Police arrest thief involved in 97 house burglaries..!

97 ಮನೆಗಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದ ಕಳ್ಳನ ಎಡೆಮುರಿ ಕಟ್ಟಿದ ಪೊಲೀಸರು..!

ಚಿಕ್ಕಬಳ್ಳಾಪುರ: ಇವನು ಅಂತಿಂಥ ಕಳ್ಳನಲ್ಲ (Thief), ಪ್ರತಿ ದಿನವೂ ಒಂದಲ್ಲ ಒಂದು ಮನೆಗೆ ಕನ್ನ ಹಾಕೋದು ಇವನ ಕಾಯಕ, ಅವನ ಮೇಲೆ ಆಂಧ್ರ ಹಾಗೂ ತೆಲಂಗಾಣದಲ್ಲಿ ಇರೋದು 97 ಮನೆಗಳ್ಳತನ ಪ್ರಕರಣಗಳು, ಹೀಗೆ ಕನ್ನ ಹಾಕಿದ ಹಣದಲ್ಲಿ ಕುಡಿದು ತೂರಾಡಿ ಮೋಜು ಮಸ್ತಿ ಮಾಡೋದೆ ಅವನಿಗೆ ಚಟ.

ಇನ್ನೂ ಸ್ನೇಹಿತ ನೊಡೋಕೆ ಅಂತ ಕರ್ನಾಟಕಕ್ಕೆ ಬಂದವನು ಕರ್ನಾಟಕದಲ್ಲೂ ಮನೆಗಳ್ಳತನ ಮಾಡಿ ಎಸ್ಕೇಪ್ ಆಗಿದ್ದ. ಇಂತಹ ಖತರ್ನಾಕ್ ಕಳ್ಳನನ್ನ ಕರ್ನಾಟಕ ಪೊಲೀಸರು ಎಡೆಮುರಿ ಕಟ್ಟಿ ಜೈಲಿಗಟ್ಟಿದ್ದಾರೆ..

ಯಾರು ಈ ಕಳ್ಳ..?

ಹೌದು 97 ಮನೆಗಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿ ಈಗ ಕರ್ನಾಟಕ ಪೊಲೀಸರ ಅತಿಥಿಯಾಗಿ ಜೈಲು ಸೇರಿರೋ ಈ ಖತರ್ನಾಕ್ ಮನೆಗಳ್ಳನ ಹೆಸರು ರಾಹುಲ್ ಕುಮಾರ್ ಶರ್ಮಾ ಅಂತ, ಮೂಲತಃ ರಾಜಸ್ತಾನದವನಾದರೂ ತೆಲಂಗಾಣದಲ್ಲಿ ವಾಸವಾಗಿದ್ದಾನೆ.

15 ವರ್ಷಕ್ಕೆ ಮನೆಯಿಂದ ಹೊರ ಬಂದವನು ಮಾಡ್ತಿರೋ ವೃತ್ತಿಯೇ ಮನೆಗಳ್ಳತನ, ಸರಿಸುಮಾರು 38 ವರ್ಷದ ಈ ರಾಹುಲ್ ಇದುವರೆಗೂ ತೆಲಂಗಾಣ ಹಾಗೂ ಆಂಧ್ರಪ್ರದೇಶದಲ್ಲಿ 97 ಕಡೆ ಮನೆಗಳ್ಳತನ ಮಾಡಿ ಖತರ್ನಾಕ್ ಕಳ್ಳನಾಗಿದ್ದಾನೆ.

ಇನ್ನೂ ಇದೇ ರಾಹುಲ್ ಕುಮಾರ್ ಶರ್ಮಾ ತನ್ನ ಸ್ನೇಹಿತ ಸೈಯದ್ ಷರೀಫ್ ಜೊತೆ ಸೇರಿ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ಪಟ್ಟಣಕ್ಕೆ ಮತ್ತೋರ್ವ ಸ್ನೇಹಿತ ಅಲ್ಲಾ ಬಕಾಷ್ ನ ನೋಡೋಕೆ ಅಂತ ಬಂದಿದ್ದರು.. ಇನ್ನೂ ತೆಲಂಗಾಣದಿಂದ ಸ್ನೇಹಿತರು ಬಂದ್ರು ಅಂತ ಅಲ್ಲಾ ಬಕಾಷ್ ತಮ್ಮನಾಯಕನಹಳ್ಳಿ ಬಳಿಯ ಬಾರ್ ವೊಂದರಲ್ಲಿ ಪಾರ್ಟಿ ಸಹ ಕೊಡಿಸಿದ್ದ.

ಕುಡಿದು ಇನ್ನೇನು ತೆಲಂಗಾಣಕ್ಕೆ ವಾಪಾಸ್ ಹೋಗಬೇಕು ಅಂತ ಬಂದವರು, ಚಿಕ್ಕಬಳ್ಳಾಪುರದ ಅಣಕನೂರು ಬಳಿಯ ರಸ್ತೆ ಬದಿ ಬೇಕರಿವೊಂದರಲ್ಲಿ ಟೀ ಕುಡಿಯೋಕೆ ಅಂತ ಗಾಡಿ ನಿಲ್ಲಿಸಿದ್ರಂತೆ, ಈ ವೇಳೆ ಖತರ್ನಾಕ್ ಕಳ್ಳ ರಾಹುಲ್ ಕುಮಾರ್ ಶರ್ಮಾ ಮೂತ್ರ ವಿಸರ್ಜನೆಗೆ ಅಂತ ಹೋದವನು ರಸ್ತೆ ಬದಿಯಲ್ಲೇ ಬೀಗ ಹಾಕಿದ್ದ ಮನೆಯೊಂದು ಕಣ್ಣಿಗೆ ಕಂಡಿದ್ದೇ ತಡ, ಮನೆಯ ಬೀಗವನ್ನ ಕ್ಷಣ ಮಾತ್ರದಲ್ಲೇ ಒಡೆದು ಹಾಕಿ ಮನೆಯಲ್ಲಿದ್ದ ಚಿನ್ನಾಭರಣ ನಗದು ದೋಚಿದ್ದಾನೆ.

ಅಂದಹಾಗೆ ಅಣಕನೂರು ಗ್ರಾಮದ ಮುನಿಯಪ್ಪ ಮುನಿನರಸಮ್ಮ ದಂಪತಿ ಮನೆಗೆ ಬೀಗ ಹಾಕಿ ಹೊಲ ಕಟಾವಿಗೆ ಅಂತ ಜಮೀನಿನತ್ತ ತೆರಳಿದ್ರು, ಹೀಗಾಗಿ ಮನೆಯಲ್ಲಿ ಯಾರೂ ಇಲ್ಲ ಮನೆಗೆ ಬೀಗ ಹಾಕಿದೆ ಅಂತ ಖತರ್ನಾಕ್ ರಾಹುಲ್ ಕುಮಾರ್ ಶರ್ಮಾ ಹಿಂದೆ ಮುಂದೆ ಯೋಚನೆ ಮಾಡದೆ ಮನೆಯ ಬೀಗ ಹೊಡೆದು, ಬಿರುವಿನಲ್ಲಿದ್ದ 2 ಲಕ್ಷ 50 ಸಾವಿರ ನಗದು, 35 ಗ್ರಾಂ ತೂಕದ ಚಿನ್ನಾಭರಣಗಳನ್ನ ಕದ್ದಿದ್ದ.

ಇನ್ನು ಮಗಳ ಮದುವೆಗೆ ಅಂತ ಮಾಡಿಸಿದ್ದ ಚಿನ್ನಾಭರಣ ಕಳ್ಳನ ಪಾಲಾಗಿತ್ತು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸರು ಸಿಸಿಟಿವಿ ದೃಶ್ಯಾವಳಿ, ಫಿಂಗರ್ ಪ್ರಿಂಟ್ ಗಳ ಆಧಾರದ ಮೇಲೆ ಕಿಲಾಡಿ ಕಳ್ಳ ರಾಹುಲ್ ಕುಮಾರ್ ಶರ್ಮಾ, ಹಾಗೂ ಸೈಯದ್ ಷರೀಫ್ ಹಾಗೂ ಅಲ್ಲಾ ಬಕಾಷ್ ನನ್ನ ಬಂಧಿಸಿ ಜೈಲಿಗಟ್ಟಿದ್ದಾರೆ.

ಇನ್ನೂ ತೆಲಂಗಾಣ ಹಾಗೂ ಆಂಧ್ರಪ್ರದೇಶದಲ್ಲಿ 97 ಕಡೆ ಮನೆಗಳವು ಪ್ರಕರಣಗಳಲ್ಲಿ ಭಾಗಿಯಾಗಿರೋ ಈ ಖತರ್ನಾಕ್ ರಾಹುಲ್ ಕುಮಾರ್ ಶರ್ಮಾ ಇದೇ ಮೊದಲನೇ ಬಾರಿಗೆ ಕರ್ನಾಟಕದಲ್ಲಿ ಕಳ್ಳತನ ಮಾಡಿದ್ದ. ಆದ್ರೆ ಕರ್ನಾಟಕ ಪೊಲೀಸರು ಮೊದಲ ಪ್ರಕರಣದಲ್ಲೇ ಆರೋಪಿಗಳನ್ನ ಬಂಧಿಸಿ ಜೈಲಿಗಟ್ಟಿದ್ದಾರೆ.

ಬಂಧಿತನಿಂದ 20 ಗ್ರಾಂ ಚಿನ್ನಾಭರಣ ಹಾಗೂ 25 ಸಾವಿರ ನಗದು ಸೇರಿದಂತೆ ಕೃತ್ಯಕ್ಕೆ ಬಳಸಿದ ಬೈಕ್ ಸಹ ಸೀಝ್ ಮಾಡಿದ್ದಾರೆ.

ರಾಜಕೀಯ

ಕೇಂದ್ರ ಬಿಜೆಪಿ ಸರ್ಕಾರ ಕರ್ನಾಟಕಕ್ಕೆ ಕೊಟ್ಟ ಖಾಲಿ ಟ್ರಂಕ್ ಹಿಡಿದಿರುವ ತೇಜಸ್ವಿ ಸೂರ್ಯ: ಡಿ.ಕೆ. ಸುರೇಶ್ ವ್ಯಂಗ್ಯ

ಕೇಂದ್ರ ಬಿಜೆಪಿ ಸರ್ಕಾರ ಕರ್ನಾಟಕಕ್ಕೆ ಕೊಟ್ಟ ಖಾಲಿ ಟ್ರಂಕ್ ಹಿಡಿದಿರುವ ತೇಜಸ್ವಿ ಸೂರ್ಯ:

"ಕಳೆದ 12 ವರ್ಷಗಳಿಂದ ಕೇಂದ್ರ ಬಿಜೆಪಿ ಸರ್ಕಾರ ಕರ್ನಾಟಕಕ್ಕೆ ಕೊಟ್ಟಿರುವ ಖಾಲಿ ಟ್ರಂಕ್ ಅನ್ನು ಸಂಸದ ತೇಜಸ್ವಿ ಸೂರ್ಯ ಅವರು ಹಿಡಿದಿರುವುದು" ಎಂದು ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ (D.K. Suresh) ಅವರು ತಿರುಗೇಟು

[ccc_my_favorite_select_button post_id="119275"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

RCB: ಮತ್ತೆ ಕಪ್ ನಮ್ದು

RCB: ಮತ್ತೆ ಕಪ್ ನಮ್ದು

4ನೇ ಆವೃತ್ತಿಯ ಮಹಿಳಾ ಪ್ರೀಮಿ ಯರ್ ಲೀಗ್ (ಡಬ್ಲ್ಯೂಪಿ ಎಲ್) ಟೂರ್ನಿಯಲ್ಲಿ ಸ್ಮೃತಿ ಮಂಧಾನಾ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಚಾಂಪಿಯನ್ ಆಗಿ ಹೊರ ಹೊಮ್ಮಿದ್ದು, ಸಿಎಂ ಸಿದ್ದರಾಮಯ್ಯ (Cmsiddaramaiah), ಡಿಸಿಎಂ

[ccc_my_favorite_select_button post_id="119174"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ದೊಡ್ಡಬಳ್ಳಾಪುರ: ಪತ್ನಿಗೆ ಚಿಕಿತ್ಸೆ ಕೊಡಿಸಿ ಮನೆಗೆ ಕರೆದೊಯ್ಯುತ್ತಿದ್ದವ ಅಪಘಾತದಲ್ಲಿ ಸಾವು.‌.!

ದೊಡ್ಡಬಳ್ಳಾಪುರ: ಪತ್ನಿಗೆ ಚಿಕಿತ್ಸೆ ಕೊಡಿಸಿ ಮನೆಗೆ ಕರೆದೊಯ್ಯುತ್ತಿದ್ದವ ಅಪಘಾತದಲ್ಲಿ ಸಾವು.‌.!

ಮಡದಿಗೆ ಉಂಟಾಗಿದ್ದ ಅನಾರೋಗ್ಯ ಕಾರಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಮನೆಗೆ ಕರೆದೊಯ್ಯುತ್ತಿದ್ದ ವ್ಯಕ್ತಿ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಸಾವನಪ್ಪಿರುವ ಘಟನೆ (Accident) ತಾಲೂಕಿನಲ್ಲಿ ಸಂಭವಿಸಿದೆ.

[ccc_my_favorite_select_button post_id="119259"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!