ರೈತರ ಸಂಕಷ್ಟಕ್ಕೆ ಸ್ಪಂದಿಸಿದ ಸರ್ಕಾರ: ಒಂದೇ ದಿನ ರೈತರಿಗೆ ಹೆಚ್ಚುವರಿಯಾಗಿ ರೂ.1033.60 ಕೋಟಿ ಸಬ್ಸಿಡಿ ಬಿಡುಗಡೆ

Government responds to farmers' distress: Additional Rs. 1033.60 crore subsidy released to farmers in a single day

ಬೆಂಗಳೂರು: ಪ್ರಸ್ತುತ ವರ್ಷದ ಮಾನ್ಸೂನ್ ಅವಧಿಯಲ್ಲಿ ಭಾರೀ ಮಳೆ ಮತ್ತು ಪ್ರವಾಹದಿಂದ ಬೆಳೆ ಹಾನಿಗೊಳಗಾದ ರೈತರಿಗೆ ರಾಜ್ಯ ಸರ್ಕಾರದಿಂದ ಹೆಚ್ಚುವರಿ ಸಬ್ಸಿಡಿಗಾಗಿ ರೂ.1033.60 ಕೋಟಿ ವಿಶೇಷ ಪ್ಯಾಕೇಜ್ ಘೋಷಿಸಲಾಗಿದ್ದು, ಇಂದು ಚಾಲನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ತಿಳಿಸಿದರು.

ಬೆಳೆ ಹಾನಿ ಸಂಭವಿಸಿದ 14.24 ಲಕ್ಷ ರೈತರ ಬ್ಯಾಂಕ್ ಖಾತೆಗಳಿಗೆ ಒಟ್ಟು ರೂ. 1033.60 ಕೋಟಿ ಹೆಚ್ಚುವರಿ ಪರಿಹಾರ ಒದಗಿಸುವ ಕಾರ್ಯಕ್ಕೆ ಮುಖ್ಯಮಂತ್ರಿ ಅವರು ಬಟನ್ ಒತ್ತುವ ಮೂಲಕ ಚಾಲನೆ ನೀಡಿದರು.

ರಾಜ್ಯ ಸರ್ಕಾರ ರೈತರ ಪರವಾಗಿದ್ದು, ಬೆಳೆ ಹಾನಿಗೊಳಗಾದ ರೈತರಿಗೆ ಹೆಚ್ಚಿನ ನೆರವು ಒದಗಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಇನ್ಪುಟ್ ಸಬ್ಸಿಡಿಗಳ ದರಗಳನ್ನು ಹೆಚ್ಚಿಸಿದೆ. ಗರಿಷ್ಟ 2 ಹೆಕ್ಟೇರ್ಗೆ ಸೀಮಿತವಾಗಿ, ಮಳೆಯಾಶ್ರಿತ ಬೆಳೆಗಳಿಗೆ ಹೆಕ್ಟೇರ್ ಒಂದಕ್ಕೆ ರೂ. 8500 ರಿಂದ ರೂ. 17 ಸಾವಿರ, ನೀರಾವರಿ ಬೆಳೆಗಳಿಗೆ ಹೆಕ್ಟೇರ್ ಒಂದಕ್ಕೆ ರೂ.17ಸಾವಿರದಿಂದ ರೂ.25,500 ಹಾಗೂ ಬಹು ವಾರ್ಷಿಕ ಬೆಳೆಗಳಿಗೆ ಹೆಕ್ಟೇರ್ ಒಂದಕ್ಕೆ ರೂ.22,500ರಿಂದ ರೂ. 31 ಸಾವಿರಕ್ಕೆ ಹೆಚ್ಚಿಸಲಾಗಿದೆ ಎಂದು ಮುಖ್ಯಮಂತ್ರಿ ಅವರು ತಿಳಿಸಿದರು.

ಎಸ್ಡಿಆರ್ಎಫ್ ಮಾನದಂಡಗಳ ಪ್ರಕಾರ 14.24 ಲಕ್ಷ ರೈತರಿಗೆ ಇನ್ಪುಟ್ ಸಬ್ಸಿಡಿಯಾಗಿ ಈಗಾಗಲೇ ರೂ. 1218.03 ಕೋಟಿ ವಿತರಿಸಲಾಗಿದೆ. ಇದರ ಜೊತೆಗೆ ರಾಜ್ಯ ನಿಧಿಯಿಂದ ರೂ. 1033.60 ಕೋಟಿಯನ್ನು ಟಾಪ್ ಅಪ್ ರೂಪದಲ್ಲಿ ಹೆಚ್ಚುವರಿಯಾಗಿ ನೀಡಲಾಗುತ್ತಿದೆ. ಒಟ್ಟಾರೆಯಾಗಿ ಪರಿಹಾರ ಪಾವತಿ ಪ್ರಕ್ರಿಯೆಯಲ್ಲಿರುವ ಪಾವತಿಗಳನ್ನು ಒಳಗೊಂಡಂತೆ ರೂ.2251.63 ಕೋಟಿ ಯನ್ನು ರೈತರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಜಮಾ ಆಗಲಿದೆ ಎಂದರು.

ಮುಂಗಾರು ಅವಧಿಯಲ್ಲಿ ದಾಖಲೆಯ 82.56 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡಲಾಗಿತ್ತು. ಆದರೆ ಜೂನ್ನಿಂದ ಸೆಪ್ಟಂಬರ್ ಅವಧಿಯಲ್ಲಿ ಉಂಟಾದ ಅತಿವೃಷ್ಟಿಯಿಂದಾಗಿ 14.58 ಲಕ್ಷ ಹೆಕ್ಟೇರ್ಗಿಂತ ಹೆಚ್ಚಿನ ಪ್ರದೇಶದ ಬೆಳೆ ಹಾನಿ ಉಂಟಾಗಿದ್ದು, ಇದರಿಂದ ಅಂದಾಜು ರೂ.10,748 ಕೋಟಿ ಬೆಳೆ ಹಾನಿ ಅಂದಾಜಿಸಲಾಗಿದೆ.

ಮುಖ್ಯವಾಗಿ ತೊಗರಿ ಬೇಳೆ 5.36 ಲಕ್ಷ ಹೆಕ್ಟೇರ್, ಹೆಸರು ಕಾಳು 2.63 ಲಕ್ಷ ಹೆಕ್ಟೇರ್, ಹತ್ತಿ 2.68 ಲಕ್ಷ ಹೆಕ್ಟೇರ್ ಮತ್ತು ಮೆಕ್ಕೆಜೋಳ 1.21 ಲಕ್ಷ ಹೆಕ್ಟೇರ್ ಹಾನಿ ಉಂಟಾಗಿದೆ.

ಒಂಭತ್ತು ಜಿಲ್ಲೆಗಳಲ್ಲಿ ಹೆಚ್ಚಿನ ಬೆಳೆ ಹಾನಿ ಉಂಟಾಗಿದೆ. ಮುಖ್ಯವಾಗಿ ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಬೆಳೆಗಳು ಕೊಯ್ಲಿನ ಹಂತಕ್ಕೆ ಬಂದ ಸಂದರ್ಭದಲ್ಲಿ ಭಾರೀ ಮಳೆಯಿಂದ ಹೆಚ್ಚಿನ ಹಾನಿ ಸಂಭವಿಸಿದೆ.

ಕೃಷ್ಣಾ ಮತ್ತು ಭೀಮಾ ಜಲಾನಯನ ಪ್ರದೇಶಗಳಲ್ಲಿ ನಿರಂತರ ಒಳ ಹರಿವು ಹೆಚ್ಚಳದಿಂದ ಕಲಬುರಗಿ, ಯಾದಗಿರಿ ಮತ್ತು ಬೀದರ ಜಿಲ್ಲೆಗಳಲ್ಲಿ ತೊಗರಿ ಮತ್ತು ಹತ್ತಿ ಬೆಳೆಗಳಿಗೆ ವ್ಯಾಪಕ ಹಾನಿ ಉಂಟಾಗಿದೆ.

ಬೆಳೆ ಹಾನಿಯನ್ನು ನಿಖರವಾಗಿ ಖಚಿತಪಡಿಸಲು ಜಂಟಿ ಸಮೀಕ್ಷೆ ನಡೆಸಿ ಹಾನಿಯನ್ನು ಅಂದಾಜಿಸಲಾಗಿದೆ. ಎಲ್ಲಾ ದತ್ತಾಂಶಗಳನ್ನು ಪರಿಹಾರ ತಂತ್ರಾಂಶದಲ್ಲಿ ದಾಖಲಿಸಲಾಗಿದ್ದು, ಭೂಮಿ ಮತ್ತು ಫ್ರೂಟ್ಸ್ ತಂತ್ರಾಂಶದಲ್ಲಿ ಸಂಯೋಜಿಸಲಾಗಿದೆ.

ಬೆಳೆ ನಷ್ಟದ ಗ್ರಾಮವಾರು ಪಟ್ಟಿಯನ್ನು ಗ್ರಾಮ ಚಾವಡಿಗಳಲ್ಲಿ ಹಾಗೂ ಆನ್ಲೈನ್ನಲ್ಲಿ ಪ್ರಕಟಿಸಿ, ಸಾರ್ವಜನಿಕರಿಂದ ಆಕ್ಷೇಪಣೆಗಳನ್ನು ಆಹ್ವಾನಿಸಿ, ಬಳಿಕ ನಷ್ಟ ಅನುಭವಿಸಿದ ರೈತರ ಪಟ್ಟಿಯನ್ನು ಅಂತಿಮಗೊಳಿಸಿದ ಬಳಿಕ ಇನ್ಪುಟ್ ಸಬ್ಸಿಡಿಯನ್ನು ನೇರವಾಗಿ ರೈತರಿಗೆ ವರ್ಗಾಯಿಸುವ ಪ್ರಕ್ರಿಯೆ ಆರಂಭಿಸಲಾಗಿದೆ.

ಪ್ರಧಾನಮಂತ್ರಿಯವರನ್ನು ನವೆಂಬರ್ 17ರಂದು ಭೇಟಿ ಮಾಡಿ, ಬೆಳೆ ಹಾನಿ ಇನ್ಪುಟ್ ಸಬ್ಸಿಡಿಗೆ ಪ್ರತಿಕ್ರಿಯೆ ಹಾಗೂ ಪರಿಹಾರ ಅಡಿಯಲ್ಲಿ ರೂ. 614.90 ಕೋಟಿ ಹಾಗೂ ಹಾನಿಗೊಳಗಾದ ಮೂಲಸೌಕರ್ಯಗಳನ್ನು ಸರಿಪಡಿಸಲು PDNA (Recovery & Reconstruction) ಅಡಿಯಲ್ಲಿ ರೂ. 1,521.67 ಕೋಟಿ ಪರಿಹಾರ ಒದಗಿಸಲು ಮನವಿ ಸಲ್ಲಿಸಲಾಗಿದೆ.

ಬೆಳೆ ಹಾನಿ ಪರಿಶೀಲಿಸಲು ಕೇಂದ್ರ ಸರ್ಕಾರ ಅಂತರ ಸಚಿವಾಲಯದ ಕೇಂದ್ರ ತಂಡವನ್ನು ರಚಿಸಿದ್ದು, ಈ ತಂಡ ಶೀಘ್ರದಲ್ಲೇ ಕರ್ನಾಟಕಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಿದೆ.

ರಾಜಕೀಯ

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ: ಹಾಡಹಗಲೇ 2 ಮನೆ ಬೀಗ ಒಡೆದು ಒಡವೆ, ನಗದು ಕಳ್ಳತನ..! ಮಹಿಳೆಯ ಮಾಂಗಲ್ಯ ಸರ ಕಸಿದ ದುಷ್ಕರ್ಮಿಗಳು

ದೊಡ್ಡಬಳ್ಳಾಪುರ: ಹಾಡಹಗಲೇ 2 ಮನೆ ಬೀಗ ಒಡೆದು ಒಡವೆ, ನಗದು ಕಳ್ಳತನ..! ಮಹಿಳೆಯ

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎರಡು ಮನೆ ಬೀಗ ಒಡೆದು, ಒಡವೆ, ನಗದು ( jewellery, cash) ಕಳ್ಳತನ ನಡೆಸಿರುವ ಪ್ರಕರಣಗಳು ವರದಿಯಾಗಿದ್ದು, ತಾಲೂಕಿನ ಜನರನ್ನು ಆತಂಕಕ್ಕೆದೂಡಿದೆ.

[ccc_my_favorite_select_button post_id="121201"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!