CM, DCM launch Gruhalakshmi Sahakara app

ಗೃಹಲಕ್ಷ್ಮಿ ಸಹಕಾರ ಆಪ್ ಲೋಕಾರ್ಪಣೆಗೊಳಿಸಿದ ಸಿಎಂ, ಡಿಸಿಎಂ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Cm siddaramaiah), ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಇಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ಕರ್ನಾಟಕದಲ್ಲಿ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯ “ಸುವರ್ಣ ಮಹೋತ್ಸವ”, ಮಕ್ಕಳ‌ ದಿನಾಚರಣೆ, ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿದರು.

ಕಾರ್ಯಕ್ರಮದ ಅಂಗವಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮಹತ್ವಾಕಾಂಕ್ಷಿ ಯೋಜನೆಗಳನ್ನು ಹಾಗೂ ಗೃಹಲಕ್ಷ್ಮಿ ಸಹಕಾರ ಆಪ್ ಅನ್ನು ಲೋಕಾರ್ಪಣೆಗೊಳಿಸಿದರು.

ಅಂಗನವಾಡಿ ಕಾರ್ಯಕರ್ತೆಯರು ಮಕ್ಕಳ ಎರಡನೇ ತಾಯಿಯಂತೆ; ಸಿಎಂ‌ ಸಿದ್ದರಾಮಯ್ಯ

ಐಸಿಡಿಎಸ್ , ತಾಯಿ ಶಿಶು ಮರಣ ಹಾಗೂ ಅಪೌಷ್ಠಿಕತೆ ನಿವಾರಿಸುವ ದೂರದೃಷ್ಟಿಯ ಯೋಜನೆಯಾಗಿದ್ದು, 69,922 ಅಂಗನವಾಡಿ ಕೇಂದ್ರಗಳಿಂದ 40 ಲಕ್ಷಕ್ಕೂ ಹೆಚ್ಚು ಮಹಿಳೆಯರು ಮತ್ತು ಮಕ್ಕಳಿಗೆ ಅನುಕೂಲವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಇವರ ವತಿಯಿಂದ ಆಯೋಜಿಸಲಾಗಿದ್ದ ಕರ್ನಾಟಕದಲ್ಲಿ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯ ಸುವರ್ಣ ಮಹೋತ್ಸವ ಹಾಗೂ ಮಕ್ಕಳ ದಿನಾಚರಣೆಯ ವಿಶ್ವ ಹಿರಿಯ ನಾಗರೀಕರ ದಿನಾಚರಣೆ ಹಾಗೂ ಪ್ರಶಸ್ತಿ ಪ್ರಧಾನ ಸಮಾರಂಭ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮಹತ್ವಕಾಂಕ್ಷಿ ಯೋಜನೆಗಳನ್ನು ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಮಾಜಿ ಪ್ರಧಾನಿ ಶ್ರೀಮತಿ ಇಂದಿರಾಗಾಂಧಿಯವರ ದೂರದೃಷ್ಟಿಯ ಯೋಜನೆ

ಅಕ್ಟೋಬರ್ 2, 2025 ಕ್ಕೆ ಐಸಿಡಿಎಸ್ ಕಾರ್ಯಕ್ರಮಕ್ಕೆ 50 ವರ್ಷಗಳು ತುಂಬಿರುವುದು ಮೈಲುಗಲ್ಲು ಸಾಧನೆಯಾಗಿದೆ. ಭಾರತದ ಪ್ರಧಾನಿಯಾಗಿದ್ದ ಶ್ರೀಮತಿ ಇಂದಿರಾ ಗಾಂಧಿಯವರು ಹಮ್ಮಿಕೊಂಡಿದ್ದ ದೂರದೃಷ್ಟಿಯ ಯೋಜನೆಯೇ ಐಸಿಡಿಎಸ್. ಎಪ್ಪತ್ತರ ದಶಕದಲ್ಲಿ ಮಹಿಳೆ ಮತ್ತು ಮಕ್ಕಳಲ್ಲಿ ಅಪೌಷ್ಠಿಕತೆ ,ಶಿಶು ಮತ್ತು ತಾಯಿಮರಣ ಹೆಚ್ಚಿದ ಸಂದರ್ಭದಲ್ಲಿ ಈ ಕಾರ್ಯಕ್ರಮ ಜಾರಿಯಾಗಿತ್ತು.

ಇಂದಿರಾಗಾಂಧಿಯವರು, ತಾಯಿ ಮತ್ತು ಮಕ್ಕಳ ಮರಣ ತಡೆಗಟ್ಟಲು ಹಾಗೂ ಅವರಲ್ಲಿ ಅಪೌಷ್ಠಿಕತೆ ನಿವಾರಿಸುವ ಉದ್ದೇಶದಿಂದ ಜಾರಿ ಮಾಡಿದರು. ರಾಜ್ಯದಲ್ಲಿ 69,922 ಅಂಗನವಾಡಿ ಕೇಂದ್ರಗಳಿದ್ದು, ಸುಮಾರು 40 ಲಕ್ಷಕ್ಕೂ ಹೆಚ್ಚು ಮಹಿಳೆಯರು ಮತ್ತು ಮಕ್ಕಳು ಈ ಕೇಂದ್ರಗಳಿಂದ ಲಾಭ ಪಡೆಯುತ್ತಿದ್ದಾರೆ.

ಟಿ.ನರಸೀಪುರ ತಾಲ್ಲೂಕಿನ ಹೊಸಹಳ್ಳಿ ಗ್ರಾಮದಲ್ಲಿ ಮೊದಲು ಪ್ರಾರಂಭಗೊಂಡ ಅಂಗನವಾಡಿ ಕೇಂದ್ರ, 33 ತಾಲ್ಲೂಕುಗಳಲ್ಲಿ ಕಾರ್ಯನಿರ್ವಹಿಸಿತು. ಪ್ರಸ್ತುತ ರಾಜ್ಯಾದ್ಯಂತ 69,922 ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ ಎಂದರು.

ಮಕ್ಕಳ ಆರೈಕೆ ಉದಾತ್ತವಾದ ಕೆಲಸ

ಅಂಗನವಾಡಿ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುವ ಕಾರ್ಯಕರ್ತೆಯರು ಹಾಗೂ ಸಹಾಯಕರು ಪ್ರಾಮಾಣಿಕ ಸೇವೆಸಲ್ಲಿಸುತ್ತಿದ್ದು, ಮಕ್ಕಳ ಆರೈಕೆಯಲ್ಲಿ ನಿರತವಾಗಿರುವ ಎರಡನೇ ತಾಯಿಯಂತೆ ಎಂದು ಮುಖ್ಯಮಂತ್ರಿಗಳು ಅಭಿನಂಧಿಸಿದರು. ಇದು ಉದಾತ್ತವಾದ ಕೆಲಸ. ಮಕ್ಕಳು ದೇಶದ ಮುಂದಿನ ಭವಿಷ್ಯ. ಐಸಿಡಿಎಸ್ ಕಾರ್ಯಕ್ರಮದಿಂದ ಶಿಶು ಹಾಗೂ ತಾಯಿಮರಣ ಗಣನೀಯವಾಗಿ ಕಡಿಮೆಯಾಗಿದೆ.

ವಿವಿಧೋದ್ದೇಶ ಸಹಕಾರ ಸಂಘವನ್ನು ಪ್ರಾರಂಭಿಸಲಾಗುತ್ತಿದ್ದು ಮುಂದಿನ ದಿನಗಳಲ್ಲಿ ಮಹಿಳೆಯರಿಗೆ ಹೆಚ್ಚಿನ ಸಹಾಯ ಮಾಡಲಿ ಎಂದು ಮುಖ್ಯಮಂತ್ರಿಗಳು ಹಾರೈಸಿದರು.

ಮಹಿಳೆಯರಲ್ಲಿ ಶೇ ನೂರರಷ್ಟು ಸಾಕ್ಷರತೆ, ವೈಚಾರಿಕ ಹಾಗೂ ವೈಜ್ಞಾನಿಕ ಜ್ಞಾನ ಬರಬೇಕಿದೆ

ಮಹಿಳೆಯರು ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಸ್ವಾವಲಂಬಿಗಳಾಗದೆ ಹೋದರೆ,ಸಮಾಜ ಮುಂದುವರೆಯುವುದು ಕಷ್ಟ. ಸಮಾಜದಲ್ಲಿ ಅಸಮಾನತೆ ಇದ್ದು , ಮಹಿಳೆಯರೂ ಕೂಡ ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿದ್ದರು. ಇತ್ತೀಚಿನ ವರ್ಷಗಳಲ್ಲಿ ಮಹಿಳೆಯರು ಸುಶಿಕ್ಷಿತರಾಗುತ್ತಿರುವುದು ಸಂತಸದ ಸಂಗತಿ. ಮಹಿಳೆಯರಲ್ಲಿ ಶೇ ನೂರರಷ್ಟು ಸಾಕ್ಷರತೆ ಬರಬೇಕಲ್ಲದೆ ವೈಚಾರಿಕ ಹಾಗೂ ವೈಜ್ಞಾನಿಕ ಜ್ಞಾನ ಬರಬೇಕಿದೆ ಎಂದರು.

ಗ್ಯಾರಂಟಿಗಳಿಗೆ 1 ಲಕ್ಷ ನಾಲ್ಕು ಸಾವಿರ ಕೋಟಿ ರೂಗಳಿಗೂ ಹೆಚ್ಚು ಹಣ ವೆಚ್ಚ

ಹೆಣ್ಣೊಂಬ್ಬಳು ವಿದ್ಯಾವಂತೆ ಯಾದರೆ ಇಡೀ ಕುಟುಂಬ ಶಿಕ್ಷಣ ಪಡೆಯುತ್ತದೆ. ನಮ್ಮ ಸರ್ಕಾರ ಶಕ್ತಿ ಯೋಜನೆಯಡಿ 600 ಕೋಟಿಗೂ ಹೆಚ್ಚು ಮಹಿಳೆಯರು ಸರ್ಕಾರಿ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಿದ್ದಾರೆ.

ಗೃಹಲಕ್ಷ್ಮಿಯೋಜನೆಯಡಿ 1 ಕೋಟಿ 26 ಲಕ್ಷ ಕುಟುಂಬಗಳ ಯಜಮಾನಿಯರಿಗೆ 2000 ರೂ.ಗಳನ್ನು ಒದಗಿಸಲಾಗಿದೆ. ಹೆಣ್ಣುಮಕ್ಕಳು ಆರ್ಥಿಕವಾಗಿ, ಶೈಕ್ಷಣಿಕವಾಗಿ ಸಬಲರಾಗಬೇಕೆಂದು ಹಾಗೂ ಮಹಿಳೆಯರು ಮುಖ್ಯವಾಹಿನಿಗೆ ಬಂದು, ಸಮಾನ ಅವಕಾಶಗಳನ್ನು ಪಡೆಯಬೇಕೆನ್ನುವ ಉದ್ದೇಶದಿಂದ ಕಾರ್ಯಕ್ರಮಗಳನ್ನು ಜಾರಿಗೆ ತರಲಾಗಿದೆ.ಇಲ್ಲಿಯವರೆಗೆ ಗ್ಯಾರಂಟಿಗಳಿಗೆ ಸರ್ಕಾರ 1 ಲಕ್ಷ ನಾಲ್ಕು ಸಾವಿರ ಕೋಟಿ ರೂಗಳಿಗೂ ಹೆಚ್ಚು ಹಣವನ್ನು ವೆಚ್ಚ ಮಾಡಿದೆ ಎಂದರು.

ಅಭಿವೃದ್ಧಿ ಯೋಜನೆಗಳಿಗೂ ಅನುದಾನದ ಕೊರತೆಯಿಲ್ಲ

ಗ್ಯಾರಂಟಿ ಯೋಜನೆಗಳನ್ನು ವಿರೋಧಿಸಿದವರ ಕಣ್ಣು ತೆರೆಯಬೇಕು. ಬಿಜೆಪಿಯವರು, ಪ್ರಧಾನಿ ನರೇಂದ್ರ ಮೋದಿಯವರು ಇದನ್ನು ವಿರೋಧಿಸಿದ್ದರು. ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿ ಅಭಿವೃದ್ಧಿ ಯೋಜನೆಗೂ ವೆಚ್ಚ ಮಾಡಲಾಗುತ್ತಿದೆ. ಮಹಿಳೆಯರು ಸಬಲರಾದರೆ ಮಾತ್ರ ನಮಗೆ ದೊರೆತಿರುವ ಸ್ವಾತಂತ್ರ್ಯ ಸಾರ್ಥಕವಾಗುತ್ತದೆ ಎಂದರು.

ಮಹಿಳಾ ಕಲ್ಯಾಣಕ್ಕಾಗಿ 95000 ಕೋಟಿ ರೂ. ಗಳು ಮೀಸಲು

ಸಮಾಜದಲ್ಲಿ ಅಸಮಾನತೆ, ಲಿಂಗ ತಾರತಮ್ಯ ಹೋಗಲಾಡಿಸಬೇಕು. ಈ ವರ್ಷದ ಬಜೆಟ್ ನಲ್ಲಿ 95000ಕೋಟಿ ರೂ. ಗಳನ್ನು ಮಹಿಳಾ ಕಲ್ಯಾಣಕ್ಕಾಗಿ ಮೀಸಲಿಡಲಾಗಿದೆ. ಲಿಂಗ ತಾರಾತಮ್ಯ ಹೋಗಲಾಡಿಸಲು ಎಲ್ಲಾ ಕ್ರಮಗಳನ್ನು ಸರ್ಕಾರ ಕೈಗೊಂಡಿದೆ. ನಮ್ಮ ಸರ್ಕಾರ ಎಲ್ಲರನ್ನು ಒಳಗೊಂಡ, ಸಾಮಾಜಿಕ ಆರ್ಥಿಕ ಶಕ್ತಿ ನೀಡುತ್ತಿದೆ. ಜಾತಿ, ಲಿಂಗ ಮತ್ತು ಧರ್ಮದ ಹೆಸರಿನಲ್ಲಿ ಸಮಾಜವನ್ನು ಒಡೆಯುತ್ತಿಲ್ಲ. ಸಮಗ್ರ ಅಭಿವೃದ್ಧಿ ನಮ್ಮ ಗುರಿ. ಬಡವ ಬಲ್ಲಿದ ಎಂಬ ತಾರತಮ್ಯ ಹೋಗಲಾಡಿಸಬೇಕು ಎಂಬ ನಿಟ್ಟಿನಲ್ಲಿ ಸರ್ಕಾರ ಕಾರ್ಯಪ್ರವೃತ್ತವಾಗಿದೆ ಎಂದರು.

ದೇಶದಲ್ಲಿ ಹೆಚ್ಚಿನ ಗೌರವಧನವನ್ನು ಕರ್ನಾಟಕ ಸರ್ಕಾರ ನೀಡುತ್ತಿದೆ

ಐಸಿಡಿಎಸ್ ಕೇಂದ್ರ ಸರ್ಕಾರದ ಕಾರ್ಯಕ್ರಮವಾದರೂ ರಾಜ್ಯ ಸರ್ಕಾರ ಹೆಚ್ಚಿನ ಅನುದಾನ ಕೊಡುತ್ತಿದೆ. ಕೇಂದ್ರದಿಂದ 2700 ರೂ ಬಂದರೆ, ರಾಜ್ಯ ಸರ್ಕಾರ 8500 ಒದಗಿಸುತ್ತಿದೆ. ಇಡೀ ದೇಶದಲ್ಲಿ ಅಂಗನವಾಡಿ ಕಾರ್ಯಕರ್ತರು ಹಾಗೂ ಸಹಾಯಕಿಯರಿಗೆ ಹೆಚ್ಚಿನ ಗೌರವಧನವನ್ನು ಕರ್ನಾಟಕ ಸರ್ಕಾರ ನೀಡುತ್ತಿದೆ ಎಂದರು.

ಐಸಿಡಿಎಸ್ ಪರಿಣಾಮಕಾರಿ ಅನುಷ್ಠಾನ: ದೇಶದಲ್ಲಿ ಕರ್ನಾಟಕಕ್ಕೆ ಮೊದಲ ಸ್ಥಾನ

ಶಕ್ತಿ ಮತ್ತು ಗೃಹಲಕ್ಷ್ಮಿ ಯೋಜನೆ ಜಾರಿಯಾದ ಮೇಲೆ ತಲಾ ಆದಾಯದಲ್ಲಿ ಕರ್ನಾಟಕ ದೇಶದಲ್ಲಿಯೇ ಮೊದಲ ಸ್ಥಾನದಲ್ಲಿದೆ ಐಸಿಡಿಎಸ್ ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಜಾರಿ ಮಾಡಿರುವ ರಾಜ್ಯಗಳಲ್ಲಿ ದೇಶದಲ್ಲಿಯೇ ಕರ್ನಾಟಕ ಮೊದಲನೇ ಸ್ಥಾನದಲ್ಲಿದೆ. ಮಹಿಳೆಯರಿಗೆ ಶಕ್ತಿ ಯೋಜನೆ ಜಾರಿಯಾದ ಮೇಲೆ ಉದ್ಯೋಗಕ್ಕೆ ಹೋಗುವ ಮಹಿಳೆಯರ ಪಾಲು ಶೇ 23% ಇದ್ದರೆ , ಗ್ರಾಮೀಣ ಭಾಗದಲ್ಲಿ 21% ಹೆಚ್ಚಾಗಿದೆ. ಶಕ್ತಿ ಮತ್ತು ಗೃಹಲಕ್ಷ್ಮಿ ಯೋಜನೆ ಜಾರಿಯಾದ ಮೇಲೆ ತಲಾ ಆದಾಯದಲ್ಲಿ ಕರ್ನಾಟಕ ದೇಶದಲ್ಲಿಯೇ ಮೊದಲ ಸ್ಥಾನದಲ್ಲಿದೆ ಎಂದರು.

ಕೇಂದ್ರ ಸರ್ಕಾರ ಪ್ರಚಾರ ಗಿಟ್ಟಿಸಿಕೊಳ್ಳುವಷ್ಟು ಕೆಲಸವನ್ನು ಮಾಡುತ್ತಿಲ್ಲ

ಕೇಂದ್ರ ಸರ್ಕಾರ ಪ್ರಚಾರ ಗಿಟ್ಟಿಸಿಕೊಳ್ಳುವಷ್ಟು ಕೆಲಸವನ್ನು ಮಾಡುತ್ತಿಲ್ಲ ಎಂದರು. ಮುಂದಿನ ದಿನಗಳಲ್ಲಿ ಮಕ್ಕಳು, ತಾಯಂದಿರ ಅಪೌಷ್ಟಿಕತೆ ತೊಲಗಿಸಿ ತಾಯಿ ಮತ್ತು ಶಿಶು ಮರಣ ಪ್ರಮಾಣವನ್ನು ಕಡಿಮೆ ಮಾಡಲಾಗುವುದು ಎಂದರು.

ರಾಜ್ಯದ ಒಟ್ಟು 5000 ಅಂಗನವಾಡಿ ಕೇಂದ್ರಗಳಲ್ಲಿ ಎಲ್ ಕೆ ಜಿ , ಯುಕೆಜಿ ತರಗತಿಗಳನ್ನು ಪ್ರಾರಂಭಿಸಲಾಗಿದೆ. ಮುಂದಿನ ದಿನಗಳಲ್ಲಿ ಈ ತರಗತಿಗಳನ್ನು ಇನ್ನೂ ಹೆಚ್ಚಿನ ಕೇಂದ್ರಗಳಲ್ಲಿ ಪ್ರಾರಂಭಿಸಲಾಗುವುದು. ಮಹಿಳೆಯರ ಬದುಕಿನಲ್ಲಿ ಚೈತನ್ಯ ತುಂಬಲು ಹಾಗೂ ಮಕ್ಕಳು ಅಪೌಷ್ಠಿಕತೆಯಿಂದ ಬಳಲಬಾರದೆಂಬ ಸಾರ್ಥಕ ಉದ್ದೇಶವನ್ನು ಐಸಿಡಿಎಸ್ ಕಾರ್ಯಕ್ರಮ ಪೂರೈಸಿದೆ. ವಿಶ್ವ ಹಿರಿಯನಾಗರಿಕರ ದಿನಾಚರಣೆಯ ಶುಭಾಶಯ ಕೋರಿದ ಮುಖ್ಯಮಂತ್ರಿಗಳು ಹಿರಿಯ ನಾಗರಿಕರು ನೆಮ್ಮದಿಯ ಹಾಗೂ ಗೌರವಯುತ ಜೀವನ ನಡೆಸುವಂತಾಗಬೇಕೆಂದರು.

ಇದೇ ಸಂದರ್ಭದಲ್ಲಿ ಮಹಿಳೆಯರ ರಕ್ಷಣೆ ಹಾಗೂ ಭದ್ರತೆಯನ್ನು ಖಾತ್ರಿಪಡಿಸುವ ‘ಅಕ್ಕಾ’ ಪಡೆಯನ್ನು ಇಂದು ಲೋಕಾರ್ಪಣೆಗೊಳಿಸಲಾಗಿದೆ ಎಂದರು.

ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್, ಹೆಚ್.ಸಿ.ಮಹದೇವಪ್ಪ, ಕೆ.ಎಚ್.ಮುನಿಯಪ್ಪ, ಈಶ್ವರ ಖಂಡ್ರೆ ಸೇರಿದಂತೆ ಹಲವು ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು.

ರಾಜಕೀಯ

ಆರನೇ ಗ್ಯಾರಂಟಿಯಾಗಿ ಭೂಮಿ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

ಆರನೇ ಗ್ಯಾರಂಟಿಯಾಗಿ ಭೂಮಿ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

“ತುಂಗಭದ್ರಾ ಅಣೆಕಟ್ಟಿನ 30 ಟಿಎಂಸಿ ನೀರು ಸಮುದ್ರಕ್ಕೆ ಸೇರುತ್ತಿರುವುದನ್ನು ತಪ್ಪಿಸಲು ಈ ಭಾಗದ ನಾಯಕರು ನನ್ನ ಮೇಲೆ ಒತ್ತಡ ಹಾಕುತ್ತಿದ್ದಾರೆ. ನಾನು ಇದಕ್ಕೆ ಬದ್ಧನಾಗಿದ್ದೇನೆ. ಆದರೆ ಆಂಧ್ರ ಸಿಎಂ ಈ ವಿಚಾರವಾಗಿ ಚರ್ಚೆ ಮಾಡಲು

[ccc_my_favorite_select_button post_id="119228"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

RCB: ಮತ್ತೆ ಕಪ್ ನಮ್ದು

RCB: ಮತ್ತೆ ಕಪ್ ನಮ್ದು

4ನೇ ಆವೃತ್ತಿಯ ಮಹಿಳಾ ಪ್ರೀಮಿ ಯರ್ ಲೀಗ್ (ಡಬ್ಲ್ಯೂಪಿ ಎಲ್) ಟೂರ್ನಿಯಲ್ಲಿ ಸ್ಮೃತಿ ಮಂಧಾನಾ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಚಾಂಪಿಯನ್ ಆಗಿ ಹೊರ ಹೊಮ್ಮಿದ್ದು, ಸಿಎಂ ಸಿದ್ದರಾಮಯ್ಯ (Cmsiddaramaiah), ಡಿಸಿಎಂ

[ccc_my_favorite_select_button post_id="119174"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ದೊಡ್ಡಬಳ್ಳಾಪುರ: ಅಪಘಾತ.. ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಬೈಕ್ ಸವಾರ ಮಸಣಕ್ಕೆ…!

ದೊಡ್ಡಬಳ್ಳಾಪುರ: ಅಪಘಾತ.. ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಬೈಕ್ ಸವಾರ ಮಸಣಕ್ಕೆ…!

ಖಾಸಗಿ ಕಂಪನಿಯಲ್ಲಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ದ್ವಿಚಕ್ರ ವಾಹನ ಸಾವರ ರಸ್ತೆ ಬದಿಯ ಹಳ್ಳಕ್ಕೆ ಬಿದ್ದು ಸಾವನಪ್ಪಿರುವ ಘಟನೆ (Accident) ತಾಲೂಕಿನ ಮಾಕಳಿ ಬಳಿ ಇಂದು ಮುಂಜಾನೆ ಸಂಭವಿಸಿದೆ.

[ccc_my_favorite_select_button post_id="119217"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!