Caste Census: B.Y. Vijayendra calls for listing as Hindu

ಸಾವಿರಾರು ರೈತರಿಂದ ಸುವರ್ಣಸೌಧಕ್ಕೆ ಮುತ್ತಿಗೆ; ಬಿ.ವೈ.ವಿಜಯೇಂದ್ರ

ಬೆಂಗಳೂರು: ಅಧಿವೇಶನದಲ್ಲಿ ರಾಜ್ಯದ ಜ್ವಲಂತ ಸಮಸ್ಯೆಗಳ ಕುರಿತು ಸಮಗ್ರವಾಗಿ ಚರ್ಚಿಸಬೇಕು. ಕಾಂಗ್ರೆಸ್ ಸರಕಾರದ ವೈಫಲ್ಯಗಳನ್ನು ಗಮನ ಸೆಳೆಯಬೇಕು; ವಿಶೇಷವಾಗಿ ಉತ್ತರ ಕರ್ನಾಟಕದ ಸಮಸ್ಯೆ, ರೈತರ ಸಂಕಷ್ಟದ ಕುರಿತು, ನೀರಾವರಿ ಸಮಸ್ಯೆ ಬಗ್ಗೆ ಚರ್ಚಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (B.Y. Vijayendra) ಆಗ್ರಹಿಸಿದ್ದಾರೆ.

ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬೆಳಗಾವಿಯ ಚಳಿಗಾಲದ ಅಧಿವೇಶನದ ಕುರಿತು ನಾನು, ವಿಪಕ್ಷ ನಾಯಕರು, ಬಿಜೆಪಿ- ಜೆಡಿಎಸ್ ಮುಖಂಡರು ಒಟ್ಟಿಗೆ ಕೂತು ಸವಿಸ್ತಾರವಾಗಿ ಚರ್ಚಿಸಿದ್ದೇವೆ ಎಂದರು.

ಪ್ರತಿ ಬಾರಿ ಬೆಳಗಾವಿ ಅಧಿವೇಶನದಲ್ಲಿ ನಾಮಕಾವಾಸ್ತೆ ಒಂದು ದಿನ ಚರ್ಚೆ ನಡೆಯುತ್ತಿದೆ. ಹಿಂದೆ ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ಬೆಳಗಾವಿಯಲ್ಲಿ ಸುವರ್ಣ ಸೌಧ ನಿರ್ಮಿಸಿದ್ದು, ಅಲ್ಲಿನ ಸಮಸ್ಯೆಗಳಿಗೆ ಉತ್ತರ ಕಂಡುಕೊಳ್ಳಬೇಕೆಂಬ ಆಶಯ ಅವರದಾಗಿತ್ತು ಎಂದು ವಿವರಿಸಿದರು. ಆದು ಆಗುತ್ತಿಲ್ಲ ಎಂದು ಟೀಕಿಸಿದರು.

ಅಧಿವೇಶನದ ಆರಂಭದ ದಿನಗಳಲ್ಲೇ ಈ ಸಮಸ್ಯೆಗಳನ್ನು ಚರ್ಚಿಸಲು ತೀರ್ಮಾನಿಸಿದ್ದೇವೆ. ಕಬ್ಬಿನ ಬೆಳೆಗಾರರ ಸಮಸ್ಯೆ ಪರಿಹಾರವಾಗಿಲ್ಲ. ಮೆಕ್ಕೆ ಜೋಳ ಬೆಳೆಯುವ ರೈತರು 54 ಲಕ್ಷ ಮೆಟ್ರಿಕ್ ಟನ್ ಉತ್ಪಾದನೆ ಮಾಡಿದ್ದಾರೆ. ಆದರೆ, ಕಾಂಗ್ರೆಸ್ ಸರಕಾರ ಖರೀದಿ ಕೇಂದ್ರವನ್ನೂ ಪ್ರಾರಂಭಿಸಿಲ್ಲ ಎಂದು ಆಕ್ಷೇಪಿಸಿದರು.

ಸಿದ್ದರಾಮಯ್ಯನವರು ಖರೀದಿ ಕೇಂದ್ರದ ಮೂಲಕ 5 ಲಕ್ಷ ಮೆಟ್ರಿಕ್ ಟನ್ ಖರೀದಿಗೆ ಆದೇಶ ಮಾಡಿದ್ದಾರೆ. ಮತ್ತೊಂದು ಕಡೆ ತೊಗರಿ, ಉದ್ದು, ಭತ್ತ ಖರೀದಿ ಕೇಂದ್ರ ಆರಂಭಿಸಿಲ್ಲ. ತುಂಗಭದ್ರಾ ಜಲಾಶಯ ಗೇಟ್ ಅಳವಡಿಕೆ ಕಾರ್ಯವನ್ನು ತಡವಾದರೂ ಎಚ್ಚತ್ತುಕೊಂಡು 32 ಗೇಟ್ ಅಳವಡಿಸುವ ನಿಟ್ಟಿನಲ್ಲಿ ಕಾರ್ಯ ಆರಂಭಿಸಿದಂತಿದೆ ಎಂದು ತಿಳಿಸಿದರು.

9ರಂದು ಸಾವಿರಾರು ರೈತರಿಂದ ಸುವರ್ಣಸೌಧಕ್ಕೆ ಮುತ್ತಿಗೆ

ಇದೇ 9ರಂದು ಸುಮಾರು 15ರಿಂದ 20 ಸಾವಿರ ರೈತರ ಜೊತೆ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಬಿಜೆಪಿ ತೀರ್ಮಾನಿಸಿದೆ ಎಂದು ಬಿ.ವೈ.ವಿಜಯೇಂದ್ರ ಅವರು ವಿವರ ನೀಡಿದರು.

ರಾಜ್ಯದ ರೈತವಿರೋಧಿ ಕಾಂಗ್ರೆಸ್ ಸರಕಾರವನ್ನು ಬಡಿದೆಬ್ಬಿಸಲು ಮುಂದಾಗುತ್ತೇವೆ. ನಂತರ ಸದನದಲ್ಲೂ ಚರ್ಚಿಸುತ್ತೇವೆ ಎಂದು ತಿಳಿಸಿದರು.

ತುಂಗಭದ್ರಾ ಜಲಾಶಯ ಗೇಟ್ ಅಳವಡಿಕೆ ಕಾರ್ಯ ವಿಳಂಬವಾಗಿದ್ದು, ಇದರಿಂದ ರೈತರು ಎರಡನೇ ಬೆಳೆ ಬೆಳೆಯಲು ಸಾಧ್ಯವಿಲ್ಲ; ಆದ್ದರಿಂದ ಅಲ್ಲಿನ ರೈತರಿಗೆ ಎಕರೆಗೆ 25 ಸಾವಿರ ರೂ. ಪರಿಹಾರ ನೀಡಲು ಅವರು ಆಗ್ರಹಿಸಿದರು. ಇವೆಲ್ಲ ವಿಚಾರಗಳನ್ನು ಅಧಿವೇಶನದಲ್ಲಿ ಚರ್ಚಿಸುತ್ತೇವೆ ಎಂದರು.

ಸರಕಾರಕ್ಕೆ ಕ್ಲೀನ್ ಚಿಟ್ ಕೊಟ್ಟುಕೊಳ್ಳುವಿರಾ..?

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಭ್ರಷ್ಟಾಚಾರದ ವಿಚಾರದಲ್ಲಿ ತಮ್ಮ ಸರಕಾರಕ್ಕೆ ಕ್ಲೀನ್ ಚಿಟ್ ನೀಡುವ ಕಾರ್ಯ ಮಾಡಿದ್ದಾರೆ. ಹಿಂದೆ ಬಿಜೆಪಿ ಸರಕಾರ ಇದ್ದಾಗ ಶೇ 40 ಭ್ರಷ್ಟಾಚಾರದ ಆರೋಪ ಮಾಡಿದ್ದರು. ಕಾಂಗ್ರೆಸ್ ಸರಕಾರವೇ ರಚಿಸಿದ ತನಿಖಾ ಆಯೋಗ ಬಳಿಕ ಕ್ಲೀನ್ ಚಿಟ್ ಕೊಟ್ಟಿದೆ. ಅದರ ಮಾಹಿತಿ ಸಿದ್ದರಾಮಯ್ಯನವರಿಗೆ ಇಲ್ಲವೇ? ನೀವು ಭ್ರಷ್ಟಾಚಾರದ ವಿಚಾರದಲ್ಲಿ ಸರಕಾರಕ್ಕೆ ಕ್ಲೀನ್ ಚಿಟ್ ಕೊಟ್ಟುಕೊಳ್ಳುವಿರಾ ಎಂದು ಪ್ರಶ್ನಿಸಿದರು.

ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿಯವರು ಇಡೀ ದೇಶದಲ್ಲಿ ಕರ್ನಾಟಕವು ಭ್ರಷ್ಟಾಚಾರದಲ್ಲಿ ನಂಬರ್ 1 ಸ್ಥಾನದಲ್ಲಿದೆ ಎಂದಿದ್ದರು. ಇದು ಅಭಿವೃದ್ಧಿ ವಿಚಾರದಲ್ಲಿ ಅಲ್ಲ ಎಂದು ಗಮನ ಸೆಳೆದರು. ಹಿರಿಯ ಶಾಸಕ ಬಿ.ಆರ್.ಪಾಟೀಲ್ ಅವರು ಭ್ರಷ್ಟಾಚಾರದ ವಿಚಾರದಲ್ಲಿ ಹೇಳಿದ್ದು ಬಹಿರಂಗವಾಗಿದೆ. ವಾಲ್ಮೀಕಿ ನಿಗಮದ ಹಗರಣವನ್ನು ಸ್ವತಃ ಮುಖ್ಯಮಂತ್ರಿಗಳು ಸದನದಲ್ಲೇ ಒಪ್ಪಿಕೊಂಡಿದ್ದರು ಎಂದು ವಿವರಿಸಿದರು. ಹಗರಣದ ಮೊತ್ತ ಕಡಿಮೆ ಎಂದಿದ್ದರು ಎಂದರು. ಇದು ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರರಿಗೆ ಮರೆತು ಹೋಗಿದೆಯೇ ಎಂದು ಕೇಳಿದರು.

ಭ್ರಷ್ಟಾಚಾರ ಕುರಿತು ಮಾತನಾಡುವ ನೈತಿಕತೆ ಕಾಂಗ್ರೆಸ್ ಸರಕಾರಕ್ಕೆ ಇಲ್ಲ

ಭ್ರಷ್ಟಾಚಾರರಹಿತ ಆಡಳಿತ ಎಂದು ಯಾವ ಬಾಯಲ್ಲಿ ಹೇಳುತ್ತೀರಿ? ಎಂದು ಬಿ.ವೈ.ವಿಜಯೇಂದ್ರ ಅವರು ಕೇಳಿದರು. ಮುಡಾ ಹಗರಣವನ್ನು ರಾಜ್ಯದ ಜನರು ಮರೆತಿಲ್ಲ ಎಂದ ಅವರು, ನೀವ್ಯಾಕೆ ನಿವೇಶನಗಳನ್ನು ಹಿಂತಿರುಗಿಸಿದ್ದೀರಿ ಎಂದು ಪ್ರಶ್ನಿಸಿದರು. ಇದು ಭ್ರಷ್ಟಾಚಾರವಲ್ಲವೇ? ಭ್ರಷ್ಟಾಚಾರ ಕುರಿತು ಮಾತನಾಡುವ ಯೋಗ್ಯತೆ, ನೈತಿಕತೆ ಕಾಂಗ್ರೆಸ್ ಸರಕಾರಕ್ಕೆ ಇಲ್ಲ ಎಂದು ನುಡಿದರು.

ನಿಮ್ಮ ಬಣ್ಣ ಬಯಲಾಗಿದೆ. ಅಭಿವೃದ್ಧಿ ಕೆಲಸ ನಡೆಯುತ್ತಿಲ್ಲ. ಸಂಕಷ್ಟದಲ್ಲಿರುವ ರೈತರ ಮನವಿಗೆ ಸ್ಪಂದಿಸುವ ಕೆಲಸ ನೀವು ಮಾಡಿಲ್ಲ ಎಂದು ಆಕ್ಷೇಪಿಸಿದರು. ಬಿಜೆಪಿ- ಜೆಡಿಎಸ್ ಜೊತೆ ಸೇರಿ ಈ ಸರಕಾರದ ಕಿವಿ ಹಿಂಡುತ್ತೇವೆ ಎಂದು ತಿಳಿಸಿದರು.

ದೇಶದಲ್ಲಿ ನ್ಯಾಯಾಲಯದ ವ್ಯವಸ್ಥೆ ಇದೆ. ಸುಪ್ರೀಂ ಕೋರ್ಟ್ ಇದೆ. ಕೇಂದ್ರದಲ್ಲಿ ಯಾವುದೇ ಸರಕಾರ ಇದ್ದರೂ ಯಾವುದೇ ಪುರಾವೆ ಇಲ್ಲದೇ ಈ ರೀತಿ ತನಿಖೆ ಮಾಡಲು ಸಾಧ್ಯವಿಲ್ಲ ಎಂದರು.

ನ್ಯಾಷನಲ್ ಹೆರಾಲ್ಡ್ ಕೇಸಿನಲ್ಲಿ ಗಾಂಧಿ ಕುಟುಂಬವು ಒಂದು ಸಾರ್ವಜನಿಕ ಟ್ರಸ್ಟನ್ನು ಖಾಸಗಿ ಟ್ರಸ್ಟಾಗಿ ಪರಿವರ್ತಿಸಿದೆ. ಟ್ರಸ್ಟಿಗಳನ್ನು ತೆಗೆದುಹಾಕಿ ಇವರಿಗೆ ಬೇಕಾದವರನ್ನು ಟ್ರಸ್ಟಿಗಳನ್ನಾಗಿ ಸೇರಿಸಿದೆ; ಡಿ.ಕೆ.ಶಿವಕುಮಾರರಿಗೆ ಈ ವಿಷಯದಲ್ಲಿ ನೋಟಿಸ್ ಕೊಟ್ಟು ತನಿಖೆಗೆ ಬನ್ನಿ ಎಂದರೆ, ತೇಜೋವಧೆ ಅಥವಾ ರಾಜಕೀಯ ದ್ವೇಷ ಅನಿಸಿದರೆ ಅದು ಮೂರ್ಖತನದ ಪರಮಾವಧಿ. ಏನಿದೆಯೋ ಅದನ್ನು ಎದುರಿಸಬೇಕಾಗುತ್ತದೆ ಎಂದು ಅವರು ತಿಳಿಸಿದರು.

ರಾಜ್ಯ ಸರಕಾರದ ಹುಚ್ಚಾಟಕ್ಕೆ ಶಿಕ್ಷಣ ಕ್ಷೇತ್ರ ಹಾಳಾಗುತ್ತಿದೆ ಎಂದು ಅವರು ಆಕ್ಷೇಪಿಸಿದರು. ಇದರ ಪರಿಣಾಮವನ್ನು ಮಕ್ಕಳು ಎದುರಿಸಬೇಕಿದೆ. ಇವೆಲ್ಲವನ್ನೂ ನಾವು ಸದನದಲ್ಲಿ ಚರ್ಚೆ ಮಾಡುತ್ತೇವೆ ಎಂದು ತಿಳಿಸಿದರು.

ರಾಜಕೀಯ

ಪ್ರತಿಪಕ್ಷದ ವೈಫಲ್ಯವೇ ಆಡಳಿತ ಪಕ್ಷಕ್ಕೆ ಲಾಭ: ವಿಜಯೇಂದ್ರ ವಿರುದ್ಧ ಯತ್ನಾಳ್ ವಾಗ್ದಾಳಿ

ಪ್ರತಿಪಕ್ಷದ ವೈಫಲ್ಯವೇ ಆಡಳಿತ ಪಕ್ಷಕ್ಕೆ ಲಾಭ: ವಿಜಯೇಂದ್ರ ವಿರುದ್ಧ ಯತ್ನಾಳ್ ವಾಗ್ದಾಳಿ

ಅಬಕಾರಿ ಹಗರಣದ ಬಗ್ಗೆ ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (B.Y. Vijayendra) ಏನೂ ಮಾತನಾಡಿಲ್ಲ. ಹೋರಾಟ ತಾರ್ಕಿಕ ಅಂತ್ಯ ಕಂಡಿಲ್ಲ. ವಿರೋಧ ಪಕ್ಷದ ವೈಫಲ್ಯದ ಲಾಭಆಡಳಿತ ಪಕ್ಷಕ್ಕೆ ಸಿಕ್ಕಿದೆ ಎಂದು ಶಾಸಕ ಬಸನಗೌಡ

[ccc_my_favorite_select_button post_id="119407"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ನೆಲಮಂಗಲ ಹೆದ್ದಾರಿಯ ಜಿಂದಾಲ್ ಮೇಲ್ಸೇತುವೆ ಬಳಿ ಸಂಭವಿಸಿದ ಕೆಎಸ್ ಆರ್ ಟಿಸಿ ಬಸ್​​ (KSRTC Bus) ಮತ್ತು ಇಂಡಿಕ ಕಾರಿನ (Indica Car) ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ (Accident) ದೊಡ್ಡಬಳ್ಳಾಪುರದ ಐವರು ಯುವಕರು

[ccc_my_favorite_select_button post_id="119422"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!