Another BBMP waste plant thorn in Doddaballapura..?

ದೊಡ್ಡಬಳ್ಳಾಪುರಕ್ಕೆ ಮತ್ತೊಂದು ಬಿಬಿಎಂಪಿ ತ್ಯಾಜ್ಯ ಘಟಕದ ಕಂಟಕ..? ಬೆಳಗಾವಿ ವಿಧಾನಸಭೆ ಅಧಿವೇಶನದಲ್ಲಿ ಆತಂಕಕಾರಿ ಮಾಹಿತಿ

ಕೆ.ಎಂ.ಸಂತೋಷ್, ಆರೂಢಿ (ದೊಡ್ಡಬಳ್ಳಾಪುರ): ಬಿಬಿಎಂಪಿ (BBMP) ತ್ಯಾಜವಿಲೇವಾರಿ ಘಟಕದಿಂದ ತಾಲೂಕಿನ ಜನತೆ ನೆಮ್ಮದಿ ಕಳೆದುಕೊಂಡಿರುವ ಬೆನ್ನಲ್ಲೇ ಮತ್ತೆ ಹೆಚ್ಚುವರಿ ಜಮೀನಿನಲ್ಲಿ ಟೆರಾಫಾರ್ಮ ತ್ಯಾಜ್ಯ ವಿಲೇವಾರಿ ಘಟಕ ಆರಂಭಕ್ಕೆ ಸ್ಥಳ ನಿಗದಿ ಪಡಿಸಲಾಗಿರುವ ಮಾಹಿತಿ ಇಂದು ತಿಳಿದುಬಂದಿದೆ.

ಬೆಳಗಾವಿ ವಿಧಾನಸಭೆ ಕಲಾಪದ ಪ್ರಶ್ನೋತ್ತರ ಕಲಾಪದ ವೇಳೆ ದೊಡ್ಡಬಳ್ಳಾಪುರ ವ್ಯಾಪ್ತಿಯಲ್ಲಿ ಈ ಹಿಂದೆ ಮುಚ್ಚಿರುವ ಕಸ ಸಂಗ್ರಹಗಾರವನ್ನ ಸ್ಥಳಾಂತರಿಸಬೇಕು. ಹೊಸತನ್ನು ಬೇಕಾದಲ್ಲಿ ಆರಂಭಿಸಿ, ಆದರೆ‌ ಟೆರಾಫಾರ್ಮ ತ್ಯಾಜ್ಯ ವಿಲೇವಾರಿ ಘಟಕ ಮತ್ತೆ ಆರಂಭ ಮಾಡಬೇಡಿ ಎಂದು ಶಾಸಕ ಧೀರಜ್‌ ಮುನಿರಾಜು ಅವರ ಮನವಿಗೆ ಉತ್ತರಿಸಿದ ಡಿಸಿಎಂ ಅವರು ಉತ್ತರ ನೀಡಿದರು.

“ದೊಡ್ಡಬಳ್ಳಾಪುರ ತಾಲ್ಲೂಕಿನ ದೊಡ್ಡಬೆಳವಂಗಲ ಹೋಬಳಿ, ಗುಂಡ್ಲಹಳ್ಳಿಯಲ್ಲಿ ಒಟ್ಟು 134.10 ಎಕರೆಯಲ್ಲಿ ಮತ್ತೆ ಟೆರ್ರಾಫಾರ್ಮ ಘಟಕವನ್ನು ಮತ್ತೆ ಆರಂಭಿಸುವುದು ಹಾಗೂ ಬೆಂಗಳೂರು ದಕ್ಷಿಣ ತಾಲ್ಲೂಕಿನ ಉತ್ತರಹಳ್ಳಿ ಹೋಬಳಿಯ ಗೊಲ್ಲಹಳ್ಳಿಯಲ್ಲಿ 84.14 ಎಕರೆ ಹಾಗೂ 31.14 ಎಕರೆ ಪ್ರದೇಶವನ್ನು ನಿಗದಿಪಡಿಸಲಾಗಿದೆ” ಎಂದು ಹೇಳಿದ್ದಾರೆ.

ಆ ಮೂಲಕ ಮತ್ತೊಂದು ಬಿಬಿಎಂಪಿ ತ್ಯಾಜ್ಯ ಘಟಕದ ಕಂಟಕ ದೊಡ್ಡಬಳ್ಳಾಪುರ ಜನತೆಗೆ ಎದುರಾಗಿದೆ.

ಕಸ ವಿಲೇವಾರಿಯಿಂದ ತೊಂದರೆಯಿಲ್ಲ; ರೈತರ ಮನವೊಲಿಸಿ

ಕಸ ವಿಲೇವಾರಿ ಘಟಕ ಮತ್ತೆ ತೆರೆದರೆ ಜನರ ವಿರೋಧಕ್ಕೆ ಕಾರಣವಾಗುತ್ತದೆ ಎಂದು ಶಾಸಕ ಧೀರಜ್‌ ಮುನಿರಾಜು ಅವರು ಹೇಳಿದಾಗ, ಈಗ ತಂತ್ರಜ್ಞಾನ ಮುಂದುವರೆದಿದೆ. ಜನರಿಗೆ ಮನವರಿಕೆ ಮಾಡಿ ನಾನು ಬರುತ್ತೇನೆ. ಈ ಘಟಕಗಳನ್ನು ನಗರದ ನಾಲ್ಕೈದು ಕಡೆ ಮಾಡುತ್ತೇವೆ.

ಇದರಿಂದ ಯಾರಿಗೂ ತೊಂದರೆಯಾಗುವುದಿಲ್ಲ. ಇದೇ ರೀತಿಯ ಘಟಕವನ್ನು ನಾನು ಕನಕಪುರದಲ್ಲಿಯೂ ತೆರೆಯಲು ಹೊರಟಿದ್ದೇನೆ. ಬಿಡದಿಯಲ್ಲಿಯೂ ಮಾಡುತ್ತಿದ್ದೇವೆ, ನಗರದ ಒಳಭಾಗದಲ್ಲಿ, ದಾಸರಹಳ್ಳಿ, ರಾಮಲಿಂಗಾರೆಡ್ಡಿ ಅವರ ಕ್ಷೇತ್ರದಲ್ಲಿಯೂ ಸಣ್ಣ ಪ್ರಮಾಣದಲ್ಲಿ ಕೆಲಸ ಮಾಡಲಾಗುತ್ತಿದೆ ಎಂದರು.

ಬ್ಲಾಕ್‌ ಸೋಲ್ಜರ್‌ ಫ್ಲೈ ಬಳಸಿ ಕಸದಿಂದ ಗೊಬ್ಬರ

ಬೆಂಗಳೂರಿನ ಸುತ್ತಲಿನ ಪ್ರದೇಶದ ಕಸ ಸೇರಿ 2,500 ಟನ್‌ ಸೇರಿ ನಗರದಲ್ಲಿ 8 ಸಾವಿರ ಟನ್‌ ಕಸ ಉತ್ಪಾದನೆಯಾಗುತ್ತದೆ ಇದನ್ನು ಎಲ್ಲಿ ಹಾಕುವುದು ಎನ್ನುವುದೇ ದೊಡ್ಡ ಪ್ರಶ್ನೆಯಾಗಿದೆ. ಮಂಗಳೂರಿನಲ್ಲಿ ರೇಷ್ಮೆ ಹುಳ ಮಾದರಿಯ ಬ್ಲಾಕ್‌ ಸೋಲ್ಜರ್‌ ಫ್ಲೈ ಬಳಸಿಕೊಂಡು ಕಸವನ್ನು ಗೊಬ್ಬರ ಮಾಡಲಾಗಿದೆ.

ಇದು ಕಸವನ್ನು ತಿಂದು ಗೊಬ್ಬರ ಮಾಡುತ್ತದೆ. ಈ ಪ್ರಯೋಗವನ್ನು ಬೆಂಗಳೂರಿನಲ್ಲೂ ಪ್ರಯೋಗಿಸಲಾಗಿವುದು. ಇದರ ಬಗ್ಗೆ ಪ್ರಧಾನಿ ಮೋದಿಯವರು ಸಹ ಎಕ್ಸ್‌ ಮಾಡಿದ್ದರು ಎಂದರು.

ಕಸದ ಮಾಫಿಯಾ ನಿಯಂತ್ರಣಕ್ಕೆ ಕಾನೂನಿನಲ್ಲಿರುವ ಅವಕಾಶಗಳನ್ನು ನೋಡಲಾಗುವುದು

ಕಸದ ಮಾಫಿಯಾವನ್ನು ಬಗ್ಗುಬಡಿಯಲು ಹೊಸ ಕಾಯ್ದೆ ತನ್ನಿ ವಿರೋಧ ಪಕ್ಷವು ಬೆಂಬಲ ನೀಡುತ್ತದೆ ಎಂದು ಅಶೋಕ್‌ ಅವರು ಹೇಳಿದಾಗ ಅದಕ್ಕೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಅವರು, ಕಸದ ಮಾಫಿಯಾ ಮಟ್ಟ ಹಾಕಲು ಕಾನೂನಿನಲ್ಲಿ ಏನೆಲ್ಲಾ ಅವಕಾಶವಿದೆ ಎಂಬುದನ್ನು ನೋಡುತ್ತೇನೆ. ಇದರ ಬಗ್ಗೆ ಕ್ರಮ ತಗೆದುಕೊಳ್ಳಲಾಗುವುದು.

ಬಿಜೆಪಿ ಸಮಯದಲ್ಲಿ 89 ಪ್ಯಾಕೇಜ್‌ ಗಳನ್ನು ಕಸ ವಿಲೇವಾರಿಗೆ ತರಲಾಗಿತ್ತು. ಇದನ್ನು ಜಾರಿಗೆ ತರಲು ಆಗಲೇ ಇಲ್ಲ. ನ್ಯಾಯಾಲಯಕ್ಕೆ ತೆರಳಿದ್ದರು. ಈಗ ಏನೇನೋ ಮಾಡಿ 33 ಪ್ಯಾಕೇಜ್‌ ಗಳನ್ನು ತರಲಾಗಿದೆ ಎಂದರು.

ಬೆಂಗಳೂರು ನಗರದ ಎರಡು ಕಡೆ ವೈಜ್ಞಾನಿಕ ಕಸ ವಿಲೇವಾರಿ ಘಟಕಗಳು

“ಜಿಬಿಎ ವ್ಯಾಪ್ತಿಯಲ್ಲಿ ಸಂಗ್ರಹವಾಗುವ ಕಸವನ್ನು ಸಂಸ್ಕರಿಸಲು ನಗರದ ಉತ್ತರ ಹಾಗೂ ದಕ್ಷಿಣ ದಿಕ್ಕುಗಳಲ್ಲಿ ಎರಡು ಘಟಕಗಳನ್ನು ಸ್ಥಾಪಿಸಲಾಗುವುದು. ಹೊಸ ತಂತ್ರಜ್ಞಾನದ ಮೂಲಕ ವೈಜ್ಞಾನಿಕವಾಗಿ ಕಸ ವಿಲೇವಾರಿ ಮಾಡಲಾಗುವುದು” ಎಂದು ತಿಳಿಸಿದರು.

“ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ಸುಮಾರು 26 ಎಕರೆ ಪ್ರದೇಶದಲ್ಲಿ ವೈಜ್ಞಾನಿಕ ಕಸ ವಿಲೇವಾರಿ ಘಟಕವನ್ನು ಪ್ರಾರಂಭ ಮಾಡಲಾಗಿದೆ. ನಗರದ ನಾಲ್ಕು ಭಾಗದಲ್ಲೂ ವೈಜ್ಞಾನಿಕ ಕಸ ವಿಲೇವಾರಿ ಮಾಡಬೇಕು ಎಂದು ಪ್ರಯತ್ನ ಮಾಡುತ್ತಿರುವೆ. ಕಸದಿಂದ ಗ್ಯಾಸ್‌, ಬಯೋ ಗ್ಯಾಸ್‌ ಉತ್ಪಾದನೆ ಬಗ್ಗೆ ಹೆಚ್ಚು ಗಮನ ಹರಿಸುತ್ತಿದ್ದೇವೆ” ಎಂದರು.

ರಾಜಕೀಯ

ಆರನೇ ಗ್ಯಾರಂಟಿಯಾಗಿ ಭೂಮಿ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

ಆರನೇ ಗ್ಯಾರಂಟಿಯಾಗಿ ಭೂಮಿ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

“ತುಂಗಭದ್ರಾ ಅಣೆಕಟ್ಟಿನ 30 ಟಿಎಂಸಿ ನೀರು ಸಮುದ್ರಕ್ಕೆ ಸೇರುತ್ತಿರುವುದನ್ನು ತಪ್ಪಿಸಲು ಈ ಭಾಗದ ನಾಯಕರು ನನ್ನ ಮೇಲೆ ಒತ್ತಡ ಹಾಕುತ್ತಿದ್ದಾರೆ. ನಾನು ಇದಕ್ಕೆ ಬದ್ಧನಾಗಿದ್ದೇನೆ. ಆದರೆ ಆಂಧ್ರ ಸಿಎಂ ಈ ವಿಚಾರವಾಗಿ ಚರ್ಚೆ ಮಾಡಲು

[ccc_my_favorite_select_button post_id="119228"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

RCB: ಮತ್ತೆ ಕಪ್ ನಮ್ದು

RCB: ಮತ್ತೆ ಕಪ್ ನಮ್ದು

4ನೇ ಆವೃತ್ತಿಯ ಮಹಿಳಾ ಪ್ರೀಮಿ ಯರ್ ಲೀಗ್ (ಡಬ್ಲ್ಯೂಪಿ ಎಲ್) ಟೂರ್ನಿಯಲ್ಲಿ ಸ್ಮೃತಿ ಮಂಧಾನಾ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಚಾಂಪಿಯನ್ ಆಗಿ ಹೊರ ಹೊಮ್ಮಿದ್ದು, ಸಿಎಂ ಸಿದ್ದರಾಮಯ್ಯ (Cmsiddaramaiah), ಡಿಸಿಎಂ

[ccc_my_favorite_select_button post_id="119174"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ದೊಡ್ಡಬಳ್ಳಾಪುರ: ಅಪಘಾತ.. ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಬೈಕ್ ಸವಾರ ಮಸಣಕ್ಕೆ…!

ದೊಡ್ಡಬಳ್ಳಾಪುರ: ಅಪಘಾತ.. ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಬೈಕ್ ಸವಾರ ಮಸಣಕ್ಕೆ…!

ಖಾಸಗಿ ಕಂಪನಿಯಲ್ಲಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ದ್ವಿಚಕ್ರ ವಾಹನ ಸಾವರ ರಸ್ತೆ ಬದಿಯ ಹಳ್ಳಕ್ಕೆ ಬಿದ್ದು ಸಾವನಪ್ಪಿರುವ ಘಟನೆ (Accident) ತಾಲೂಕಿನ ಮಾಕಳಿ ಬಳಿ ಇಂದು ಮುಂಜಾನೆ ಸಂಭವಿಸಿದೆ.

[ccc_my_favorite_select_button post_id="119217"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!