ನ್ಯಾಷನಲ್ ಹೆರಾಲ್ಡ್ ಪ್ರಕರಣ: ಕೋರ್ಟ್ ನ್ಯಾಯ ಎತ್ತಿಹಿಡಿದಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

National Herald case: Court has upheld justice: Cmsiddaramaiah

ಬೆಳಗಾವಿ: ಬಿಜೆಪಿಯು (BJP) ದ್ವೇಷ ರಾಜಕಾರಣದಲ್ಲಿ ತೊಡಗಿದ್ದು, ಕಾಂಗ್ರೆಸ್ ನಾಯಕರ ಮೇಲೆ ಸುಳ್ಳು ಕೇಸುಗಳನ್ನು ಹಾಕಿ ಅಪಪ್ರಚಾರ ಮಾಡುತ್ತಿದೆ. ಬಿಜೆಪಿಯ ಈ ಕುತಂತ್ರಕ್ಕೆ ಉತ್ತರವಾಗಿ ನ್ಯಾಯಾಲಯದಲ್ಲಿ ನ್ಯಾಯ ದೊರೆತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ತಿಳಿಸಿದರು.

ಅವರು ಇಂದು ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರ ದುರುಪಯೋಗ ಪಡಿಸಿಕೊಂಡಿರುವುದನ್ನು ಖಂಡಿಸಿ, ಈ ಪ್ರಕರಣದಲ್ಲಿ ED ಸಲ್ಲಿಸಿದ ಆರೋಪ ಪಟ್ಟಿಯನ್ನು ಸಾರಾಸಗಟಾಗಿ ತಿರಸ್ಕರಿಸಿದ ವಿಚಾರಣಾ ನ್ಯಾಯಾಲಯದ (ಟ್ರಯಲ್ ಕೋರ್ಟ್) ತೀರ್ಮಾನವನ್ನು ಬೆಂಬಲಿಸಿ ಎಂಎಲ್ ಎ ಹಾಗೂ ಎಂಎಲ್ ಸಿ ಗಳೊಂದಿಗೆ ಬೆಳಗಾವಿ ಸುವರ್ಣ ಸೌಧದ ಆವರಣದಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದರು.

ಬಿಜೆಪಿಯವರ ದ್ವೇಷದ ರಾಜಕಾರಣ

ಬಿಜೆಪಿಯವರ ದ್ವೇಷದ ರಾಜಕಾರಣ. ಕೇಂದ್ರ ಅಥವಾ ರಾಜ್ಯಗಳಾಗಲಿ, ಬಿಜೆಪಿ ಅಧಿಕಾರದಲ್ಲಿರುವ ಕಡೆಗಳೆಲ್ಲಾ ಕಾಂಗ್ರೆಸ್ ನವರನ್ನು ಗುರಿಯಾಗಿಸಿ, ಅವರನ್ನು ಅಪರಾಧಿಗಳಾಗಿ ಬಿಂಬಿಸಿ, ನ್ಯಾಯಾಲಯಕ್ಕೆ ಎಡತಾಕುವಂತೆ ಮಾಡುತ್ತಿದ್ದಾರೆ. ಇಂತಹ ಅಸತ್ಯವಾದ ವಿಚಾರವನ್ನು ಮುನ್ನಲೆಗೆ ತಂದು ಬಿಜೆಪಿಯು ದುರುದ್ದೇಶದಲ್ಲಿ ತೊಡಗಿದ್ದಾರೆ. ಬಿಜೆಪಿಯವರು ತಮ್ಮ ತಪ್ಪುಗಳನ್ನು ಮರೆಮಾಚಲು ಇಂತಹ ದುಷ್ಕೃತ್ಯಕ್ಕೆ ಕೈಹಾಕಿದ್ದಾರೆ. ಇಂದು ದೇಶದಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದೆ. ದೇಶದಲ್ಲಿ ಹಣದುಬ್ಬರ ಹೆಚ್ಚಿದ್ದು ನಿರುದ್ಯೋಗದ ಪ್ರಮಾಣ ಏರಿಕೆಯಾಗಿದೆ. ಜನರ ಮೇಲೆ ತೆರಿಗೆಗಳನ್ನು ಮನಬಂದಂತೆ ಹೇರಿ, ಭಾರತವನ್ನು ಸಾಲಗಾರ ದೇಶವನ್ನಾಗಿ ಮಾಡಲಾಗುತ್ತಿದೆ ಎಂದರು.

ಸುಳ್ಳು ಪ್ರಕರಣಕ್ಕೆ ಮೊರೆ ಹೋಗುವ ಬಿಜೆಪಿ

ಮನಮೋಹನ್ ಸಿಂಗ್ ಅವರು ದೇಶದ ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ದೇಶದ ಸಾಲ ಸುಮಾರು 53.11 ಲಕ್ಷ ಕೋಟಿ ಆಗಿತ್ತು. ಆದರೆ ಮೋದಿಯವರು ಅಧಿಕಾರಕ್ಕೆ ಬಂದ ನಂತರ ಸಾಲದ ಮೊತ್ತ ಸುಮಾರು 2 ಲಕ್ಷ ಕೋಟಿಯನ್ನೂ ಮೀರಿದೆ. ಪ್ರಧಾನಿ ಮೋದಿಯವರು ಅಧಿಕಾರಕ್ಕೆ ಬಂದು 11 ವರ್ಷಗಳಲ್ಲಿ ಈ ಸಾಲದ ಮೊತ್ತವು 148 ಲಕ್ಷ ಕೋಟಿ ಹೆಚ್ಚಾಗಿದೆ. ಬಿಜೆಪಿಯವರು ತಮ್ಮ ಈ ತಪ್ಪನ್ನು ಮರೆಮಾಚಲು ಇಂತಹ ಸುಳ್ಳು ಪ್ರಕರಣಗಳ ಮೊರೆಹೋಗುತ್ತಿದೆ ಎಂದರು.

ಪ್ರತಿ ಖಾತೆಗೆ ಹಣ: ಪ್ರಧಾನಿ ಮೋದಿಯವರ ಸುಳ್ಳು ಭರವಸೆ

ಮೋದಿಯವರು ಅಧಿಕಾರಕ್ಕೆ ಬಂದ ತಕ್ಷಣ, ದೇಶದಲ್ಲಿ ನಿರುದ್ಯೋಗ ತಾಂಡವವಾಡುತ್ತಿದ್ದು, ಪ್ರತಿವರ್ಷ 2 ಕೋಟಿ ಉದ್ಯೋಗವನ್ನು ಸೃಷ್ಟಿಸುವುದಾಗಿ ಘೋಷಿಸಿದ್ದರು. ವಿದೇಶದಲ್ಲಿನ ಕಪ್ಪುಹಣವನ್ನು ದೇಶಕ್ಕೆ ತಂದು ದೇಶದ ಪ್ರತಿಯೊಬ್ಬರ ಖಾತೆಗೂ 15 ಲಕ್ಷ ರೂ.ಗಳನ್ನು ನೀಡುವುದಾಗಿ ಹೇಳಿದರು. ಈ ಯಾವುದೇ ಭರವಸೆಗಳನ್ನು ಮೋದಿಯವರು ಈಡೇರಿಸಲಿಲ್ಲ. ಇತ್ತೀಚೆಗೆ ದೈನಂದಿನ ಬಳಕೆಯ ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆಗಳು ಗಗನಕ್ಕೇರಿವೆ. ಬಿಜೆಪಿಯವರು ತಮ್ಮ ಇಂತಹ ತಪ್ಪುಗಳನ್ನು ಮರೆಮಾಚಲು , ಇಂತಹ ಸುಳ್ಳು ಪ್ರಕರಣಗಳಿಗೆ ಹೆಚ್ಚು ಒತ್ತು ನೀಡುವ ಮೂಲಕ, ದೇಶದ ಜನರ ದಿಕ್ಕು ತಪ್ಪಿಸುತ್ತಿದ್ದಾರೆ ಎಂದರು.

ನ್ಯಾಷನಲ್ ಹೆರಾಲ್ಡ್ ಪ್ರಕರಣ: ಕೋರ್ಟ್ ನ್ಯಾಯ ಎತ್ತಿಹಿಡಿದಿದೆ

ನ್ಯಾಷನಲ್ ಹೆರಾಲ್ಡ್ ಪತ್ರಿಕೆಯು 1937 ರಲ್ಲಿ ಜವಾಹರ್ ಲಾಲ್ ನೆಹರೂ ರವರು ದೇಶದ ಜನರಲ್ಲಿ ಸ್ವಾತಂತ್ರ್ಯ ಹೋರಾಟದ ಬಗ್ಗೆ ಜಾಗೃತಿ ಮೂಡಿಸಲು ಈ ಪತ್ರಿಕೆಯನ್ನು ಪ್ರಾರಂಭಿಸಿದರು, ಇದು ಕಾಂಗ್ರೆಸ್ ಪಕ್ಷದ ಆಸ್ತಿ. ನಂತರ ಈ ಪತ್ರಿಕೆಯನ್ನು ಯಂಗ್ ಇಂಡಿಯನ್ ಸಂಸ್ಥೆ ವಹಿಸಿಕೊಂಡಿತು. ಸಂಸ್ಥೆಗೆ ಸೇರಿದ್ದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ , ಮೋತಿಲಾಲ್ ವೋರಾ ಮತ್ತು ಆಸ್ಕರ್ ಫರ್ನಾಂಡಿಸ್ ಇವರ ಮೇಲೆ ಪ್ರಕರಣ ದಾಖಲಿಸಿ, ಇಡಿ ತನಿಖೆಯನ್ನು ಮಾಡಿಸಲಾಯಿತು. 2012 ರಲ್ಲಿ ಸುಬ್ರಮಣ್ಯಂಸ್ವಾಮಿಯವರು ಇವರ ವಿರುದ್ಧ ದಾವೆ ಹೂಡಿದ್ದರು. ಪ್ರಸ್ತುತ ಇಡಿಯವರು ಸಲ್ಲಿಸಿದ್ದ ಆರೋಪ ಪಟ್ಟಿಯನ್ನು ವಿಚಾರಣಾ ನ್ಯಾಯಾಲಯ ತಿರಸ್ಕರಿಸಿದೆ. ಈ ಪ್ರಕರಣವನ್ನುಸುಳ್ಳು ಎಂದು ಹೈಕೋರ್ಟ್ ನ್ಯಾಯವನ್ನು ಎತ್ತಿಹಿಡಿದಿದೆ ಎಂದರು.

ಹೆಸರನ್ನು ಬದಲಾಯಿಸುವುದಷ್ಟೇ ಬಿಜೆಪಿ ಕಾಯಕ

ಮಹಾತ್ಮಾಗಾಂಧಿ ಉದ್ಯೋಗ ಖಾತ್ರಿ ಯೋಜನೆ ಯನ್ನು ಬದಲಿಸಿ VB-G RaM Gಯೋಜನೆಯೆಂದು ಬದಲಿಸಿದ್ದಾರೆ. ರಾಜಭವನವನ್ನು ಇಂದು ಲೋಕಭವನ ಎಂದು ಬದಲಾಯಿಸಿದ್ದಾರೆ. ಇದು ಸರ್ಕಾರದ ಆಸ್ತಿಯಾಗಿದ್ದು, ಇದರ ಹೆಸರನ್ನು ಬದಲಾವಣೆ ಮಾಡಿದ್ದು ಸರಿಯಲ್ಲ. ಹೆಸರು ಬದಲಾಯಿಸುವ ಕಾರ್ಯದಲ್ಲಿ ನಿರತವಾಗಿದೆಯೇ ಹೊರತು ಬಡವರಿಗೆ ಅನುಕೂಲ ಕಲ್ಪಿಸುವ ಕೆಲಸವನ್ನು ಬಿಜೆಪಿಯವರು ಮಾಡುತ್ತಿಲ್ಲ ಎಂದರು.

ಬಿಜೆಪಿಯವರಿಗೆ ಬಡವರ ಬಗ್ಗೆ ಕಾಳಜಿಯಿಲ್ಲ

ಮಹಾತ್ಮಾಗಾಂಧಿ ಹಾಗೂ ಅಂಬೇಡ್ಕರ್ ರವರ ಚಿಂತನೆಗಳನ್ನು ಇಷ್ಟಪಡದ ಬಿಜೆಪಿಯವರಿಗೆ ಬಡವರನ್ನೂ ಕಂಡರೂ ಆಗುವುದಿಲ್ಲ. ದೇಶದ ಬಡವರಿಗೆಂದು ತಂದಿರುವ ಯಾವುದೇ ಯೋಜನೆಗಳಿಗೆ ಬಿಜೆಪಿಯವರ ಸಹಮತಿಯಿಲ್ಲ. ಬಡವರು, ದೀನದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರನ್ನು ಕಡೆಗಣಿಸುವ ಬಿಜೆಪಿಯವರು , ಕರ್ನಾಟಕದಲ್ಲಿ ಬಡವರಿಗಾಗಿ ತಂದ ಗ್ಯಾರಂಟಿ ಯೋಜನೆಗಳನ್ನು ವಿರೋಧಿಸಿದರು. ಆದರೆ ಈ ಜನಪರ ಯೋಜನೆಯನ್ನು ದೇಶದೆಲ್ಲೆಡೆ ಬಿಜೆಪಿ ಅನುಸರಿಸುತ್ತಿದೆ ಎಂದರು.

ಬಿಜೆಪಿಯವರು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿಲ್ಲ

ಇಂದು ಈ ತೀರ್ಪಿನ ಪರವಾಗಿ ಪ್ರತಿಭಟನೆಯನ್ನು ಕೈಗೊಂಡಿದ್ದು, ಸದನದ ಒಳಗೆ ಮತ್ತು ಹೊರಗೆ ಈ ಪ್ರತಿಭಟನೆಯನ್ನು ಮುಂದುವರೆಸಲಿದ್ದೇವೆ. ರಾಜ್ಯ ಹಾಗೂ ದೇಶದುದ್ದಕ್ಕೂ ಬಿಜೆಪಿಯ ಕುತಂತ್ರ ನೀತಿಯನ್ನು ವಿರೋಧಿಸಿ ಪ್ರತಿಭಟನೆಯನ್ನು ಕೈಗೊಳ್ಳುತ್ತೇವೆ. ಕಾಂಗ್ರೆಸ್ ಎಂದಿಗೂ ಕೈಕಟ್ಟಿ ಕೂರುವ ಪಕ್ಷವಲ್ಲ. ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟದ್ದು ಕಾಂಗ್ರೆಸ್ ಪಕ್ಷ. ಬಿಜೆಪಿಯವರು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿರಲಿಲ್ಲ. ಆದರೆ ಈಗ ದ್ವೇಷ ರಾಜಕಾರಣವನ್ನು ಮಾಡುತ್ತಿದೆ. ಸುವರ್ಣಸೌಧದ ಗಾಂಧಿ ಪ್ರತಿಮೆ ಬಳಿ ನಡೆದ ಪ್ರತಿಭಟನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಾಲ್ಗೊಂಡರು ಎಂದರು.

ರಾಜಕೀಯ

ಡಾಕ್ಟರೇಟ್ ನಿರಾಕರಿಸಿ ಮಾದರಿಯಾದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಡಾಕ್ಟರೇಟ್ ನಿರಾಕರಿಸಿ ಮಾದರಿಯಾದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಡಾಕ್ಟರೇಟ್ ಪಡೆಯಲು ತರಾವರಿ ಪ್ರಯತ್ನ ನಡೆಸುವವರ ನಡುವೆ, ಹಾವೇರಿ ವಿಶ್ವವಿದ್ಯಾಲಯವು ನೀಡಲು ಮುಂದಾಗಿದ್ದ ಗೌರವ ಡಾಕ್ಟರೇಟ್ ಅನ್ನು, ಸಾರ್ವಜನಿಕ ಸೇವೆಯಲ್ಲಿ ಇರುವುದರಿಂದ, ಸಾರ್ವಜನಿಕ ಸೇವೆಗೆ ಯಾವುದೇ ಪ್ರಶಸ್ತಿಯನ್ನು ಅಪೇಕ್ಷಿಸುವುದಿಲ್ಲ ಎಂದು ನಿರಾಕರಿಸುವ ಮೂಲಕ ಮಾಜಿ

[ccc_my_favorite_select_button post_id="120744"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆ (Marriage) ಮಾಡಿಲ್ಲವೆಂದು ಜಗಳ ತಗೆದ ಮಗ (Son) ಸ್ವಂತ ತಾಯಿಯನ್ನೇ (Mother) ಹೊಡೆದು ಕೊಂದಿರುವ (Murder) ಘಟನೆ ವರದಿಯಾಗಿದೆ.

[ccc_my_favorite_select_button post_id="120643"]
ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ (Accident) ಪಲ್ಟಿಯಾದ ಪರಿಣಾಮ 9 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ನಡೆದಿದೆ.

[ccc_my_favorite_select_button post_id="120735"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]