ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ದುರ್ಮರಣ: ಇಂದು ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ

IAS officer Mahantesh Bilagi dies in accident

ಕಲಬುರಗಿ: ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ (Mahantesh Bilagi) ಸೇರಿ ಮೂವರು ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ಸಂಬಂಧಿಕರ ವಿವಾಹ ಕಾರ್ಯಕ್ರಮಕ್ಕೆಂದು ವಿಜಯಪುರದಿಂದ ಕಲಬುರಗಿಗೆ ತೆರಳುತ್ತಿದ್ದ ವೇಳೆ ಜೇವರ್ಗಿ ತಾಲೂಕಿನ ಗೌನಳ್ಳಿ ಕ್ರಾಸ್ ಬಳಿ ಏಕಾಏಕಿ ಅಡ್ಡ ಬಂದ ಶ್ವಾನವನ್ನು ಉಳಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿದ ಇನ್ನೋವಾ ಕಾರು ಪಲ್ಟಿ ಯಾಗಿದೆ.

ಕಾರಿನಲ್ಲಿದ್ದ ಮಹಾಂತೇಶ್ ಸಹೋದ ರರಾದ ಶಂಕರ ಬೀಳಗಿ ಹಾಗೂ ಈರಣ್ಣ ಶಿರಸಂಗಿ ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರು ಕಲಬುರಗಿಯ ಖಾಸಗಿ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆ ಳೆದಿದ್ದಾರೆ.

ಮಹಾಂತೇಶ್‌ ಬೀಳಗಿ ಸಾವಿನ ಸುದ್ದಿ ತಿಳಿಯುತ್ತಿದ್ದಂತೆಯೇ ಆಸ್ಪತ್ರೆಗೆ ಐಜಿಪಿ ಶಾಂತನು ಸಿನ್ಹಾ ಸೇರಿ ಅಧಿಕಾರಿಗಳು ಭೇಟಿ ನೀಡಿದ್ದಾರೆ.

ಅಪಾರ ಅಭಿಮಾನಿಗಳ ಬಳಗ

ಮಹಾಂತೇಶ್ ಬೀಳಗಿ ಅವರು ವಿದ್ಯಾರ್ಥಿಗಳಿಗೆ ಸಮಯ ಸಿಕ್ಕಾಗೆಲ್ಲಾ ಪ್ರೋತ್ಸಾಹ ಕೊಡುವುದನ್ನು ತಪ್ಪಿಸುತ್ತಿರಲಿಲ್ಲ. ಜ್ಞಾನ ಬೆಳೆಸಿಕೊಳ್ಳಿ ಅಂತ ಎಲ್ಲರಿಗೂ ಸಲಹೆ ಮಾಡುತ್ತಿದ್ದರು. ಕಷ್ಟದ ಬದುಕಿನಲ್ಲೂ ಶ್ರಮದಿಂದ ಓದಿ ಉನ್ನತ ಹುದ್ದೆಗೆ ಏರಿದ ಅವರು ತಮ್ಮ ಕೆಲಸಗಳಿಂದ ಅಪಾರ ಅಭಿಮಾನಿ ಬಳಗವನ್ನು ಹೊಂದಿದ್ದಾರೆ.

‘ಸಮಾಜದಿಂದ ಪಡೆದದ್ದನ್ನು ಸಮಾಜಕ್ಕೆ ವಾಪಸ್‌ ಕೊಡಬೇಕು,’ ಅನ್ನೋದು ಅವರು ಅನುಸರಿಸುತ್ತಿದ್ದ ತತ್ವಗಳಲ್ಲಿ ಒಂದಾಗಿತ್ತು.

ಬೆಸ್ಕಾಂ ಬಳಿಕ ಖನಿಜ ನಿಗಮದ ಎಂಡಿ

ಬೆಳಗಾವಿ ಜಿಲ್ಲೆಯ ರಾಮದುರ್ಗದವರಾದ ಬೀಳಗಿಯವರು 2012 ಕರ್ನಾಟಕ ಕೇಡರ್ ಐಎಎಸ್ ಅಧಿಕಾರಿಯಾಗಿದ್ದರು. ಹಲವು ಜಿಲ್ಲೆಗಳ ಸಿಇಒ, ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದಾರೆ. ನಾಲ್ಕು ವರ್ಷಗಳ ಹಿಂದೆ ದಾವಣಗೆರೆ ಜಿಲ್ಲಾಧಿಕಾರಿ ಸ್ಥಾನದಿಂದ ವರ್ಗಾವಣೆಗೊಂಡು ಬೆಸ್ಕಾಂ ಎಂಡಿಯಾಗಿ ಜವಾಬ್ದಾರಿ ನಿರ್ವಹಿಸಿದ್ದರು. ಇತ್ತೀಚೆಗೆ ಅಲ್ಲಿಂದಲೂ ವರ್ಗಾವಣೆ ಯಾಗಿ ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದರು.

ಇಂದು ಅಂತ್ಯಕ್ರಿಯೆ

ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅಂತ್ಯಕ್ರಿಯೆ ಹುಟ್ಟೂರಾದ ರಾಮದುರ್ಗದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಇಂದು ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಸಲಾಗುತ್ತದೆ.

ರಾಜಕೀಯ

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ: ಹಾಡಹಗಲೇ 2 ಮನೆ ಬೀಗ ಒಡೆದು ಒಡವೆ, ನಗದು ಕಳ್ಳತನ..! ಮಹಿಳೆಯ ಮಾಂಗಲ್ಯ ಸರ ಕಸಿದ ದುಷ್ಕರ್ಮಿಗಳು

ದೊಡ್ಡಬಳ್ಳಾಪುರ: ಹಾಡಹಗಲೇ 2 ಮನೆ ಬೀಗ ಒಡೆದು ಒಡವೆ, ನಗದು ಕಳ್ಳತನ..! ಮಹಿಳೆಯ

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎರಡು ಮನೆ ಬೀಗ ಒಡೆದು, ಒಡವೆ, ನಗದು ( jewellery, cash) ಕಳ್ಳತನ ನಡೆಸಿರುವ ಪ್ರಕರಣಗಳು ವರದಿಯಾಗಿದ್ದು, ತಾಲೂಕಿನ ಜನರನ್ನು ಆತಂಕಕ್ಕೆದೂಡಿದೆ.

[ccc_my_favorite_select_button post_id="121201"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!