾಖಲೆ ಎಂದು ಪರಿಗಣಿಸಿ ಕಡಿಮೆ ವೆಚ್ಚದಲ್ಲಿ ಮನೆ ನಿರ್ಮಿಸಿಕೊಡಬೇಕು ಎಂದು ವಸತಿ ಸಚಿವರಿಗೆ ಮನವಿ ಮಾಡಿದರು.

ಕೊಳಗೇರಿ ನಿವಾಸಿಗಳಿಗೆ ವಸತಿ ಮತ್ತು ಮೂಲ ಸೌಕರ್ಯ ಒದಗಿಸುವುದು ನಮ್ಮೆಲ್ಲರ ಜವಾಬ್ದಾರಿ. ಹೀಗಾಗಿ ಅವರನ್ನು ತಾತ್ಕಾಲಿಕವಾಗಿ ಸ್ಥಳಾಂತರಿಸಬೇಕಾಗುತ್ತದೆ, ಈ ಹಿನ್ನೆಲೆಯಲ್ಲಿ ವಸತಿ ಇಲಾಖೆ ಸೂಕ್ತ ಸ್ಥಳವೊಂದನ್ನು ಗುರುತಿಸಿ ಕುಡಿಯುವ ನೀರು, ಶೌಚಾಲಯ ಹಾಗೂ ರಕ್ಷಣೆ ಒದಗಿಸುವಂತ ವ್ಯವಸ್ಥೆಯನ್ನು ರೂಪಿಸಬೇಕು. ಇದು ವಸತಿ ಇಲಾಖೆಗೆ ಕೊಳಗೇರಿಗಳನ್ನು ಸ್ಥಳಾಂತರಿಸುವ ಸಮಯದಲ್ಲಿ ತಾತ್ಕಾಲಿಕವಾಗಿ ಬಳಕೆ ಮಾಡಬಹುದು ಎಂದು ಸಲಹೆ ನೀಡಿದರು.

ಇದಕ್ಕೆ ಸ್ಪಂದಿಸಿದ ವಸತಿ ಸಚಿವರು ಸಚಿವ ಜಾರ್ಜ್ ಅವರು ಒಳ್ಳೆಯ ಸಲಹೆ ನೀಡಿದ್ದಾರೆ ಎಂದರಲ್ಲದೆ, ಅದಕ್ಕಾಗಿ ಧನ್ಯವಾದ ಸಲ್ಲಿಸಿದರು. ಸ್ಥಳದಲ್ಲೇ ಹಾಜರಿದ್ದ ಬೆಂಗಳೂರು ನಗರ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಹಾಗೂ ವಸತಿ ಇಲಾಖೆ ಅಧಿಕಾರಿಗಳನ್ನು ವಿಚಾರಿಸಿ ಸ್ಥಳ ಗುರುತಿಸಲು ಸೂಚಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಬೆಂಗಳೂರು ನಗರ ಜಿಲ್ಲೆಯ ಅಪರ ಜಿಲ್ಲಾಧಿಕಾರಿಗಳಾದ ಡಾ.ಜಗದೀಶ್. ಕೆ. ನಾಯಕ್ ಗಿಡ್ಡಹಳ್ಳಿ ಸಮೀಪ ನಾಲ್ಕು ಎಕರೆ ಸ್ಥಳಾವಕಾಶವಿದ್ದು, ಅಲ್ಲಿಯೇ ತಾತ್ಕಾಲಿಕ ವ್ಯವಸ್ಥೆ ಮಾಡಬಹುದು ಎಂದು ತಿಳಿಸಿದರು.

ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಮಾತನಾಡಿ, ವಸತಿ ಸೌಕರ್ಯ ವಂಚಿತ ಜನರಿಗೆ ಸಮಸ್ಯೆಯಾಗದಂತೆ ಸೂಕ್ತ ಸ್ಥಳದಲ್ಲಿ ವಸತಿ ಸಂಕೀರ್ಣ ನಿರ್ಮಿಸಲಾಗುವುದು ಇಲ್ಲವೇ ವಸತಿ ಇಲಾಖೆಯಲ್ಲಿ ಹಾಲಿ ಇರುವ ಮನೆಗಳನ್ನು ವಸತಿ ರಹಿತರಿಗೆ ನೀಡುವ ಬಗ್ಗೆ ಕೆಲವೇ ದಿನಗಳಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ವಸತಿ ಯೋಜನೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಅನುದಾನ ನೀಡಲಾಗುತ್ತಿದೆ. ಜೊತೆಗೆ ಬ್ಯಾಂಕ್ ನಿಂದ ಸಾಲ ಸೌಲಭ್ಯವೂ ಸಿಗುತ್ತದೆ. ಹೀಗಾಗಿ ಈ ಎಲ್ಲದರ ವಿವರಗಳ ಬಗ್ಗೆ ಕೂಡಲೇ ಮಾಹಿತಿ ಪಡೆದು ತ್ವರಿತವಾಗಿ ವಸತಿ ಸೌಲಭ್ಯ ಕಲ್ಪಿಸುವಂತೆ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ಸಚಿವ ಜಮೀರ್ ಅಹ್ಮದ್ ಮತನಾಡಿ, ಕೂಡಲೇ ಸ್ಥಳವನ್ನು ಪರಿಶೀಲನೆ ನಡೆಸಿ ವಾರದೊಳಗೆ ವರದಿ ಹಾಗೂ ಯೋಜನೆ ಸಿದ್ದಪಡಿಸುವಂತೆ ವಸತಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕಾಚರಕನಹಳ್ಳಿ ಕೆರೆಗೆ ಹೊಸರೂಪ

ಹಲವು ದಶಕಗಳಿಂದ ಸಮಸ್ಯೆಯ ತಾಣವಾಗಿರುವ ಕಾಚರಕನಹಳ್ಳಿ ಕೆರೆಗೆ ಕಾಯಕಲ್ಪ ನೀಡಲು ಇಂಧನ ಸಚಿವರೂ ಆಗಿರುವ ಹಾಗೂ ಸರ್ವಜ್ಞ ನಗರ ಶಾಸಕ ಕೆ.ಜೆ.ಜಾರ್ಜ್ ಮುಂದಾಗಿದ್ದಾರೆ. ಕೆರೆಗೆ ಹೊಂದಿಕೊಂಡಿರುವ ಕೊಳಗೇರಿ ಸ್ಥಳಾಂತರ ಹಾಗೂ ಕೆರೆಗೆ ಸೇರುತ್ತಿರುವ ಮಲಿನ ನೀರನ್ನು ಶುದ್ಧೀಕರಿಸಲು ಘಟಕ ಸ್ಥಾಪನೆ ಮಾಡುವುದರ ಸುಂದರವಾದ ಪಾರ್ಕ್ ನಿರ್ಮಿಸಲು ನೀಲನಕ್ಷೆ ಸಿದ್ದಪಡಿಸಲಾಗಿದೆ. ಇದರ ಮೊದಲ ಹಂತವಾಗಿ ಕೊಳಗೇರಿ ಸ್ಥಳಾಂತರದ ಕುರಿತು ವಸತಿ ಸಚಿವರೊಂದಿಗೆ ಚರಚೆ ನಡೆಸಲಾಗಿದೆ ಎಂದು ಸಚಿವ ಕೆ.ಜೆ.ಜಾರ್ಜ್ ತಿಳಿಸಿದರು.

ಸಚಿವರ ಭೇಟಿ ವೇಳೆ ವಸತಿ ಇಲಾಖೆ, ಕರ್ನಾಟಕ ಗೃಹ ಮಂಡಳಿ, ರಾಜೀವ್ ಗಾಂಧಿ ವಸತಿ ನಿಗಮ ಅಧಿಕಾರಿಗಳು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಪುಲಕೇಶಿ, ಸುಮಿತ್ರ ಮುನಿಕೃಷ್ಣ, ಕಮ್ಮನಹಳ್ಳಿ, ಕಾಚರಕನಹಳ್ಳಿ ಹಾಗೂ ಬಾಣಸವಾಡಿ ಕ್ಷೇತ್ರದ ಮುಖಂಡರು ಉಪಸ್ಥಿತರಿದ್ದರು.

ರಾಜಕೀಯ

ಆರನೇ ಗ್ಯಾರಂಟಿಯಾಗಿ ಭೂಮಿ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

ಆರನೇ ಗ್ಯಾರಂಟಿಯಾಗಿ ಭೂಮಿ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

“ತುಂಗಭದ್ರಾ ಅಣೆಕಟ್ಟಿನ 30 ಟಿಎಂಸಿ ನೀರು ಸಮುದ್ರಕ್ಕೆ ಸೇರುತ್ತಿರುವುದನ್ನು ತಪ್ಪಿಸಲು ಈ ಭಾಗದ ನಾಯಕರು ನನ್ನ ಮೇಲೆ ಒತ್ತಡ ಹಾಕುತ್ತಿದ್ದಾರೆ. ನಾನು ಇದಕ್ಕೆ ಬದ್ಧನಾಗಿದ್ದೇನೆ. ಆದರೆ ಆಂಧ್ರ ಸಿಎಂ ಈ ವಿಚಾರವಾಗಿ ಚರ್ಚೆ ಮಾಡಲು

[ccc_my_favorite_select_button post_id="119228"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

RCB: ಮತ್ತೆ ಕಪ್ ನಮ್ದು

RCB: ಮತ್ತೆ ಕಪ್ ನಮ್ದು

4ನೇ ಆವೃತ್ತಿಯ ಮಹಿಳಾ ಪ್ರೀಮಿ ಯರ್ ಲೀಗ್ (ಡಬ್ಲ್ಯೂಪಿ ಎಲ್) ಟೂರ್ನಿಯಲ್ಲಿ ಸ್ಮೃತಿ ಮಂಧಾನಾ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಚಾಂಪಿಯನ್ ಆಗಿ ಹೊರ ಹೊಮ್ಮಿದ್ದು, ಸಿಎಂ ಸಿದ್ದರಾಮಯ್ಯ (Cmsiddaramaiah), ಡಿಸಿಎಂ

[ccc_my_favorite_select_button post_id="119174"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ದೊಡ್ಡಬಳ್ಳಾಪುರ: ಅಪಘಾತ.. ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಬೈಕ್ ಸವಾರ ಮಸಣಕ್ಕೆ…!

ದೊಡ್ಡಬಳ್ಳಾಪುರ: ಅಪಘಾತ.. ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಬೈಕ್ ಸವಾರ ಮಸಣಕ್ಕೆ…!

ಖಾಸಗಿ ಕಂಪನಿಯಲ್ಲಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ದ್ವಿಚಕ್ರ ವಾಹನ ಸಾವರ ರಸ್ತೆ ಬದಿಯ ಹಳ್ಳಕ್ಕೆ ಬಿದ್ದು ಸಾವನಪ್ಪಿರುವ ಘಟನೆ (Accident) ತಾಲೂಕಿನ ಮಾಕಳಿ ಬಳಿ ಇಂದು ಮುಂಜಾನೆ ಸಂಭವಿಸಿದೆ.

[ccc_my_favorite_select_button post_id="119217"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!