ಸದನಕ್ಕೆ ಸುಳ್ಳು ಮಾಹಿತಿ ನೀಡಿದ ಸಚಿವೆ, ಮಹಿಳೆಯರ ಕ್ಷಮೆ ಯಾಚಿಸಲಿ: ಆರ್.ಅಶೋಕ

RCB stampede case; R. Ashoka demands resignation of CM, DCM

ಬೆಂಗಳೂರು: ಗೃಹಲಕ್ಷ್ಮಿ ಯೋಜನೆ ಕುರಿತು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸದನಕ್ಕೆ ಸುಳ್ಳು ಮಾಹಿತಿ ನೀಡಿದ್ದಾರೆ. ಆದ್ದರಿಂದ ಸಚಿವರು 1.20 ಕೋಟಿ ಫಲಾನುಭವಿ ಮಹಿಳೆಯರ ಬಳಿ ಕ್ಷಮೆ ಯಾಚಿಸಬೇಕೆಂದು ಪ್ರತಿಪಕ್ಷ ನಾಯಕ ಆರ್.ಅಶೋಕ ( R. Ashoka) ಆಗ್ರಹಿಸಿದರು.

ವಿಧಾನಸಭೆಯಲ್ಲಿ ಮಾತನಾಡಿದ ಅವರು, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಗೃಹಲಕ್ಷ್ಮಿ ಯೋಜನೆ ಕುರಿತು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ. ಇದನ್ನು ಮುಖ್ಯಮಂತ್ರಿ ಕೂಡ ಒಪ್ಪಿಕೊಂಡಿದ್ದಾರೆ. ಈ ಯೋಜನೆ 1.20 ಕೋಟಿ ಜನರಿಗೆ ಸಂಬಂಧಿಸಿದೆ.

ಜನವರಿ, ಫೆಬ್ರವರಿ ತಿಂಗಳ ಸಹಾಯಧನ ನೀಡದೆ ಮೇ, ಜೂನ್, ಜುಲೈ ತಿಂಗಳ ಸಹಾಯಧನ ನೀಡಲು ಹೇಗೆ ಸಾಧ್ಯ? ಈ ತಿಂಗಳ ಸಹಾಯಧನ ನೀಡದೆ ಮುಂದಕ್ಕೆ ಹೋಗಲಾಗಿದೆ ಎಂದರೆ ಜನರಿಗೆ ಮೋಸ ಮಾಡಿದ್ದಾರೆ ಅಥವಾ ಖಜಾನೆ ಖಾಲಿಯಾಗಿದೆ ಎಂದೇ ಅರ್ಥ ಎಂದರು.

ಈ ಎರಡು ತಿಂಗಳ ಸಹಾಯಧನವನ್ನು ಏಕೆ ಸ್ಥಗಿತ ಮಾಡಲಾಗಿದೆ ಎಂದು ಸರ್ಕಾರ ಸದನಕ್ಕೆ ಮಾಹಿತಿ ನೀಡಬೇಕು. ಈ ಹಣವನ್ನು ಕಾಂಗ್ರೆಸ್ ಪಕ್ಷ ಬಳಸಿಕೊಂಡಿದೆಯೇ ಅಥವಾ ಸ್ವಂತಕ್ಕೆ ಸಚಿವರು ಬಳಸಿಕೊಂಡರಾ ಎಂಬ ಬಗ್ಗೆ ತಿಳಿಯಬೇಕಿದೆ. ಕೋಟ್ಯಂತರ ಮಹಿಳೆಯರು ಇದೇ ಹಣ ನಂಬಿರುತ್ತಾರೆ‌.

ಮನೆಗೆ ದಿನಸಿ, ಸಾಲ ಮರುಪಾವತಿಗೆ ಈ ಹಣ ಅವಲಂಬಿಸಿರುತ್ತಾರೆ. ಪ್ರತಿ ತಿಂಗಳು 2,480 ಕೋಟಿ ರೂ. ನೀಡಬೇಕು. ಅಂದರೆ ಎರಡು ತಿಂಗಳು 5,000 ಕೋಟಿ ರೂ. ನೀಡಬೇಕು. ಇಷ್ಟೊಂದು ಹಣ ಎಲ್ಲಿಗೆ ಹೋಗಿದೆ? ಎರಡು ತಿಂಗಳು ಬಿಟ್ಟು ನೇರವಾಗಿ ಮುಂದಕ್ಕೆ ಹೋಗಲು ಯಾವ ಕಾನೂನಿನಲ್ಲಿ ಅವಕಾಶವಿದೆ ಎಂದು ಪ್ರಶ್ನೆ ಮಾಡಿದರು.

ಈ ನಡುವೆ ಸಚಿವರು ಸದನಕ್ಕೆ ಬರುತ್ತಿಲ್ಲ. ಸದನಕ್ಕೆ ತಪ್ಪು ಮಾಹಿತಿ ನೀಡಿ ಅಗೌರವ ತೋರಲಾಗಿದೆ. ಶಾಸಕರು ಪ್ರಶ್ನೆ ಕೇಳಿದಾಗ ಸರಿಯಾದ ಉತ್ತರ ನಂತರ ನೀಡುತ್ತೇನೆ ಎಂದಿದ್ದರೆ ಸಾಕಿತ್ತು. ಆದರೆ ತಪ್ಪಾದ ಉತ್ತರ ನೀಡಬಾರದಿತ್ತು. ಈಗ ತಪ್ಪು ಮಾಹಿತಿ ನೀಡಿದ್ದಕ್ಕೆ ಸಚಿವರು ಮಹಿಳೆಯರ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿದರು‌.

ನಂತರ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಮಾತಿಗೆ ಪ್ರತಿಕ್ರಿಯಿಸಿದ ಅವರು, ಯಾರಿಗಾದರೂ ಮನಸ್ಸಿಗೆ ನೋವಾಗಿದ್ದರೆ ಎಂಬ ಮಾತು ಬೇಕಿರಲಿಲ್ಲ. ಈ ಸುಳ್ಳಿನಿಂದ ಎಲ್ಲರ ಮನಸ್ಸಿಗೂ ನೋವಾಗಿದೆ. ಆದ್ದರಿಂದ ನೇರವಾಗಿ ಕ್ಷಮೆ ಕೇಳಬೇಕು. ಈ ರೀತಿ ತಪ್ಪಾದ ಮಾಹಿತಿ ನೀಡಿದ್ದು ಯಾವ ಅಧಿಕಾರಿ ಎಂಬುದನ್ನು ತಿಳಿಸಬೇಕು. ಎರಡು ತಿಂಗಳ ಸಹಾಯಧನ ಯಾವಾಗ ನೀಡಲಾಗುವುದು ಎಂದು ಹೇಳಬೇಕು ಎಂದು ಒತ್ತಾಯಿಸಿದರು.

ಆದರೆ ಈ ಬಗ್ಗೆ ಸಚಿವರು ಸ್ಪಷ್ಟೀಕರಣ ನೀಡದಿದ್ದಾಗ ಪ್ರತಿಪಕ್ಷದ ಎಲ್ಲ ಶಾಸಕರು ಸಭಾತ್ಯಾಗ ಮಾಡಿದರು‌.

ರಾಜಕೀಯ

ಡಾಕ್ಟರೇಟ್ ನಿರಾಕರಿಸಿ ಮಾದರಿಯಾದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಡಾಕ್ಟರೇಟ್ ನಿರಾಕರಿಸಿ ಮಾದರಿಯಾದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಡಾಕ್ಟರೇಟ್ ಪಡೆಯಲು ತರಾವರಿ ಪ್ರಯತ್ನ ನಡೆಸುವವರ ನಡುವೆ, ಹಾವೇರಿ ವಿಶ್ವವಿದ್ಯಾಲಯವು ನೀಡಲು ಮುಂದಾಗಿದ್ದ ಗೌರವ ಡಾಕ್ಟರೇಟ್ ಅನ್ನು, ಸಾರ್ವಜನಿಕ ಸೇವೆಯಲ್ಲಿ ಇರುವುದರಿಂದ, ಸಾರ್ವಜನಿಕ ಸೇವೆಗೆ ಯಾವುದೇ ಪ್ರಶಸ್ತಿಯನ್ನು ಅಪೇಕ್ಷಿಸುವುದಿಲ್ಲ ಎಂದು ನಿರಾಕರಿಸುವ ಮೂಲಕ ಮಾಜಿ

[ccc_my_favorite_select_button post_id="120744"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆ (Marriage) ಮಾಡಿಲ್ಲವೆಂದು ಜಗಳ ತಗೆದ ಮಗ (Son) ಸ್ವಂತ ತಾಯಿಯನ್ನೇ (Mother) ಹೊಡೆದು ಕೊಂದಿರುವ (Murder) ಘಟನೆ ವರದಿಯಾಗಿದೆ.

[ccc_my_favorite_select_button post_id="120643"]
ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ (Accident) ಪಲ್ಟಿಯಾದ ಪರಿಣಾಮ 9 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ನಡೆದಿದೆ.

[ccc_my_favorite_select_button post_id="120735"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]