
ದೊಡ್ಡಬಳ್ಳಾಪುರ: ನಗರದ ಶ್ರೀ ಅಯ್ಯಪ್ಪಸ್ವಾಮಿ ದೇವಾಲಯದಲ್ಲಿ (Ayyappa Swamy Temple) ಶ್ರೀ ಅಯ್ಯಪ್ಪಸ್ವಾಮಿ ಸೇವಾ ಅಭಿವೃದ್ಧಿ ಟ್ರಸ್ಟ್ನ ವತಿಯಿಂದ 52ನೇ ವರ್ಷದ ವಾರ್ಷಿಕ ಮಂಡಲ ಪೂಜಾ ಕಾರ್ಯಕ್ರಮಗಳು ಶ್ರದ್ಧಾ ಭಕ್ತಿ ಸಂಭ್ರಮಗಳಿಂದ ನೆರವೇರಿದವು.
ಮಂಡಲ ಪೂಜಾ ಕಾರ್ಯುಕ್ರಮದ ಅಂಗವಾಗಿ ದೇವಾಲಯದಲ್ಲಿ ಶ್ರೀ ಗಣ ಹೋಮ ನಡೆಯಿತು. ಶ್ರೀ ಅಯ್ಯಪ್ಪಸ್ವಾಮಿ, ಶ್ರೀ ಗಣೇಶ ಹಾಗೂ ಸುಬ್ರಹ್ಮಣ್ಯ ಸ್ವಾಮಿಗೆ ವಿಶೇಷ ಹೂವಿನ ಅಲಂಕಾರಗಳನ್ನು ಮಾಡಲಾಗಿತ್ತು.

ಅಯ್ಯಪ್ಪ ವ್ರತಧಾರಿಗಳಿಂದ ಸಾಮೂಹಿಕ ಭಜನೆ ನಡೆಯಿತು.
ನಾಗಲಾಪುರ ಸಂಸ್ಥಾನ ಮಠದ ತೇಜೇಶಲಿಂಗ ಶಿವಾಚಾರ್ಯ ಮಹಾಸ್ವಾಮೀಜಿ ಆಶೀರ್ವಚನ ನೀಡಿ, ಧಾರ್ಮಿಕ ಕಾರ್ಯಯಗಳಿಂದ ಉತ್ತಮ ಸಮಾಜದ ನಿರ್ಮಾಣ ಸಾಧ್ಯವಾಗಲಿದ್ದು, ನಮ್ಮ ದೇಶದಲ್ಲಿ ಹಲವಾರು ಸಂಸ್ಕೃತಿ, ಸಂಪ್ರದಾಯಗಳ ಆಚರಣೆಗಳಿವೆ. ಇಂತಹ ಆಚರಣೆಗಳು ಮಾನವೀಯ ಮೌಲ್ಯಗಳನ್ನು ಬಿಂಬಿಸಿ, ಸಮಾಜವನ್ನು ಒಗ್ಗೂಡಿಸುತ್ತವೆ.
ಧಾರ್ಮಿಕ ಆಚರಣೆಗಳ ಮೇಲೆ ನಮ್ಮ ನಂಬಿಕೆ, ಶ್ರದ್ದೆಗಳು ಜಗತ್ತಿನಲ್ಲಿಯೇ ವಿಶೇಷವಾಗಿವೆ. ಜೀವನದ ಯಶಸ್ಸು ಬರೀ ಹಣದಿಂದ ಸಾಧ್ಯವಿಲ್ಲ.
ಸೇವಾಕಾರ್ಯಿಗಳನ್ನು ಮಾಡುವುದು ಸಹ ಭಗವಂತನ ಸಾಕ್ಷಾತ್ಕಾರ ಮಾಡಿಕೊಳ್ಳುವ ಹಾದಿಯಾಗಿದೆ. 84 ಲಕ್ಷ ಜೀವ ರಾಶಿಯಲ್ಲಿ ಮಾನವ ಜನ್ಮ ಮಾತ್ರ, ದೇವತಾರಾಧನೆಯೊಂದಿಗ ಮೋಕ್ಷ ಪಡೆಯುತ್ತಾರೆ. ಇಂತಹ ಪವಿತ್ರ ಜನ್ಮವನ್ನು ಹಾನಿ ಮಾಡಿಕೊಳ್ಳದಿರಿ ಎಂದು ದಾಸರೇ ಹೇಳಿದ್ದಾರೆ. ಪರೋಪಕಾರದ ಮೂಲಕ ನಮ್ಮ ಜನ್ಮ ಸಾರ್ಥಕ ಪಡಿಸಿಕೊಳ್ಳಬೇಕು. ಭಗವಂತನ ಆರಾಧನೆಯಲ್ಲಿ ವ್ಯತಾಚರಣೆಗಳು ಸಹ ಪ್ರಮುಖ ಫಾತ್ರ ವಹಿಸುತ್ತವೆ.
ಮಹಿಳೆಯರು ಸಹ ವಿವಿಧ ಆಚರಣೆ ಆಚರಿಸುತ್ತಾರೆ. ವಿಶೇಷವಾಗಿ ಪುರುಷರು ಹೆಚ್ಚಾಗಿ ಆಚರಿಸುವ ಅಯ್ಯಪ್ಪಸ್ವಾಮಿ ವ್ಯತಾಚರಣೆ ಕಠಿಣ ವ್ರತದಿಂದ ತಮ್ಮ ಇಷ್ಟಾರ್ಥಗಳನ್ನು ನೆರವೇರಿಸಿಕೊಳ್ಳಲು ಭಗವಂತನ ಆರಾಧನೆ ಮಾಡುವುದು ವಿಶೇಷವಾಗಿದೆ. ಬದುಕಿನಲ್ಲಿ ಆಚಾರ ವಿಚಾರಗಳು ಉತ್ತಮವಾಗಿರಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ 2026ನೇ ಸಾಲಿನ ಸಾಲಿನ ಕ್ಯಾಲೆಂಡರ್ ಬಿಡುಗಡೆ ಮಾಡಲಾಯಿತು.
ಆ ನಂತರ ಮಹಾಮಂಗಳಾರತಿ ಹಾಗೂ ಅನ್ನಸಂತರ್ಪಣೆ ನಡೆಯಿತು.
ಶ್ರೀ ಅಯ್ಯಪ್ಪಸ್ವಾಮಿ ಸೇವಾ ಅಭಿವೃದ್ಧಿ ಟ್ರಸ್ಟ್ನ ಅಧ್ಯಕ್ಷ ಮಹದೇವಯ್ಯ, ಕಾರ್ಯಗದರ್ಶಿ ಬಿ.ವಿ.ಬಸವರಾಜು, ಸಮಿತಿ ಸದಸ್ಯರು ಸೇರಿದಂತೆ ಸಹಸ್ರಾರು ಭಕ್ತಾದಿಗಳು ಮಂಡಲ ಪೂಜೆಯಲ್ಲಿ ಭಾಗವಹಿಸಿದ್ದರು.
ಸಂಜೆ ನಗರದ ಪ್ರಮುಖ ಬೀದಿಗಳಲ್ಲಿ ನಡೆಯಲಿರುವ ಅಯ್ಯಪ್ಪಸ್ವಾಮಿ ಉತ್ಸವದಲ್ಲಿ ವೀರಭದ್ರ, ವೀರಗಾಸೆ ಕುಣಿತ, ಕೇರಳದ ಚಂಡೆ ವಾದ್ಯ, ದೇವರ ವೇಷಭೂಷಣಗಳ ಪ್ರದರ್ಶನದ ಕಲಾನೃತ್ಯಗಳೊಂದಿಗೆ ಶ್ರೀ ಅಯ್ಯಪ್ಪಸ್ವಾಮಿಯ ಭವ್ಯ ಮೆರವಣಿಗೆಯನ್ನು ನಗರದ ಪ್ರಮುಖ ಬೀದಿಗಳಲ್ಲಿ ನಡೆಸಲಾಯಿತು.

ಉತ್ಸವದಲ್ಲಿ ಮಕ್ಕಳು ಆರತಿ ತಟ್ಟೆಯಲ್ಲಿ ಜ್ಯೋತಿಯನ್ನು ಹಿಡಿದು ಸಾಗಿದರು.