DCM D.K. Shivakumar gets support from Vokkaliga Sri; Why is Kumaranna so angry..!?

ಡಿಸಿಎಂ ಡಿ.ಕೆ. ಶಿವಕುಮಾರ್‌ಗೆ ಒಕ್ಕಲಿಗ ಶ್ರೀಗಳ ಬೆಂಬಲ; ಕುಮಾರಣ್ಣ ಕೆಂಡಾಮಂಡಲವಾಗಿದ್ದೇಕೆ..!?

ಕೆ.ಎಂ.ಸಂತೋಷ್, ಆರೂಢಿ, (ದೊಡ್ಡಬಳ್ಳಾಪುರ): ಡಿ.ಕೆ.ಶಿವಕುಮಾರ್ (D.K. Shivakumar) ಅವರು ಸಿಎಂ ಆಗಲೆಂದು ಒಕ್ಕಲಿಗ ಮಠದ ಶ್ರೀಗಳು ದನಿ ಎತ್ತಿರುವುದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ನಡುವೆ ಮಾತಿನ ಸಮರಕ್ಕೆ ಕಾರಣವಾಗಿದೆ.

ಪವರ್ ಶೇರಿಂಗ್ ವಿಚಾರವಾಗಿ ಉಂಟಾಗಿದ್ದ ಗೊಂದಲಗಳಿಗೆ ಹೈಕಮಾಂಡ್ ಸೂಚನೆಯಂತೆ ನಿನ್ನೆ ಸಿಎಂ ಸಿದ್ದರಾಮಯ್ಯ (Cmsiddaramaiah) ಡಿಸಿಎಂ ಡಿ.ಕೆ. ಶಿವಕುಮಾರ್ (DCM D.K. Shivakumar) ಬ್ರೇಕ್‌ಫಾಸ್ಟ್ ಮಿಟಿಂಗ್ ನಡೆಸಿ ಕದನ ವಿರಾಮ ಘೋಷಣೆಯಾಗಿದೆ. ಆದರೆ ಈಗ ಡಿ.ಕೆ. ಶಿವಕುಮಾರ್ ಅವರಿಹೆ ಒಕ್ಕಲಿಗ ಶ್ರೀಗಳ ಬೆಂಬಲ ನೀಡಿರುವುದು ಚರ್ಚೆಯಾಗುತ್ತಿದೆ.

ಒಕ್ಕಲಿಗ ಸಮುದಾಯ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ನಂಜಾವಧೂತ ಸ್ವಾಮೀಜಿ ಕೂಡಾ ಡಿಕೆ ಶಿವಕುಮಾರ್ ಸಿಎಂ ಆಗಲೆಂದು ಮಾತನಾಡಿ ಬೆಂಬಲ ನೀಡಿದ್ದಾರೆ.

ಡಿ.ಕೆ. ಶಿವಕುಮಾರ್ ಜೀವ ಪಣಕ್ಕಿಟ್ಟು ಹೋರಾಡಿದ್ದಾರೆ: ನಿರ್ಮಲಾನಂದನಾಥ ಸ್ವಾಮೀಜಿ

ಪಕ್ಷಕ್ಕಾಗಿ ಡಿ.ಕೆ. ಶಿವಕುಮಾರ್ ಅವರು ಶ್ರಮಿಸಿದ್ದಾರೆ. ಜೀವ ಪಣಕ್ಕಿಟ್ಟು ಹೋರಾಡಿದ್ದಾರೆ. ಡಿ.ಕೆ. ಶಿವಕುಮಾರ್ ಅವರು ಸಿಎಂ ಆಗದಿದ್ದರೆ ಬೇಸರವಾಗಲಿದೆ.

ಪಕ್ಷ ಅಧಿಕಾರಕ್ಕೆ ತಂದ ಹೋರಾಟಗಾರ ಡಿ.ಕೆ. ಶಿವಕುಮಾರ್ ಅವರೇ ಮುಂದಿನ 2.5 ವರ್ಷ ಸಿಎಂ ಆಗಲಿದ್ದಾರೆ. ಅವರಿಗೆ ಸಿಎಂ ಸ್ಥಾನ ಅವಕಾಶ ಸಿಗುವ ಭರವಸೆ ಇತ್ತು. ಅವರನ್ನು ಮುಖ್ಯಮಂತ್ರಿ ಆಗಿ ಮಾಡಬೇಕು. ಈ ಮೂಲಕ ಕಾಂಗ್ರೆಸ್ ಹೈಕಮಾಂಡ್ ಎಲ್ಲ ಗೊಂದಲಗಳಿಗೆ ತೆರೆ ಎಳೆಯಬೇಕು ಎಂದು ಹೇಳಿದ್ದಾರೆ.

ಕೊಟ್ಟ ಮಾತಿಗೆ ತಪ್ಪಿನಡೆದರೆ ಆ ಪರಮಾತ್ಮ ಮೆಚ್ಚಲ್ಲ: ನಂಜಾವಧೂತ ಸ್ವಾಮೀಜಿ

ಕೊಟ್ಟ ಮಾತಿಗೆ ತಪ್ಪಿನಡೆದರೆ ಆ ಪರಮಾತ್ಮ ಮೆಚ್ಚಲ್ಲ ಉಳಿದ ಎರಡೂವರೆ ವರ್ಷ ಡಿಕೆ ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ನೀಡಿ ಎಂದು ನಂಜಾವಧೂತ ಸ್ವಾಮೀಜಿಗಳು ಡಿ.ಕೆ.ಶಿವಕುಮಾರ್ ಪರ ಬ್ಯಾಟ್ ಬೀಸಿದ್ದಾರೆ.

ರಾಜಕಾರಣಿಗಳು ರಾಜಕಾರಣ ಮಾಡಲಿ, ಧರ್ಮಾಧಿಕಾರಿಗಳು ಈ ವ್ಯಾಮೋಹ ಬಿಡಲಿ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

ಒಕ್ಕಲಿಗ ಮಠಗಳ ಶ್ರೀಗಳು ಡಿ.ಕೆ. ಶಿವಕುಮಾರ್ ಅವರು ಸಿಎಂ ಆಗಲೆಂದು ಹಾರೈಸಿರುವುದಕ್ಕೆ ಕೆಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D. Kumaraswamy) ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜಕಾರಣಿಗಳು ರಾಜಕಾರಣ ಮಾಡಲಿ. ಆದರೆ ಧರ್ಮಾಧಿಕಾರಿಗಳು ಯಾರೋ ಒಬ್ಬರ ಪರ ಅಭಿಪ್ರಾಯ ವ್ಯಕ್ತಪಡಿಸುವ ವ್ಯಾಮೋಹ ಬಿಡಬೇಕು ಎಂದಿದ್ದಾರೆ.

ಬೆಂಗಳೂರಿನಲ್ಲಿ ನಿನ್ನೆ ನಡೆದ ಎನ್ ಡಿಎ ಸಮನ್ವಯ ಸಮಿತಿ ಸಭೆಯ ನಂತರ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಸಚಿವರು; ಕಾಂಗ್ರೆಸ್ ಪಕ್ಷದಲ್ಲಿ ನಡೆಯುತ್ತಿರುವ ಆಂತರಿಕ ಕಲಹದ ವಿಚಾರದಲ್ಲಿ ಸ್ವಾಮೀಜಿಗಳು ಮಧ್ಯ ಪ್ರವೇಶ ಮಾಡುವುದು ಅನಗತ್ಯ. ಅವರಿಗೆ ಇದರಲ್ಲಿ ಏನೂ ಕೆಲಸ ಇಲ್ಲ ಎಂದಿದ್ದಾರೆ.

ನಾನು ಎರಡು ಬಾರಿ ಮುಖ್ಯಮಂತ್ರಿ ಆಗಿದ್ದೆ. ಅಧಿಕಾರ ಹೋದಾಗ ಯಾವ ಮಠಾಧಿಪತಿಗಳ ನೆರವನ್ನು ನಾನು ಕೇಳಲಿಲ್ಲ. ರಾಜಕಾರಣಿಗಳ ಕೆಲಸವೇ ಬೇರೆ, ಸ್ವಾಮೀಜಿಗಳ ಕೆಲಸವೇ ಬೇರೆ.

ಒಕ್ಕಲಿಗ ಸಮಾಜ ಅಷ್ಟೇ ಅಲ್ಲ, ಬೇರೆ ಯಾವುದೇ ಸಮಾಜದ ಬಗ್ಗೆ ನಾನು ಮಾತನಾಡಲು ಹೋಗುವುದಿಲ್ಲ. ಜಾತಿ ಧರ್ಮಗಳ ವಿಚಾರ ಹೇಳಿಕೊಂಡು ಧಾರ್ಮಿಕ ಕ್ಷೇತ್ರಗಳನ್ನ ದುರುಪಯೋಗಪಡಿಸಿಕೊಂಡು, ರಾಜಕಾರಣ ಮಾಡೋದು ಯಾರಿಗೂ ಶೋಭೆ ತರುವುದಿಲ್ಲ ಎಂದು ಎಂದು ಕೇಂದ್ರ ಸಚಿವರು ಹೇಳಿದ್ದಾರೆ.

ಸಮಾಜದಲ್ಲಿ ಜಾತಿ ಸಂಘರ್ಷಕ್ಕೆ ಅವಕಾಶ ಇರಬಾರದು. ಅದಕ್ಕೆ ಯಾರೂ ಕಾರಣ ಆಗಬಾರದು. ನಾನು ಧರ್ಮಗುರುಗಳಿಗೆ ಮನವಿ ಮಾಡುವುದು ಇಷ್ಟೇ. ಸಮಾಜದಲ್ಲಿ ಶಾಂತಿ ನೆಮ್ಮದಿ ಮುಖ್ಯ. ಜಾತಿ ಮತ್ತು ಧರ್ಮ ಸಂಘರ್ಷ ಮಾಡಬಾರದು. ಅದು ರಾಜ್ಯಕ್ಕೆ ಒಳ್ಳೆಯದಲ್ಲ. ಕಾಂಗ್ರೆಸ್ ಪಕ್ಷದ ಕಲಹದಲ್ಲಿ ಜಾತಿ ಧರ್ಮಗಳನ್ನು ಎಳೆದು ತರೋದು ಬೇಕಾಗಿಲ್ಲ ಎಂದು ಕೇಂದ್ರ ಸಚಿವರು ಹೇಳಿದ್ದಾರೆ‌.

ರಾಜ್ಯದಲ್ಲಿ ಈಗ ದೊಡ್ಡ ಮಟ್ಟದಲ್ಲಿ ಜಾತಿ ರಾಜಕಾರಣ ನಡೆಯುತ್ತಿದೆ. ಇದರಿಂದ ನಷ್ಟ ರಾಜಕಾರಣ ಮಾಡುವವರಿಗೆ ಆಗುವುದಿಲ್ಲ. ರಾಜ್ಯಕ್ಕೆ ದೊಡ್ಡ ನಷ್ಟ ಆಗುತ್ತದೆ. ರಾಜ್ಯದಲ್ಲಿ ಸಮಾಜಗಳ ನಡುವೆ ಸಂಘರ್ಷಕ್ಕೆ ಎಡೆಮಾಡಿಕೊಟ್ಟಿದೆ. ಇದರ ಅವಶ್ಯಕತೆ ಇಲ್ಲ. ಇದು ಕಾಂಗ್ರೆಸ್ ಪಕ್ಷಕ್ಕೆ ಆಗುವ ಮುಜುಗರ ಅಲ್ಲ. ಕರ್ನಾಟಕ ಜನತೆಗೆ ಆಗುವ ಮುಜುಗರ ಎಂದು ಕುಮಾರಸ್ವಾಮಿ ಅವರು ವಾಗ್ದಾಳಿ ನಡೆಸಿದ್ದಾರೆ.

ಕುಮಾರಣ್ಣನಿಗೆ ಒಕ್ಕಲಿಗರ ಎರಡನೇ ಮಠ ಹೇಗಾಯ್ತು ಎಂಬುದು ಗೊತ್ತಿಲ್ಲವೇ?: ಡಿ.ಕೆ. ಶಿವಕುಮಾರ್ ತಿರುಗೇಟು

ಇನ್ನೂ ಕುಮಾರಸ್ವಾಮಿ ಅವರ ಆಕ್ರೋಶದ ನುಡಿಗಳಿಗೆ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ. “ಕುಮಾರಸ್ವಾಮಿ ಅವರು ಬಹಳ ದೊಡ್ಡವರು, ಅವರು ಯಾರ ಬೆಂಬಲವನ್ನೂ ಪಡೆಯುವುದಿಲ್ಲ, ಒಕ್ಕಲಿಗರ ಮಠ, ಒಕ್ಕಲಿಗರ ಸಂಘ, ಒಕ್ಕಲಿಗ ಜಾತಿಯನ್ನು ಎಂದೂ ಉಪಯೋಗಿಸಿಕೊಂಡಿಲ್ಲ” ಎಂದು ಛೇಡಿಸಿದ್ದಾರೆ.

ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಡಿ.ಕೆ. ಶಿವಕುಮಾರ್ ಅವರು ಭಾನುವಾರ ಪ್ರತಿಕ್ರಿಯೆ ನೀಡಿದರು.

ನಿಮ್ಮ ಪರವಾಗಿ ಸ್ವಾಮೀಜಿಗಳು ಧ್ವನಿ ಎತ್ತಿರುವುದಕ್ಕೆ ಕುಮಾರಸ್ವಾಮಿ ಆಕ್ಷೇಪ ವ್ಯಕ್ತಪಡಿಸಿದ್ದಾರಲ್ಲ ಎಂದು ಕೇಳಿದಾಗ, “ಹೌದಾ.. ಪಾಪ, ಕುಮಾರಣ್ಣನಿಗೆ ಒಕ್ಕಲಿಗರ ಎರಡನೇ ಮಠ ಹೇಗಾಯ್ತು ಎಂಬುದು ಗೊತ್ತಿಲ್ಲವೇ? ಅದನ್ನು ಕಟ್ಟಿದವರು ಯಾರು? ಒಕ್ಕಲಿಗ ಮಠದ ಹಿರಿಯ ಸ್ವಾಮೀಜಿಗಳು ಇಲ್ಲದಿದ್ದರೆ ದೇವೇಗೌಡರು ಸಿಎಂ ಆಗುತ್ತಿದ್ದರೇ? ಅಂದು ದೇವೇಗೌಡರ ಪರ ಸ್ವಾಮೀಜಿಗಳು ರಸ್ತೆಗೆ ಇಳಿಯಲಿಲ್ಲವೇ? ಸದಾನಂದಗೌಡರಿಗೆ ತೊಂದರೆ ಆದಾಗ ಸ್ವಾಮೀಜಿಗಳು ಸುಮ್ಮನೆ ಕೂತಿದ್ದರಾ? ಕೆಲವು ಸಂದರ್ಭದಲ್ಲಿ ಸ್ವಾಮೀಜಿಗಳು ಮಾತನಾಡುತ್ತಾರೆ. ಅದರಲ್ಲಿ ತಪ್ಪೇನಿದೆ? ಬೇರೆ ಸಂದರ್ಭದಲ್ಲಿ ಸ್ವಾಮೀಜಿಗಳು ಮಾತನಾಡಿದಾಗ ನಾನು ಬೇಸರ ಮಾಡಿಕೊಂಡಿದ್ದೇನಾ?” ಎಂದು ತಿರುಗೇಟು ನೀಡಿದರು.

ನಾನು ಸ್ವಾಮೀಜಿ ಬೆಂಬಲ ಕೇಳಿಲ್ಲ ಎಂಬ ಕುಮಾರಸ್ವಾಮಿ ಹೇಳಿಕೆ ಬಗ್ಗೆ ಕೇಳಿದಾಗ, “ನಾನು ಕೇಳಿದ್ದೇನಾ? ನಾನು ಕೂಡ ಯಾರ ಬೆಂಬಲ ಕೇಳಿಲ್ಲ. ಅವರು ಪ್ರೀತಿಯಿಂದ ಮಾತಾಡಿದರೆ ಬೇಡ ಎನ್ನಲು ಸಾಧ್ಯವೇ..? ನಾನು ಒಂದು ಸಮುದಾಯದಲ್ಲಿ ಹುಟ್ಟಿದ್ದರೂ ಎಲ್ಲಾ ಸಮುದಾಯಗಳನ್ನು ಪ್ರೀತಿಸುತ್ತೇನೆ, ಗೌರವಿಸುತ್ತೇನೆ. ಬಾಳೆಹೊನ್ನೂರು ಸ್ವಾಮಿಜಿ, ಶ್ರೀಶೈಲ ಸ್ವಾಮೀಜಿಗಳು ಸೇರಿದಂತೆ ಸಾಕಷ್ಟು ಸ್ವಾಮೀಜಿಗಳು ನನ್ನ ಪರ ಮಾತನಾಡಿದ್ದಾರೆ. ನನ್ನ ಮೇಲೆ ಅವರಿಗೆ ಪ್ರೀತಿ, ವಿಶ್ವಾಸ ಇದೆ. ಹೀಗಾಗಿ ಮಾತನಾಡಿದ್ದಾರೆ. ಜೈನ ಸ್ವಾಮೀಜಿಗಳು ಕೂಡ ದೊಡ್ಡ ಸಮಾವೇಶದಲ್ಲಿ ಬಹಿರಂಗವಾಗಿ ಆಶೀರ್ವಾದ ಮಾಡಿದರು. ಧರ್ಮಸ್ಥಳಕ್ಕೆ ಹೋದಾಗಲೂ ನನಗೆ ಬೆಂಬಲ ನೀಡಿದರು. ಅದನ್ನು ತಪ್ಪು ಎಂದು ಹೇಳಲು ಸಾಧ್ಯವೇ?” ಎಂದು ಪ್ರಶ್ನಿಸಿದರು.

ಒಟ್ಟಾರೆ ಒಕ್ಕಲಿಗ ಡಿ.ಕೆ. ಶಿವಕುಮಾರ್ ಅವರ ಪರ ಸಮುದಾಯದ ಶ್ರೀಗಳು ದನಿ ಎತ್ತಿರುವುದು ಕುಮಾರಸ್ವಾಮಿ ಅವರ ಆಕ್ಷೇಪಕ್ಕೆ ಕಾರಣವಾಗಿದೆ. ಈಗಾಗಲೇ ಡಿ.ಕೆ. ಸಿಎಂ ಆದರೆ ಜೆಡಿಎಸ್‌ಗೆ ಸಂಕಷ್ಟ ಎದುರಾಗಲಿದೆ ಎಂಬ ಮಾತು ವ್ಯಾಪಕವಾಗಿದೆ. ಇದರ ಬೆನ್ನಲ್ಲೇ ಶ್ರೀಗಳ ನಿಲುವಿನ ಕುರಿತು ಕುಮಾರಸ್ವಾಮಿ ಅವರ ಪ್ರತಿಕ್ರಿಯೆಗಳು ಸಾಕ್ಷಿಯಾಗುತ್ತಿದೆ ಎನ್ನಲಾಗುತ್ತಿದೆ.

ರಾಜಕೀಯ

ದೊಡ್ಡಬಳ್ಳಾಪುರದಲ್ಲಿ ನಾಳೆ ಸೋಮನಾಥ ಜ್ಯೋತಿರ್ಲಿಂಗ ದರ್ಶನ: 100 ದಂಪತಿಗಳಿಂದ ವಿಶೇಷ ರುದ್ರಾರ್ಚನೆ

ದೊಡ್ಡಬಳ್ಳಾಪುರದಲ್ಲಿ ನಾಳೆ ಸೋಮನಾಥ ಜ್ಯೋತಿರ್ಲಿಂಗ ದರ್ಶನ: 100 ದಂಪತಿಗಳಿಂದ ವಿಶೇಷ ರುದ್ರಾರ್ಚನೆ

ಸಾವಿರ ವರ್ಷಗಳ ಇತಿಹಾಸವಿರುವ ಪವಿತ್ರ ಸೋಮನಾಥ ಜ್ಯೋತಿರ್ಲಿಂಗ (Somnath Jyotirlinga Darshan) ಮಾರ್ಚ್ 14ರಂದು ದೊಡ್ಡಬಳ್ಳಾಪುರಕ್ಕೆ ಆಗಮಿಸುತ್ತಿದ್ದು, ಈ ಜ್ಯೋತಿರ್ಲಿಂಗ ದರ್ಶನಕ್ಕೆ ನಗರದ ಸೋಮೇಶ್ವರ ದೇವಾಲಯದಲ್ಲಿ ಭಕ್ತಾದಿಗಳಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ಆರ್ಟ್ ಆಫ್

[ccc_my_favorite_select_button post_id="120187"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!