ಸಾವಿರಾರು ರೈತರಿಂದ ಸುವರ್ಣಸೌಧಕ್ಕೆ ಮುತ್ತಿಗೆ; ಬಿ.ವೈ.ವಿಜಯೇಂದ್ರ

Caste Census: B.Y. Vijayendra calls for listing as Hindu

ಬೆಂಗಳೂರು: ಅಧಿವೇಶನದಲ್ಲಿ ರಾಜ್ಯದ ಜ್ವಲಂತ ಸಮಸ್ಯೆಗಳ ಕುರಿತು ಸಮಗ್ರವಾಗಿ ಚರ್ಚಿಸಬೇಕು. ಕಾಂಗ್ರೆಸ್ ಸರಕಾರದ ವೈಫಲ್ಯಗಳನ್ನು ಗಮನ ಸೆಳೆಯಬೇಕು; ವಿಶೇಷವಾಗಿ ಉತ್ತರ ಕರ್ನಾಟಕದ ಸಮಸ್ಯೆ, ರೈತರ ಸಂಕಷ್ಟದ ಕುರಿತು, ನೀರಾವರಿ ಸಮಸ್ಯೆ ಬಗ್ಗೆ ಚರ್ಚಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (B.Y. Vijayendra) ಆಗ್ರಹಿಸಿದ್ದಾರೆ.

ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬೆಳಗಾವಿಯ ಚಳಿಗಾಲದ ಅಧಿವೇಶನದ ಕುರಿತು ನಾನು, ವಿಪಕ್ಷ ನಾಯಕರು, ಬಿಜೆಪಿ- ಜೆಡಿಎಸ್ ಮುಖಂಡರು ಒಟ್ಟಿಗೆ ಕೂತು ಸವಿಸ್ತಾರವಾಗಿ ಚರ್ಚಿಸಿದ್ದೇವೆ ಎಂದರು.

ಪ್ರತಿ ಬಾರಿ ಬೆಳಗಾವಿ ಅಧಿವೇಶನದಲ್ಲಿ ನಾಮಕಾವಾಸ್ತೆ ಒಂದು ದಿನ ಚರ್ಚೆ ನಡೆಯುತ್ತಿದೆ. ಹಿಂದೆ ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ಬೆಳಗಾವಿಯಲ್ಲಿ ಸುವರ್ಣ ಸೌಧ ನಿರ್ಮಿಸಿದ್ದು, ಅಲ್ಲಿನ ಸಮಸ್ಯೆಗಳಿಗೆ ಉತ್ತರ ಕಂಡುಕೊಳ್ಳಬೇಕೆಂಬ ಆಶಯ ಅವರದಾಗಿತ್ತು ಎಂದು ವಿವರಿಸಿದರು. ಆದು ಆಗುತ್ತಿಲ್ಲ ಎಂದು ಟೀಕಿಸಿದರು.

ಅಧಿವೇಶನದ ಆರಂಭದ ದಿನಗಳಲ್ಲೇ ಈ ಸಮಸ್ಯೆಗಳನ್ನು ಚರ್ಚಿಸಲು ತೀರ್ಮಾನಿಸಿದ್ದೇವೆ. ಕಬ್ಬಿನ ಬೆಳೆಗಾರರ ಸಮಸ್ಯೆ ಪರಿಹಾರವಾಗಿಲ್ಲ. ಮೆಕ್ಕೆ ಜೋಳ ಬೆಳೆಯುವ ರೈತರು 54 ಲಕ್ಷ ಮೆಟ್ರಿಕ್ ಟನ್ ಉತ್ಪಾದನೆ ಮಾಡಿದ್ದಾರೆ. ಆದರೆ, ಕಾಂಗ್ರೆಸ್ ಸರಕಾರ ಖರೀದಿ ಕೇಂದ್ರವನ್ನೂ ಪ್ರಾರಂಭಿಸಿಲ್ಲ ಎಂದು ಆಕ್ಷೇಪಿಸಿದರು.

ಸಿದ್ದರಾಮಯ್ಯನವರು ಖರೀದಿ ಕೇಂದ್ರದ ಮೂಲಕ 5 ಲಕ್ಷ ಮೆಟ್ರಿಕ್ ಟನ್ ಖರೀದಿಗೆ ಆದೇಶ ಮಾಡಿದ್ದಾರೆ. ಮತ್ತೊಂದು ಕಡೆ ತೊಗರಿ, ಉದ್ದು, ಭತ್ತ ಖರೀದಿ ಕೇಂದ್ರ ಆರಂಭಿಸಿಲ್ಲ. ತುಂಗಭದ್ರಾ ಜಲಾಶಯ ಗೇಟ್ ಅಳವಡಿಕೆ ಕಾರ್ಯವನ್ನು ತಡವಾದರೂ ಎಚ್ಚತ್ತುಕೊಂಡು 32 ಗೇಟ್ ಅಳವಡಿಸುವ ನಿಟ್ಟಿನಲ್ಲಿ ಕಾರ್ಯ ಆರಂಭಿಸಿದಂತಿದೆ ಎಂದು ತಿಳಿಸಿದರು.

9ರಂದು ಸಾವಿರಾರು ರೈತರಿಂದ ಸುವರ್ಣಸೌಧಕ್ಕೆ ಮುತ್ತಿಗೆ

ಇದೇ 9ರಂದು ಸುಮಾರು 15ರಿಂದ 20 ಸಾವಿರ ರೈತರ ಜೊತೆ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಬಿಜೆಪಿ ತೀರ್ಮಾನಿಸಿದೆ ಎಂದು ಬಿ.ವೈ.ವಿಜಯೇಂದ್ರ ಅವರು ವಿವರ ನೀಡಿದರು.

ರಾಜ್ಯದ ರೈತವಿರೋಧಿ ಕಾಂಗ್ರೆಸ್ ಸರಕಾರವನ್ನು ಬಡಿದೆಬ್ಬಿಸಲು ಮುಂದಾಗುತ್ತೇವೆ. ನಂತರ ಸದನದಲ್ಲೂ ಚರ್ಚಿಸುತ್ತೇವೆ ಎಂದು ತಿಳಿಸಿದರು.

ತುಂಗಭದ್ರಾ ಜಲಾಶಯ ಗೇಟ್ ಅಳವಡಿಕೆ ಕಾರ್ಯ ವಿಳಂಬವಾಗಿದ್ದು, ಇದರಿಂದ ರೈತರು ಎರಡನೇ ಬೆಳೆ ಬೆಳೆಯಲು ಸಾಧ್ಯವಿಲ್ಲ; ಆದ್ದರಿಂದ ಅಲ್ಲಿನ ರೈತರಿಗೆ ಎಕರೆಗೆ 25 ಸಾವಿರ ರೂ. ಪರಿಹಾರ ನೀಡಲು ಅವರು ಆಗ್ರಹಿಸಿದರು. ಇವೆಲ್ಲ ವಿಚಾರಗಳನ್ನು ಅಧಿವೇಶನದಲ್ಲಿ ಚರ್ಚಿಸುತ್ತೇವೆ ಎಂದರು.

ಸರಕಾರಕ್ಕೆ ಕ್ಲೀನ್ ಚಿಟ್ ಕೊಟ್ಟುಕೊಳ್ಳುವಿರಾ..?

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಭ್ರಷ್ಟಾಚಾರದ ವಿಚಾರದಲ್ಲಿ ತಮ್ಮ ಸರಕಾರಕ್ಕೆ ಕ್ಲೀನ್ ಚಿಟ್ ನೀಡುವ ಕಾರ್ಯ ಮಾಡಿದ್ದಾರೆ. ಹಿಂದೆ ಬಿಜೆಪಿ ಸರಕಾರ ಇದ್ದಾಗ ಶೇ 40 ಭ್ರಷ್ಟಾಚಾರದ ಆರೋಪ ಮಾಡಿದ್ದರು. ಕಾಂಗ್ರೆಸ್ ಸರಕಾರವೇ ರಚಿಸಿದ ತನಿಖಾ ಆಯೋಗ ಬಳಿಕ ಕ್ಲೀನ್ ಚಿಟ್ ಕೊಟ್ಟಿದೆ. ಅದರ ಮಾಹಿತಿ ಸಿದ್ದರಾಮಯ್ಯನವರಿಗೆ ಇಲ್ಲವೇ? ನೀವು ಭ್ರಷ್ಟಾಚಾರದ ವಿಚಾರದಲ್ಲಿ ಸರಕಾರಕ್ಕೆ ಕ್ಲೀನ್ ಚಿಟ್ ಕೊಟ್ಟುಕೊಳ್ಳುವಿರಾ ಎಂದು ಪ್ರಶ್ನಿಸಿದರು.

ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿಯವರು ಇಡೀ ದೇಶದಲ್ಲಿ ಕರ್ನಾಟಕವು ಭ್ರಷ್ಟಾಚಾರದಲ್ಲಿ ನಂಬರ್ 1 ಸ್ಥಾನದಲ್ಲಿದೆ ಎಂದಿದ್ದರು. ಇದು ಅಭಿವೃದ್ಧಿ ವಿಚಾರದಲ್ಲಿ ಅಲ್ಲ ಎಂದು ಗಮನ ಸೆಳೆದರು. ಹಿರಿಯ ಶಾಸಕ ಬಿ.ಆರ್.ಪಾಟೀಲ್ ಅವರು ಭ್ರಷ್ಟಾಚಾರದ ವಿಚಾರದಲ್ಲಿ ಹೇಳಿದ್ದು ಬಹಿರಂಗವಾಗಿದೆ. ವಾಲ್ಮೀಕಿ ನಿಗಮದ ಹಗರಣವನ್ನು ಸ್ವತಃ ಮುಖ್ಯಮಂತ್ರಿಗಳು ಸದನದಲ್ಲೇ ಒಪ್ಪಿಕೊಂಡಿದ್ದರು ಎಂದು ವಿವರಿಸಿದರು. ಹಗರಣದ ಮೊತ್ತ ಕಡಿಮೆ ಎಂದಿದ್ದರು ಎಂದರು. ಇದು ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರರಿಗೆ ಮರೆತು ಹೋಗಿದೆಯೇ ಎಂದು ಕೇಳಿದರು.

ಭ್ರಷ್ಟಾಚಾರ ಕುರಿತು ಮಾತನಾಡುವ ನೈತಿಕತೆ ಕಾಂಗ್ರೆಸ್ ಸರಕಾರಕ್ಕೆ ಇಲ್ಲ

ಭ್ರಷ್ಟಾಚಾರರಹಿತ ಆಡಳಿತ ಎಂದು ಯಾವ ಬಾಯಲ್ಲಿ ಹೇಳುತ್ತೀರಿ? ಎಂದು ಬಿ.ವೈ.ವಿಜಯೇಂದ್ರ ಅವರು ಕೇಳಿದರು. ಮುಡಾ ಹಗರಣವನ್ನು ರಾಜ್ಯದ ಜನರು ಮರೆತಿಲ್ಲ ಎಂದ ಅವರು, ನೀವ್ಯಾಕೆ ನಿವೇಶನಗಳನ್ನು ಹಿಂತಿರುಗಿಸಿದ್ದೀರಿ ಎಂದು ಪ್ರಶ್ನಿಸಿದರು. ಇದು ಭ್ರಷ್ಟಾಚಾರವಲ್ಲವೇ? ಭ್ರಷ್ಟಾಚಾರ ಕುರಿತು ಮಾತನಾಡುವ ಯೋಗ್ಯತೆ, ನೈತಿಕತೆ ಕಾಂಗ್ರೆಸ್ ಸರಕಾರಕ್ಕೆ ಇಲ್ಲ ಎಂದು ನುಡಿದರು.

ನಿಮ್ಮ ಬಣ್ಣ ಬಯಲಾಗಿದೆ. ಅಭಿವೃದ್ಧಿ ಕೆಲಸ ನಡೆಯುತ್ತಿಲ್ಲ. ಸಂಕಷ್ಟದಲ್ಲಿರುವ ರೈತರ ಮನವಿಗೆ ಸ್ಪಂದಿಸುವ ಕೆಲಸ ನೀವು ಮಾಡಿಲ್ಲ ಎಂದು ಆಕ್ಷೇಪಿಸಿದರು. ಬಿಜೆಪಿ- ಜೆಡಿಎಸ್ ಜೊತೆ ಸೇರಿ ಈ ಸರಕಾರದ ಕಿವಿ ಹಿಂಡುತ್ತೇವೆ ಎಂದು ತಿಳಿಸಿದರು.

ದೇಶದಲ್ಲಿ ನ್ಯಾಯಾಲಯದ ವ್ಯವಸ್ಥೆ ಇದೆ. ಸುಪ್ರೀಂ ಕೋರ್ಟ್ ಇದೆ. ಕೇಂದ್ರದಲ್ಲಿ ಯಾವುದೇ ಸರಕಾರ ಇದ್ದರೂ ಯಾವುದೇ ಪುರಾವೆ ಇಲ್ಲದೇ ಈ ರೀತಿ ತನಿಖೆ ಮಾಡಲು ಸಾಧ್ಯವಿಲ್ಲ ಎಂದರು.

ನ್ಯಾಷನಲ್ ಹೆರಾಲ್ಡ್ ಕೇಸಿನಲ್ಲಿ ಗಾಂಧಿ ಕುಟುಂಬವು ಒಂದು ಸಾರ್ವಜನಿಕ ಟ್ರಸ್ಟನ್ನು ಖಾಸಗಿ ಟ್ರಸ್ಟಾಗಿ ಪರಿವರ್ತಿಸಿದೆ. ಟ್ರಸ್ಟಿಗಳನ್ನು ತೆಗೆದುಹಾಕಿ ಇವರಿಗೆ ಬೇಕಾದವರನ್ನು ಟ್ರಸ್ಟಿಗಳನ್ನಾಗಿ ಸೇರಿಸಿದೆ; ಡಿ.ಕೆ.ಶಿವಕುಮಾರರಿಗೆ ಈ ವಿಷಯದಲ್ಲಿ ನೋಟಿಸ್ ಕೊಟ್ಟು ತನಿಖೆಗೆ ಬನ್ನಿ ಎಂದರೆ, ತೇಜೋವಧೆ ಅಥವಾ ರಾಜಕೀಯ ದ್ವೇಷ ಅನಿಸಿದರೆ ಅದು ಮೂರ್ಖತನದ ಪರಮಾವಧಿ. ಏನಿದೆಯೋ ಅದನ್ನು ಎದುರಿಸಬೇಕಾಗುತ್ತದೆ ಎಂದು ಅವರು ತಿಳಿಸಿದರು.

ರಾಜ್ಯ ಸರಕಾರದ ಹುಚ್ಚಾಟಕ್ಕೆ ಶಿಕ್ಷಣ ಕ್ಷೇತ್ರ ಹಾಳಾಗುತ್ತಿದೆ ಎಂದು ಅವರು ಆಕ್ಷೇಪಿಸಿದರು. ಇದರ ಪರಿಣಾಮವನ್ನು ಮಕ್ಕಳು ಎದುರಿಸಬೇಕಿದೆ. ಇವೆಲ್ಲವನ್ನೂ ನಾವು ಸದನದಲ್ಲಿ ಚರ್ಚೆ ಮಾಡುತ್ತೇವೆ ಎಂದು ತಿಳಿಸಿದರು.

ರಾಜಕೀಯ

ಕ್ಷೇತ್ರ ಮರುವಿಂಗಡಣೆ ಸಾಮಾನ್ಯ ಪ್ರಕ್ರಿಯೆ: ಆರ್‌.ಅಶೋಕ

ಕ್ಷೇತ್ರ ಮರುವಿಂಗಡಣೆ ಸಾಮಾನ್ಯ ಪ್ರಕ್ರಿಯೆ: ಆರ್‌.ಅಶೋಕ

ದಕ್ಷಿಣ ಭಾರತದ ರಾಜ್ಯಗಳಲ್ಲಿ ಒಟ್ಟು 129 ಸಂಸತ್‌ ಸ್ಥಾನಗಳಿದ್ದು, ಅದನ್ನು 195 ಕ್ಕೆ ಏರಿಸುವ ಅವಕಾಶವಿತ್ತು. ಕ್ಷೇತ್ರ ಮರುವಿಂಗಡಣೆ ಬಗ್ಗೆ ಭಿನ್ನಾಭಿಪ್ರಾಯವಿದ್ದರೆ ಅದನ್ನು ಚರ್ಚೆ ಮಾಡಬಹುದಿತ್ತು. ಈ ಹಿಂದೆಯೂ ಮರುವಿಂಗಡಣೆ ಪ್ರಕ್ರಿಯೆ ನಡೆದಿತ್ತು. ಆಗ

[ccc_my_favorite_select_button post_id="121098"]
5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ (Monsoon deficit) ನಿರೀಕ್ಷಿಸಲಾಗಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಸೂಚಿಸಿದರು.

[ccc_my_favorite_select_button post_id="121032"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!