ದೊಡ್ಡಬಳ್ಳಾಪುರ: ದಿತ್ವಾ ಚಂಡಮಾರುತದ ಪರಿಣಾಮ ತಗ್ಗಿದರೂ ಕೂಡಾ ದೊಡ್ಡಬಳ್ಳಾಪುರ ಸೇರಿದಂತೆ ರಾಜ್ಯದಲ್ಲಿ ಚಳಿಯ ವಾತಾವರಣ (Cold weather) ಮುಂದುವರಿದಿದ್ದು, ಇದರ ಜತೆಗೆ ಫೆಸಿಫಿಕ್ ಸಾಗರದಲ್ಲಿ ಲಾನಿನಾದ ಎಫೆಕ್ಟ್ನಿಂದಾಗಿ ಫೆಬ್ರವರಿವರೆಗೂ ಚಳಿ ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ರಾಜಧಾನಿ ಬೆಂಗಳೂರಿನಲ್ಲಿ ಇನ್ನೂ ಎರಡು ದಿನ ಚಳಿಯ ವಾತಾವರಣ ಮುಂದುವರಿಯಲಿದ್ದು, ಇನ್ನೆರಡು ದಿನ ಬೆಳಗ್ಗೆ ಮತ್ತು ಸಂಜೆ ಅವಧಿಯಲ್ಲಿ ಚಳಿ ಪ್ರಮಾಣ ಹೆಚ್ಚಾಗಿರಲಿದೆ.
ಗರಿಷ್ಠ ತಾಪಮಾನ 27 ಡಿ.ಸೆ. ಹಾಗೂ ಕನಿಷ್ಠ ತಾಪಮಾನ 17 ಡಿ.ಸೆ. ಇರಲಿದೆ. 2026ರ ಫೆಬ್ರವರಿವರೆಗೂ ಕರ್ನಾಟಕದಲ್ಲಿ ಚಳಿಯ ವಾತಾವರಣ ಮುಂದುವರಿಯಲಿದೆ.
ಎಂದಿನಂತೆ ಈ ಬಾರಿ ಡಿಸೆಂಬರ್ ಮೊದಲ ವಾರದಲ್ಲಿ ಚಳಿಗಾಲ ಆರಂಭವಾಗಬೇಕಿತ್ತು. ಆದರೆ, ವಾಡಿಕೆಗಿಂತಲೂ ಮುಂಚೆಯೇ ಆರಂಭವಾಗಿದೆ. ಈ ತಿಂಗಳ ಕೊನೆ ಅಥವಾ ಜನರಿಯಲ್ಲ ತೀವ್ರ ಚಳಿ ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಒಣಹವೆ
ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ. ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಚಾಮರಾಜನಗರ, ಮೈಸೂರು, ತುಮಕೂರು ಮತ್ತು ವಿಜಯನಗರ, ಬಳ್ಳಾರಿ ಜಿಲ್ಲೆಗಳಲ್ಲಿಯೂ ಒಣ ಹವೆಯ ವಾತಾವರಣ ಇರಲಿದೆ.
ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ.
ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಕಳೆದ ಹಲವು ದಿನಗಳಿಂದ ಒಣಹವೆ ಮಂಗಳವಾರವೂ ವಾತಾವರಣವಿದ್ದು, ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.