Doddaballapura; Weavers who stopped sarees from rapier looms

ದೊಡ್ಡಬಳ್ಳಾಪುರ; ರೇಪಿಯರ್ ಮಗ್ಗಗಳ ಸೀರೆಗಳನ್ನು ತಡೆದ ನೇಕಾರರು.. GST ಅಧಿಕಾರಿಗಳ ವಶಕ್ಕೆ

ದೊಡ್ಡಬಳ್ಳಾಪುರ: ರೇಪಿಯರ್ ಸೀರೆಗಳನ್ನು (Rapier Sarees) ದೊಡ್ಡಬಳ್ಳಾಪುರದಲ್ಲಿ ತಂದು ಮಾರಾಟ ಮಾಡಬಾರದು ಎಂದು ಮನವಿ ಮಾಡಿದ್ದರೂ ಮಾರಾಟ ಮಾಡುತ್ತಿರುವುದು ಪ್ರತಿರೋಧಿಸಿದ ಹಲವಾರು ನೇಕಾರರು (Weavers), ರೇಪಿಯರ್ ಮಗ್ಗಗಳ ಸೀರೆಗಳನ್ನು ಸಾಗಿಸುತ್ತಿದ್ದ ಮೂರು ವಾಹನಗಳನ್ನು ತಡೆದು ಜಿಎಸ್‌ಟಿ (GST) ಅಧಿಕಾರಿಗಳಿಗೆ ಒಪ್ಪಿಸಿದ ಘಟನೆ ನಗರದ ಕೊಂಗಾಡಿಯಪ್ಪ ಕಾಲೇಜು ಮುಂಭಾಗದಲ್ಲಿ ಭಾನುವಾರ ನಡೆದಿದೆ.

ದೊಡ್ಡಬಳ್ಳಾಪುರದಲ್ಲಿ ನೇಕಾರರು ತಯಾರು ಮಾಡುವ ಬಟ್ಟೆಗಳನ್ನು ಸೂರತ್ ಹಾಗೂ ಇತರೆಡೆ ರೇಪಿಯರ್ ಮಗ್ಗಗಳಲ್ಲಿ ನೇಯ್ದು ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿರುವುದರಿಂದ ಇಲ್ಲಿನ ನೇಕಾರರು ತೀವ್ರ ನಷ್ಟ ಅನುಭವಿಸುತ್ತಿದ್ದು, ರೇಪಿಯರ್ ಸೀರೆಗಳು ದೊಡ್ಡಬಳ್ಳಾಪುರಕ್ಕೆ ಬಾರದಂತೆ ತಡೆಗಟ್ಟಬೇಕೆನ್ನುವ ಎಂದು ಪ್ರತಿಪಾದಿಸುವ ನೇಕಾರರು ಈಗ ಇನ್ನೊಂದು ಹೆಜ್ಜೆ ಮುಂದೆ ಹೋಗಿ, ಬೆಳಗಿನಿಂದಲೇ ಸೀರೆಗಳನ್ನು ಸಾಗಾಣಿಕೆ ಮಾಡುವ ವಾಹನಗಳ ನಿಗಾ ವಹಿಸಿ, ಮೂರು ಸರಕು ಸಾಗಾಣಿಕೆ ವಾಹನಗಳಲ್ಲಿ ಸಾಗಿಸುತ್ತಿದ್ದ ಸುಮಾರು 5 ಸಾವಿರ ರೇಪಿಯರ್ ಸೀರೆಗಳನ್ನು ತಡೆದು ವಾಹನಗಳನ್ನು ಜಿಎಸ್ಟಿ ಅಧಿಕಾರಿಗಳ ವಶಕ್ಕೆ ಒಪ್ಪಿಸಿದ್ದಾರೆ.

ಅಧಿಕಾರಿಗಳು ವಾಹನಗಳನ್ನು ವಶ ಪಡೆದು, ಕಾನೂನು ರೀತಿಯ ಪರಿಶೀಲನೆ ಕೈಗೊಂಡಿದ್ದಾರೆ.

ಈ ವೇಳೆ ಮಾತನಾಡಿದ ನೇಕಾರರ ಮುಖಂಡರು ದೊಡ್ಡಬಳ್ಳಾಪುರದಲ್ಲಿ 25ಸಾವಿರ ಮಗ್ಗಗಳಿದ್ದು, 50 ಸಾವಿರ ಜನರು ಗುಡಿ ಕೈಗಾರಿಕೆಯಾಗಿರುವ ನೇಕಾರಿಕೆಯನ್ನು ಅವಲಂಭಿಸಿದ್ದಾರೆ.

ಸೂರತ್ ಹಾಗೂ ಬೆಳಗಾವಿಯಲ್ಲಿರುವ ಆಧುನಿಕ ತಂತ್ರಜ್ಞಾನದ ರೇಪಿಯರ್ ವಿರ್ಜೆಟ್ ಮಗ್ಗಗಳಲ್ಲಿ ಉತ್ಪಾದನೆ ಮಾಡುತ್ತಿದ್ದು, ದೊಡ್ಡಬಳ್ಳಾಪುರಕ್ಕೆ ತಂದು ಅರ್ಧ ಬೆಲೆಗೆ ಮಾರಾಟ ಮಾಡಿ ದೊಡ್ಡಬಳ್ಳಾಪುರ ನೇಕಾರಿಕೆ ಉದ್ಯಮವನ್ನು ಹಾಳು ಮಾಡುತ್ತಿದ್ದಾರೆ.

ಇದರಿಂದ ನೇಕಾರರು ಬ್ಯಾಂಕ್ಗಳ ಸಾಲ ಕಟ್ಟಲಾರದೇ, ಮನೆ ಮಠ ಮಾರಿಕೊಳ್ಳುವ ಸ್ಥಿತಿ ನಿರ್ಮಾಣವಾಗಿದೆ. ಈ ನಿಟ್ಟಿನಲ್ಲಿ ಕೂಡಲೇ ಈ ಕಾರ್ಯವನ್ನು ನಿಲ್ಲಿಸಬೇಕು.

ನಿಮ್ಮ ಸೀರೆ ತಯಾರಿಕೆ ಇಲ್ಲಿಯೇ ಮಾಡಿ ಎಂದು ಸೀರೆಗಳನ್ನು ತರಿಸುತ್ತಿದ್ದ ಮಾಲೀಕರಿಗೆ ಮನವಿ ಮಾಡಿದರು.
ಇದು ಆರಂಭಿಕ ಮಾತ್ರ. ಇನ್ನು ಮುಂದೆ ಇದೇ ರೀತಿ ಮುಂದುವರೆದರೆ, ಮಾಲೀಕರ ಮನೆ ಮುಂದೆ ನೇಕಾರರ ಕುಟಂಬಗಳು ಧರಣಿ ಕುಳಿತು ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ನೇಕಾರ ಮುಖಂಡರು ಆಗ್ರಹಿಸಿದರು.

ರಾಜಕೀಯ

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದ ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ಮಿತ್ರಪಕ್ಷ ಅಧಿಕಾರದಲ್ಲಿರುವ ಆಂಧ್ರಪ್ರದೇಶದ ಹೊರತುಪಡಿಸಿ ದಕ್ಷಿಣ ಭಾರತದ ರಾಜ್ಯಗಳಿಗೆ ನಿರ್ಲಕ್ಷ್ಯ ತೋರಿದೆ ಎಂಬ ಆಕ್ರೋಶ ವ್ಯಾಪಕವಾಗಿದೆ.

[ccc_my_favorite_select_button post_id="119088"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

2025-26 ನೇ ಸಾಲಿನ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ (K.H. Muniyappa) ಮಾತನಾಡಿದರು.

[ccc_my_favorite_select_button post_id="118983"]
ಭೀಕರ ಜೋಡಿ ಕೊಲೆ ಪ್ರಕರಣ: ದಂಡುಪಾಳ್ಯ ಗ್ಯಾಂಗ್‌ನ ಮತ್ತೊಬ್ಬನ ಬಂಧನ.!

ಭೀಕರ ಜೋಡಿ ಕೊಲೆ ಪ್ರಕರಣ: ದಂಡುಪಾಳ್ಯ ಗ್ಯಾಂಗ್‌ನ ಮತ್ತೊಬ್ಬನ ಬಂಧನ.!

ಭೀಕರ ಜೋಡಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ದಂಡುಪಾಳ್ಯ ಗ್ಯಾಂಗ್‌ನ (Dandupalya gang) ಚಿಕ್ಕ ಹನುಮಂತಪ್ಪ (ಅಲಿಯಾಸ್ ಕೆ.ಕೃಷ್ಣಪ್ಪ) ಎಂಬಾತನನ್ನು ಆಂಧ್ರಪ್ರದೇಶದ ಮದನಪಳ್ಳೆ ಗ್ರಾಮದಲ್ಲಿ ಬಂಧಿಸಲಾಗಿದೆ.

[ccc_my_favorite_select_button post_id="118778"]
ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ಪೆಟ್ಟಿ ಅಂಗಡಿ ಬಳಿ ಕುಳಿತಿದ್ದ ವೃದ್ಧನಿಗೆ ನಿಯಂತ್ರಣ ತಪ್ಪಿದ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ (Accident) ವೃದ್ಧ ತೀವ್ರವಾಗಿ ಗಾಯಗೊಂಡಿರುವ ಘಟನೆ ತಾಲೂಕಿ‌ನ ****** ಇಂದು ಮಧ್ಯಾಹ್ನ ನಡೆದಿದೆ

[ccc_my_favorite_select_button post_id="119094"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!