Center responds to Kumaranna's request; NICDP project for 9 districts of Karnataka preferred

ಕುಮಾರಣ್ಣನ ಮನವಿಗೆ ಕೇಂದ್ರದ ಸ್ಪಂದನೆ; ಕರ್ನಾಟಕದ 9 ಜಿಲ್ಲೆಗಳಲ್ಲಿ NICDP ಯೋಜನೆಗೆ ಒಲವು

ಕೆ.ಎಂ.ಸಂತೋಷ್, ಆರೂಢಿ (ದೊಡ್ಡಬಳ್ಳಾಪುರ): ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರಿಂದ ಪ್ರಸ್ತಾಪಿತ ಕರ್ನಾಟಕದ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP- National Industrial Corridor Development Programme)) ಕ್ಕೆ ಕೇಂದ್ರ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದೆ.

ಕರ್ನಾಟಕದ ಕೈಗಾರಿಕೆ ಹಾಗೂ ಸಾಗಣೆ ಕ್ಷೇತ್ರಗಳಿಗೆ ಪರಿವರ್ತನಾತ್ಮಕ ಕಾಯಕಲ್ಪ ನೀಡುವ ಈ ಯೋಜನೆಗೆ ಕೇಂದ್ರದ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು; ರಾಜ್ಯದ ಪ್ರಮುಖ ಜಿಲ್ಲೆಗಳಲ್ಲಿ ಒಂಬತ್ತು ಕೈಗಾರಿಕಾ ಪಾರ್ಕ್ ಗಳನ್ನು ಸ್ಥಾಪಿಸುವ ಬಗ್ಗೆ ಒಲವು ತೋರಿದ್ದು, ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಪತ್ರ ಬರೆದಿದ್ದಾರೆ.

2025 ನವೆಂಬರ್ 13ರಂದು ಪಿಯೂಷ್ ಗೋಯಲ್ ಅವರನ್ನು ಭೇಟಿಯಾಗಿದ್ದ ಸಚಿವ ಕುಮಾರಸ್ವಾಮಿ ಅವರು, ಮಂಡ್ಯ, ಮೈಸೂರು, ಚಾಮರಾಜನಗರ, ಕೋಲಾರ, ಹಾಸನ, ಮಂಗಳೂರು, ಹುಬ್ಬಳ್ಳಿ-ಧಾರವಾಡ, ರಾಯಚೂರು ಮತ್ತು ಬೀದರ್ ಜಿಲ್ಲೆಗಳನ್ನು ಒಳಗೊಂಡ ಸುವಿಶಾಲವಾದ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP) ಅನುಷ್ಠಾನ ಮಾಡಬೇಕೆಂದು ಕೋರಿ ಮನವಿಯನ್ನು ಸಲ್ಲಿಸಿ ಮಾತುಕತೆ ನಡೆಸಿದ್ದರು.

ಕುಮಾರಸ್ವಾಮಿ ಅವರ ಪ್ರಸ್ತಾವನೆಯನ್ನು ರಾಜ್ಯದ ಅಭಿವೃದ್ಧಿಗೆ ಪರಿವರ್ತನಾತ್ಮಕ ಪರಿಕಲ್ಪನೆ ಎಂದು ಶ್ಲಾಘಿಸಿದ್ದ ಗೋಯೆಲ್ ಅವರು, ಈ ಬಗ್ಗೆ ಉತ್ತರವನ್ನು ಬರೆದಿದ್ದಾರೆ. ಕರ್ನಾಟಕದ ಪ್ರಾದೇಶಿಕ ಸಮತೋಲಿತ ಕೈಗಾರಿಕಾ ಅಭಿವೃದ್ಧಿಗೆ ಇದು ಪೂರಕವಾಗಿದೆ.

ಇಂಥ ಆಕಾಂಕ್ಷೆಗಳನ್ನು ಈಡೇರಿಸುವ ಕೇಂದ್ರದ ರಚನಾತ್ಮಕ ಕೇಂದ್ರ ನೀತಿಯನ್ನು ಕಾರ್ಯರೂಪಕ್ಕೆ ತರುವಲ್ಲಿ ಈ ಕ್ರಮವು ಒಂದು ಪ್ರಮುಖ ಆರಂಭಿಕ ಹೆಜ್ಜೆಯಾಗಿದೆ ಎಂದು ಸಚಿವ ಗೋಯೆಲ್ ಅವರು ತಿಳಿಸಿದ್ದಾರೆ.

ಕೈಗಾರಿಕೆ ಕ್ಷೇತ್ರದಲ್ಲಿ ಮುಂಚೂಣಿ ರಾಜ್ಯವಾಗಿರುವ ಕರ್ನಾಟಕದಾದ್ಯಂತ ಸೂಕ್ತ ಕೈಗಾರಿಕಾ ಕಾರಿಡಾರ್ ಯೋಜನೆಯ ಚೌಕಟ್ಟಿನಡಿಯಲ್ಲಿ ಕೈಗಾರಿಕಾ ಪಾರ್ಕುಗಳನ್ನು ಸ್ಥಾಪಿಸುವ ಕುರಿತಂತೆ ಗೋಯೆಲ್ ಅವರನ್ನು ಕುಮಾರಸ್ವಾಮಿ ಅವರು ಮನವೊಲಿಸಿದ್ದರು.

ಪ್ರಾದೇಶಿಕ ಕೈಗಾರಿಕಾ ಬೆಳವಣಿಗೆಯನ್ನು ಬಲಪಡಿಸಿ ಉತ್ತೇಜಿಸಲು, ಸಾಗಾಣಿಕೆಯ ಮೂಲಸೌಕರ್ಯವನ್ನು ಅಧಿಕವಾಗಿ ಅಭಿವೃದ್ಧಿಪಡಿಸಲು ಹಾಗೂ ಕರ್ನಾಟಕದ ಉದ್ದಗಲಕ್ಕೂ ಬೃಹತ್ ಪ್ರಮಾಣದಲ್ಲಿ ಉದ್ಯೋಗಾವಕಾಶ ಸೃಷ್ಟಿಸಲು ಈ ಯೋಜನೆಯು ಬಹುದೊಡ್ಡ ಮಟ್ಟದಲ್ಲಿ ಕೊಡುಗೆ ನೀಡುತ್ತದೆ ಎಂಬ ಅಂಶವನ್ನು ಸಚಿವ ಗೋಯಲ್ ಅವರ ಜತೆ ಕುಮಾರಸ್ವಾಮಿ ಅವರು ಚರ್ಚಿಸಿದ್ದರು.

ಈ ಯೋಜನೆ ಅನುಷ್ಠಾನಕ್ಕೆ ಬಂದರೆ ಕರ್ನಾಟಕದಲ್ಲಿ ಸರಕು, ಕೈಗಾರಿಕೆ ಉತ್ಪನ್ನಗಳ ಸಾಗಣೆ ಸುಲಭವಾಗಿ ಕೈಗಾರಿಕಾಭಿವೃದ್ಧಿ ವೇಗಗತಿಯಲ್ಲಿ ಸಾಗುತ್ತದೆ. ಉದ್ದೇಶಿತ ಜಿಲ್ಲೆಗಳಲ್ಲಿ ಯೋಜನೆ ಅನುಷ್ಠಾನಕ್ಕೆ ಬಂದರೆ ಇಡೀ ರಾಜ್ಯಕ್ಕೆ ನಾಲ್ಕು ದಿಕ್ಕುಗಳ್ಳಿಯೂ ಅನುಕೂಲ ಆಗುತ್ತದೆ.

ಈ ಪ್ರಸ್ತಾವಿತ ಕೈಗಾರಿಕಾ ಪಾರ್ಕುಗಳನ್ನು ಸೂಕ್ತವಾದ ಕೈಗಾರಿಕಾ ಕಾರಿಡಾರ್ ಇಲ್ಲವೇ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP) ಚೌಕಟ್ಟಿನ ಅಡಿಯಲ್ಲಿ ಪರಿಗಣಿಸಬೇಕೆಂದು ವಿನಂತಿಸಿದ ಕುಮಾರಸ್ವಾಮಿ ಅವರು; ಈ ಜಿಲ್ಲೆಗಳನ್ನು ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್‌ಗಳಿಗೆ ಸಂಯೋಜಿಸುವ ಮೂಲಕ ಕರ್ನಾಟಕವು ಉದ್ಯೋಗ ಸೃಷ್ಟಿಯಲ್ಲಿ ನಿರ್ಣಾಯಕ ಪಾತ್ರ ವಹಿಸಲು ಅನುಕೂಲವಾಗುತ್ತದೆ. ಅಲ್ಲದೆ, ಸಾಕಾಣಿಗೆ ಸುಲಭವಾಗಿ ಖಾಸಗಿ ಬಂಡವಾಳ ಹೂಡಿಕೆಯಲ್ಲೂ ಗಮನಾರ್ಹ ಪ್ರಗತಿ ಸಾಧಿಸಲಿದೆ.

ಸಮಾನ ಬೆಳವಣಿಗೆ ಮತ್ತು ಉದ್ಯೋಗ ಸೃಷ್ಟಿ

ಪ್ರಸ್ತಾವಿತ ಈ ಕೈಗಾರಿಕಾ ಪಾರ್ಕುಗಳು ದೊಡ್ಡ ಪ್ರಮಾಣದಲ್ಲಿ ಉದ್ಯೋಗ ಸೃಷ್ಟಿಸುವ, ಪ್ರಾದೇಶಿಕ ಪೂರೈಕೆ ಸರಪಳಿಯ ಸಂಪರ್ಕಗಳನ್ನು ಮತ್ತಷ್ಟು ಬಲಪಡಿಸುವ ಹಾಗೂ ಹುಬ್ಬಳ್ಳಿ-ಧಾರವಾಡ ಮತ್ತು ಮಂಗಳೂರಿನಲ್ಲಿ ಸಾಗಣೆ ಮತ್ತು ಉತ್ಪಾದನೆಯಿಂದ ಮೊದಲುಗೊಂಡು ರಾಯಚೂರಿನಲ್ಲಿ ಕೃಷಿ ಸಂಸ್ಕರಣೆ, ಮೈಸೂರು ಮತ್ತು ಕೋಲಾರದಲ್ಲಿ ಮೌಲ್ಯವರ್ಧಿತ ವಲಯಗಳ ವಿಸ್ತರಣೆವರೆಗೆ ವಿಶೇಷ ಕೈಗಾರಿಕಾ ಸಮೂಹಗಳನ್ನು ಉತ್ತೇಜಿಸುತ್ತವೆ

ಸಚಿವ ಗೋಯಲ್‌ ಅವರೊಂದಿಗೆ ಚರ್ಚೆ ಉತ್ತಮವಾಗಿತ್ತು. ಅವರು ಈ ಪ್ರಸ್ತಾವನೆಯನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರ ವಿಕಸಿತ ಭಾರತ ಸಾಕಾರಕ್ಕೆ ಈ ಯೋಜನೆ ಪೂರಕವಾಗಿದೆ. ಉತ್ಪಾದನೆ ಮತ್ತು ಕೈಗಾರಿಕಾ ಸ್ಪರ್ಧಾತ್ಮಕತೆಯನ್ನು ಬಲಪಡಿಸುವ ಕೇಂದ್ರ ಸರ್ಕಾರದ ವಿಶಾಲ ದೃಷ್ಟಿಕೋನಕ್ಕೆ ಅನುಗುಣವಾಗಿ ಈ ಉಪಕ್ರಮವನ್ನು ದೊಡ್ಡ ಪ್ರಮಾಣದಲ್ಲಿ ಕೈಗೆತ್ತಿಕೊಳ್ಳಲಾಗುತ್ತಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ರಾಜಕೀಯ

ನನಗೆ ಜನರ ಸೇವೆ ಮಾಡುವ ಚಪಲ, ಕೆಲವರಿಗೆ ಜನರ ದುಡ್ಡು ಲೂಟಿ ಹೊಡೆಯೋ ಚಪಲ; ಹೆಚ್.ಡಿ. ಕುಮಾರಸ್ವಾಮಿ

ನನಗೆ ಜನರ ಸೇವೆ ಮಾಡುವ ಚಪಲ, ಕೆಲವರಿಗೆ ಜನರ ದುಡ್ಡು ಲೂಟಿ ಹೊಡೆಯೋ

ಕೆಲವರಿಗೆ ಜನರನ್ನು ಲೂಟಿ ಮಾಡಿ ದುಡ್ಡು ಮಾಡುವ ಚಪಲ. ನನಗೆ ಜನರ ಜತೆ ನಿಂತು ಅವರ ಸಹಾಯಕ್ಕೆ ನಿಲ್ಲುವ ಚಪಲ. ಒಬ್ಬೊಬ್ಬರಿಗೆ ಒಂದೊಂದು ಚಪಲ ಇರುತ್ತದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="118524"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ದ್ವಿಚಕ್ರ ವಾಹನದಲ್ಲಿ ತೆರಳುವ ವೇಳೆ ಗಾಳಿಪಟ ಹಾರಿಸುವ ಮಾಂಜಾ ದಾರ (Maanja thread) ಕುತ್ತಿಗೆ ಸೀಳಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಟಗುಪ್ಪ ತಾಲೂಕಿನ ತಾಳಮಡಗಿ ಗ್ರಾಮದ ಸೇತುವೆ ಸಮೀಪ ನಡೆದಿದೆ.

[ccc_my_favorite_select_button post_id="118471"]
ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ಇಂದು ಸಂಭವಿಸಿದ ಎರಡು ಪ್ರತ್ಯೇಕ ಕಾರುಗಳ ಅಪಘಾತದಲ್ಲಿ (Accident) ಇಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡು, ಆಸ್ಪತ್ರೆಗೆ ದಾಖಲಾಗಿದ್ದಾರೆ.

[ccc_my_favorite_select_button post_id="118357"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!