I am the real opposition leader: Yatnal

ನಾನು ಅಡ್ಜಸ್ಟ್‌ಮೆಂಟ್ ಗಿರಾಕಿ ಅಲ್ಲ, ನಾನೇ ನಿಜವಾದ ವಿಪಕ್ಷ ನಾಯಕ: ಬಿಜೆಪಿ ನಾಯಕರಿಗೆ ಯತ್ನಾಳ್‌ ಚುಚ್ಚುಮಾತು

ಕೆ.ಎಂ.ಸಂತೋಷ್, ಆರೂಢಿ (ದೊಡ್ಡಬಳ್ಳಾಪುರ): ‘ನಾವೇ ನಿಜವಾದ ನಿಷ್ಠಾವಂತ ಕಾರ್ಯಕರ್ತರು, ನಿಜವಾದ ವಿರೋಧ ಪಕ್ಷದ ನಾಯಕ ನಾನೇ, ನಾನು ಅಡ್ಜಸ್ಟ್‌ಮೆಂಟ್ ಗಿರಾಕಿ ಅಲ್ಲ ಎಂದು ಬೆಳಗಾವಿ ಸದನದಲ್ಲಿ ಬಿಜೆಪಿ (BJP) ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagowda Patil Yatnal) ಅಬ್ಬರಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಹಿಂದೂಪರ ಕಾರ್ಯಕರ್ತರ ಮೆಚ್ಚುಗೆಗೆ ಕಾರಣವಾಗಿದೆ.

ಮಂಗಳವಾರ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಸದನದಲ್ಲಿ ಹಾಜರಿದ್ದರೂ ವಿಧಾನಸಭೆಯಲ್ಲಿ ಅಬ್ಬರಿಸಿದ ಯತ್ನಾಳ್, ನಾವೇ ನಿಜವಾದ ನಿಷ್ಠಾವಂತ ಕಾರ್ಯಕರ್ತರು, ಈ ಸದನದ ವಿರೋಧ ಪಕ್ಷದ ನಿಜವಾದ ನಾಯಕ ನಾನೇ, Adjustment ಗಿರಿಕಿಯಲ್ಲ.

ನಾನು ಮುಖ್ಯಮಂತ್ರಿ ಕಚೇರಿಗೆ ಹೋಗಿಲ್ಲ, ಯಾವುದೇ ಸಚಿವರಿಗೆ ಯಾವುದೇ ವಿನಂತಿಗಳನ್ನು ಮಾಡಿಲ್ಲ. ಆದ್ದರಿಂದ ನಾನು ನಿಜವಾದ ವಿರೋಧ ಪಕ್ಷದ ನಾಯಕ ಮತ್ತು ನೀವು ನನಗೆ ಉಪಸಭಾಪತಿಯ ಪಕ್ಕದ ಸ್ಥಾನವನ್ನು ನೀಡಬಹುದು ಎಂದು ಅಬ್ಬರಿಸಿದ್ದಾರೆ.

ಸಂಕ್ಷಿಪ್ತ ಮಾಹಿತಿ

ಈಗ ವಿಷಯ ಏನಪ್ಪಾ ಅಂದರೆ, ಈ ವರ್ಷದ ಆರಂಭದಲ್ಲಿ ಬಿಜೆಪಿಯಿಂದ ಉಚ್ಚಾಟಿಸಲ್ಪಟ್ಟ ನಂತರ ಯತ್ನಾಳ್, ಎಸ್. ಟಿ.ಸೋಮಶೇಖರ್ ಮತ್ತು ಎ.ಶಿವರಾಮ್ ಹೆಬ್ಬಾರ್ ಅವರನ್ನು ವಿಧಾನಸಭೆ ಅಧಿವೇಶನದಲ್ಲಿ ಹಿಂದಿನ ಬೆಂಚ್‌ಗಳಿಗೆ ವರ್ಗಾಯಿಸಲಾಗಿದೆ. ಹಿರಿಯ ಶಾಸಕರನ್ನು ಹಿಂದಿನ ಬೆಂಚುಗಳಲ್ಲಿ ಕೂರಿಸುವ ಮೂಲಕ ಅವಮಾನಿಸಲಾಗಿದೆ. ಹಿಂದಿನ ಅಧಿವೇಶನದಲ್ಲೂ ಹೀಗೆ ಮಾಡಲಾಗಿತ್ತು.

ನಾವು ಐದರಿಂದ ಆರು ಬಾರಿ ಆಯ್ಕೆಯಾಗಿದ್ದೇವೆ, ನಮ್ಮನ್ನು ಮುಂದಿನ ಸಾಲಿನಲ್ಲಿ ಕೂರಿಸಲು ವ್ಯವಸ್ಥೆ ಮಾಡಬೇಕು ಎಂದು ಯತ್ನಾಳ್ ಹೇಳಿದರು. ಅಲ್ಲದೆ ಆಸನ ವ್ಯವಸ್ಥೆಯನ್ನು ಮರುಪರಿಶೀಲಿಸುವಂತೆ ಸ್ಪೀಕರ್ ಗೆ ಮನವಿ ಮಾಡಿದರು.

ನೀವೇ ನಿಷ್ಠಾವಂತ ಕಾರ್ಯಕರ್ತರು

ಈ ವೇಳೆ ಮಧ್ಯಪ್ರವೇಶಿಸಿದ ಸ್ಪೀಕರ್ ಯು.ಟಿ ಖಾದರ್, ನೀವೇ ನಿಷ್ಠಾವಂತ ಕಾರ್ಯಕರ್ತರು ಅದ ನಾನು ಒಪ್ಪುತ್ತೇನೆ, ರಾಜಕೀಯದಲ್ಲಿ ಹಿರಿಯರು ಅಥವಾ ಕಿರಿಯರು ಇಲ್ಲ ಎಂದು ಯತ್ನಾಳ್ ಗೆ ಹೇಳಿದರು. ಹಿರಿತನದ ಆಧಾರದ ಮೇಲೆ ಸ್ಥಾನಗಳನ್ನು ಹಂಚಲಾಗುವುದಿಲ್ಲ, ಬಹುಮತ ಹೊಂದಿರುವವರಿಗೆ ಸದನದಲ್ಲಿ ಬೆಂಚುಗಳು ಸಿಗುತ್ತವೆ ಮತ್ತು ಕಡಿಮೆ ಸಂಖ್ಯೆಯ ಬಲವಿರುವವರಿಗೆ ವಿರೋಧ ಪಕ್ಷದ ಬೆಂಚುಗಳು ಸಿಗುತ್ತವೆ ಎಂದು ಅವರು ಹೇಳಿದರು.

ಯತ್ನಾಳ್ ಅವರಿಗೆ ಬಿಜೆಪಿಯಲ್ಲಿದ್ದಾಗ ಮುಂಭಾಗದ ಆಸನವನ್ನು ನೀಡಲಾಗಿತ್ತು ಎಂದು ಹೇಳಿದ ಸ್ಪೀಕರ್, ಈಗ ಅವರು ಪಕ್ಷದಿಂದ ಹೊರಗಿದ್ದೀರಾ ಏನು ಮಾಡಬಹುದು ಎಂದು ಪ್ರಶ್ನಿಸಿದರು.

“ನೀವು (ಯತ್ನಾಳ್) ಆಡಳಿತ ಪಕ್ಷ ಅಥವಾ ವಿರೋಧ ಪಕ್ಷದ ಭಾಗವಾಗಿದ್ದರೆ, ನಿಮಗೆ ಆಯಾ ಕಡೆಗಳಲ್ಲಿ ಮುಂಚೂಣಿಯ ಸ್ಥಾನ ಸಿಗುತ್ತದೆ” ಎಂದು ಸ್ಪೀಕರ್ ವಿವರಿಸಿದರು.

ಒಟ್ಟಾರೆ ಸದನದಲ್ಲಿ ವಿರೋಧ ಪಕ್ಷದ ನಾಯಕ ನಾನೇ ಎನ್ನುವ ಮೂಲಕ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಅಧಿಕೃತ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರುಗಳನ್ನು ರಾಜ್ಯ ಕಾಂಗ್ರೆಸ್ ಸರ್ಕಾರದ ಜೊತೆ ಹೊಂದಾಣಿಕೆ ಮಾಡಿಕೊಂಡವರು, ಸರ್ಕಾರದ ವಿರುದ್ಧ ದನಿ ಎತ್ತುತ್ತಿಲ್ಲ ಎಂಬ ಸಂದೇಶ ರವಾನಿಸಿದ್ದಾರೆ.

ಈ ವಿಡಿಯೋ ಸಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಅನೇಕ ಹಿಂದೂಪರ ಕಾರ್ಯಕರ್ತರು ಯತ್ನಾಳ್ ಅವರ ಹೇಳಿಕೆಯನ್ನು ಬೆಂಬಲಿಸಿದ್ದಾರೆ.

ರಾಜಕೀಯ

ಪ್ರತಿಪಕ್ಷದ ವೈಫಲ್ಯವೇ ಆಡಳಿತ ಪಕ್ಷಕ್ಕೆ ಲಾಭ: ವಿಜಯೇಂದ್ರ ವಿರುದ್ಧ ಯತ್ನಾಳ್ ವಾಗ್ದಾಳಿ

ಪ್ರತಿಪಕ್ಷದ ವೈಫಲ್ಯವೇ ಆಡಳಿತ ಪಕ್ಷಕ್ಕೆ ಲಾಭ: ವಿಜಯೇಂದ್ರ ವಿರುದ್ಧ ಯತ್ನಾಳ್ ವಾಗ್ದಾಳಿ

ಅಬಕಾರಿ ಹಗರಣದ ಬಗ್ಗೆ ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (B.Y. Vijayendra) ಏನೂ ಮಾತನಾಡಿಲ್ಲ. ಹೋರಾಟ ತಾರ್ಕಿಕ ಅಂತ್ಯ ಕಂಡಿಲ್ಲ. ವಿರೋಧ ಪಕ್ಷದ ವೈಫಲ್ಯದ ಲಾಭಆಡಳಿತ ಪಕ್ಷಕ್ಕೆ ಸಿಕ್ಕಿದೆ ಎಂದು ಶಾಸಕ ಬಸನಗೌಡ

[ccc_my_favorite_select_button post_id="119407"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ನೆಲಮಂಗಲ ಹೆದ್ದಾರಿಯ ಜಿಂದಾಲ್ ಮೇಲ್ಸೇತುವೆ ಬಳಿ ಸಂಭವಿಸಿದ ಕೆಎಸ್ ಆರ್ ಟಿಸಿ ಬಸ್​​ (KSRTC Bus) ಮತ್ತು ಇಂಡಿಕ ಕಾರಿನ (Indica Car) ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ (Accident) ದೊಡ್ಡಬಳ್ಳಾಪುರದ ಐವರು ಯುವಕರು

[ccc_my_favorite_select_button post_id="119422"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!