ದೊಡ್ಡಬಳ್ಳಾಪುರಕ್ಕೆ ಮತ್ತೊಂದು ಬಿಬಿಎಂಪಿ ತ್ಯಾಜ್ಯ ಘಟಕದ ಕಂಟಕ..? ಬೆಳಗಾವಿ ವಿಧಾನಸಭೆ ಅಧಿವೇಶನದಲ್ಲಿ ಆತಂಕಕಾರಿ ಮಾಹಿತಿ

Another BBMP waste plant thorn in Doddaballapura..?

ಕೆ.ಎಂ.ಸಂತೋಷ್, ಆರೂಢಿ (ದೊಡ್ಡಬಳ್ಳಾಪುರ): ಬಿಬಿಎಂಪಿ (BBMP) ತ್ಯಾಜವಿಲೇವಾರಿ ಘಟಕದಿಂದ ತಾಲೂಕಿನ ಜನತೆ ನೆಮ್ಮದಿ ಕಳೆದುಕೊಂಡಿರುವ ಬೆನ್ನಲ್ಲೇ ಮತ್ತೆ ಹೆಚ್ಚುವರಿ ಜಮೀನಿನಲ್ಲಿ ಟೆರಾಫಾರ್ಮ ತ್ಯಾಜ್ಯ ವಿಲೇವಾರಿ ಘಟಕ ಆರಂಭಕ್ಕೆ ಸ್ಥಳ ನಿಗದಿ ಪಡಿಸಲಾಗಿರುವ ಮಾಹಿತಿ ಇಂದು ತಿಳಿದುಬಂದಿದೆ.

ಬೆಳಗಾವಿ ವಿಧಾನಸಭೆ ಕಲಾಪದ ಪ್ರಶ್ನೋತ್ತರ ಕಲಾಪದ ವೇಳೆ ದೊಡ್ಡಬಳ್ಳಾಪುರ ವ್ಯಾಪ್ತಿಯಲ್ಲಿ ಈ ಹಿಂದೆ ಮುಚ್ಚಿರುವ ಕಸ ಸಂಗ್ರಹಗಾರವನ್ನ ಸ್ಥಳಾಂತರಿಸಬೇಕು. ಹೊಸತನ್ನು ಬೇಕಾದಲ್ಲಿ ಆರಂಭಿಸಿ, ಆದರೆ‌ ಟೆರಾಫಾರ್ಮ ತ್ಯಾಜ್ಯ ವಿಲೇವಾರಿ ಘಟಕ ಮತ್ತೆ ಆರಂಭ ಮಾಡಬೇಡಿ ಎಂದು ಶಾಸಕ ಧೀರಜ್‌ ಮುನಿರಾಜು ಅವರ ಮನವಿಗೆ ಉತ್ತರಿಸಿದ ಡಿಸಿಎಂ ಅವರು ಉತ್ತರ ನೀಡಿದರು.

“ದೊಡ್ಡಬಳ್ಳಾಪುರ ತಾಲ್ಲೂಕಿನ ದೊಡ್ಡಬೆಳವಂಗಲ ಹೋಬಳಿ, ಗುಂಡ್ಲಹಳ್ಳಿಯಲ್ಲಿ ಒಟ್ಟು 134.10 ಎಕರೆಯಲ್ಲಿ ಮತ್ತೆ ಟೆರ್ರಾಫಾರ್ಮ ಘಟಕವನ್ನು ಮತ್ತೆ ಆರಂಭಿಸುವುದು ಹಾಗೂ ಬೆಂಗಳೂರು ದಕ್ಷಿಣ ತಾಲ್ಲೂಕಿನ ಉತ್ತರಹಳ್ಳಿ ಹೋಬಳಿಯ ಗೊಲ್ಲಹಳ್ಳಿಯಲ್ಲಿ 84.14 ಎಕರೆ ಹಾಗೂ 31.14 ಎಕರೆ ಪ್ರದೇಶವನ್ನು ನಿಗದಿಪಡಿಸಲಾಗಿದೆ” ಎಂದು ಹೇಳಿದ್ದಾರೆ.

ಆ ಮೂಲಕ ಮತ್ತೊಂದು ಬಿಬಿಎಂಪಿ ತ್ಯಾಜ್ಯ ಘಟಕದ ಕಂಟಕ ದೊಡ್ಡಬಳ್ಳಾಪುರ ಜನತೆಗೆ ಎದುರಾಗಿದೆ.

ಕಸ ವಿಲೇವಾರಿಯಿಂದ ತೊಂದರೆಯಿಲ್ಲ; ರೈತರ ಮನವೊಲಿಸಿ

ಕಸ ವಿಲೇವಾರಿ ಘಟಕ ಮತ್ತೆ ತೆರೆದರೆ ಜನರ ವಿರೋಧಕ್ಕೆ ಕಾರಣವಾಗುತ್ತದೆ ಎಂದು ಶಾಸಕ ಧೀರಜ್‌ ಮುನಿರಾಜು ಅವರು ಹೇಳಿದಾಗ, ಈಗ ತಂತ್ರಜ್ಞಾನ ಮುಂದುವರೆದಿದೆ. ಜನರಿಗೆ ಮನವರಿಕೆ ಮಾಡಿ ನಾನು ಬರುತ್ತೇನೆ. ಈ ಘಟಕಗಳನ್ನು ನಗರದ ನಾಲ್ಕೈದು ಕಡೆ ಮಾಡುತ್ತೇವೆ.

ಇದರಿಂದ ಯಾರಿಗೂ ತೊಂದರೆಯಾಗುವುದಿಲ್ಲ. ಇದೇ ರೀತಿಯ ಘಟಕವನ್ನು ನಾನು ಕನಕಪುರದಲ್ಲಿಯೂ ತೆರೆಯಲು ಹೊರಟಿದ್ದೇನೆ. ಬಿಡದಿಯಲ್ಲಿಯೂ ಮಾಡುತ್ತಿದ್ದೇವೆ, ನಗರದ ಒಳಭಾಗದಲ್ಲಿ, ದಾಸರಹಳ್ಳಿ, ರಾಮಲಿಂಗಾರೆಡ್ಡಿ ಅವರ ಕ್ಷೇತ್ರದಲ್ಲಿಯೂ ಸಣ್ಣ ಪ್ರಮಾಣದಲ್ಲಿ ಕೆಲಸ ಮಾಡಲಾಗುತ್ತಿದೆ ಎಂದರು.

ಬ್ಲಾಕ್‌ ಸೋಲ್ಜರ್‌ ಫ್ಲೈ ಬಳಸಿ ಕಸದಿಂದ ಗೊಬ್ಬರ

ಬೆಂಗಳೂರಿನ ಸುತ್ತಲಿನ ಪ್ರದೇಶದ ಕಸ ಸೇರಿ 2,500 ಟನ್‌ ಸೇರಿ ನಗರದಲ್ಲಿ 8 ಸಾವಿರ ಟನ್‌ ಕಸ ಉತ್ಪಾದನೆಯಾಗುತ್ತದೆ ಇದನ್ನು ಎಲ್ಲಿ ಹಾಕುವುದು ಎನ್ನುವುದೇ ದೊಡ್ಡ ಪ್ರಶ್ನೆಯಾಗಿದೆ. ಮಂಗಳೂರಿನಲ್ಲಿ ರೇಷ್ಮೆ ಹುಳ ಮಾದರಿಯ ಬ್ಲಾಕ್‌ ಸೋಲ್ಜರ್‌ ಫ್ಲೈ ಬಳಸಿಕೊಂಡು ಕಸವನ್ನು ಗೊಬ್ಬರ ಮಾಡಲಾಗಿದೆ.

ಇದು ಕಸವನ್ನು ತಿಂದು ಗೊಬ್ಬರ ಮಾಡುತ್ತದೆ. ಈ ಪ್ರಯೋಗವನ್ನು ಬೆಂಗಳೂರಿನಲ್ಲೂ ಪ್ರಯೋಗಿಸಲಾಗಿವುದು. ಇದರ ಬಗ್ಗೆ ಪ್ರಧಾನಿ ಮೋದಿಯವರು ಸಹ ಎಕ್ಸ್‌ ಮಾಡಿದ್ದರು ಎಂದರು.

ಕಸದ ಮಾಫಿಯಾ ನಿಯಂತ್ರಣಕ್ಕೆ ಕಾನೂನಿನಲ್ಲಿರುವ ಅವಕಾಶಗಳನ್ನು ನೋಡಲಾಗುವುದು

ಕಸದ ಮಾಫಿಯಾವನ್ನು ಬಗ್ಗುಬಡಿಯಲು ಹೊಸ ಕಾಯ್ದೆ ತನ್ನಿ ವಿರೋಧ ಪಕ್ಷವು ಬೆಂಬಲ ನೀಡುತ್ತದೆ ಎಂದು ಅಶೋಕ್‌ ಅವರು ಹೇಳಿದಾಗ ಅದಕ್ಕೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಅವರು, ಕಸದ ಮಾಫಿಯಾ ಮಟ್ಟ ಹಾಕಲು ಕಾನೂನಿನಲ್ಲಿ ಏನೆಲ್ಲಾ ಅವಕಾಶವಿದೆ ಎಂಬುದನ್ನು ನೋಡುತ್ತೇನೆ. ಇದರ ಬಗ್ಗೆ ಕ್ರಮ ತಗೆದುಕೊಳ್ಳಲಾಗುವುದು.

ಬಿಜೆಪಿ ಸಮಯದಲ್ಲಿ 89 ಪ್ಯಾಕೇಜ್‌ ಗಳನ್ನು ಕಸ ವಿಲೇವಾರಿಗೆ ತರಲಾಗಿತ್ತು. ಇದನ್ನು ಜಾರಿಗೆ ತರಲು ಆಗಲೇ ಇಲ್ಲ. ನ್ಯಾಯಾಲಯಕ್ಕೆ ತೆರಳಿದ್ದರು. ಈಗ ಏನೇನೋ ಮಾಡಿ 33 ಪ್ಯಾಕೇಜ್‌ ಗಳನ್ನು ತರಲಾಗಿದೆ ಎಂದರು.

ಬೆಂಗಳೂರು ನಗರದ ಎರಡು ಕಡೆ ವೈಜ್ಞಾನಿಕ ಕಸ ವಿಲೇವಾರಿ ಘಟಕಗಳು

“ಜಿಬಿಎ ವ್ಯಾಪ್ತಿಯಲ್ಲಿ ಸಂಗ್ರಹವಾಗುವ ಕಸವನ್ನು ಸಂಸ್ಕರಿಸಲು ನಗರದ ಉತ್ತರ ಹಾಗೂ ದಕ್ಷಿಣ ದಿಕ್ಕುಗಳಲ್ಲಿ ಎರಡು ಘಟಕಗಳನ್ನು ಸ್ಥಾಪಿಸಲಾಗುವುದು. ಹೊಸ ತಂತ್ರಜ್ಞಾನದ ಮೂಲಕ ವೈಜ್ಞಾನಿಕವಾಗಿ ಕಸ ವಿಲೇವಾರಿ ಮಾಡಲಾಗುವುದು” ಎಂದು ತಿಳಿಸಿದರು.

“ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ಸುಮಾರು 26 ಎಕರೆ ಪ್ರದೇಶದಲ್ಲಿ ವೈಜ್ಞಾನಿಕ ಕಸ ವಿಲೇವಾರಿ ಘಟಕವನ್ನು ಪ್ರಾರಂಭ ಮಾಡಲಾಗಿದೆ. ನಗರದ ನಾಲ್ಕು ಭಾಗದಲ್ಲೂ ವೈಜ್ಞಾನಿಕ ಕಸ ವಿಲೇವಾರಿ ಮಾಡಬೇಕು ಎಂದು ಪ್ರಯತ್ನ ಮಾಡುತ್ತಿರುವೆ. ಕಸದಿಂದ ಗ್ಯಾಸ್‌, ಬಯೋ ಗ್ಯಾಸ್‌ ಉತ್ಪಾದನೆ ಬಗ್ಗೆ ಹೆಚ್ಚು ಗಮನ ಹರಿಸುತ್ತಿದ್ದೇವೆ” ಎಂದರು.

ರಾಜಕೀಯ

ಮೋದಿ, ಶಾ ಶ್ರಮದಿಂದ 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ: ಬಿ.ವೈ. ವಿಜಯೇಂದ್ರ

ಮೋದಿ, ಶಾ ಶ್ರಮದಿಂದ 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ: ಬಿ.ವೈ. ವಿಜಯೇಂದ್ರ

ಬಿಜೆಪಿಯ (BJP) ಗತವೈಭವದ ದಿನಗಳು ದಾವಣಗೆರೆಯಲ್ಲಿ ಮರುಕಳಿಸಲಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (B.Y. Vijayendra) ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

[ccc_my_favorite_select_button post_id="121758"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ಜಿಂಕೆಬಚ್ಚಹಳ್ಳಿ ಸಮೀಪ ಶನಿವಾರ ಬೆಂಕಿಗೆ ಆಹುತಿಯಾಗಿದ್ದ ಕಾರಿನಲ್ಲಿ (Car) ಅನುಮಾನಸ್ಪದ ರೀತಿಯಲ್ಲಿ ಸುಟ್ಟು ಹೋಗಿದ್ದ ಮಹಿಳೆಯ (Woman) ಅಸ್ಥಿಪಂಜರ ಪತ್ತೆಯಾಗಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ.

[ccc_my_favorite_select_button post_id="121693"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]