Private channels that ignited a fire between Darshan-Sudeep fans..?!

ದರ್ಶನ್-ಸುದೀಪ್ ಅಭಿಮಾನಿಗಳ ನಡುವೆ ತಂದಿಟ್ಟ ಖಾಸಗಿ ಚಾನಲ್‌ಗಳು..?!

ಕೆ.ಎಂ.ಸಂತೋಷ್, ಆರೂಢಿ (ದೊಡ್ಡಬಳ್ಳಾಪುರ): ಕೆಲ ಖಾಸಗಿ ನ್ಯೂಸ್ ಚಾನಲ್‌ಗಳಿಗೆ (Private channels) ನಟ ದರ್ಶನ್ (Darshan) ಅಭಿಮಾನಿಗಳನ್ನು ಕೆರಳಿಸುವುದು, ಮತ್ತೋರ್ವ ನಟ ಎತ್ತಿಕಟ್ಟುವುದನ್ನೇ ಕಾಯಕ ಮಾಡಿಕೊಂಡಿವೆ ಎಂಬುದು ವೀಕ್ಷಕರ ಆರೋಪವಾಗಿದೆ.

ಗೆಳತಿಗೆ ಅಶ್ಲೀಲ ಸಂದೇಶ ಕಳುಹಿಸಿದ ವ್ಯಕ್ತಿಯೋರ್ವನ ಹತ್ಯೆ ಆರೋಪದಡಿಯಲ್ಲಿ ದರ್ಶನ್ ನ್ಯಾಯಾಂಗ ಬಂಧನದಲ್ಲಿದ್ದಾರೆ. ಈ ನಡುವೆ ಅವರ ನಟನೆಯ “ದಿ ಡೆವಿಲ್” ಸಿನಿಮಾ ಬಿಡುಗಡೆಯಾಗಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ‌.

ದರ್ಶನ್ ಅವರ ದಿ ಡೆವಿಲ್ ಸಿನಿಮಾ ಕುರಿತಂತೆ ನಕಾರಾತ್ಮಕ ವರದಿ ಪ್ರಸಾರ ಮಾಡಿದ್ದ ಕೆಲ ನ್ಯೂಸ್ ಚಾನಲ್‌ಗಳು, ಸಿನಿಮಾಗೆ ಹಿನ್ನಡೆ ಮಾಡಲು ಅನೇಕ ಕುತಂತ್ರ ನಡೆಸಿ ವಿಫಲವಾಗಿವೆ.

ಕಿಚ್ಚ ಸುದೀಪ್ ವಿರುದ್ಧವೂ ಷಡ್ಯಂತ್ರ..?!

ಇದರ ಬೆನ್ನಲ್ಲೇ ನಟ ಕಿಚ್ಚ ಸುದೀಪ್ ಅವರ ಮಾರ್ಕ್ ಸಿನಿಮಾ ಬಿಡುಗಡೆಯಾಗಲಿದ್ದು, ಈ ನಡುವೆ ಪ್ರೀ ರಿಲೀಸ್ ಈವೆಂಟ್ ನಲ್ಲಿ ಸುದೀಪ್ ಆಡಿದ ಮಾತನ್ನು ದರ್ಶನ್ಗೆ ಹೇಳಿದ್ದು ಎಂಬಂತೆ ಇಬ್ಬರು ನಟರ ಅಭಿಮಾನಿಗಳ ನಡುವೆ ಬೆಂಕಿ ಹಚ್ಚುವ ಕಾಯಕ ಮಾಡುತ್ತಿವೆ.

ಇಷ್ಟಕ್ಕೂ ಆಗಿದ್ದೇನು ಎಂದರೆ ಹುಬ್ಬಳ್ಳಿಯಲ್ಲಿ ಮಾರ್ಕ್ ಚಿತ್ರದ ಪ್ರೀ ರಿಲೀಸ್ ಈವೆಂಟ್ ಮಾಡಲಾಗಿತ್ತು. ಈ ಸಂದರ್ಭದಲ್ಲಿ ಸುದೀಪ್ ಅವರು ಕೆಲ ಮಾತು ಹುಬ್ಬಳ್ಳಿಯಲ್ಲಿ ಮಾತನಾಡಿದ್ರೆ ಎಲ್ಲಿ ತಟ್ಟಬೇಕೋ ಅಲ್ಲಿ ತಟ್ಟುತ್ತೆ. ಹೊರಗಡೆ ಒಂದು ಪಡೆ ಯುದ್ಧಕ್ಕೆ ರೆಡಿಯಾಗುತ್ತಿದೆ.

ನಾವು ಯುದ್ಧಕ್ಕೆ ಸಿದ್ಧ, ನಾವು ನಮ್ಮ ಮಾತಿಗೆ ಬದ್ದರಾಗಿದ್ದೇವೆ, ಸೈಲೆಂಟ್ ಆಗಿರೋದು ಒಳ್ಳೆಯದೋ ಕೆಟ್ಟದ್ದೋ ಗೊತ್ತಿಲ್ಲಾ. ಆದರೆ ನೀವು ನನ್ನ ಸ್ನೇಹಿತರು ಚೆನ್ನಾಗಿ ಇರಬೇಕು. ಅಂತ ಬಾಯಿ ಮುಚ್ಚಿಕೊಂಡು ಇದ್ದೆ, ಬಾಯಿ ಇಲ್ಲಾ ಅಂತ ಅಲ್ಲಾ ಎಂದು ಹೇಳಿದ್ದಾರೆ.

ಈ ಮಾತನ್ನು ಸಿನಿಮಾದ ಪೈರೆಸಿ ಕುರಿತಂತೆ ಹೇಳಿದ್ದಾರೆ ಎಂಬುದು ಸುದೀಪ್ ಬೆಂಬಲಿಗರ ಹೇಳಿಕೆಯಾಗಿದೆ. ಆದರೆ ನ್ಯೂಸ್ ಚಾನಲ್‌ಗಳು ಈ ಮಾತನ್ನು ದರ್ಶನ್ ಬೆಂಬಲಿಗರಿಗೇ ಹೇಳಿದ್ದು ಎಂಬಂತೆ ಸರಣಿ ವರದಿ ಮಾಡುವ ಮೂಲಕ ದರ್ಶನ್ ಹಾಗೂ ಸುದೀಪ್ ಅಭಿಮಾನಿಗಳ ನಡುವೆ ತಂದಿಟ್ಟು ತಮಾಷೆ ನೋಡುತ್ತಿವೆ‌.

ದರ್ಶನ್-ಸುದೀಪ್ ಅಭಿಮಾನಿಗಳ ನಡುವೆ ತಂದಿಟ್ಟ ಖಾಸಗಿ ಚಾನಲ್‌ಗಳು..?!

ಉರಿಯುವ ಬೆಂಕಿಗೆ ತುಪ್ಪ..?!

ಅಲ್ಲದೆ ದಿ ಡೆವಿಲ್ ಸಿನಿಮಾ ಪ್ರಮೋಷನ್‌ನಲ್ಲಿ ಬ್ಯುಸಿ ಆಗಿರುವ ವಿಜಯಲಕ್ಷ್ಮಿ ದರ್ಶನ್ ಅವರ ಮಾತನ್ನು ಸುದೀಪ್ ಅವರಿಗೆ ಹೇಳಿದ್ದು ಎಂದು ಲಿಂಕ್ ಮಾಡಿ, ಉರಿಯುವ ಬೆಂಕಿಗೆ ತುಪ್ಪ ಸುರಿಯುತ್ತಿವೆ.

ಇನ್ನೂ ವಿಜಯಲಕ್ಷ್ಮಿ ದರ್ಶನ್ ಅವರು ದಾವಣಗೆರೆಯಲ್ಲಿ ಸಿನಿಮಾ ಯಶಸ್ಸಿನ ಸಂಭ್ರಮಾಚರಣೆ ವೇಳೆ ದರ್ಶನ್ ಇಲ್ಲದೆ ಇದ್ದಾಗ ಕೆಲ ವ್ಯಕ್ತಿಗಳು, ಅವರ ಬಗ್ಗೆ ಅವರ ಅಭಿಮಾನಿಗಳಾದ ನಿಮ್ಮ ಬಗ್ಗೆ ವೇದಿಕೆ ಮೇಲೆ, ಚಾನಲ್‌ಗಳಲ್ಲಿ ಕೂತು ಮಾತಾಡೋದು, ಹೊರಗಡೆ ಎಲ್ಲ ಮಾತಾಡೋದ್ ಮಾಡ್ತಾರೆ. ಆದರೆ ದರ್ಶನ್ ಹೊರಗಡೆ ಇದ್ದಾಗ ಇವರು ಬೆಂಗಳೂರಿನಲ್ಲಿ ಇರ್ತಾರೋ ಇಲ್ಲೋ, ಎಲ್ಲಿ ಮಾಯ ಆಗ್ತಾರೋ ಗೊತ್ತಾಗಲ್ಲ.

ಅವರು ಏನೆ ಮಾತಾಡುದ್ರು, ದರ್ಶನ್ ಅವರು ಹೇಳುವ ಹಾಗೆ, ಯಾರ್ ಏನೆ ಮಾತಾಡುದ್ರು ನಾವ್ ನೊಂದುಕೊಳ್ಳಲ್ಲ, ಕೋಪ ಮಾಡಿಕೊಳ್ಳಲ್ಲ, ನೀವು ಕೂಡ ಕೋಪ ಮಾಡ್ಕೋಬೇಡಿ, ಬೇಜಾರ್ ಮಾಡ್ಕೋಬೇಡಿ, ತಲೆ ಕೆಡಿಸಿಕೊಳ್ಳಬೇಡಿ.

ನಾವು ನಿಮ್ಮಿಂದ (ಅಭಿಮಾನಿಗಳು) ಬಯಸೋದು ನಿಮ್ಮ ಪ್ರೀತಿ, ಬೆಂಬಲ ಮಾತ್ರ ಎಂದು ವಿಜಯಲಕ್ಷ್ಮಿ ಹೇಳಿದ್ದಾರೆ. ಆದರೆ ಈ ಮಾತನ್ನು ವಿಜಯಲಕ್ಷ್ಮಿ ದರ್ಶನ್ ಅವರು ಕಿಚ್ಚ ಸುದೀಪ್ ಗೆ ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದಾರೆ ಎಂದು ಕೆಲ ಖಾಸಗಿ ಚಾನಲ್ ಮತ್ತು ಪತ್ರಿಕೆಗಳು ಲಿಂಕ್ ಮಾಡಿವೆ.

ಈ ವಿಚಾರದಲ್ಲಿ ನೆನಪಿಡಬೇಕಾದ್ದು, ದರ್ಶನ್ ಹಾಗೂ ಅವರ ಅಭಿಮಾನಿಗಳ ವಿಚಾರವಾಗಿ ಪ್ರಥಮ್, ರಮ್ಯ ಸೇರಿದಂತೆ ಕೆಲ ನಟರ ಹೇಳಿಕೆ ಎಲ್ಲರಿಗೂ ತಿಳಿದಿರುವುದೇ ಆಗಿದೆ.

ಆದಾಗ್ಯೂ ವಿಜಯಲಕ್ಷ್ಮಿ ದರ್ಶನ್ ಅವರ ಮಾತನ್ನು ಸುದೀಪ್ ಅವರಿಗೆ ಹೇಳಿದ್ದು ಎಂಬಂತೆ (?) ಹಾಕಿ ಬಿಂಬಿಸಿ, ಉರಿಯುವ ಮನೆಯಲ್ಲಿ ಬೀಡಿ ಹಚ್ಚಿಕೊಳ್ಳುವ ಕುಯುಕ್ತಿ ಕೆಲ ಖಾಸಗಿ ಚಾನಲ್‌ಗಳದ್ದಾಗಿದೆ ಎಂಬುದು ಇಬ್ಬರು ನಟರ ಪ್ರಜ್ಞಾವಂತ ಅಭಿಮಾನಿಗಳ ಅಭಿಪ್ರಾಯ.

ಅಲ್ಲದೆ ಇಂದು ಮಾರ್ಕ್ ಸಿನಿಮಾ ಬಿಡುಗಡೆಗೆ ಎಲ್ಲಾ ಸಿದ್ಧತೆ ಪೂರ್ಣ ಎಂಬಂತೆ ಸುದೀಪ್ ಅವರು ಟ್ವಿಟರ್ ಖಾತೆಯಲ್ಲಿ ಆಲ್ ಸೆಟ್..?? ಕೇವಲ 3 ದಿನಗಳಲ್ಲಿ ಮಾರ್ಕ್ ಸಿನಿಮಾ ನಿಮ್ಮೊಂದಿಗೆ – ನಿಮ್ಮ ಸ್ಕ್ರೀನ್ ಅನ್ನು ಆಯ್ಕೆ ಮಾಡಿಕೊಳ್ಳಿ ಎಂದು ಬರೆದರಿದ್ದಾರೆ.

ಇಲ್ಲಿಯೂ ಇದನ್ನೂ ಸುದೀಪ್ ಅವರು ಪರೋಕ್ಷವಾಗಿ ವಿಜಯಲಕ್ಷ್ಮೀ ದರ್ಶನ್‌ಗೆ ಟಾಂಗ್ ನೀಡಿದ್ದಾ ಎಂದು ಬಿಂಬಿಸುವ ಮೂಲಕ ಸಂವಿಧಾನದ ನಾಲ್ಕನೆ ಅಂಗ ನಾವೇ, ನಮ್ಮಿಂದಲೇ ರಕ್ಷಣೆ ಎಂದು ಬಿಂಬಿಸಿಕೊಳ್ಳುವ ಕೆಲ ನ್ಯೂಸ್ ಚಾನಲ್‌ಗಳು ಹಾಗೂ ಪತ್ರಿಕೆಗಳು ವೃತ್ತಿ ಧರ್ಮ ಮರೆತು ವರ್ತಿಸುತ್ತಿವೆ.

ಸುದೀಪ್ ಆತ್ಮೀಯರು ಈವೆಂಟ್ ನಲ್ಲಿ ಸುದೀಪ್ ಅವರು ಮಾತನಾಡಿದ್ದು, ಪೈರೆಸಿ ಪಡೆಯ ವಿಚಾರವಾಗಿ ಎಂದು ಸ್ಪಷ್ಟವಾಗಿ ಹೇಳಿದರು. ಪದೇ ಪದೇ ದರ್ಶನ್ ಹಾಗೂ ಸುದೀಪ್ ಅವರ ನಡುವೆ ತಂದಿಟ್ಟು, ಅವರನ್ನು ಕೆರಳಿಸುವ ತಮ್ಮ ಚಾಳಿ ಮುಂದುವರಿಸುತ್ತಿವೆ. ಆದರೆ ಇದನ್ನು ಅರಿಯದೆ ಇಬ್ಬರ ಅಭಿಮಾನಿಗಳ ನಡುವೆ ಸಾಮಾಜಿಕ ಜಾಲತಾಣದಲ್ಲಿ ಸಮರವೇ ನಡೆಯುತ್ತಿದೆ.

ರಾಜಕೀಯ

ಕೇಂದ್ರ ಬಿಜೆಪಿ ಸರ್ಕಾರ ಕರ್ನಾಟಕಕ್ಕೆ ಕೊಟ್ಟ ಖಾಲಿ ಟ್ರಂಕ್ ಹಿಡಿದಿರುವ ತೇಜಸ್ವಿ ಸೂರ್ಯ: ಡಿ.ಕೆ. ಸುರೇಶ್ ವ್ಯಂಗ್ಯ

ಕೇಂದ್ರ ಬಿಜೆಪಿ ಸರ್ಕಾರ ಕರ್ನಾಟಕಕ್ಕೆ ಕೊಟ್ಟ ಖಾಲಿ ಟ್ರಂಕ್ ಹಿಡಿದಿರುವ ತೇಜಸ್ವಿ ಸೂರ್ಯ:

"ಕಳೆದ 12 ವರ್ಷಗಳಿಂದ ಕೇಂದ್ರ ಬಿಜೆಪಿ ಸರ್ಕಾರ ಕರ್ನಾಟಕಕ್ಕೆ ಕೊಟ್ಟಿರುವ ಖಾಲಿ ಟ್ರಂಕ್ ಅನ್ನು ಸಂಸದ ತೇಜಸ್ವಿ ಸೂರ್ಯ ಅವರು ಹಿಡಿದಿರುವುದು" ಎಂದು ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ (D.K. Suresh) ಅವರು ತಿರುಗೇಟು

[ccc_my_favorite_select_button post_id="119275"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

RCB: ಮತ್ತೆ ಕಪ್ ನಮ್ದು

RCB: ಮತ್ತೆ ಕಪ್ ನಮ್ದು

4ನೇ ಆವೃತ್ತಿಯ ಮಹಿಳಾ ಪ್ರೀಮಿ ಯರ್ ಲೀಗ್ (ಡಬ್ಲ್ಯೂಪಿ ಎಲ್) ಟೂರ್ನಿಯಲ್ಲಿ ಸ್ಮೃತಿ ಮಂಧಾನಾ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಚಾಂಪಿಯನ್ ಆಗಿ ಹೊರ ಹೊಮ್ಮಿದ್ದು, ಸಿಎಂ ಸಿದ್ದರಾಮಯ್ಯ (Cmsiddaramaiah), ಡಿಸಿಎಂ

[ccc_my_favorite_select_button post_id="119174"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ದೊಡ್ಡಬಳ್ಳಾಪುರ: ಪತ್ನಿಗೆ ಚಿಕಿತ್ಸೆ ಕೊಡಿಸಿ ಮನೆಗೆ ಕರೆದೊಯ್ಯುತ್ತಿದ್ದವ ಅಪಘಾತದಲ್ಲಿ ಸಾವು.‌.!

ದೊಡ್ಡಬಳ್ಳಾಪುರ: ಪತ್ನಿಗೆ ಚಿಕಿತ್ಸೆ ಕೊಡಿಸಿ ಮನೆಗೆ ಕರೆದೊಯ್ಯುತ್ತಿದ್ದವ ಅಪಘಾತದಲ್ಲಿ ಸಾವು.‌.!

ಮಡದಿಗೆ ಉಂಟಾಗಿದ್ದ ಅನಾರೋಗ್ಯ ಕಾರಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಮನೆಗೆ ಕರೆದೊಯ್ಯುತ್ತಿದ್ದ ವ್ಯಕ್ತಿ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಸಾವನಪ್ಪಿರುವ ಘಟನೆ (Accident) ತಾಲೂಕಿನಲ್ಲಿ ಸಂಭವಿಸಿದೆ.

[ccc_my_favorite_select_button post_id="119259"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!