I am the Chief Minister of this state for 2028: Basanagowda Patila Yatnal

2028 ಕ್ಕೆ ನಾನೇ ಈ ರಾಜ್ಯದ ಮುಖ್ಯಮಂತ್ರಿ: ಬಸನಗೌಡ ಪಾಟೀಲ ಯತ್ನಾಳ್‌

ಹಾವೇರಿ(ಹಾನಗಲ್): 2028 ಕ್ಕೆ ನಾನೇ ಈ ರಾಜ್ಯದ ಮುಖ್ಯಮಂತ್ರಿ ( Chief Minister). ನನ್ನ ಕೈಯಾಗ ಸರಕಾರ ಕೊಡಲಿ, ಈ ರಾಜ್ಯದ ಕಥೆಯೇ ಬೇರೆಯಾಗುತ್ತದೆ. ಪೊಲೀಸರ ಕೈಗೆ ಎಕೆ-47 ಕೊಟ್ಟು ಕಾನೂನು ಧರ್ಮ ಉಳಿಸುವ ಕೆಲಸಕ್ಕೆ ಅವಕಾಶ ನೀಡಬೇಕು ಎಂಬ ಸೂಚನೆ ನೀಡುತ್ತೇನೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ (Basanagowda Patil Yatnal) ಹೇಳಿದರು.

ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ ಹಾವಣಗಿ ಗ್ರಾಮದಲ್ಲಿ ವೀರರಾಣಿ ಕಿತ್ತೂರು ಚೆನ್ನಮ್ಮನ ಮೂರ್ತಿ ಅನಾವರಣ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಭಾರತ ಯಾವ ದಾಳಿಗೂ ಬಗ್ಗಿಲ್ಲ, ಬಗ್ಗುವುದೂ ಇಲ್ಲ, ಜಾತೀಯತೆ ತೊಲಗಿ ಹಿಂದುತ್ವ ನಮ್ಮ ಉಸಿರಾಗಬೇಕು, ಹಿಂದೂ ಸಂಕೇತ ಧರಿಸಲು ಹಿಂದೇಟು ಯಾರೂ ಹಾಕಬೇಡಿ ಎಂದರು.

ಸಿದ್ದರಾಮಯ್ಯ ಸರಕಾರದವರು ಓಟಿಗಾಗಿ ಇಸ್ಲಾಂ ಅಂದರೆ ಶಾಂತಿ, ಹಿಂದೂ ಮುಸ್ಲಿಂ ಭಾಯಿ ಭಾಯಿ ಎಂದೆಲ್ಲ ಬೂಟಾಟಿಕೆ ಮಾಡುತ್ತಿದ್ದಾರೆ. ಇನ್ನೊಂದೆಡೆ ಲಿಂಗಾಯತ ಮಠಾಧೀಶರು ಇಸ್ಲಾ ಲಿಂಗಾಯತ ಒಂದೇ ಎಂದು ಹೇಳುತ್ತ, ಮತ್ತೊಂದೆಡೆ ಲಿಂಗಾಯತರನ್ನೇ ಒಡೆಯುತ್ತಿದ್ದಾರೆ ಎಂದರು.

ನಮ್ಮನ್ನು ವಿಭಜಿಸಿ ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಕೆಲಸ ನಡೆಯುತ್ತಿದೆ

ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿ, ನಮ್ಮನ್ನು ವಿಭಜಿಸಿ ತುಂಡು ಮಾಡಿ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಕೆಲಸ ನಡೆಯುತ್ತಿದೆ. ಈ ಬಗ್ಗೆ ಎಚ್ಚರಿಕೆ ವಹಿಸಬೇಕು.

ಈ ದೇಶ ಉಳಿದರೆ ನಾವು ಉಳಿಯುತ್ತೇವೆ. ಅಭದ್ರತೆ ಹುಟ್ಟಿಸುವ ಶಕ್ತಿಗಳನ್ನು ಹೊಡೆದೂಡಿಸಲು ನಾವೆಲ್ಲ ಒಂದಾಗಬೇಕು. ನಾವೆಲ್ಲ ಒಂದಾಗಿದ್ದೇವೆ ಎಂದರೆ ನಮ್ಮ ಬಳಿ ಯಾರೂ ಬರುವುದಿಲ್ಲ ಎಂದು ಹೇಳಿದ್ದಾರೆ.

ಹಾವಣಗಿ ಗ್ರಾಮದಲ್ಲಿ ಐತಿಹಾಸಿಕ ದಿನ. ಗ್ರಾಮದ ಚರಿತೆಯಲ್ಲಿ ಬಹಳ ಮಹತ್ವದ ದಿನ ಆಗಿ ಬರುವಂತ ದಿನಗಳಲ್ಲಿ ಉಳಿಯುತ್ತದೆ. ಯಾಕೆಂದರೆ ದೇಶದ ಪ್ರಥಮ ಸ್ವಾತಂತ್ರ್ಯ ಹೋರಾಟ ಮಾಡಿರುವ ವೀರರಾಣಿ ಕಿತ್ತೂರು ಚೆನ್ನಮ್ಮನ ಪ್ರತಿಮೆ ಅನಾವರಣ ಮಾಡಿರುವ ದಿನ.

ಬಹಳಷ್ಟು ಜನರು ಝಾನ್ಸಿ ರಾಣಿ ಲಕ್ಷ್ಮೀ ಬಾಯಿ ಮೊದಲ ಸ್ವಾತಂತ್ರ್ಯ ಹೋರಾಟಗಾರ್ತಿ ಅಂತ ಹೇಳುತ್ತಾರೆ. ಆದರೆ, 1824 ರಲ್ಲಿಯೇ ವೀರರಾಣಿ ಕಿತ್ತೂರು ಚೆನ್ನಮ್ಮ ಬ್ರಿಟೀಷ್ ಅಧಿಕಾರಿ ಥ್ಯಾಕರೆಯ ರುಂಡವನ್ನು ಹೊಡೆದುರುಳಿಸಿದ್ದಳು. ಅದು ಆಗಿ ನಲವತ್ತು ವರ್ಷದ ನಂತರ ಝಾನ್ಸಿ ರಾಣಿ ಲಕ್ಷ್ಮೀ ಬಾಯಿ ಬಿಟೀಷರ ವಿರುದ್ಧ ಹೋರಾಟ ಮಾಡಿದಳು ಎಂದು ಹೇಳಿದರು.

ವೀರರಾಣಿ ಕಿತ್ತೂರು ಚೆನ್ನಮ್ಮ ರಾಣಿ ಅಬ್ಬಕ್ಕ ಅವರು ಎಷ್ಟೇ ಕಷ್ಟ ಬಂದರೂ ಈ ದೇಶದ ಮೇಲಿನ ಭಕ್ತಿ ಕಡಿಮೆಯಾಗಲಿಲ್ಲ. ಕಿತ್ತೂರು ಚೆನ್ನಮ್ಮ ಬಿಟೀಷರ ವಿರುದ್ಧ ಖಡ್ಗ ಹಿಡಿದು ಹೋರಾಟ ಮಾಡಿದಳು. ಅವಳು ವಿಧವೆಯಾದರೂ ಬ್ರಿಟೀಷರ ವಿರುದ್ಧ ಹೊರಾಡಿದಳು. ಬ್ರಿಟೀಷರು ಕಪ್ಪ ಕೊಡಬೇಕು ಎಂದಾಗ ನಾವೇಕೆ ಕಪ್ಪ ಕೊಡಬೇಕು ಎಂದು ಥ್ಯಾಕರೆಯನ್ನು ರುಂಡ ಹಾರಿಸಿದಳು.

ಎರಡನೇ ಯುದ್ಧದಲ್ಲಿ ಚೆನ್ನಮ್ಮಳನ್ನು ಮೋಸದಿಂದ ಸೋಲಿಸಿ ಅವಳನ್ನ ಬೈಲಹೊಂಗಲ ಜೈಲಿನಲ್ಲಿ ಬಂಧಿಸಿ ಅವಳ ನೈತಿಕ ಸ್ಥೆರ್ಯ ಕಳೆಯುವ ಕೆಲಸ ಮಾಡಿದ್ದರು. ಅದಕ್ಕೆ ಚೆನ್ನಮ್ಮ ಎದೆಗುಂದಿರಲಿಲ್ಲ. ಆದರೆ, ಯಾವಾಗ ರಾಯಣ್ಣನನ್ನು ಬಂಧಿಸಿದ್ದೇವೆ ಎಂದು ಹೇಳುತ್ತಾರೆ ಆಗ ಚೆನ್ನಮ್ಮ ಸ್ನೇಹ ತ್ಯಾಗ ಮಾಡುತ್ತಾಳೆ ಎಂದರು.

ಈ ದೇಶಕ್ಕೆ ಚರಿತ್ರೆ ಇದೆ. ಚಾರಿತ್ರ್ಯ ಬೇಕಾಗಿದೆ. ದೇಶಕ್ಕಾಗಿ ಸರ್ವಸ್ವ ತ್ಯಾಗ ಮಾಡಿದ್ದಾರೆ ಅವರ ಜೀವನ ತಿಳಿದುಕೊಂಡು ನಮ್ಮ ಚಾರಿತ್ರ್ಯ ಕಟ್ಟಿಕೊಳ್ಳಬೇಕಿದೆ. ಇವತ್ತು ದೇಶ ಸದೃಢವಾಗಿ ಬೆಳೆಯುತ್ತಿರುವ ಸಂದರ್ಭದಲ್ಲಿ ದೇಶದಲ್ಲಿ ಅಭದ್ರತೆ ಹುಟ್ಟಿಸುವ ಕೆಲಸ ಆಗುತ್ತಿದೆ. ಅಭದ್ರತೆ ಹುಟ್ಟಿಸುವ ಶಕ್ತಿಗಳನ್ನು ಹೊಡೆದೂಡಿಸಲು ನಾವೆಲ್ಲ ಒಂದಾಗಬೇಕು.

ನಾವೆಲ್ಲ ಭಾರತೀಯರು, ನಮ್ಮ ಸಂಕೇತ ಹಿಂದುತ್ವ, ನಾವೆಲ್ಲ ಹನುಮಪ್ಪ, ಶಿವ, ಗಣೇಶನನ್ನು ಪೂಜಿಸುತ್ತೇವೆ. ದೇವರಲ್ಲಿ ಬೇಧವಿಲ್ಲ. ನಮ್ಮನ್ನು ವಿಭಜಿಸಿ ತುಂಡು ಮಾಡಿ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಕೆಲಸ ನಡೆಯುತ್ತಿದೆ. ಈ ಬಗ್ಗೆ ಎಚ್ಚರಿಕೆ ವಹಿಸಬೇಕು.

ಈ ದೇಶ ಉಳಿದರೆ ನಾವು ಉಳಿಯುತ್ತೇವೆ. ನಾವೆಲ್ಲಾ ಒಂದಾಗಿದ್ದೇವೆ ಎಂದರೆ ನಮ್ಮ ಬಳಿ ಯಾರೂ ಬರುವುದಿಲ್ಲ. ನಮ್ಮ ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾಡಬೇಕು. ಒಂದು ಕಾಲದಲ್ಲಿ ಯಾರ ಬಳಿ ಭೂಮಿ ಇತ್ತು ಅವರು ಜಗತ್ತು ಆಳಿದರು. ಮತ್ತೆ ದುಡಿದ್ದವರು ಜಗತ್ತು ಆಳಿದರು.

ಈಗ ಜ್ಞಾನ ಇದ್ದವರು ಜಗತ್ತು ಆಳುತ್ತಾರೆ. ಚೆನ್ನಮ್ಮನಿಂದ ನಾವು ದೇಶ ಭಕ್ತಿಯನ್ನು ಕಲಿತಿದ್ದೇವೆ. ನಾವು ಮಾಡುವ ಕೆಲಸ ದೇಶಕ್ಕೆ ಒಳಿತಾಗಬೇಕು. ತನಗಾಗಿ ಪ್ರಾಣಿಯೂ ಬದುಕುತ್ತದೆ ಅಂತ ಸ್ವಾಮಿ ವಿವೇಕಾನಂದರು ಹೇಳಿದ್ದಾರೆ. ಇತರರಿಗೆ ಬದುಕಿದಾಗ ದೇವರು ಮೆಚ್ಚುತ್ತಾನೆ ಎಂದು ಹೇಳಿದ್ದಾರೆ.

ನಾವೆಲ್ಲರೂ ಒಂದು ಧ್ವಜ, ಧರ್ಮದಲ್ಲಿ ಒಂದಾಗಬೇಕು. ಕಿತ್ತೂರು ಚೆನ್ನಮ್ಮ ಭಗತ್ ಸಿಂಗ್ ಸೇರಿದಂತೆ ಅನೇಕ ವೀರರಿದ್ದಾರೆ. ಸ್ವಾತಂತ್ರ್ಯ ಬಂದಾಗ ಒಬ್ಬ ಪೊಪೇಸರ್ ವಿದ್ಯಾರ್ಥಿಗೆ ದೇಶಕ್ಕಾಗಿ ಏನು ಮಾಡುತ್ತೀಯಾ ಎಂದು ಕೇಳಿದರು ಆತ ದೇಶಕ್ಕಾಗಿ ಪ್ರಾಣ ಕೊಡುತ್ತೇನೆ ಎಂದ ಅದಕ್ಕೆ ಪೊಫೇಸರ್ ದೇಶಕ್ಕಾಗಿ ಪ್ರಾಣ ಕೊಡುವುದು ಬೇಡ, ದೇಶಕ್ಕಾಗಿ ದುಡಿ, ದೇಶಕ್ಕಾಗಿ ಬಾಳು, ಬುದ್ಧಿವಂತಿಕೆಯನ್ನು ದೇಶಕ್ಕಾಗಿ ಬಳಸು ಎಂದು ಹೇಳೀದರು. ಇವತ್ತು ಆ ಕಾಲ ಬಂದಿದೆ ಎಂದು ಹೇಳಿದರು.

ಈ ಸಂಧರ್ಭದಲ್ಲಿ ಶ್ರೀ ಬಸವ ಜಯಮೃತ್ಯುಂಜಯ ಮಹಾಸ್ವಾಮಿಗಳು ಲಿಂಗಾಯತ ಪಂಚಮಸಾಲಿ ಪೀಠ, ಕೂಡಲಸಂಗಮ, ಶ್ರೀ ಮ.ನಿ.ಪ್ರ ಶಿವಬಸವ ಮಹಾಸ್ವಾಮಿಗಳು ವಿರಕ್ತಮಠ, ಅಕ್ಕಿಆಲೂರ, ಶ್ರೀ ಷ.ಬ್ರ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳು, ಮುತ್ತಿನಕಂತಿಮಠ ಅಕ್ಕಿ ಆಲೂರ ಶ್ರೀಗಳವರು ಸಾನಿಧ್ಯ ವಹಿಸಿದ್ದರು.

ರಾಜಕೀಯ

ಆರನೇ ಗ್ಯಾರಂಟಿಯಾಗಿ ಭೂಮಿ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

ಆರನೇ ಗ್ಯಾರಂಟಿಯಾಗಿ ಭೂಮಿ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

“ತುಂಗಭದ್ರಾ ಅಣೆಕಟ್ಟಿನ 30 ಟಿಎಂಸಿ ನೀರು ಸಮುದ್ರಕ್ಕೆ ಸೇರುತ್ತಿರುವುದನ್ನು ತಪ್ಪಿಸಲು ಈ ಭಾಗದ ನಾಯಕರು ನನ್ನ ಮೇಲೆ ಒತ್ತಡ ಹಾಕುತ್ತಿದ್ದಾರೆ. ನಾನು ಇದಕ್ಕೆ ಬದ್ಧನಾಗಿದ್ದೇನೆ. ಆದರೆ ಆಂಧ್ರ ಸಿಎಂ ಈ ವಿಚಾರವಾಗಿ ಚರ್ಚೆ ಮಾಡಲು

[ccc_my_favorite_select_button post_id="119228"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

RCB: ಮತ್ತೆ ಕಪ್ ನಮ್ದು

RCB: ಮತ್ತೆ ಕಪ್ ನಮ್ದು

4ನೇ ಆವೃತ್ತಿಯ ಮಹಿಳಾ ಪ್ರೀಮಿ ಯರ್ ಲೀಗ್ (ಡಬ್ಲ್ಯೂಪಿ ಎಲ್) ಟೂರ್ನಿಯಲ್ಲಿ ಸ್ಮೃತಿ ಮಂಧಾನಾ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಚಾಂಪಿಯನ್ ಆಗಿ ಹೊರ ಹೊಮ್ಮಿದ್ದು, ಸಿಎಂ ಸಿದ್ದರಾಮಯ್ಯ (Cmsiddaramaiah), ಡಿಸಿಎಂ

[ccc_my_favorite_select_button post_id="119174"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ದೊಡ್ಡಬಳ್ಳಾಪುರ: ಅಪಘಾತ.. ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಬೈಕ್ ಸವಾರ ಮಸಣಕ್ಕೆ…!

ದೊಡ್ಡಬಳ್ಳಾಪುರ: ಅಪಘಾತ.. ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಬೈಕ್ ಸವಾರ ಮಸಣಕ್ಕೆ…!

ಖಾಸಗಿ ಕಂಪನಿಯಲ್ಲಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ದ್ವಿಚಕ್ರ ವಾಹನ ಸಾವರ ರಸ್ತೆ ಬದಿಯ ಹಳ್ಳಕ್ಕೆ ಬಿದ್ದು ಸಾವನಪ್ಪಿರುವ ಘಟನೆ (Accident) ತಾಲೂಕಿನ ಮಾಕಳಿ ಬಳಿ ಇಂದು ಮುಂಜಾನೆ ಸಂಭವಿಸಿದೆ.

[ccc_my_favorite_select_button post_id="119217"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!