Another BBMP waste unit looms for Doddaballapura

ದೊಡ್ಡಬಳ್ಳಾಪುರಕ್ಕೆ ಮತ್ತೊಂದು BBMP ಕಸ ಘಟಕದ ತೂಗುಕತ್ತಿ: ಪ್ರತಿಭಟನೆಯ ಎಚ್ಚರಿಕೆ ನೀಡಿದ ಮೊದಲ ಸಂಘಟನೆ..!

ಕೆ.ಎಂ. ಸಂತೋಷ್, ಆರೂಢಿ: ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯಲ್ಲಿ ಮುಚ್ಚಿರುವ ಬಿಬಿಎಂಪಿ (BBMP) ಘನ ತ್ಯಾಜ್ಯ ವಿಲೇವಾರಿ ಘಟಕ ಮತ್ತೆ ಸ್ಥಾಪಿಸಿ, ಜನರಿಗೆ ವಿಷ ನೀಡುವ ನಿರ್ಧಾರವನ್ನು ಸರ್ಕಾರ ಕೂಡಲೇ ಕೈಬಿಡಬೇಕು. ಘನತ್ಯಾಜ್ಯ ಘಟಕವನ್ನು ಮತ್ತೆ ಆರಂಬಿಸುವುದೇ ಆದರೆ ಸರ್ಕಾರದ ವಿರುದ್ದ ಇಲ್ಲಿನ ಜನ ದಂಗೆಯೇಳುವ ಮೂಲಕ ತಕ್ಕ ಉತ್ತರ ನೀಡಲಿದ್ದಾರೆ ಎಂದು ನವ ಬೆಂಗಳೂರು ಹೋರಾಟ ಸಮಿತಿ ಅಧ್ಯಕ್ಷ ಜಿ.ಎನ್.ಪ್ರದೀಪ್ ಎಚ್ಚರಿಕೆ ನೀಡಿದ್ದಾರೆ.

ಈ ಕುರಿತು ಫ್ಯಾಮಿಲಿ ರೆಸ್ಟೋರೆಂಟ್‌ನಲ್ಲಿ ನಡೆದ ಸುದ್ಧಿಗೋಷ್ಟಿಯಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಅತ್ಯಾಧುನಿಕ ಘನತ್ಯಾಜ್ಯ ವಿಲೇವಾರಿ ಘಟಕವನ್ನು ದೊಡ್ಡಬೆಳವಂಗಲ ಹೋಬಳಿಯಲ್ಲಿ ಸ್ಥಾಪಿಸುವುದಾಗಿ ಬೆಳಗಾವಿಯಲ್ಲಿ ನಡೆದ ಅಧಿವೇಷನದಲ್ಲಿ ಹೇಳಿದ್ದಾರೆ.

ಪ್ರಕೃತಿಯ ಒಡಲಿಗೆ ವಿಷಪ್ರಾಶನ ಮಾಡಿ ಸಹಸ್ರಾರು ಜನತೆಯ ಜೀವಗಳನ್ನು ನರಕಕೂಪಕ್ಕೆ ತಳ್ಳಿದ ಗುಂಡ್ಲಹಳ್ಳಿ ಬಳಿಯ ಟೆರ್ರಾಫರ್ಮಾ ಎಂಬ ಕಸದ ಹೆಮ್ಮಾರಿಯನ್ನು ಮತ್ತೆ ನಮ್ಮ ತಾಲ್ಲೂಕಿಗೆ ಉಡುಗೊರೆಯಾಗಿ ನೀಡಲು ರಾಜ್ಯ ಸರ್ಕಾರ ಸಜ್ಜುಗೊಂಡಿದ್ದು, ಅಧಿವೇಶನದಲ್ಲಿ ರಾಜ್ಯ ಸರ್ಕಾರವೇ ಅಧಿಕೃತವಾಗಿ ಒಪ್ಪಿಕೊಂಡಿದೆ.

ಇದೇ ಸಂದರ್ಭದಲ್ಲಿ ಸರ್ಕಾರದ ಈ ನಿರ್ಧಾರವನ್ನು ಶಾಸಕ ಧೀರಜ್ ಮುನಿರಾಜು ವಿರೋಧಿಸಿರುವ ನಿರ್ಧಾರವನ್ನು ನವ ಬೆಂಗಳೂರು ಹೋರಾಟ ಸಮಿತಿ ಸ್ವಾಗತಿಸಿದೆ.

ಟೆರ್ರಾಫರ್ಮಾ ಮುಚ್ಚುವ ವೇಳೆ ಎಂ.ಎಸ್ಜಿ.ಪಿ ಸಹ ಮಚ್ಚುವುದಾಗಿ ಭರವಸೆ ನೀಡಿದ್ದರು. ದೊಡ್ಡಬಳ್ಳಾಪುರ ತಾಲ್ಲೂಕಿನ ಸಾಸಲು ಮತ್ತು ದೊಡ್ಡಬೆಳವಂಗಲ ಹೋಬಳಿಗಳ ಜನತೆಯ ಬದುಕಿನ ನೆಮ್ಮದಿ ಕಿತ್ತು, ಹಲವು ದಶಕಗಳಿಗಾಗುವಷ್ಟು ವಿಷವನ್ನು ಉಣಿಸಿದ್ದು, ಜನರ ಬದುಕು ಕಿತ್ತುಕೊಂಡಿದೆ ಎಂದರು.

ಬೆಂಗಳೂರಿನಲ್ಲಿಯೇ ಸ್ಥಾಪಿಸಲಿ

ಉಪಮುಖ್ಯಮಂತ್ರಿಗಳು ದಶಕದ ಹಿಂದೆ ಎಂಎಸ್ಪಿ ತ್ಯಾಜ್ಯ ನಿರ್ವಹಣಾ ಘಟಕ ಎಂಬ ಹೆಮ್ಮಾರಿ ನಮ್ಮ ತಾಲ್ಲೂಕಿಗೆ ಹೆಜ್ಜೆ ಇಡುವಾಗಲೂ ಆಧುನಿಕ ತಂತ್ರಜ್ಞಾನ, ಅತ್ಯಾಧುನಿಕ ಸಂಸ್ಕರಣೆ, ಫರ್ಟಿಲೈಜೇಷನ್ ಎಂಬಿತ್ಯಾದಿ ಹೂಗಳನ್ನು ಜನತೆಯ ಕಿವಿಗೆ ಇಟ್ಟು, ಯಾವ ನಿಯಮಗಳನ್ನೂ ಪಾಲಿಸದೇ ಕಸದ ರಾಶಿ ಹಾಕಿ ಜನರ ಆರೋಗ್ಯ ಕೆಡಿಸಿ, ಪರಿಸರ ಮಾಲಿನ್ಯ ಮಾಡಿದರು.

ಜನರಿಗೆ ಮತ್ತು ಪ್ರಕೃತಿಗೆ ಯಾವುದೇ ರೀತಿಯ ಅಪಾಯ ಇಲ್ಲ ಎಂಬುದಾದರೆ, ದಯವಿಟ್ಟು ಅಂತಹ ಒಂದು ಸಂಸ್ಕರಣಾ ಘಟಕವನ್ನು ಬೆಂಗಳೂರು ನಗರದ ಪ್ರತಿಷ್ಟಿತ ಶ್ರೀಮಂತರು ವಾಸಿಸುವ ಪ್ರದೇಶಗಳಲ್ಲಿಯೇ ಮೊದಲು ಪ್ರಾರಂಭಿಸಲಿ.

ಅಲ್ಲಿ ಯೋಜನೆ ಯಶಸ್ವಿಯಾದರೆ ಆನಂತರ ನಮ್ಮ ತಾಲ್ಲೂಕಿನಲ್ಲಿ ಮಾಡುವ ಬಗೆ, ಯೋಚಿಸಲಿ. ದಯಮಾಡಿ ಈ ನಿರ್ಧಾರವನ್ನು ಇಲ್ಲಿಗೇ ಕೈಬಿಡಬೇಕು. ಇಲ್ಲವಾದರೆ ಅನ್ನದಾತ ರೈತರು ದನಗಳ ಕೊರಳಲ್ಲಿರುವ ಹಗ್ಗ ಗೊಂತುಗಳನ್ನು ಕೈಗೆತ್ತಿಕೊಂಡು ಪ್ರತಿಭಟಿಸಲಿದ್ದಾರೆ ಎಂದರು.

ಭಕ್ತರಹಳ್ಳಿ ಗ್ರಾ.ಪಂ ಅಧ್ಯಕ್ಷ ಬಿ.ಆರ್.ಸಿದ್ದಲಿಂಗಯ್ಯ ಮಾತನಾಡಿ, ಟೆರ್ರಾಫರ್ಮಾ ಹಾಗೂ ಎಂ.ಎಸ್.ಜಿಪಿ ಕಸದ ಪರಿಣಾಮ ಸುತ್ತಮುತ್ತಲ ವಾತಾವರಣ ಕಲುಷಿತವಾಗಿದೆ. ಎರಡು ಹೋಬಳಿಗಳಿಗಷ್ಟೇ ಅಲ್ಲದೇ ತುಮಕೂರು ಭಾಗಕ್ಕೂ ಮುಟ್ಟಿ, ಕಲುಷಿತ ನೀರು ಮಾವತ್ತುರು ಕೆರೆ ಸೇರಿದೆ.

ಜನರ ಹಿತಕ್ಕೆ ಮಾರಕವಾಗಿರುವ ಸರ್ಕಾರದ ಈ ನಿರ್ಧಾರಕ್ಕೆ ಭಕ್ತರಹಳ್ಳಿ ಗ್ರಾ.ಪಂ ಸದಸ್ಯರು ಹಾಗೂ ಇಲ್ಲಿನ ರೈತರ ತೀವ್ರ ವಿರೋಧವಿದ್ದು, ಘಟಕ ಸ್ಥಾಪಿಸಿದರೆ ಜನ ದಂಗೆಯೇಳಲಿದ್ದಾರೆ ಎಂದರು.

ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಮಧು.ಪಿ, ರಾಜು ನಾಯಕ್ ಹಾಜರಿದ್ದರು.

ರಾಜಕೀಯ

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದ ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ಮಿತ್ರಪಕ್ಷ ಅಧಿಕಾರದಲ್ಲಿರುವ ಆಂಧ್ರಪ್ರದೇಶದ ಹೊರತುಪಡಿಸಿ ದಕ್ಷಿಣ ಭಾರತದ ರಾಜ್ಯಗಳಿಗೆ ನಿರ್ಲಕ್ಷ್ಯ ತೋರಿದೆ ಎಂಬ ಆಕ್ರೋಶ ವ್ಯಾಪಕವಾಗಿದೆ.

[ccc_my_favorite_select_button post_id="119088"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

2025-26 ನೇ ಸಾಲಿನ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ (K.H. Muniyappa) ಮಾತನಾಡಿದರು.

[ccc_my_favorite_select_button post_id="118983"]
ಭೀಕರ ಜೋಡಿ ಕೊಲೆ ಪ್ರಕರಣ: ದಂಡುಪಾಳ್ಯ ಗ್ಯಾಂಗ್‌ನ ಮತ್ತೊಬ್ಬನ ಬಂಧನ.!

ಭೀಕರ ಜೋಡಿ ಕೊಲೆ ಪ್ರಕರಣ: ದಂಡುಪಾಳ್ಯ ಗ್ಯಾಂಗ್‌ನ ಮತ್ತೊಬ್ಬನ ಬಂಧನ.!

ಭೀಕರ ಜೋಡಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ದಂಡುಪಾಳ್ಯ ಗ್ಯಾಂಗ್‌ನ (Dandupalya gang) ಚಿಕ್ಕ ಹನುಮಂತಪ್ಪ (ಅಲಿಯಾಸ್ ಕೆ.ಕೃಷ್ಣಪ್ಪ) ಎಂಬಾತನನ್ನು ಆಂಧ್ರಪ್ರದೇಶದ ಮದನಪಳ್ಳೆ ಗ್ರಾಮದಲ್ಲಿ ಬಂಧಿಸಲಾಗಿದೆ.

[ccc_my_favorite_select_button post_id="118778"]
ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ಪೆಟ್ಟಿ ಅಂಗಡಿ ಬಳಿ ಕುಳಿತಿದ್ದ ವೃದ್ಧನಿಗೆ ನಿಯಂತ್ರಣ ತಪ್ಪಿದ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ (Accident) ವೃದ್ಧ ತೀವ್ರವಾಗಿ ಗಾಯಗೊಂಡಿರುವ ಘಟನೆ ತಾಲೂಕಿ‌ನ ****** ಇಂದು ಮಧ್ಯಾಹ್ನ ನಡೆದಿದೆ

[ccc_my_favorite_select_button post_id="119094"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!