ದೊಡ್ಡಬಳ್ಳಾಪುರಕ್ಕೆ ಮತ್ತೊಂದು BBMP ಕಸ ಘಟಕದ ತೂಗುಕತ್ತಿ: ಪ್ರತಿಭಟನೆಯ ಎಚ್ಚರಿಕೆ ನೀಡಿದ ಮೊದಲ ಸಂಘಟನೆ..!

Another BBMP waste unit looms for Doddaballapura

ಕೆ.ಎಂ. ಸಂತೋಷ್, ಆರೂಢಿ: ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯಲ್ಲಿ ಮುಚ್ಚಿರುವ ಬಿಬಿಎಂಪಿ (BBMP) ಘನ ತ್ಯಾಜ್ಯ ವಿಲೇವಾರಿ ಘಟಕ ಮತ್ತೆ ಸ್ಥಾಪಿಸಿ, ಜನರಿಗೆ ವಿಷ ನೀಡುವ ನಿರ್ಧಾರವನ್ನು ಸರ್ಕಾರ ಕೂಡಲೇ ಕೈಬಿಡಬೇಕು. ಘನತ್ಯಾಜ್ಯ ಘಟಕವನ್ನು ಮತ್ತೆ ಆರಂಬಿಸುವುದೇ ಆದರೆ ಸರ್ಕಾರದ ವಿರುದ್ದ ಇಲ್ಲಿನ ಜನ ದಂಗೆಯೇಳುವ ಮೂಲಕ ತಕ್ಕ ಉತ್ತರ ನೀಡಲಿದ್ದಾರೆ ಎಂದು ನವ ಬೆಂಗಳೂರು ಹೋರಾಟ ಸಮಿತಿ ಅಧ್ಯಕ್ಷ ಜಿ.ಎನ್.ಪ್ರದೀಪ್ ಎಚ್ಚರಿಕೆ ನೀಡಿದ್ದಾರೆ.

ಈ ಕುರಿತು ಫ್ಯಾಮಿಲಿ ರೆಸ್ಟೋರೆಂಟ್‌ನಲ್ಲಿ ನಡೆದ ಸುದ್ಧಿಗೋಷ್ಟಿಯಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಅತ್ಯಾಧುನಿಕ ಘನತ್ಯಾಜ್ಯ ವಿಲೇವಾರಿ ಘಟಕವನ್ನು ದೊಡ್ಡಬೆಳವಂಗಲ ಹೋಬಳಿಯಲ್ಲಿ ಸ್ಥಾಪಿಸುವುದಾಗಿ ಬೆಳಗಾವಿಯಲ್ಲಿ ನಡೆದ ಅಧಿವೇಷನದಲ್ಲಿ ಹೇಳಿದ್ದಾರೆ.

ಪ್ರಕೃತಿಯ ಒಡಲಿಗೆ ವಿಷಪ್ರಾಶನ ಮಾಡಿ ಸಹಸ್ರಾರು ಜನತೆಯ ಜೀವಗಳನ್ನು ನರಕಕೂಪಕ್ಕೆ ತಳ್ಳಿದ ಗುಂಡ್ಲಹಳ್ಳಿ ಬಳಿಯ ಟೆರ್ರಾಫರ್ಮಾ ಎಂಬ ಕಸದ ಹೆಮ್ಮಾರಿಯನ್ನು ಮತ್ತೆ ನಮ್ಮ ತಾಲ್ಲೂಕಿಗೆ ಉಡುಗೊರೆಯಾಗಿ ನೀಡಲು ರಾಜ್ಯ ಸರ್ಕಾರ ಸಜ್ಜುಗೊಂಡಿದ್ದು, ಅಧಿವೇಶನದಲ್ಲಿ ರಾಜ್ಯ ಸರ್ಕಾರವೇ ಅಧಿಕೃತವಾಗಿ ಒಪ್ಪಿಕೊಂಡಿದೆ.

ಇದೇ ಸಂದರ್ಭದಲ್ಲಿ ಸರ್ಕಾರದ ಈ ನಿರ್ಧಾರವನ್ನು ಶಾಸಕ ಧೀರಜ್ ಮುನಿರಾಜು ವಿರೋಧಿಸಿರುವ ನಿರ್ಧಾರವನ್ನು ನವ ಬೆಂಗಳೂರು ಹೋರಾಟ ಸಮಿತಿ ಸ್ವಾಗತಿಸಿದೆ.

ಟೆರ್ರಾಫರ್ಮಾ ಮುಚ್ಚುವ ವೇಳೆ ಎಂ.ಎಸ್ಜಿ.ಪಿ ಸಹ ಮಚ್ಚುವುದಾಗಿ ಭರವಸೆ ನೀಡಿದ್ದರು. ದೊಡ್ಡಬಳ್ಳಾಪುರ ತಾಲ್ಲೂಕಿನ ಸಾಸಲು ಮತ್ತು ದೊಡ್ಡಬೆಳವಂಗಲ ಹೋಬಳಿಗಳ ಜನತೆಯ ಬದುಕಿನ ನೆಮ್ಮದಿ ಕಿತ್ತು, ಹಲವು ದಶಕಗಳಿಗಾಗುವಷ್ಟು ವಿಷವನ್ನು ಉಣಿಸಿದ್ದು, ಜನರ ಬದುಕು ಕಿತ್ತುಕೊಂಡಿದೆ ಎಂದರು.

ಬೆಂಗಳೂರಿನಲ್ಲಿಯೇ ಸ್ಥಾಪಿಸಲಿ

ಉಪಮುಖ್ಯಮಂತ್ರಿಗಳು ದಶಕದ ಹಿಂದೆ ಎಂಎಸ್ಪಿ ತ್ಯಾಜ್ಯ ನಿರ್ವಹಣಾ ಘಟಕ ಎಂಬ ಹೆಮ್ಮಾರಿ ನಮ್ಮ ತಾಲ್ಲೂಕಿಗೆ ಹೆಜ್ಜೆ ಇಡುವಾಗಲೂ ಆಧುನಿಕ ತಂತ್ರಜ್ಞಾನ, ಅತ್ಯಾಧುನಿಕ ಸಂಸ್ಕರಣೆ, ಫರ್ಟಿಲೈಜೇಷನ್ ಎಂಬಿತ್ಯಾದಿ ಹೂಗಳನ್ನು ಜನತೆಯ ಕಿವಿಗೆ ಇಟ್ಟು, ಯಾವ ನಿಯಮಗಳನ್ನೂ ಪಾಲಿಸದೇ ಕಸದ ರಾಶಿ ಹಾಕಿ ಜನರ ಆರೋಗ್ಯ ಕೆಡಿಸಿ, ಪರಿಸರ ಮಾಲಿನ್ಯ ಮಾಡಿದರು.

ಜನರಿಗೆ ಮತ್ತು ಪ್ರಕೃತಿಗೆ ಯಾವುದೇ ರೀತಿಯ ಅಪಾಯ ಇಲ್ಲ ಎಂಬುದಾದರೆ, ದಯವಿಟ್ಟು ಅಂತಹ ಒಂದು ಸಂಸ್ಕರಣಾ ಘಟಕವನ್ನು ಬೆಂಗಳೂರು ನಗರದ ಪ್ರತಿಷ್ಟಿತ ಶ್ರೀಮಂತರು ವಾಸಿಸುವ ಪ್ರದೇಶಗಳಲ್ಲಿಯೇ ಮೊದಲು ಪ್ರಾರಂಭಿಸಲಿ.

ಅಲ್ಲಿ ಯೋಜನೆ ಯಶಸ್ವಿಯಾದರೆ ಆನಂತರ ನಮ್ಮ ತಾಲ್ಲೂಕಿನಲ್ಲಿ ಮಾಡುವ ಬಗೆ, ಯೋಚಿಸಲಿ. ದಯಮಾಡಿ ಈ ನಿರ್ಧಾರವನ್ನು ಇಲ್ಲಿಗೇ ಕೈಬಿಡಬೇಕು. ಇಲ್ಲವಾದರೆ ಅನ್ನದಾತ ರೈತರು ದನಗಳ ಕೊರಳಲ್ಲಿರುವ ಹಗ್ಗ ಗೊಂತುಗಳನ್ನು ಕೈಗೆತ್ತಿಕೊಂಡು ಪ್ರತಿಭಟಿಸಲಿದ್ದಾರೆ ಎಂದರು.

ಭಕ್ತರಹಳ್ಳಿ ಗ್ರಾ.ಪಂ ಅಧ್ಯಕ್ಷ ಬಿ.ಆರ್.ಸಿದ್ದಲಿಂಗಯ್ಯ ಮಾತನಾಡಿ, ಟೆರ್ರಾಫರ್ಮಾ ಹಾಗೂ ಎಂ.ಎಸ್.ಜಿಪಿ ಕಸದ ಪರಿಣಾಮ ಸುತ್ತಮುತ್ತಲ ವಾತಾವರಣ ಕಲುಷಿತವಾಗಿದೆ. ಎರಡು ಹೋಬಳಿಗಳಿಗಷ್ಟೇ ಅಲ್ಲದೇ ತುಮಕೂರು ಭಾಗಕ್ಕೂ ಮುಟ್ಟಿ, ಕಲುಷಿತ ನೀರು ಮಾವತ್ತುರು ಕೆರೆ ಸೇರಿದೆ.

ಜನರ ಹಿತಕ್ಕೆ ಮಾರಕವಾಗಿರುವ ಸರ್ಕಾರದ ಈ ನಿರ್ಧಾರಕ್ಕೆ ಭಕ್ತರಹಳ್ಳಿ ಗ್ರಾ.ಪಂ ಸದಸ್ಯರು ಹಾಗೂ ಇಲ್ಲಿನ ರೈತರ ತೀವ್ರ ವಿರೋಧವಿದ್ದು, ಘಟಕ ಸ್ಥಾಪಿಸಿದರೆ ಜನ ದಂಗೆಯೇಳಲಿದ್ದಾರೆ ಎಂದರು.

ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಮಧು.ಪಿ, ರಾಜು ನಾಯಕ್ ಹಾಜರಿದ್ದರು.

ರಾಜಕೀಯ

ಮೋದಿ, ಶಾ ಶ್ರಮದಿಂದ 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ: ಬಿ.ವೈ. ವಿಜಯೇಂದ್ರ

ಮೋದಿ, ಶಾ ಶ್ರಮದಿಂದ 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ: ಬಿ.ವೈ. ವಿಜಯೇಂದ್ರ

ಬಿಜೆಪಿಯ (BJP) ಗತವೈಭವದ ದಿನಗಳು ದಾವಣಗೆರೆಯಲ್ಲಿ ಮರುಕಳಿಸಲಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (B.Y. Vijayendra) ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

[ccc_my_favorite_select_button post_id="121758"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ಜಿಂಕೆಬಚ್ಚಹಳ್ಳಿ ಸಮೀಪ ಶನಿವಾರ ಬೆಂಕಿಗೆ ಆಹುತಿಯಾಗಿದ್ದ ಕಾರಿನಲ್ಲಿ (Car) ಅನುಮಾನಸ್ಪದ ರೀತಿಯಲ್ಲಿ ಸುಟ್ಟು ಹೋಗಿದ್ದ ಮಹಿಳೆಯ (Woman) ಅಸ್ಥಿಪಂಜರ ಪತ್ತೆಯಾಗಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ.

[ccc_my_favorite_select_button post_id="121693"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]