Farmers in Doddaballapura demand continuation of registration for purchase of Ragi

ರಾಗಿ ಖರೀದಿ ನೋಂದಣಿ ಮುಂದುವರೆಸುವಂತೆ ದೊಡ್ಡಬಳ್ಳಾಪುರದಲ್ಲಿ ರೈತರ ಆಗ್ರಹ

ದೊಡ್ಡಬಳ್ಳಾಪುರ: ಬೆಂಬಲ ಬೆಲೆ ಯೋಜನೆಯಡಿ ರಾಗಿ (Ragi) ಖರೀದಿಗೆ ರೈತರ ನೋಂದಣಿ ಮುಕ್ತಾಯವಾಗಿರುವುದರಿಂದ ರಾಗಿ ಬೆಳೆದಿರುವ ರೈತರಿಗೆ ಅನಾನುಕೂಲವಾಗಲಿದ್ದು, ಕೂಡಲೇ ಸರ್ಕಾರ ರಾಗಿ ಖರೀದಿ ನೋಂದಣಿ ದಿನಾಂಕವನ್ನು ವಿಸ್ತರಿಸಬೇಕು ಹಾಗೂ ಇದಕ್ಕೆ ಪೂರಕವಾಗಿ ರಾಗಿ ಖರೀದಿ ಗುರಿ ಏರಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ನಗರದ ಎಪಿಎಂಸಿ ಎಪಿಎಂಸಿ ಖರೀದಿ ಕೇಂದ್ರದ ಮುಂಭಾಗ ಪ್ರತಿಭಟನೆ ನಡೆಸಿ, ತಹಶೀಲ್ದಾರರಿಗೆ ಮನವಿ ಸಲ್ಲಿಸಲಾಯಿತು.

ಈ ವೇಳೆ ಮಾತನಾಡಿದ ರಾಜ್ಯ ರೈತ ಸಂಘದ ಮುಖಂಡರು, ರಾಜ್ಯದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದಿಂದ ಕನಿಷ್ಠ ಬೆಲೆ ಯೋಜನೆ ಅಡಿಯಲ್ಲಿ ಕೆಲವು ಕೃಷಿ ಉತ್ಪನ್ನಗಳನ್ನು ಖರೀದಿ ಮಾಡುತ್ತಿರುವುದು ಸ್ವಾಗತಾರ್ಹವಾಗಿದೆ. ಆದರೆ ರೈತರು ಬೆಳೆದ ಬೆಳೆಗಳಿಗೆ ಮಿತಿ ಹಾಗೂ ದಿನಾಂಕದ ನೆಪದಲ್ಲಿ ತಡೆಯೊಡ್ಡುವುದು ಸರಿಯಿಲ್ಲ.

ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಮಳೆ ಕಾರಣದಿಂದಾಗಿ ರಾಗಿ ಕೊಯ್ಲಿನಲ್ಲಿ ರೈತರು ತೊಂಡಗಿಸಿಕೊಂಡಿದ್ದರಿಂದಾಗಿ ನೋಂದಣಿ ಮಾಡಿಸುವ ಪ್ರಕ್ರಿಯೆ ನಿಧಾನವಾಗಿದೆ. ಪೂರ್ಣ ಪ್ರಮಾಣದ ರೈತರ ನೋಂದಣಿ ಕಾರ್ಯವು ಇನ್ನು ಸಾಕಷ್ಟು ಪ್ರಮಾಣದಲ್ಲಿ ಇದ್ದು ಅಂತ ರೈತರು ಈ ಯೋಜನೆ ಅಡಿಯಲ್ಲಿ ಅನುಕೂಲವನ್ನು ಪಡೆಯಲು ಸಾಧ್ಯವಾಗಿಲ್ಲ.

ಈ ನಿಟ್ಟಿನಲ್ಲಿ ರಾಗಿ ಖರೀದಿ ನೋಂದಣಿ ದಿನಾಂಕವನ್ನು ಇನ್ನೂ 15 ದಿನಗಳ ಕಾಲ ವಿಸ್ತರಿಸಬೇಕು ಅಥವಾ ಒಂದು ಲಕ್ಷ ಮೆಟ್ರಿಕ್ ಟನ್ ರಾಗಿಯನ್ನು ಖರೀದಿ ಮಾಡಲು ವ್ಯವಸ್ಥೆ ಮಾಡಬೇಕು.

ರಾಗಿ ಖರೀದಿ ನೋಂದಣಿಗೆ ಕೊನೆಯ ದಿನಾಂಕ ತಿಳಿಸದೇ, ಕೆಲವೇ ದಿನಗಳು ಇದ್ದಾಗ ಏಕಾಏಕಿ ಹೇಳಿ ನಿಲ್ಲಿಸಲಾಗಿದೆ. ಕೊನೆಯ ದಿನಾಂಕದಂದು ಮಧ್ಯಾಹ್ನ 12 ಗಂಟೆಗೆ ಬಂದ್ ಆಗಿದೆ.

ಇನ್ನು ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಸಾವಿರಾರು ರೈತರು ನೋಂದಣಿ ಮಾಡಿಸುವವರಿದ್ದಾರೆ. ರಾಗಿ ಧಾನ್ಯಕ್ಕೆ ವಿದೇಶಗಳಲ್ಲಿಯೂ ಬೇಡಿಕೆ ಇದೆ. ಸರ್ಕಾರ ರೈತರಿಂದ ರಾಗಿ ಖರೀದಿ ಮಾಡಿ, ಶೇಖರಣೆಗೆ ಆಧುನಿಕ ತಂತ್ರಜ್ಞಾನ ಬಳಸಿ ರೈತರಿಗೆ ನೆರವಾಗಬೇಕಿದೆ ಎಂದರು.

ಸ್ಥಳಕ್ಕೆ ಆಗಮಿಸಿದ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಜಿಲ್ಲಾ ವ್ಯವಸ್ಥಾಪಕ ಪ್ರವೀಣ್ ಮಾತನಾಡಿ, ರಾಜ್ಯದಲ್ಲಿ 60 ಲಕ್ಷ ಕ್ವಿಂಟಾಲ್ ರಾಗಿ ಖರೀದಿ ಗುರಿ ಹೊಂದಲಾಗಿದ್ದು, ದೊಡ್ಡಬಳ್ಳಾಪುರ ತಾಲೂಕಿನಲ್ಲಿ 12,687 ರೈತರಿಂದ 2,40,106 ಕ್ವಿಂಟಾಲ್ ನೋಂದಣಿಯಾಗಿದ್ದು, ಕಳೆದ ಸಾಲಿಗಿಂತ 60 ಸಾವಿರ ಕ್ವಿಂಟಾಲ್ ಹೆಚ್ಚಾಗಿದೆ.

ರೈತರು ರಾಗಿ ಖರೀದಿ ದಿನಾಂಕ ವಿಸ್ತರಿಸಲು ಹಾಗೂ ಖರೀದಿ ಗುರಿಯ ಮಿತಿ ಹೆಚ್ಚಿಸುವ ಕುರಿತಂತೆ ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ. ನಿಗಮದ ಕೇಂದ್ರ ಕಚೇರಿಗೂ ವರದಿ ಕಳುಹಿಸಿದ್ದೇವೆ. ಇದು ಸರ್ಕಾರದ ಮಟ್ಟದಲ್ಲಿ ನಿರ್ಧಾರವಾಗುವ ವಿಚಾರವಾಗಿದ್ದು, ಬೆಳಗಾಗಿ ಅಧಿವೇಷನ ಮುಗಿದ ನಂತರ ಸೂಕ್ತ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದರು.

ರಾಜಕೀಯ

ಆರನೇ ಗ್ಯಾರಂಟಿಯಾಗಿ ಭೂಮಿ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

ಆರನೇ ಗ್ಯಾರಂಟಿಯಾಗಿ ಭೂಮಿ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

“ತುಂಗಭದ್ರಾ ಅಣೆಕಟ್ಟಿನ 30 ಟಿಎಂಸಿ ನೀರು ಸಮುದ್ರಕ್ಕೆ ಸೇರುತ್ತಿರುವುದನ್ನು ತಪ್ಪಿಸಲು ಈ ಭಾಗದ ನಾಯಕರು ನನ್ನ ಮೇಲೆ ಒತ್ತಡ ಹಾಕುತ್ತಿದ್ದಾರೆ. ನಾನು ಇದಕ್ಕೆ ಬದ್ಧನಾಗಿದ್ದೇನೆ. ಆದರೆ ಆಂಧ್ರ ಸಿಎಂ ಈ ವಿಚಾರವಾಗಿ ಚರ್ಚೆ ಮಾಡಲು

[ccc_my_favorite_select_button post_id="119228"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

RCB: ಮತ್ತೆ ಕಪ್ ನಮ್ದು

RCB: ಮತ್ತೆ ಕಪ್ ನಮ್ದು

4ನೇ ಆವೃತ್ತಿಯ ಮಹಿಳಾ ಪ್ರೀಮಿ ಯರ್ ಲೀಗ್ (ಡಬ್ಲ್ಯೂಪಿ ಎಲ್) ಟೂರ್ನಿಯಲ್ಲಿ ಸ್ಮೃತಿ ಮಂಧಾನಾ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಚಾಂಪಿಯನ್ ಆಗಿ ಹೊರ ಹೊಮ್ಮಿದ್ದು, ಸಿಎಂ ಸಿದ್ದರಾಮಯ್ಯ (Cmsiddaramaiah), ಡಿಸಿಎಂ

[ccc_my_favorite_select_button post_id="119174"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ದೊಡ್ಡಬಳ್ಳಾಪುರ: ಅಪಘಾತ.. ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಬೈಕ್ ಸವಾರ ಮಸಣಕ್ಕೆ…!

ದೊಡ್ಡಬಳ್ಳಾಪುರ: ಅಪಘಾತ.. ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಬೈಕ್ ಸವಾರ ಮಸಣಕ್ಕೆ…!

ಖಾಸಗಿ ಕಂಪನಿಯಲ್ಲಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ದ್ವಿಚಕ್ರ ವಾಹನ ಸಾವರ ರಸ್ತೆ ಬದಿಯ ಹಳ್ಳಕ್ಕೆ ಬಿದ್ದು ಸಾವನಪ್ಪಿರುವ ಘಟನೆ (Accident) ತಾಲೂಕಿನ ಮಾಕಳಿ ಬಳಿ ಇಂದು ಮುಂಜಾನೆ ಸಂಭವಿಸಿದೆ.

[ccc_my_favorite_select_button post_id="119217"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!