ವಿರೋಧ ಪಕ್ಷಗಳದು ಹಗಲುಗನಸು; 2028 ಕ್ಕೆ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ: ಡಿಸಿಎಂ ಡಿ.ಕೆ. ಶಿವಕುಮಾರ್

Congress will return to power in the state in 2028: DCM D.K. Shivakumar

ಶಿಡ್ಲಘಟ್ಟ: “ವಿರೋಧ ಪಕ್ಷಗಳು ಹಗಲುಗನಸು ಕಾಣುವುದನ್ನು ಬಿಡಬೇಕು. ಏಕೆಂದರೆ 2028 ಕ್ಕೆ ರಾಜ್ಯದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬಂದು ಜನಸೇವೆ ಮುಂದುವರೆಸಲಿದೆ ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ಹೇಳಿದರು.

ಚಿಕ್ಕಬಳ್ಳಾಪುರದ ಶಿಡ್ಲಘಟ್ಟದಲ್ಲಿ ಸೋಮವಾರ ನಡೆದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಶಿವಕುಮಾರ್ ಅವರು ಭಾಗವಹಿಸಿ ಮಾತನಾಡಿದರು.

ವಿರೋಧ ಪಕ್ಷಗಳದು ಹಗಲುಗನಸು; 2028 ಕ್ಕೆ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ: ಡಿಸಿಎಂ ಡಿ.ಕೆ. ಶಿವಕುಮಾರ್

“ರಾಜ್ಯದಲ್ಲಿ ಅಭಿವೃದ್ಧಿಯ ಸಂಗಮವಾಗಿದೆ. 2 ಸಾವಿರ ಕೋಟಿ ರೂ. ಮೊತ್ತದ ಅಭಿವೃದ್ಧಿ ಕೆಲಸವನ್ನು ವಿರೋಧ ಪಕ್ಷದ ಶಾಸಕರ ಕ್ಷೇತ್ರಕ್ಕೆ ಕಾಂಗ್ರೆಸ್ ಸರ್ಕಾರ ನೀಡುತ್ತಿದೆ ಎಂದರೆ ನಮ್ಮ ಜನಪರ ಧೋರಣೆಯನ್ನು ಎಲ್ಲರೂ ಅರ್ಥ ಮಾಡಿಕೊಳ್ಳಬೇಕು. ಈ ಕ್ಷೇತ್ರದ ಅಭಿವೃದ್ಧಿಗೆ ಇಡೀ ಸರ್ಕಾರವೇ ಬಂದಿದೆ ಎಂದರೆ ನಮಗೆ ಜನರ ಮೇಲಿನ ಪ್ರೀತಿಯೇ ಕಾರಣ” ಎಂದು ಹೇಳಿದರು.

“ರಾಜ್ಯದ ಪ್ರತಿ ಮಹಿಳೆಯರು ಅವರ ಖಾತೆಗೆ ಹಣ ಬಂದಾಗಲೆಲ್ಲಾ ನಮ್ಮ ಸರ್ಕಾರವನ್ನು ನೆನಪಿಸಿಕೊಳ್ಳುತ್ತಾರೆ. ಯಾವುದೇ ಪುಣ್ಯ ಕ್ಷೇತ್ರಗಳಿಗೆ ಹೋದರೂ ನಮ್ಮ ಒಳಿತಿಗೆ ಪ್ರಾರ್ಥನೆ ಮಾಡುತ್ತಾರೆ. ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರು ಬಂದಾಗ ಮಹಿಳೆಯರು ಗೌರವದಿಂದ ಅವರಿಗೆ ನಮಿಸಿದರು. ಮಹಿಳೆಯರ ಬದುಕಿನಲ್ಲಿ ನಾವು ತಂದಿರುವ ಬದಲಾವಣೆಯನ್ನು ಇಡೀ ದೇಶವೇ ನೋಡುತ್ತಿದೆ” ಎಂದರು.

“ಸತ್ಯಕ್ಕೂ ಸುಳ್ಳಿಗೂ ಎಷ್ಟು ಅಂತರ ಎಂದು ಅಕ್ಬರ್ ಒಮ್ಮೆ ಬೀರ್ಬಲ್ ಅವರನ್ನು ಕೇಳುತ್ತಾನೆ. ಆಗ ಬೀರ್ಬಲ್ ನಾಲ್ಕು ಬೆರಳಿನ ಅಂತರ ಎಂದು ಹೇಳುತ್ತಾರೆ. ಕಣ್ಣಲ್ಲಿ ನೋಡುವುದು ಸತ್ಯ, ಕಿವಿಯಲ್ಲಿ ಕೇಳುವುದು ಸುಳ್ಳು. ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ 2 ಸಾವಿರ ಕೋಟಿ ಮೊತ್ತವನ್ನು ನೀಡಿದೆ. ಇದಕ್ಕೆ ನಿಮ್ಮೆಲ್ಲರ ಕಣ್ಣುಗಳೇ ಸಾಕ್ಷಿ” ಎಂದು ಹೇಳಿದರು.

2027 ಕ್ಕೆ ಜಿಲ್ಲೆಗೆ ಎತ್ತಿನಹೊಳೆ ನೀರು

“ಸಚಿವರಾದ ಕೆ.ಎಚ್.ಮುನಿಯಪ್ಪ ಅವರು, ಸುಧಾಕರ್ ಅವರು ಹಾಗೂ ಕೃಷ್ಣಬೈರೇಗೌಡರು ನನ್ನ ಬೆನ್ನತ್ತಿದ್ದು 2027 ರ ಹೊತ್ತಿಗೆ ಎರಡು ಜಿಲ್ಲೆಗಳಿಗೆ ಎತ್ತಿನಹೊಳೆ ನೀರು ಹರಿಸಲೇಬೇಕು ಎಂದು ಪಟ್ಟು ಹಿಡಿದಿದ್ದಾರೆ. ಇದಕ್ಕೆ ಪೂರಕವಾಗಿ ನಾವು ಕೆಲಸ ಮಾಡುತ್ತಿದ್ದೇವೆ. ನಾವು ಪರ್ಯಾಯವಾಗಿ ಕಂದಾಯ ಭೂಮಿ ನೀಡಿದ್ದರೂ ಕೇಂದ್ರ ಪರಿಸರ ಇಲಾಖೆ ಅರಣ್ಯ ಭೂಮಿ ಬಳಕೆಗೆ ಅನುಮತಿ ನೀಡುತ್ತಿಲ್ಲ” ಎಂದರು.

“ಕೆ. ಸಿ ವ್ಯಾಲಿ ಯೋಜನೆಯ ಮೊದಲ ಹಂತದಲ್ಲಿ 143 ಕೆರೆ ತುಂಬಿಸಲಾಗಿದೆ. 2ನೇ ಹಂತದಲ್ಲಿ 272 ಕೆರೆ ಭರ್ತಿ ಮಾಡುತ್ತಿದ್ದೇವೆ. ಈ ಯೋಜನೆಯನ್ನು ವಿಶ್ವಬ್ಯಾಂಕ್ ಕೂಡ ಹೊಗಳಿದೆ. ಎಚ್. ಎನ್. ವ್ಯಾಲಿ ಯೋಜನೆಯ ಮೊದಲ ಹಂತದಲ್ಲಿ 65 ಕೆರೆಗಳನ್ನು ತುಂಬಿಸುವ ಕೆಲಸ ಮಾಡಿದ್ದೇವೆ. ಬೆಂಗಳೂರಲ್ಲಿ ಕೆರೆಗಳ ಇಂಟರ್ ಲಿಂಕ್ ಮಾಡೋಕೆ ಅಂತ 1700 ಕೋಟಿ ರೂಪಾಯಿ ಮೊತ್ತದ ಯೋಜನೆ ಕೈಗೆತ್ತಿಕೊಳ್ಳಲಾಗಿದೆ. ನೆಲಮಂಗಲದಲ್ಲಿ ವೃಷಭಾವತಿಯಿಂದ 70 ಕೆರೆ ತುಂಬಿಸಲಾಗುತ್ತಿದೆ” ಎಂದರು.

ಕೆರೆಗಳಿಗೆ ನೀರು ನಮ್ಮ ಆರನೇ ಗ್ಯಾರಂಟಿ

“ಕೆರೆಗಳನ್ನು ತುಂಬಿಸುವುದು ನಮ್ಮ ಕಾಂಗ್ರೆಸ್ ಸರ್ಕಾರದ ಆರನೇ ಗ್ಯಾರಂಟಿ. ವ್ಯವಸಾಯಕ್ಕೆ ಹಾಗೂ ಕುಡಿಯುವುದಕ್ಕೆ ನೀರನ್ನು ನೀಡುವುದೇ ನಮ್ಮ ಉದ್ದೇಶ. ಏಳನೇ ಗ್ಯಾರಂಟಿಯಾಗಿ 1,11,11,111 ಜನರಿಗೆ ಖಾತೆಗಳನ್ನು ನೀಡಿ ಭೂಮಿ ಗ್ಯಾರಂಟಿ ನೀಡಿದ್ದೇವೆ. ಹತ್ತು ಕಿಲೋ ಅಕ್ಕಿ ನೀಡುತ್ತಿದ್ದೆವು. ಆದರೆ ಐದು ಕಿಲೋ ಅಕ್ಕಿಯನ್ನು ಮಾರಾಟ ಮಾಡುತ್ತಿರುವುದು ಗಮನಕ್ಕೆ ಬಂದ ಕಾರಣಕ್ಕೆ ಅಡುಗೆ ಎಣ್ಣೆ, ಬೇಳೆಕಾಳುಗಳ ಕಿಟ್ ನೀಡುವ ಆಲೋಚನೆ ಮಾಡಿದ್ದೇವೆ. ಶೀಘ್ರದಲ್ಲೆ ಎಲ್ಲರಿಗೂ ಈ ಯೋಜನೆ ತಲುಪಲಿದೆ” ಎಂದು ತಿಳಿಸಿದರು.

“ಚಿಕ್ಕಬಳ್ಳಾಪುರ ಮತ್ತು ಕೋಲಾರದ ಜನತೆ ಬಗ್ಗೆ ನನಗೆ ಅಪಾರ ಗೌರವ. ಏಕೆಂದರೆ ನೀವು ಶ್ರಮ ಜೀವಿಗಳು, ನೀರಿನ ಬೆಲೆ ಅರಿತಿರುವವರು. ತರಕಾರಿ, ಹೂ, ಹಣ್ಣು ಸೇರಿದಂತೆ ಅನೇಕ ಕೃಷಿ ಉತ್ಪನ್ನಗಳನ್ನು ರಾಜ್ಯಕ್ಕೆ ನೀಡುತ್ತಿರುವವರು. ಅಶುದ್ಧ ನೀರನ್ನು ಶುದ್ಧೀಕರಣಗೊಳಿಸಿ ಅದನ್ನು ನಿಮ್ಮ ಕೆರೆಗಳಿಗೆ ಹರಿಸುವ ಕೆಲಸ ಮಾಡಲಾಗುತ್ತಿದೆ. ಇಡೀ ದೇಶವೇ ಈ ಯೋಜನೆಯನ್ನು ಹೊಗಳುತ್ತಿದೆ” ಎಂದು ಹೇಳಿದರು.

“ಶಿಡ್ಲಘಟ್ಟದ ನೀರು ಅತ್ಯುತ್ತಮವಾದುದು, ರೇಷ್ಮೆ ನೂಲು ಉತ್ತಮವಾಗಿ ಬರುತ್ತದೆ ಎಂದು ಇಲ್ಲಿಂದ ಟ್ಯಾಂಕರ್ ನಲ್ಲಿ ನೀರು ತಂದು ನಮ್ಮ ಊರಿನಲ್ಲಿ ನೂಲು ತೆಗೆಯಲಾಗುತ್ತದೆ. ಚೈನಾದಿಂದ ರೇಷ್ಮೆ ಆಮದು ಕಡಿಮೆಯಾದ ಕಾರಣಕ್ಕೆ ನಮ್ಮ ರೇಷ್ಮೆಗೆ ಅತ್ಯುತ್ತಮ ಬೆಲೆ ಬಂದಿದೆ. ಈಗ ಉತ್ತರ ಕರ್ನಾಟಕದ ಬೆಳಗಾವಿ, ವಿಜಯಪುರ, ಬಾಗಲಕೋಟೆ ಸೇರಿದಂತೆ ಅನೇಕ ಕಡೆ ರೇಷ್ಮೆ ಬೆಳೆಯಲಾಗುತ್ತಿದೆ” ಎಂದರು.

ಪಂಚ ಪಾಂಡವರಂತೆ ಜಿಲ್ಲೆಯ ಅಭಿವೃದ್ದಿಗೆ ಕೆಲಸ

“ಕಮಲ ಕೆರೆಯಲ್ಲಿದ್ದರೆ ಚಂದ, ತೆನೆ ಹೊಲದಲ್ಲಿದ್ದರೆ ಚೆಂದ, ಈ ಧಾನ ಧರ್ಮ ಮಾಡುವ ಕೈ ಅಧಿಕಾರದಲ್ಲಿದ್ದರೆ ಚಂದ ಎಂದು ಹೇಳಿದ್ದೇನೆ. ಡಾ.ಸುಧಾಕರ್ ಅವರು, ಸುಬ್ಬಾರೆಡ್ಡಿ ಅವರು, ಪುಟ್ಟಸ್ವಾಮಿ ಗೌಡರು, ಪ್ರದೀಪ್ ಈಶ್ವರ್ ಅವರು, ರವಿಕುಮಾರ್ ಅವರು ಜಿಲ್ಲೆಯ ಅಭಿವೃದ್ದಿಗೆ ಕೈ ಜೋಡಿಸಿ ಪಂಚ ಪಾಂಡವರಂತೆ ಕೆಲಸ ಮಾಡಿಕೊಂಡು ಬರುತ್ತಿದ್ದಾರೆ. ಜನರ, ಸಮಾಜದ ಋಣ ತೀರಿಸುವ ಕೆಲಸ ಮಾಡುತ್ತಿದ್ದಾರೆ” ಎಂದು ಹೇಳಿದರು.

“ನನ್ನ ಆಪ್ತಮಿತ್ರ ವಿ.ಮುನಿಯಪ್ಪ ಅವರ ಆರೋಗ್ಯ ಸರಿಯಿಲ್ಲ. ಅವರ ಆರೋಗ್ಯ ಸರಿಯಿದ್ದಿದ್ದರೆ ಅವರೇ ಇಲ್ಲಿನ ಶಾಸಕರು, ಅವರೇ ಮಂತ್ರಿ. ಇದನ್ನು ಯಾರೂ ತಪ್ಪಿಸಲು ಆಗುತ್ತಿರಲಿಲ್ಲ” ಎಂದರು.

ಶಾಸಕರ ಖರೀದಿ ಹಾಗೂ ಕುದುರೆ ವ್ಯಾಪಾರ ಬಿಜೆಪಿ ಸಂಸ್ಕೃತಿ

“ಶಾಸಕರ ಖರೀದಿ ಹಾಗೂ ಕುದುರೆ ವ್ಯಾಪಾರ ಬಿಜೆಪಿ ಸಂಸ್ಕೃತಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿರುಗೇಟು ನೀಡಿದರು.

ಶಿಡ್ಲಘಟ್ಟದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಸೋಮವಾರ ಪ್ರತಿಕ್ರಿಯೆ ನೀಡಿದರು.

ಕಾಂಗ್ರೆಸ್ ಶಾಸಕರನ್ನು ಕಾಂಗ್ರೆಸ್ ಪಕ್ಷದ ನಾಯಕರೇ ಖರೀದಿ ಮಾಡುವ ಪರಿಸ್ಥಿತಿ ಬಂದಿದೆ ಎಂಬ ಬಿಜೆಪಿ ನಾಯಕರ ಹೇಳಿಕೆ ಬಗ್ಗೆ ಕೇಳಿದಾಗ, “ಈ ಹಿಂದೆ ಬಿಜೆಪಿ ಸರ್ಕಾರ ರಚನೆಯಾದಾಗ ಅವರು ಎಷ್ಟು ಸಾವಿರ ಕೋಟಿ ಖರ್ಚು ಮಾಡಿದ್ದರು. ಮುಖ್ಯಮಂತ್ರಿ ಹುದ್ದೆಗೆ ಎಷ್ಟು ಹಣ ನೀಡಬೇಕಾಗಿತ್ತು, ಮಂತ್ರಿ ಹುದ್ದೆಗೆ ಎಷ್ಟು ಹಣ ನೀಡಲಾಗಿದೆ ಎಂದು ಅವರದೇ ಪಕ್ಷದ ನಾಯಕರು ಬಹಿರಂಗ ಹೇಳಿಕೆ ನೀಡಿದ್ದಾರೆ. ಅವರು ಎಷ್ಟು ಹಣ ಆಮೀಷ ಒಡ್ಡಿದ್ದರು ಎಂದು ವಿಧಾನಸಭೆಯಲ್ಲೂ ಪ್ರಸ್ತಾಪವಾಗಿದ್ದು, ದಾಖಲೆಗಳಲ್ಲಿ ಸೇರಿವೆ. ಈಗ ಬಿಜೆಪಿಯವರು ತಮ್ಮ ಪ್ರವೃತ್ತಿಯನ್ನು ನೆನೆಸಿಕೊಳ್ಳುತ್ತಿದ್ದಾರೆ” ಎಂದು ಹರಿಹಾಯ್ದರು.

ಹೈಕಮಾಂಡ್ ಹೇಳಿದ್ದನ್ನು ನಾನು, ಶಿವಕುಮಾರ್ ಸೇರಿದಂತೆ ಎಲ್ಲರೂ ಒಪ್ಪಬೇಕು ಎಂಬ ಸಿದ್ದರಾಮಯ್ಯ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಅವರು ಹೇಳಿದ ಮೇಲೆ ಅದೇ ನಮಗೆ ವೇದವಾಕ್ಯ” ಎಂದು ತಿಳಿಸಿದರು.

ರಾಜಕೀಯ

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ: ಹಾಡಹಗಲೇ 2 ಮನೆ ಬೀಗ ಒಡೆದು ಒಡವೆ, ನಗದು ಕಳ್ಳತನ..! ಮಹಿಳೆಯ ಮಾಂಗಲ್ಯ ಸರ ಕಸಿದ ದುಷ್ಕರ್ಮಿಗಳು

ದೊಡ್ಡಬಳ್ಳಾಪುರ: ಹಾಡಹಗಲೇ 2 ಮನೆ ಬೀಗ ಒಡೆದು ಒಡವೆ, ನಗದು ಕಳ್ಳತನ..! ಮಹಿಳೆಯ

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎರಡು ಮನೆ ಬೀಗ ಒಡೆದು, ಒಡವೆ, ನಗದು ( jewellery, cash) ಕಳ್ಳತನ ನಡೆಸಿರುವ ಪ್ರಕರಣಗಳು ವರದಿಯಾಗಿದ್ದು, ತಾಲೂಕಿನ ಜನರನ್ನು ಆತಂಕಕ್ಕೆದೂಡಿದೆ.

[ccc_my_favorite_select_button post_id="121201"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!