ಸಿಎಂ-ಡಿಸಿಎಂ ನಡುವೆ ಕದನ ವಿರಾಮ.. ವ್ಯಾಲಿಡಿಟಿ ಎಷ್ಟು ತಿಂಗಳು ..?! ಗೆದ್ದವರು ಯಾರು..?

Ceasefire between CM-DCM.. How many months is the validity..?

ಕೆ.ಎಂ.ಸಂತೋಷ್, ಆರೂಢಿ (ದೊಡ್ಡಬಳ್ಳಾಪುರ): ಕಳೆದೊಂದು ವಾರದಿಂದ ಮುಖ್ಯಮಂತ್ರಿ (Cm) ಸಿದ್ದರಾಮಯ್ಯ (Siddaramaiah) ಮತ್ತು ಡಿಸಿಎಂ (DCM) ಡಿ.ಕೆ. ಶಿವಕುಮಾರ್ (D.K. Shivakumar) ನಡುವೆ ಪವರ್ ಶೇರಿಂಗ್ ವಿಚಾರವಾಗಿ ರಾಷ್ಟ್ರ ಮಟ್ಟದಲ್ಲಿ ಮಾಧ್ಯಮಗಳು ನಡೆಸಿದ್ದ ದೊಡ್ಡಮಟ್ಟದ ಚರ್ಚೆ, ವರದಿ ಠುಸ್ ಪಟಾಕಿ ಎಂಬಂತಾಗಿದೆ.

ಹೌದು ಹೈಕಮಾಂಡ್ ಸೂಚನೆಯಂತೆ ಇಂದು ಬೆಳಗ್ಗೆ ಸಿಎಂ ಸಿದ್ದರಾಮಯ್ಯ ಮನೆಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಉಪಹಾರ ಮಾಡುವ ಮೂಲಕ ಚರ್ಚೆ ನಡೆಸಿದರು.

ಬಳಿಕ ನಡೆದ ಸುದ್ದಿಗೋಷ್ಠಿಯಲ್ಲಿ ನಾವಿಬ್ಬರೂ ಪಕ್ಷದ ವರಿಷ್ಠರು ಸೂಚಿಸಿದಂತೆ ನಡೆದುಕೊಳ್ಳುತ್ತೇವೆ ಎಂದು ತೀರ್ಮಾನಿಸಿದ್ದೇವೆ. ಅಧಿವೇಶನ ಇರುವುದರಿಂದ ಇಬ್ಬರಿಗೂ ಗೊಂದಲಗಳನ್ನು ತಿಳಿಗೊಳಿಸುವ ಕೆಲಸ ಮಾಡಲು ಸೂಚಿಸಿದ್ದಾರೆ. ನಾಳೆಯಿಂದ ಯಾವುದೇ ಗೊಂದಲ ಇರುವುದಿಲ್ಲ. ಈಗಲೂ ಇಲ್ಲ . ನಮ್ಮ ನಡುವೆ ಆಗಿರುವ ಒಪ್ಪಂದದ ಬಗ್ಗೆ ಹೈ ಕಮಾಂಡಿಗೆ ಮಾಹಿತಿ ನೀಡಲಾಗುವುದು ಎಂದಿದ್ದಾರೆ.

ಮಾಧ್ಯಮಗಳು ಗೊಂದಲ ಸೃಷ್ಟಿಸಿವೆ

ಇತ್ತೀಚೆಗೆ ಅಧಿಕಾರ ಹಸ್ತಾಂತರದ ಬಗ್ಗೆ ಉಂಟಾಗಿರುವ ಗೊಂದಲಗಳಿಗೆ ಮಾಧ್ಯಮಗಳೇ ಕಾರಣ ಎಂದು ಆರೋಪಿಸಿದ ಸಿಎಂ, ಬಿಜೆಪಿ, ಜೆಡಿಎಸ್ ಪಕ್ಷಗಳು ಪತ್ರಿಕೆಗಳಲ್ಲಿ ಅವಿಶ್ವಾಸ ನಿರ್ಣಯ ತೆಗೆದುಕೊಳ್ಳುವುದಾಗಿ ಹೇಳಿಕೆ ನೀಡಿದ್ದಾರೆ. ಇದು ಅಸಂಭವವಾಗಿದ್ದು, ನಾವು 142 ಜನರಿದ್ದು, ಅವರು 64 ಜನ ಮಾತ್ರ, ಜೆಡಿಎಸ್ 18 ಇದ್ದಾರೆ. ಅವರಿಬ್ಬರೂ ಸೇರಿ 82 ಜನರಾಗುತ್ತಾರೆ. ಇದೊಂದು ವಿಫಲ ಪ್ರಯತ್ನ ಎಂದು ಭಾವಿಸಿದ್ದೇನೆ ವಿರೋಧ ಪಕ್ಷಗಳು ಏನೇ ಸುಳ್ಳು ಆರೋಪಗಳನ್ನು ಮಾಡಿದರೂ ಅವನ್ನೆಲ್ಲಾ ಸಮರ್ಥವಾಗಿ ಎದುರಿಸುವ ಕೆಲಸ ಮಾಡುತ್ತೇವೆ ಎಂದರು.

ಬೀಸೋ ದೊಣ್ಣೆಯಿಂದ ಹೈಕಮಾಂಡ್ ಪಾರು

ಇಂದು ಸಿಎಂ ಮತ್ತು ಡಿಸಿಎಂ ನಡೆಸಿದ ಸುದ್ದಿಗೋಷ್ಠಿಯ ಸೂಕ್ಷ್ಮವಾಗಿ ಗಮನಿಸಿದಾಗ ಕಾಂಗ್ರೆಸ್ ಹೈಕಮಾಂಡ್ ಬೀಸುವ ದೊಣ್ಣೆಯಿಂದ ಪಾರಾದಂತಿದೆ. ಪ್ರಭಾವಿ ನಾಯಕರ ನಡುವೆ ಉಂಟಾಗಿದ್ದ ಹಗ್ಗಜಗ್ಗಾಟ ಒಂದು ಹಂತಕ್ಕೆ ತಣ್ಣಗಾಗಿದೆ.

ವಿಧಾನಸಭೆ, ಲೋಕಸಭೆ ಅಧಿವೇಶನ ಇರುವ ಕಾರಣ ತರಾತುರಿಯಲ್ಲಿ ನಡೆಯುವ ಸಾಧ್ಯತೆ ಇಲ್ಲ. ಉಳಿದದ್ದು ಜನವರಿ ಬಳಿಕವೆ ಎನ್ನಬಹುದು.

ಮಣಿದರೇ ಸಿದ್ದರಾಮಯ್ಯ..?

ಜನತಾದಳ ಬಿಟ್ಟು ಕಾಂಗ್ರೆಸ್ ಸೇರಿದ ಬಳಿಕ ಸುಮಾರು 20 ವರ್ಷಗಳ ಕಾಲ ಸಿದ್ದರಾಮಯ್ಯ ಅವರು ಮತ್ತೋರ್ವ ನಾಯಕನ ಪಕ್ಕದಲ್ಲಿ ಕೂರಿಸಿ ಸುದ್ದಿಗೋಷ್ಠಿ ನಡೆಸಿ, ನಮ್ಮಿಬ್ಬರ ನಡುವೆ ಎಲ್ಲಾ ಚೆನ್ನಾಗಿದೆ ಎಂದು ಹೇಳದವರು, ಇಂದು ಡಿ.ಕೆ. ಶಿವಕುಮಾರ್ ಅವರನ್ನು ಕೂರಿಸಿಕೊಂಡು ಹೇಳುವಂತಹ ಅನಿರ್ವಾರ್ಯತೆ ಉಂಟಾಗಿರುವುದು ಅವರ ಅಭಿಮಾನಿಗಳಿಗೆ ಆಶ್ಚರ್ಯವನ್ನು ತಂದಿದೆ.

ಏಕೆಂದರೆ ಸಿದ್ದರಾಮಯ್ಯ ಅವರದ್ದು ಯಾರೊಂದಿಗೂ ರಾಜಿಯಾಗುವ ವ್ಯಕ್ತಿತ್ವದವರಲ್ಲ. ಮಲ್ಲಿಕಾರ್ಜುನ ಖರ್ಗೆ, ಡಾ.ಜಿ.ಪರಮೇಶ್ವರ್ ಅವರಂತವರನ್ನೆ ದಿಟ್ಟವಾಗಿ ಎದುರಿಸಿದ ಗಟ್ಟಿ ವ್ಯಕ್ತಿತ್ವದ ವ್ಯಕ್ತಿಯೇ ಹೊರತು, ಸಿದ್ದರಾಮಯ್ಯ ಈ ರೀತಿ ಒನ್ ಟು ಒನ್ ಚರ್ಚೆ ನಡೆಸಿದ ಉದಾಹರಣೆ ಇಲ್ಲ.

ಡಿಸಿಎಂ ಡಿ.ಕೆ. ಶಿವಕುಮಾರ್ ಮುಖದಲ್ಲಿ ಗೆಲುವಿನ ನಗು

ಸಿದ್ದರಾಮಯ್ಯ ಅವರ ಜೊತೆ ಡಿ.ಕೆ. ಶಿವಕುಮಾರ್ ಬ್ರೇಕ್ ಫಾಸ್ಟ್ ಮೀಟಿಂಗ್ ಬಳಿಕ ಬುಡ ಅಲ್ಲಾಡಿಸಿರುವ ಸಾರ್ಥಕತೆ ಎದ್ದು ಕಾಣುತ್ತಿತ್ತು. ಏಕೆಂದರೆ ಮೊದಲನೇ ಅಪಸ್ವರದಲ್ಲಿ ಯಶಸ್ಸು ದೊರೆತಿರುವ ಸಂಭ್ರಮ ಕಂಡುಬಂದಿದೆ.

ಏಕೆಂದರೆ ಸಿದ್ದರಾಮಯ್ಯ ಕೆಳಗಿಳಿದ ಬಳಿಕ ಮೂರನೇ ನಾಯಕ ಎಂಟ್ರಿ ಸಾಧ್ಯತೆಯನ್ನು ಡಿ.ಕೆ. ಶಿವಕುಮಾರ್ ಇಲ್ಲವಾಗಿಸಿದ್ದು, ಕರ್ನಾಟಕ ರಾಜ್ಯ ರಾಜಕಾರಣದ ಚುಕ್ಕಾಣಿ ಹಿಡಿಯಲು ನಾ ಬಂದಿದ್ದೇನೆ ಎಂಬಂತೆ ಅವರ ಬಾಡಿಲಾಂಗ್‌ವೇಜ್ ಇದ್ದಿದ್ದು ಗಮನ ಸೆಳೆದಿದೆ.

ಗೆದ್ದವರು ಯಾರು..?

ಈ ಎಲ್ಲ ಬೆಳವಣಿಗೆ ಬೆನ್ನಲ್ಲೇ ಉದ್ಭವ ಆಗುವ ಪ್ರಶ್ನೆ ಗೆದ್ದವರು ಯಾರು ಎಂಬ ಪ್ರಶ್ನೆ..? ಪ್ರಸ್ತುತ ಸನ್ನಿವೇಶದಲ್ಲಿ ಇಬ್ಬರು ಗೆದ್ದಿಲ್ಲ, ಇಬ್ಬರೂ ಸೋತಿಲ್ಲ, ಯಥಾ ಸ್ಥಿತಿ ಮುಂದುವರಿಕೆ ಎನ್ನಬಹುದಾದರೂ, ಕದನ ವಿರಾಮ ಎನ್ನಬಹುದು.

ಸಿಎಂ ಸಿದ್ದರಾಮಯ್ಯ ದೃಷ್ಟಿಕೋನದಲ್ಲಿ ನೋಡಬಹುದಾದರೆ, ಎರಡೂವರೆ ವರ್ಷಗಳ ಬಳಿಕ ಅಧಿಕಾರ ಬಿಟ್ಟುಕೊಡಬೇಕು ಎಂದು ಹೇಳಲಾಗುತ್ತಿದ್ದ ವಾತಾವರಣವನ್ನು, ಅಷ್ಟು ಸುಲಭವಾಗಿ ಸಾಧ್ಯವಿಲ್ಲ ಎಂಬ ಸಂದೇಶವನ್ನು ಹೈಕಮಾಂಡ್ ಹಾಗೂ ಡಿ.ಕೆ. ಶಿವಕುಮಾರ್ ಅವರಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ.

ಇನ್ನೂ ಡಿ.ಕೆ. ಶಿವಕುಮಾರ್ ದೃಷ್ಟಿಯಿಂದ ನೋಡುವುದಾದರೆ, ಮುಂದಿನ ಮುಖ್ಯಮಂತ್ರಿ ನಾನೇ, ಇನ್ನೂ ದಲಿತ ನಾಯಕ ಮುಂತಾದ ಯಾವುದೇ ಮೂರನೇ ವ್ಯಕ್ತಿಯ ನುಸುಳಲು ಸಾಧ್ಯವಿಲ್ಲ ಎಂಬುದನ್ನು ಸಾಬೀತು ಮಾಡಿದ್ದಾರೆ.

20 ವರ್ಷಗಳ ರಾಜ್ಯ ರಾಜಕೀಯ ಗಮನಿಸುವುದಾದರೆ ಒಬ್ಬ ಪ್ರಭಾವಿ ರಾಜಕಾರಣಿಯಾಗಿ ಡಿ.ಕೆ. ಶಿವಕುಮಾರ್ ಸಿಎಂ ರೇಸಿಗ್ ಬಂದಿದ್ದಾರೆ. ಏನೆಂದರೆ ಈ ಮುಂಚೆ ಯಾವುದೇ ಉಪಮುಖ್ಯಮಂತ್ರಿ ಬಿಟ್ಟು ಅಧಿಕಾರ ನಡೆಸಲು ಸಾಧ್ಯವಿಲ್ಲ ಎಂಬ ವಾತಾವರಣ ನಿರ್ಮಾಣವಾಗಿರಲಿಲ್ಲ. ಇದೇ ಮೊದಲ ಬಾರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ವಿಶ್ವಾಸಕ್ಕೆ ಪಡೆದರೆ ಮಾತ್ರ ಅಧಿಕಾರ ನಡೆಸಲು ಸಾಧ್ಯ ಎಂಬ ಸಂದೇಶ ರವಾನೆಯಾಗಿದೆ.

ಡಿ.ಕೆ. ಶಿವಕುಮಾರ್ ಅವರು ಈಗಲೇ ಮುಖ್ಯಮಂತ್ರಿ ಆಗದೇ ಇದ್ದರೂ.. ಮುಂದಿನ ದಿನಗಳಲ್ಲಿ ಮತ್ತೆ ಇದೇ ಪ್ರಶ್ನೆ ಉದ್ಭವವಾಗಲಿದೆ. ಆಗ ಹೈಕಮಾಂಡ್ ನಿರ್ಧಾರಕ್ಕೆ ಬರಲೇಬೇಕಾಗುತ್ತದೆ. ಇಲ್ಲವಾದರೆ ವಿಪರೀತವಾದ ಸನ್ನಿವೇಶ ಉದ್ಭವ ಆಗುತ್ತದೆ ಎಂಬುದು ಹಾಗೂ ಸಿದ್ದರಾಮಯ್ಯ ಅವರಿಗೆ ಪರ್ಯಾಯ ಡಿ.ಕೆ. ಶಿವಕುಮಾರ್ ಮಾತ್ರ ಎಂಬ ಸಂದೇಶ ರವಾನಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಆದರೆ ಈಗ ಸಿಎಂ ಮತ್ತು ಡಿಸಿಎಂ ನಡುವಿನ ಈ ಕದನ ವಿರಾಮದ ವ್ಯಾಲಿಡಿಟಿ ಎಷ್ಟು ತಿಂಗಳು ಎಂಬ ಪ್ರಶ್ನೆ ಎಲ್ಲರ ಮುಂದಿದೆ.

ರಾಜಕೀಯ

ಮೋದಿ, ಶಾ ಶ್ರಮದಿಂದ 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ: ಬಿ.ವೈ. ವಿಜಯೇಂದ್ರ

ಮೋದಿ, ಶಾ ಶ್ರಮದಿಂದ 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ: ಬಿ.ವೈ. ವಿಜಯೇಂದ್ರ

ಬಿಜೆಪಿಯ (BJP) ಗತವೈಭವದ ದಿನಗಳು ದಾವಣಗೆರೆಯಲ್ಲಿ ಮರುಕಳಿಸಲಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (B.Y. Vijayendra) ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

[ccc_my_favorite_select_button post_id="121758"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ಜಿಂಕೆಬಚ್ಚಹಳ್ಳಿ ಸಮೀಪ ಶನಿವಾರ ಬೆಂಕಿಗೆ ಆಹುತಿಯಾಗಿದ್ದ ಕಾರಿನಲ್ಲಿ (Car) ಅನುಮಾನಸ್ಪದ ರೀತಿಯಲ್ಲಿ ಸುಟ್ಟು ಹೋಗಿದ್ದ ಮಹಿಳೆಯ (Woman) ಅಸ್ಥಿಪಂಜರ ಪತ್ತೆಯಾಗಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ.

[ccc_my_favorite_select_button post_id="121693"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]