18th anniversary celebration at MSV Public School, Doddaballapur

ದೊಡ್ಡಬಳ್ಳಾಪುರದ ಎಂಎಸ್‌ವಿ ಪಬ್ಲಿಕ್ ಶಾಲೆಯಲ್ಲಿ 18ನೇ ವಾರ್ಷಿಕೋತ್ಸವ ಸಂಭ್ರಮ: ಆಪರೇಶನ್ “ಸಿಂಧೂರ್‌ಗೆ” ಗೌರವ

ದೊಡ್ಡಬಳ್ಳಾಪುರ; ತಾಲೂಕಿನ ಪ್ರತಿಷ್ಠಿತ ಶಾಲೆಯಾದ ಎಂಎಸ್‌ವಿ ಪಬ್ಲಿಕ್ ಶಾಲೆಯಲ್ಲಿ (MSV Public School) 18ನೇ ಶಾಲಾ ವಾರ್ಷಿಕೋತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಯಿತು.

ಭಾರತೀಯ ರಕ್ಷಣಾ ಪಡೆಯ ಹೆಗ್ಗುರುತಾದ ಆಪರೇಶನ್ ಸಿಂಧೂರ್ ನ ಗೌರವ ಸೂಚಕವಾಗಿ ಈ ಬಾರಿಯ ವಾರ್ಷಿಕೋತ್ಸವವನ್ನು ಸಿಂಧೂರ್ ಎಂದು ಹೆಸರಿಡಲಾಗಿತ್ತು.

ಈ ಕಾರ್ಯಕ್ರಮದ ಗೌರವ ಅತಿಥಿಗಳಾಗಿ ದ್ರೋಣಾಚಾರ್ಯ ಪ್ರಶಸ್ತಿ ಪುರಸ್ಕೃತರಾದ ಶ್ರೀ ವಿಶ್ವನಾಥ ರಾವ್ ಬೀಡು ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, ಪಠ್ಯದ ಜೊತೆಗೆ ಶಿಕ್ಷಣದಲ್ಲಿ ಸಹಪಠ್ಯ ಚಟುವಟಿಕೆಗಳು ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಅತ್ಯಗತ್ಯ. ಇವು ಕೇವಲ ಓದಷ್ಟೇ ಅಲ್ಲದೆ, ನಾಯಕತ್ವ, ಸಮಯ ನಿರ್ವಹಣೆ, ಸಾಮಾಜಿಕ, ಮತ್ತು ಸೃಜನಾತ್ಮಕ ಕೌಶಲ್ಯಗಳನ್ನು ಬೆಳೆಸುತ್ತವೆ, ಶೈಕ್ಷಣಿಕ ಅಂಕಗಳನ್ನು ಸುಧಾರಿಸುತ್ತವೆ, ಮತ್ತು ವಿದ್ಯಾರ್ಥಿಗಳನ್ನು ಆತ್ಮವಿಶ್ವಾಸವುಳ್ಳ, ಆರೋಗ್ಯಕರ ವ್ಯಕ್ತಿಗಳಾಗಿ ರೂಪಿಸುತ್ತವೆ, ಶಿಕ್ಷಣದ ಉದ್ದೇಶವನ್ನು ಪಠ್ಯದ ಗಡಿಗಳನ್ನು ಮೀರಿ ವಿಸ್ತರಿಸುತ್ತವೆ.

ಮಕ್ಕಳಲ್ಲಿರುವ ಹವ್ಯಾಸವನ್ನು ಗುರುತಿಸಿ ಅವರಿಗೆ ಬೆಂಬಲವಾಗಿ ನಿಂತಲ್ಲಿ ಮಕ್ಕಳ ಸರ್ವತೋಮುಖ ಏಳಿಗೆಗೆ ಕೈಜೋಡಿಸಬೇಕೆಂದು ಪೋಷಕರಿಗೆ ತಿಳಿಸಿದರು.

ಆರೋಗ್ಯವಂತ ದೇಹದಲ್ಲಿ ಆರೋಗ್ಯವಂತ ಮನಸ್ಸಿರುವಂತೆ, ನಮ್ಮ ಕ್ರೀಡಾ ಚಟುವಟಿಕೆಗಳು ನಮ್ಮ ವ್ಯಕ್ತಿತ್ವ ವಿಕಸನಕ್ಕೆ ಪೂರಕ ಎಂದು ಮನದಟ್ಟು ಮಾಡಿಸಿದರು.

ಶೈಕ್ಷಣಿಕ ಪ್ರಗತಿಯ ಜೊತೆಗೆ ಕ್ರೀಡೆಗೆ ಬೆಂಬಲ ನೀಡುತ್ತಾ ಉತ್ತಮ ಗುಣಮಟ್ಟದ ವಿದ್ಯಾಭ್ಯಾಸ ನೀಡುತ್ತಿರುವ ಎಂಎಸ್‌ವಿ ಶಾಲೆಯ ಆಡಳಿತ ಮಂಡಳಿಯನ್ನು ಅಭಿನಂದಿಸಿದರು.

ಇಂದು ನಾವು ಜಾಗತೀಕರಣ ಯುಗದಲ್ಲಿ ಜೀವಿಸುತ್ತಿದ್ದೇವೆ‌. ವಿಜ್ಞಾನ ತಂತ್ರಜ್ಞಾನ ದಲ್ಲಿ ಆದ ಹೊಸ ಹೊಸ ಆವಿಷ್ಕಾರಗಳಿಂದಾಗಿ ಇವತ್ತು ಅಂಗೈಯಲ್ಲಿ ಪ್ರಪಂಚ ಎನ್ನುವ ಪರಿಸ್ಥಿತಿ ನಿರ್ಮಾಣವಾಗಿದೆ. ಬೇಕು, ಬೇಡದ್ದವೆಲ್ಲ ಮೊಬೈಲ್ ನಲ್ಲಿಯೇ ನೋಡಬಹುದು. ಇಂತಹ ಸಂದರ್ಭದಲ್ಲಿ ವಿದ್ಯಾರ್ಥಿಗಳು ಕೇವಲ ಜ್ಞಾನ ಸಂಪಾದನೆಗಾಗಿ ಮಾತ್ರ ಮೊಬೈಲ್ ಅನ್ನು ಬಳಸಬೇಕು ಎಂಬ ಸಂದೇಶ ನೀಡಿದರು.

ಕಾರ್ಯಕ್ರಮದಲ್ಲಿ ಕಳೆದ ವರ್ಷದ ಸಿಬಿಎಸ್‌ಇ ಹತ್ತನೆಯ ತರಗತಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳನ್ನು ಪಡೆದ 19 ವಿದ್ಯಾರ್ಥಿಗಳಿಗೆ ಸನ್ಮಾನ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು.

ಸಿ.ಬಿ.ಎಸ್.ಇ ಪರೀಕ್ಷೆಯಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲೇ ಅತಿ ಹೆಚ್ಚು ಅಂಕಗಳಿಸಿದ ಗಿರೀಶ್ ಚಂದ್ರ ಡಿ,ಕೆ. ತನ್ನ ಅನುಭವಗಳನ್ನು ಹಂಚಿಕೊಂಡನು.

ಟೇಕ್ವಾಂಡೋ ಹಾಗೂ ಯೋಗಾಸನದಲ್ಲಿ ಸಾಧನೆಗೈದ ಐದು ಮಕ್ಕಳನ್ನೂ ಸಹ ಸನ್ಮಾನಿಸಲಾಯಿತು.

ಮಕ್ಕಳು ಆಕರ್ಷಕವಾದ ಟ್ರೋಫಿ ಮತ್ತು ಪ್ರಮಾಣ ಪತ್ರಗಳನ್ನು ಅತಿಥಿಗಳಿಂದ ಪಡೆದು ಸಂಭ್ರಮಿಸಿದರು.

2025-26ನೇ ಸಾಲಿನ ಶಾಲೆಯ ಕಾರ್ಯವೈಖರಿಗೆ ಹಾಗೂ ಶಾಲಾ ಚಟುವಟಿಕೆಗಳು ಮತ್ತು ಸಾಧನೆಗಳ ಕೈಪಿಡಿ “ವಾರ್ಷಿಕ ಶಾಲಾ ವರದಿ” ಯನ್ನು ಪ್ರಾಂಶುಪಾಲರಾದ ರೆಮ್ಯ ಬಿ.ವಿ. ಅವರು ಮಂಡಿಸಿದರು.

ಗುಣಮಟ್ಟದ ಶಿಕ್ಷಣ ಹಾಗೂ ಉತ್ತಮ ಶಿಸ್ತು, ಸಂಸ್ಕಾರ ಕಲಿಸಿ ದೇಶಕ್ಕೆ ಬಹುದೊಡ್ಡ ಕೊಡುಗೆಯನ್ನು ನೀಡಬಲ್ಲ ಉತ್ತಮ ಪ್ರಜೆಗಳ ನಿರ್ಮಾಣವೇ ನಮ್ಮ ಸಂಕಲ್ಪ. ಈ ನಿಟ್ಟಿನಲ್ಲಿ ನಾವು ಸದಾ ಅಚಲವಾಗಿ ಶ್ರಮಿಸುತ್ತೇವೆ. ಈ ನಿಟ್ಟಿನಲ್ಲಿ ಎಂದಿನಂತೆ ಪೋಷಕರ ಸಹಕಾರ ಮುಖ್ಯ ಪಾತ್ರ ವಹಿಸುತ್ತದೆ ಎಂದು ಈ ವೇಳೆ ಅವರು ಹೇಳಿದರು.

ಕಾರ್ಯಕ್ರಮದ ಅಂಗವಾಗಿ ನಮ್ಮ ದೇಶದ ಸಂಸ್ಕೃತಿ, ಆಚಾರ, ವಿಚಾರ, ಜನಪದ, ಸಾಹಿತ್ಯ, ಸಿನಿಮಾ ಮೊದಲಾದಗಳಿಗೆ ಸಂಬಂಧಪಟ್ಟಂತೆ ಆಯೋಜಿಸಲಾಗಿದ್ದ ಆಕರ್ಷಕವಾದ ನೃತ್ಯ ಕಾರ್ಯಕ್ರಮ ಸಂಜೆಯನ್ನು ಇನ್ನಷ್ಟು ರಸಸಂಜೆಗೊಳಿಸಿತು.

ಸತ್ಯಯುಗ, ತ್ರೇತಾಯುಗ, ದ್ವಾಪರ ಯುಗ ಹಾಗೂ ಕಲಿಯುಗಗಳನ್ನು ಪ್ರತಿನಿಧಿಸುವ ಸ್ವಾಗತನೃತ್ಯ “ಕಾಲಚಕ್ರ” ಕಾರ್ಯಕ್ರಮದ ಕಲಶವಿಟ್ಟಂತೆ ಇತ್ತು.

ಚೈನೀಸ್ ವಿಶೇಷ ನೃತ್ಯ, ಮಹಿಷಾಸುರ ಮರ್ದಿನಿ (ಅಯ್ಯಪ್ಪ ಸ್ವಾಮಿ), ಆಪರೇಷನ್ ಸಿಂಧೂರ್, ಪರಿಸರ ಸಂರಕ್ಷಣೆಯ ಕಾಳಜಿ ಯ ಕಾಂತಾರ, ಕ್ರಿಸ್ ಮಸ್, ಜಾನಪದ ಸಂಗಮ, ರೆಟ್ರೋ ರಾಗ, ನೇಪಾಳಿ ನೃತ್ಯ, ದಕ್ಷಿಣ ಭಾರತದ ಭಾಷಾ ಸಂಗಮ ಹೀಗೆ ವೈವಿದ್ಯತೆಯಿಂದ ಕೂಡಿದ ಸಾಂಸ್ಕೃತಿಕ ಕಾರ್ಯಕ್ರಮ ನೆರೆದಿದ್ದ ಪೋಷಕರನ್ನು ರಂಜಿಸಿತು.

ಕಾರ್ಯಕ್ರಮಕ್ಕೆ ಆಗಮಿಸಿದ್ದ ಪೋಷಕರು ಸಹ ವೇದಿಕೆಯ ಮೇಲೆ ತಮ್ಮ ತಮ್ಮ ಮಕ್ಕಳ ಪ್ರತಿಭೆಯನ್ನು ನೋಡಿ ಸಂತಸಪಟ್ಟರು. ಸುಮಾರು – 5000 ಸಾವಿರ ಪ್ರೇಕ್ಷಕರು ಕಾರ್ಯಕ್ರಮಕ್ಕೆ ಸಾಕ್ಷೀಭೂತರಾದರು.

ಶಾಲಾ ಅಧ್ಯಕ್ಷರಾದ ಎ ಸುಬ್ರಮಣ್ಯ, ಕಾರ್ಯದರ್ಶಿಗಳಾದ ಮಂಜುಳಾ ಸುಬ್ರಹ್ಮಣ್ಯ, ಉಪಾಧ್ಯಕ್ಷರಾದ ಸ್ವರೂಪ್, ಟ್ರಸ್ಟಿಗಳಾದ ಶ್ರೀಮತಿ ನಯನ ಸ್ವರೂಪ್, ಡಾ|| ಮೃದುಲಾ, ಶಾಲಾ ಪ್ರಾಂಶುಪಾಲರಾದ ರೆಮ್ಯ ಬಿ.ವಿ, ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗದವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ರಾಜಕೀಯ

ಕೊನೆ ಉಸಿರಿರುವವರೆಗೂ ರಾಜ್ಯದ ಸೇವೆ ಮಾಡುತ್ತೇನೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಕೊನೆ ಉಸಿರಿರುವವರೆಗೂ ರಾಜ್ಯದ ಸೇವೆ ಮಾಡುತ್ತೇನೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ವಿರೋಧ ಪಕ್ಷದವರು ನಮ್ಮ ಮೇಲೆ ಅಪಪ್ರಚಾರ ಮಾಡುತ್ತಿದ್ದಾರೆ. ಸರ್ಕಾರದಲ್ಲಿ ಅಭಿವೃದ್ಧಿಗೆ ಹಣವಿಲ್ಲ ಎಂಬ ಆರೋಪಗಳನ್ನು ಮಾಡುತ್ತಿದ್ದಾರೆ. ಎರಡುವರೆ ವರ್ಷಗಳಲ್ಲಿ 1932 ಕೋಟಿ ಗಳನ್ನು ಕೇವಲ ಅಭಿವೃದ್ಧಿಗಾಗಿಯೇ ವೆಚ್ಚ ಮಾಡಲಾಗಿದೆ: ಸಿಎಂ ಸಿದ್ದರಾಮಯ್ಯ (Cmsiddaramaiah)

[ccc_my_favorite_select_button post_id="118625"]
88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು: ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ

88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು: ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ

ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ತಿಳಿಸಿದರು.

[ccc_my_favorite_select_button post_id="118559"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಪ್ರೋತ್ಸಾಹ ಧನಕ್ಕಾಗಿ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನ

ಪ್ರೋತ್ಸಾಹ ಧನಕ್ಕಾಗಿ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನ

2024ನೇ ಕ್ಯಾಲೆಂಡರ್ ವರ್ಷದಲ್ಲಿ ಅಂತರರಾಷ್ಟ್ರೀಯ, ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಕ್ರೀಡಾಪಟುಗಳಿಂದ (Athletes) ಪ್ರೋತ್ಸಾಹ ಧನಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118551"]
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಇಂಡೋಮಿಮ್ ಉದ್ಯೋಗಿ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಇಂಡೋಮಿಮ್ ಉದ್ಯೋಗಿ ಆತ್ಮಹತ್ಯೆ..!

ರೈಲಿಗೆ ಸಿಲುಕಿ ಇಂಡೋಮಿಮ್ (Indomim) ಕಂಪನಿಯ ಉದ್ಯೋಗಿ ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ಶ್ರೀರಾಮನಹಳ್ಳಿ ಬಳಿ ಸಂಭವಿಸಿದೆ.

[ccc_my_favorite_select_button post_id="118633"]
ಅಪಘಾತ: ಮಗನನ್ನು ಶಾಲೆಗೆ ಬಿಡಲು ತೆರಳುತ್ತಿದ್ದ ತಾಯಿ, ಮಗು ದುರ್ಮರಣ..!

ಅಪಘಾತ: ಮಗನನ್ನು ಶಾಲೆಗೆ ಬಿಡಲು ತೆರಳುತ್ತಿದ್ದ ತಾಯಿ, ಮಗು ದುರ್ಮರಣ..!

ಬೆಳ್ಳಂಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ (Accident) ತಾಯಿ ಮತ್ತು ಮಗ ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ನಗರದ ವಿವೇಕನಗರ ಮುಖ್ಯ ರಸ್ತೆಯಲ್ಲಿ ಈ ಅವಘಡ ಸಂಭವಿಸಿದೆ.

[ccc_my_favorite_select_button post_id="118614"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!