CM Siddaramaiah is a complete liar, there is a split in the party: R. Ashoka

ಸಿಎಂ ಸಿದ್ದರಾಮಯ್ಯ ಅಪ್ಪಟ ಸುಳ್ಳುಗಾರ, ಪಕ್ಷದಲ್ಲಿ ಒಡಕು: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಬೆಂಗಳೂರು: ಬೆಳಗಾವಿ ಅಧಿವೇಶನದಲ್ಲಿ ಕಾಂಗ್ರೆಸ್‌ ಸರ್ಕಾರ ಉತ್ತರ ಕರ್ನಾಟಕಕ್ಕೆ ಏನೂ ಕೊಟ್ಟಿಲ್ಲ. ಕೇವಲ ಸುಳ್ಳುಗಳನ್ನೇ ಹೇಳಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R. Ashoka) ಆಕ್ರೋಶ ವ್ಯಕ್ತಪಡಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿ ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆಯಾಗುತ್ತದೆ. ಈ ಬಾರಿ ಬಿಜೆಪಿಯಿಂದ ಈ ಬಗ್ಗೆ ಒತ್ತು ನೀಡಲಾಗಿತ್ತು. ಒಟ್ಟು 21 ಗಂಟೆಗಳ ಕಾಲ ಚರ್ಚೆಯಾದರೂ ಹೊಳೆಯಲ್ಲಿ ಹುಣಸೆ ಹಣ್ಣು ತೊಳೆದಂತಾಗಿದೆ.

ಹದಿನಾರು ಬಾರಿ ಬಜೆಟ್‌ ಮಂಡಿಸಿದ ಸಿಎಂ ಸಿದ್ದರಾಮಯ್ಯ ಉತ್ತರ ಕರ್ನಾಟಕಕ್ಕೆ ಅನ್ಯಾಯ ಆಗಿದೆ ಎನ್ನುತ್ತಾರೆ ಎಂದರೆ ಅದು ಅವರದ್ದೇ ವಿಫಲತೆ.

ಲೋಕೋಪಯೋಗಿ, ನೀರಾವರಿ ಸಚಿವರು ಇದ್ದರೂ ಉತ್ತರ ಕರ್ನಾಟಕದ ರಸ್ತೆಗಳಲ್ಲಿ ಗುಂಡಿಗಳಿವೆ. ಪ್ರತಿ ವರ್ಷ 10,000 ಕೋಟಿ ರೂ. ನೀಡಲಾಗುವುದು ಎಂದು ಹೇಳಿ, ನಂತರ ಇಡೀ ರಾಜ್ಯಕ್ಕೆ ಎಂದು ಸುಳ್ಳು ಹೇಳುತ್ತಾರೆ ಎಂದರು.

ನೀರಾವರಿ ಯೋಜನೆಗಳ ಬಗ್ಗೆ ಮೊದಲು ಭರವಸೆಗಳನ್ನು ನೀಡಿ, ನಂತರ ಕೋರ್ಟ್‌ನಲ್ಲಿ ತಡೆಯಾಜ್ಞೆ ಇದೆ ಎನ್ನುತ್ತಾರೆ. ಗೋವಿಂದರಾವ್‌ ಆಯೋಗದ ವರದಿ ಇನ್ನೂ ಪೂರ್ಣಗೊಂಡಿಲ್ಲ. ಸಿಎಂ ಸಿದ್ದರಾಮಯ್ಯ ಅಪ್ಪಟ ಸುಳ್ಳುಗಾರನಾಗಿ ಸುಳ್ಳುಗಳನ್ನು ಹೇಳಿದ್ದಾರೆ.

ಮುಖ್ಯಮಂತ್ರಿ ಹೊಸದೇನೋ ಘೋಷಣೆ ಮಾಡುತ್ತಾರೆ ಎಂದು ಜನರು ಅಂದುಕೊಂಡಿದ್ದರು. ಆದರೆ ಅಲ್ಲಿ ವಿದ್ಯುತ್‌ ಇಲ್ಲದಂತೆ ಮಾಡಿ ಇಡೀ ಉತ್ತರ ಕರ್ನಾಟಕದ ಬೆಳಕು ಕಸಿದುಕೊಂಡಿದ್ದಾರೆ. ಕೇವಲ ಕೇಂದ್ರ ಸರ್ಕಾರದ ಮೇಲೆ ಆರೋಪಗಳನ್ನು ಮಾತ್ರ ಮಾಡಿದ್ದಾರೆ.

ಕೇಂದ್ರದ ರೈಲ್ವೆ ಯೋಜನೆಗೆ ಭೂಮಿ ನೀಡಿಲ್ಲ, ಕಸ ನಿರ್ವಹಣೆ ಯೋಜನೆಗೆ ತಮ್ಮ ಪಾಲನ್ನೇ ನೀಡಿಲ್ಲ. ಎಲ್ಲಮ್ಮ ದೇವಾಲಯ ಯೋಜನೆಯ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಅನುದಾನ ನೀಡಿದ್ದರೂ ಆರಂಭ ಮಾಡಿಲ್ಲ. ಬೆಳಗಾವಿಯ ಕೆರೆಗಳಿಗೆ ಸುಮಾರು 50 ಕೋಟಿ ರೂ. ನೀಡಿದ್ದರೂ ಅದನ್ನು ಬಳಸಿಲ್ಲ.

ಜಲಜೀವನ್‌ ಮಿಷನ್‌ ಯೋಜನೆಯ ಹಣ ಬಿಡುಗಡೆ ಬಗ್ಗೆ ಕಾಂಗ್ರೆಸ್‌ ಸಂಸದರು ಲೋಕಸಭೆಯಲ್ಲಿ ಪ್ರಶ್ನೆ ಕೇಳಿದ್ದು, ಬಿಲ್‌ ಸಲ್ಲಿಸಿ ಎಂಬ ಉತ್ತರ ಬಂದಿದೆ. ಸಿಸಿ ಪಾಟೀಲ್‌ ಸಮಿತಿಗೆ ಅಧಿಕಾರಿಗಳು ಉತ್ತರ ನೀಡಿದ್ದು, ಬಿಲ್‌ ಸಲ್ಲಿಸಲು ಆಗಿಲ್ಲ ಎಂದಿದ್ದಾರೆ ಎಂದರು.

ಇಷ್ಟೆಲ್ಲ ಆದಮೇಲೂ ಅಭಿವೃದ್ಧಿ ಮಾಡಿದ್ದೇವೆ ಎಂದು ಕಾಂಗ್ರೆಸ್‌ ನಾಯಕರು ಹೇಳಿಕೊಳ್ಳುತ್ತಾರೆ. ಗೃಹಲಕ್ಷ್ಮಿ ಹಣದ ಬಗ್ಗೆ ನಮ್ಮ ಶಾಸಕರು ಪ್ರಶ್ನೆ ಕೇಳಿದರೆ ಅದಕ್ಕೆ ಉತ್ತರ ನೀಡಿಲ್ಲ. 5,000 ಕೋಟಿ ರೂ. ಎಲ್ಲಿಗೆ ಹೋಗಿದೆ ಎಂದು ಕೇಳಿದರೆ, ಆ ಬಗ್ಗೆ ಉತ್ತರ ಕೊಟ್ಟಿಲ್ಲ.

ಇದು ಸಾಲಗಾರರ ಸರ್ಕಾರವಾಗಿದ್ದು, ಭ್ರಷ್ಟಾಚಾರ ಮಾಡಿ ಲೂಟಿ ಮಾಡಿಕೊಂಡು ಹೋಗುತ್ತಿದೆ. ಈ ಸರ್ಕಾರದಿಂದ ಉತ್ತರ ಕರ್ನಾಟಕಕ್ಕೆ ಇನ್ನಷ್ಟು ಕೆಟ್ಟದೇ ಆಗಿದೆ. ಶಾಸಕರು ಡಿನ್ನರ್‌ ಪಾರ್ಟಿ ಮಾಡಿಕೊಂಡು ಕಾಲ ಕಳೆಯುತ್ತಿದ್ದಾರೆ.

ಒಡಕು ಇಲ್ಲವೆಂದರೆ ಮುಖ್ಯಮಂತ್ರಿ ಸದನದಲ್ಲಿ ಭಾಷಣ ಮಾಡುವಾಗ ಎಲ್ಲರೂ ಇರಬೇಕಿತ್ತು. ಆದರೆ ಕೇವಲ 6 ಸಚಿವರಿದ್ದರು. ಶೇ.50 ರಷ್ಟು ಶಾಸಕರು ಇರಲೇ ಇಲ್ಲ. ಇಲ್ಲಿ ಮುಖ್ಯಮಂತ್ರಿಗೆ ಗ್ಯಾರಂಟಿ ಇಲ್ಲ. ಈ ಸರ್ಕಾರ ಉತ್ತರ ಕರ್ನಾಟಕಕ್ಕೆ ಚೊಂಬು ನೀಡಿದೆ ಎಂದು ದೂರಿದರು.

ರಾಜಕೀಯ

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಗೊಂದಲ..!?

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಗೊಂದಲ..!?

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆಯ (Bashettihalli Town Panchayat Election) 6 ಮತ್ತು 7ನೇ ವಾರ್ಡ್ನಲ್ಲಿ ಬಿಜೆಪಿ (BJP) ವತಿಯಿಂದ ಅಧಿಕೃತ ಅಭ್ಯರ್ಥಿಗಳು ಯಾರು ಎಂಬ ಗೊಂದಲ ಮುಖಂಡರು ಹಾಗೂ ಮತದಾರರಿಗೆ ಎದುರಾಗಿದೆ.

[ccc_my_favorite_select_button post_id="117550"]
ಕಲಾವಿದರಾದ ಉಮೇಶ್, ರಾಮಚಂದ್ರಯ್ಯ ಅವರಿಗೆ ದೊಡ್ಡಬಳ್ಳಾಪುರದಲ್ಲಿ ನುಡಿನಮನ

ಕಲಾವಿದರಾದ ಉಮೇಶ್, ರಾಮಚಂದ್ರಯ್ಯ ಅವರಿಗೆ ದೊಡ್ಡಬಳ್ಳಾಪುರದಲ್ಲಿ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಚಲನಚಿತ್ರ ಹಾಸ್ಯ ನಟ ಉಮೇಶ್ (Umesh) ಮತ್ತು ಜಾನಪದ ಕಲಾವಿದ ಶ್ಯಾಕಲದೇವನಪುರ ರಾಮಚಂದ್ರಯ್ಯ (Ramachandraiah) ಅವರಿಗೆ ನುಡಿನಮನ ಕಾರ್ಯಕ್ರಮ ನಡೆಯಿತು. 

[ccc_my_favorite_select_button post_id="117539"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದ ಎಂ.ಆ‌ರ್.ಜಾಹ್ನವಿಗೆ ಬಾಲ ವಿಕಾಸ ಅಕಾಡೆಮಿ ಪ್ರಶಸ್ತಿ

ದೊಡ್ಡಬಳ್ಳಾಪುರದ ಎಂ.ಆ‌ರ್.ಜಾಹ್ನವಿಗೆ ಬಾಲ ವಿಕಾಸ ಅಕಾಡೆಮಿ ಪ್ರಶಸ್ತಿ

ಇಲ್ಲಿನ ನಿಸರ್ಗ ಯೋಗ ಕೇಂದ್ರದ ಯೋಗಪಟು ಎಂ. ಆರ್. ಜಾಹ್ನವಿ (M.R. Jahnavi) ಅವರಿಗೆ ಧಾರವಾಡದ ಕರ್ನಾಟಕ ಬಾಲ ವಿಕಾಸ ಅಕಾಡೆಮಿ ವತಿಯಿಂದ 2023-24ನೇ ಸಾಲಿಗೆ ನೀಡಲಾಗುವ ಅಕಾಡೆಮಿ ಬಾಲ ಗೌರವ ಪ್ರಶಸ್ತಿ ಬಾಲ

[ccc_my_favorite_select_button post_id="117462"]
ವಿದ್ಯುತ್ ಸ್ಪರ್ಶಿಸಿ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿ ದುರ್ಮರಣ..!

ವಿದ್ಯುತ್ ಸ್ಪರ್ಶಿಸಿ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿ ದುರ್ಮರಣ..!

ಗೆಳೆಯರೊಂದಿಗೆ ಕ್ರಿಕೆಟ್ ಆಟವಾಡುವ ವೇಳೆ ಆಕಸ್ಮಿಕವಾಗಿ ವಿದ್ಯುತ್ ತಂತಿ ತುಳಿದ ಪರಿಣಾಮ ಸದಲಗಾ ಪಟ್ಟಣದ ಮೊರಾರ್ಜಿ ವಸತಿ ಶಾಲೆಯ (Morarji Residential School) ವಿದ್ಯಾರ್ಥಿ ಮೃತಪಟ್ಟಿರುವ ಘಟನೆ ಗುರುವಾರ ಸಂಜೆ ನಡೆದಿದೆ.

[ccc_my_favorite_select_button post_id="117526"]
ವಿಮಾನ ಪತನ; ನಾಸ್ಕರ್‌ನ ಮಾಜಿ ಚಾಲಕ, ಅವರ ಕುಟುಂಬ ಸೇರಿದಂತೆ ಏಳು ಸಾವು

ವಿಮಾನ ಪತನ; ನಾಸ್ಕರ್‌ನ ಮಾಜಿ ಚಾಲಕ, ಅವರ ಕುಟುಂಬ ಸೇರಿದಂತೆ ಏಳು ಸಾವು

ಉತ್ತರ ಕೆರೊಲಿನಾದ ಪ್ರಾದೇಶಿಕ ವಿಮಾನ ನಿಲ್ದಾಣದಲ್ಲಿ ಸಂಭವಿಸಿದ ವಿಮಾನ ಅಪಘಾತದಲ್ಲಿ (Plane crash) ಸಾವನ್ನಪ್ಪಿದ ಏಳು ಜನರಲ್ಲಿ ಮಾಜಿ ನಾಸ್ಕರ್ ಚಾಲಕ ಮತ್ತು ಅವರ ಕುಟುಂಬ ಸೇರಿದೆ ಎಂದು ಕಾರು ರೇಸಿಂಗ್ ಸಂಸ್ಥೆ ತಿಳಿಸಿದೆ.

[ccc_my_favorite_select_button post_id="117528"]

ಆರೋಗ್ಯ

ಸಿನಿಮಾ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video ನೋಡಿ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video

ಅಭಿಮಾನಿಗಳ ದಾಸ, ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ (Darshan) ಅಭಿನಯದ ಬಹುನಿರೀಕ್ಷಿತ ಚಿತ್ರ 'ದಿ ಡೆವಿಲ್' ಇಂದು (ಡಿ.11) ರಾಜ್ಯಾದ್ಯಂತ ಅದ್ಧೂರಿಯಾಗಿ ರಿಲೀಸ್ ಆಗಿದ್ದು, ಯಶಸ್ವಿ ಪ್ರದರ್ಶನ ಕಾಣುತ್ತಿದೆ.

[ccc_my_favorite_select_button post_id="117242"]
error: Content is protected !!