BJP supports transport workers' protest: R. Ashoka

ಹನುಮ ಜಯಂತಿಯಂದೇ ಸಿಎಂ ಸಿದ್ದರಾಮಯ್ಯ ಕೋಳಿ ಸಾರು ಸೇವನೆ; ಆರ್. ಅಶೋಕ್ ಕಿಡಿ

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ರೈತರ ಸಮಸ್ಯೆ ಬಗೆಹರಿಸಿಲ್ಲ. ರಸ್ತೆಗುಂಡಿಗಳನ್ನು ದುರಸ್ತಿ ಮಾಡಿಲ್ಲ. ಆದರೆ ಸಿಎಂ ಸಿದ್ದರಾಮಯ್ಯ (Cmsiddaramaiah) ಹಾಗೂ ಡಿ.ಕೆ.ಶಿವಕುಮಾರ್‌ (D.K. Shivakumar) ತಮ್ಮ ನಡುವಿನ ಸಮಸ್ಯೆ ಬಗೆಹರಿಸಲು ಉಪಾಹಾರ ಸಭೆ ಮಾಡಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R. Ashoka) ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹನುಮ ಜಯಂತಿಯ ದಿನದಂದು ಎಲ್ಲೆಡೆ ಸಂಭ್ರಮದ ಆಚರಣೆ ನಡೆಯುತ್ತಿದ್ದರೆ, ಸದಾಶಿವನಗರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಾಟಿಕೋಳಿಯ ಸಾರು ಸವಿದಿದ್ದಾರೆ. ಈ ಹಿಂದೆ ಅವರು ಮಾಂಸ ಸೇವಿಸಿ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದರು.

ಕೆಲವು ದಿನದ ಹಿಂದೆ ಸಿದ್ದರಾಮಯ್ಯ ಮನೆಯಲ್ಲಿ ಉಪಾಹಾರ ನಡೆದಿದ್ದರೆ, ಈಗ ಡಿ.ಕೆ.ಶಿವಕುಮಾರ್‌ ಮನೆಯಲ್ಲಿ ನಡೆದಿದೆ. ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ ಹಾಗೂ ವೇಣುಗೋಪಾಲ್‌ ಈ ಪ್ರಹಸನವನ್ನು ನಿರ್ದೇಶನ ಮಾಡಿದ್ದಾರೆ. ಸಿದ್ದರಾಮಯ್ಯನವರ ಈ ನಡೆಯಿಂದ ಎಲ್ಲ ಹನುಮ ಭಕ್ತರ ಮನಸ್ಸಿಗೆ ನೋವಾಗಿದೆ ಎಂದರು.

ನಾನು ಅಧಿಕಾರವನ್ನು ಒದ್ದು ಕಿತ್ತುಕೊಳ್ಳುತ್ತೇನೆಂದು ಡಿ.ಕೆ.ಶಿವಕುಮಾರ್‌ ಹೇಳಿದ್ದರು. ಆದರೆ ಈಗ ಅವರು ಉಪಾಹಾರ ಸವಿದಿದ್ದಾರೆ. ಈ ನಡುವೆ ಡಾ.ಜಿ.ಪರಮೇಶ್ವರ್‌ ಬಹಳ ನೋವಿನಿಂದ ಮಾತಾಡಿದ್ದಾರೆ. ರಾಜ್ಯದಲ್ಲಿ ಕಳೆದ 10 ತಿಂಗಳಲ್ಲಿ 580 ಕ್ಕೂ ಅಧಿಕ ಜನರು ರಸ್ತೆಗುಂಡಿಯಿಂದ ಸತ್ತಿದ್ದಾರೆ. ತಿಂಡಿ ತಿನ್ನುವ ಸಮಯವನ್ನು ರಸ್ತೆಗುಂಡಿ ಮುಚ್ಚಿಸಲು ವಿನಿಯೋಗಿಸಿದ್ದರೆ ಅಮಾಯಕ ಜೀವಗಳು ಉಳಿಯುತ್ತಿತ್ತು. ರೈತರ ಕಬ್ಬಿನ ದರದ ಸಮಸ್ಯೆ ಬಗೆಹರಿದಿಲ್ಲ. ಮೆಕ್ಕೆಜೋಳ ಖರೀದಿ ಕೇಂದ್ರದ ಸಮಸ್ಯೆ ಬಗೆಹರಿದಿಲ್ಲ. ಈ ಬಗ್ಗೆ ಯಾವುದೇ ಉಪಾಹಾರ ಸಭೆ ನಡೆಸಿಲ್ಲ. ಇವರಿಬ್ಬರ ನಡುವಿನ ಸಮಸ್ಯೆ ಬಗೆಹರಿಸಲು ಉಪಾಹಾರ ಸಭೆ ನಡೆಸಬೇಕಿತ್ತೇ? ಅಂಗನವಾಡಿ ಕಾರ್ಯಕರ್ತರು, ರೈತರು, ಉದ್ಯಮಿಗಳು, ದಲಿತರ ವಿಶ್ವಾಸವನ್ನು ಸರ್ಕಾರ ಕಳೆದುಕೊಂಡಿದೆ ಎಂದರು.

ಬಿಗ್‌ಬಾಸ್‌ನಲ್ಲಿ ವೈಲ್ಡ್‌ ಕಾರ್ಡ್‌ನಂತೆ ಸತೀಶ್‌ ಜಾರಕಿಹೊಳಿ ಹಾಗೂ ಡಾ.ಜಿ.ಪರಮೇಶ್ವರ್‌ ದಲಿತ ಬ್ರ್ಯಾಂಡ್‌ನಡಿ ಸಿಎಂ ಆಗಲು ಕಾಯುತ್ತಿದ್ದಾರೆ. ಇಡೀ ಸರ್ಕಾರ ರಿಯಾಲಿಟಿ ಶೋನಂತೆ ಆಗಿದೆ. ಈ ರೀತಿ ಸಭೆ ನಡೆಸುವ ಬದಲು, ತುಂಗಭದ್ರಾ ಜಲಾಶಯದ ಗೇಟ್‌ಗಳನ್ನು ದುರಸ್ತಿ ಮಾಡಿಸಲು 12 ಕೋಟಿ ರೂ. ಬಿಲ್‌ ಪಾವತಿಸಿದ್ದರೆ ರೈತರಿಗೆ ನೀರಾವರಿ ಲಭ್ಯವಾಗುತ್ತಿತ್ತು. ಈ ಬಗ್ಗೆ ರೈತರ ಪರವಾಗಿ ಅಧಿವೇಶನದ ಸಮಯದಲ್ಲಿ ಹೋರಾಟ ಮಾಡಲಾಗುವುದು ಎಂದರು.

ಉತ್ತರ ಕರ್ನಾಟಕದ ಅಭಿವೃದ್ಧಿಗೆ ಮಾತ್ರ ಅಲ್ಲ, ಯಾವುದೇ ಅಭಿವೃದ್ಧಿಗೆ ಸರ್ಕಾರದ ಬಳಿ ಹಣವಿಲ್ಲ. ಸಿಎಂ ಸಿದ್ದರಾಮಯ್ಯ ಕಳೆದ ಬೆಳಗಾವಿ ಅಧಿವೇಶನದಲ್ಲಿ ಕೊಟ್ಟ ಮಾತನ್ನು ಈಡೇರಿಸಲಾಗಿದೆಯೇ ಎಂದು ನಾವು ಪ್ರಶ್ನೆ ಮಾಡುತ್ತೇವೆ. ಧರ್ಮಸ್ಥಳದಲ್ಲಿ ಬುರುಡೆ ತಂದವನಿಗೆ ಬಿರಿಯಾನಿ ಕೊಟ್ಟಿದ್ದೇ ಕಾಂಗ್ರೆಸ್‌ ಸರ್ಕಾರ. ಆದರೆ ಅದನ್ನು ಸಾಬೀತುಪಡಿಸಲು ಇಂದಿಗೂ ಸಾಧ್ಯವಾಗಿಲ್ಲ ಎಂದರು.

ಬೆಂಗಳೂರಿನ ಬಗ್ಗೆ ಟೀಕೆ ಮಾಡಿದ ಉತ್ತರ ಪ್ರದೇಶದ ಸಂಸದರು ಭದ್ರತೆ ಹೆಚ್ಚು ಮಾಡಿಕೊಳ್ಳಬೇಕು. ಇಲ್ಲವಾದರೆ ಡಿ.ಕೆ.ಶಿವಕುಮಾರ್‌ ಅವರಿಗೂ ಬೆದರಿಕೆ ಹಾಕುತ್ತಾರೆ. ಈಗಾಗಲೇ ಉದ್ಯಮಿಗಳಿಗೆ ಬೆದರಿಕೆ ಹಾಕಲಾಗಿದೆ ಎಂದರು.

ರಾಜಕೀಯ

ಅವಧಿ ಮುಗಿದ ಗ್ರಾಪಂಗಳಿಗೆ ಆಡಳಿತಾಧಿಕಾರಿಗಳನ್ನು ನೇಮಿಸಲು ಆದೇಶ

ಅವಧಿ ಮುಗಿದ ಗ್ರಾಪಂಗಳಿಗೆ ಆಡಳಿತಾಧಿಕಾರಿಗಳನ್ನು ನೇಮಿಸಲು ಆದೇಶ

ಗ್ರಾಮ ಪಂಚಾಯಿತಿ (Gram Panchayats) ಸದಸ್ಯರ ಅವಧಿಯು ಅವುಗಳ ಮೊದಲ ಸಭೆಗಾಗಿ ಗೊತ್ತುಪಡಿಸಿದ ದಿನಾಂಕದಿಂದ 5 ವರ್ಷಗಳ ಅವಧಿಯವರೆಗೆ ಅಸ್ತಿತ್ವದಲ್ಲಿದ್ದು 5 ವರ್ಷಗಳು ಮುಗಿದ ನಂತರದ ದಿನಾಂಕದಿಂದ ಗ್ರಾಮ ಪಂಚಾಯಿತಿಯ ಅವಧಿಯು ಮುಕ್ತಾಯಗೊಳ್ಳಲಿದೆ.

[ccc_my_favorite_select_button post_id="118535"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ದ್ವಿಚಕ್ರ ವಾಹನದಲ್ಲಿ ತೆರಳುವ ವೇಳೆ ಗಾಳಿಪಟ ಹಾರಿಸುವ ಮಾಂಜಾ ದಾರ (Maanja thread) ಕುತ್ತಿಗೆ ಸೀಳಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಟಗುಪ್ಪ ತಾಲೂಕಿನ ತಾಳಮಡಗಿ ಗ್ರಾಮದ ಸೇತುವೆ ಸಮೀಪ ನಡೆದಿದೆ.

[ccc_my_favorite_select_button post_id="118471"]
ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ಇಂದು ಸಂಭವಿಸಿದ ಎರಡು ಪ್ರತ್ಯೇಕ ಕಾರುಗಳ ಅಪಘಾತದಲ್ಲಿ (Accident) ಇಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡು, ಆಸ್ಪತ್ರೆಗೆ ದಾಖಲಾಗಿದ್ದಾರೆ.

[ccc_my_favorite_select_button post_id="118357"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!