Bashettihalli election results tomorrow:

ನಾಳೆ ಬಾಶೆಟ್ಟಿಹಳ್ಳಿ ಪ.ಪಂ. ಚುನಾವಣೆ ಫಲಿತಾಂಶ: ನಿಷೇಧಾಜ್ಞೆ ಜಾರಿ.. ಮೆರವಣಿಗೆ, ಪಟಾಕಿ ನಿಷೇಧ

ಕೆ.ಎಂ.ಸಂತೋಷ್, ಆರೂಢಿ (ದೊಡ್ಡಬಳ್ಳಾಪುರ): ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಸಾರ್ವತ್ರಿಕ ಚುನಾವಣೆ (Bashettihalli election) ಹಾಗೂ ದೊಡ್ಡಬಳ್ಳಾಪುರ ನಗರಸಭೆಯ ವಾರ್ಡ್ ನಂಬರ್ 21ರ ಹೇಮಾವತಿ ಪೇಟೆಗೆ ಉಪಚುನಾವಣೆ ಸಂಬಂಧ ಡಿಸೆಂಬರ್ 24 ರಂದು ಮತ ಎಣಿಕೆ ಕಾರ್ಯ ನಡೆಯಲಿದೆ.

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ (Bashettihalli town panchayat election) ರಚನೆಯಾದ ನಂತರ ಇದೇ ಪ್ರಥಮ ಬಾರಿಗೆ ನಡೆದ ಮತದಾನದಲ್ಲಿ, ಸಣ್ಣ ಪುಟ್ಟ ಮಾತಿನ ಚಕಮಕಿಗಳ ಹೊರತುಪಡಿಸಿ ಚುನಾವಣೆ ಶಾಂತಿಯುತವಾಗಿ ಮುಕ್ತಾಯವಾಗಿದ್ದು, ಶೇ.81.34 ರಷ್ಟು ಮತದಾನ ನಡೆದಿದೆ.

ಕೈಗಾರಿಕಾ ಪ್ರದೇಶವನ್ನು ಹೊಂದಿರುವ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ವಾರ್ಡ್ಗಳಲ್ಲೂ ಸ್ಥಳಿಯರಷ್ಟೇ ರಾಜ್ಯದ ವಿವಿಧ ಜಿಲ್ಲೆಗಳ ಹಾಗೂ ಹೊರ ರಾಜ್ಯದವರು ಇಲ್ಲಿಗೆ ಬಂದು ನೆಲೆಸಿರುವ ಮತದಾರರ ಸಂಖ್ಯೆಯೂ ಸರಿಸಮನಾಗಿಯೇ ಇದೆ.

4 ವರ್ಷಗಳ ಬಳಿಕ ಚುನಾವಣೆ

ಗ್ರಾಮ ಪಂಚಾಯಿಂದ ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೆ ಏರಿದ ನಾಲ್ಕು ವರ್ಷಗಳ ನಂತರ ಚುನಾವಣೆ ನಡೆದಿದ್ದರಿಂದ ಎಲ್ಲಾ ವಯೋಮಾನದ ಮತದಾರರು ಉತ್ಸಾಹದಿಂದಲೇ ಮತಗಟ್ಟೆಗಳ ಕಡೆಗೆ ಬಂದು ಮತಚಲಾಯಿಸಿದ್ದಾರೆ.

ಬೆಳಗ್ಗೆ 11 ರೊಳಗೆ ಫಲಿತಾಂಶ ಸಾಧ್ಯತೆ

ನಾಳೆ (ಡಿ.24) ಬೆಳಗ್ಗೆ 8 ಗಂಟೆಗೆ ಆರಂಭವಾಗಲಿರುವ ಮತ ಎಣಿಕೆ, ಮೊದಲ ಸುತ್ತಿನಲ್ಲಿ ಒಂದು ವಾರ್ಡ್ಗೆ ಮತ ಎಣಿಕೆಗೆ 15 ನಿಮಿಷಗಳ ಕಾಲ ಪಡೆಯಲಿದ್ದು, ಎರಡನೇ ಸುತ್ತಿನ ಬಳಿಕ ತೀವ್ರಗತಿಯಲ್ಲಿ ನಡೆದು ಸುಮಾರು 10
30 ಅಥವಾ 11 ರ ಒಳಾಗಾಗಿ ಫಲಿತಾಂಶ ಪ್ರಕಟವಾಗಲಿದೆ ಎಂದು ನಿರೀಕ್ಷಿಸಲಾಗಿದೆ.

ಮತ ಎಣಿಕೆ ಮುಂಜಾಗ್ರತೆ

ಮತ ಎಣಿಕೆ ಕಾರ್ಯವು ಸುಗಮವಾಗಿ, ಶಾಂತಿಯುತವಾಗಿ ನಡೆಯುವ ಸದುದ್ದೇಶದಿಂದ ಮತ್ತು ಮತದಾನದ ಪಾವಿತ್ರ್ಯತೆ ಕಾಪಾಡುವ ಹಿತದೃಷ್ಟಿಯಿಂದ ಮತ ಎಣಿಕೆ ಕೇಂದ್ರವಾದ ದೊಡ್ಡಬಳ್ಳಾಪುರ ನಗರದ ಇಸ್ಲಾಂಪುರ ಮುಖ್ಯ ರಸ್ತೆಯಲ್ಲಿರುವ ಶ್ರೀ ಕೊಂಗಾಡಿಯಪ್ಪ ಪ್ರೌಢಶಾಲೆ ವ್ಯಾಪ್ತಿಯಲ್ಲಿ ಇಂದು ಸಂಜೆ 05.00 ಗಂಟೆಯಿಂದ ಡಿ.24 ರ ರಾತ್ರಿ 12 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ನಿಷೇಧಾಜ್ಞೆ ಅವಧಿಯಲ್ಲಿ ಮತ ಎಣಿಕೆ ಕೇಂದ್ರವಾದ ದೊಡ್ಡಬಳ್ಳಾಪುರದ ಇಸ್ಲಾಂಪುರ ಮುಖ್ಯ ರಸ್ತೆಯಲ್ಲಿ ಇರುವ ಶ್ರೀ ಕೊಂಗಾಡಿಯಪ್ಪ ಪ್ರೌಢಶಾಲೆ ವ್ಯಾಪ್ತಿಯಲ್ಲಿ ಐದಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು, ಮೆರವಣಿಗೆ ಅಥವಾ ಸಭೆ ಸಮಾರಂಭಗಳನ್ನು ಜರುಗಿಸುವುದನ್ನು ನಿಷೇಧಿಸಿದೆ.

ಮತ ಎಣಿಕೆ ಕೇಂದ್ರ ವ್ಯಾಪ್ತಿಯಲ್ಲಿ ಡಿಸೆಂಬರ್ 23 ರಂದು ಸಂತೆ, ಜಾತ್ರೆಗಳನ್ನು ನಿಷೇಧಿಸಿದೆ. ಅಪಾಯವನ್ನು ಉಂಟು ಮಾಡಬಹುದಾದ ಯಾವುದೇ ಮಾರಕಾಸ್ತ್ರಗಳನ್ನು ಹಾಗೂ ಸ್ಫೋಟಕ ವಸ್ತುಗಳನ್ನು ಕೊಂಡೊಯ್ಯುವುದನ್ನು ಪ್ರತಿಬಂಧಿಸಿದೆ.

ಈ ಅವಧಿಯಲ್ಲಿ ಧ್ವನಿವರ್ಧಕಗಳನ್ನು ಬಳಸುವಂತಿಲ್ಲ. ಮತ ಎಣಿಕೆ ಕೇಂದ್ರದ ವ್ಯಾಪ್ತಿಯಲ್ಲಿ ಪೂರ್ವ ನಿಯೋಜಿತ ಮದುವೆ, ಧಾರ್ಮಿಕ ಕಾರ್ಯಕ್ರಮ, ಮೆರವಣಿಗೆಗಳನ್ನು ಮತ್ತು ಶವ ಸಂಸ್ಕಾರಗಳನ್ನು ಚುನಾವಣಾ ನೀತಿ ಸಂಹಿತ ಉಲ್ಲಂಘನೆ ಆಗದಂತೆ ಹಾಗೂ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ತರದಂತೆ ನಡೆಸುವುದು.

ಮತ ಎಣಿಕೆ ಕೇಂದ್ರ ವ್ಯಾಪ್ತಿಯಲ್ಲಿ ಎಣಿಕೆ ಕಾರ್ಯ ಆದ ನಂತರ ಪಟಾಕಿ ಹೊಡೆಯುವುದು ನಿಷೇಧಿಸಿದೆ ಮತ್ತು ಚುನಾವಣಾ ಅಭ್ಯರ್ಥಿಗಳ ವಿಜಯೋತ್ಸವವನ್ನು ಆಚರಿಸುವುದು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎ.ಬಿ. ಬಸವರಾಜು ಆದೇಶಿಸಿದ್ದಾರೆ.

ರಾಜಕೀಯ

ಕೇಂದ್ರ ಬಿಜೆಪಿ ಸರ್ಕಾರ ಕರ್ನಾಟಕಕ್ಕೆ ಕೊಟ್ಟ ಖಾಲಿ ಟ್ರಂಕ್ ಹಿಡಿದಿರುವ ತೇಜಸ್ವಿ ಸೂರ್ಯ: ಡಿ.ಕೆ. ಸುರೇಶ್ ವ್ಯಂಗ್ಯ

ಕೇಂದ್ರ ಬಿಜೆಪಿ ಸರ್ಕಾರ ಕರ್ನಾಟಕಕ್ಕೆ ಕೊಟ್ಟ ಖಾಲಿ ಟ್ರಂಕ್ ಹಿಡಿದಿರುವ ತೇಜಸ್ವಿ ಸೂರ್ಯ:

"ಕಳೆದ 12 ವರ್ಷಗಳಿಂದ ಕೇಂದ್ರ ಬಿಜೆಪಿ ಸರ್ಕಾರ ಕರ್ನಾಟಕಕ್ಕೆ ಕೊಟ್ಟಿರುವ ಖಾಲಿ ಟ್ರಂಕ್ ಅನ್ನು ಸಂಸದ ತೇಜಸ್ವಿ ಸೂರ್ಯ ಅವರು ಹಿಡಿದಿರುವುದು" ಎಂದು ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ (D.K. Suresh) ಅವರು ತಿರುಗೇಟು

[ccc_my_favorite_select_button post_id="119275"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

RCB: ಮತ್ತೆ ಕಪ್ ನಮ್ದು

RCB: ಮತ್ತೆ ಕಪ್ ನಮ್ದು

4ನೇ ಆವೃತ್ತಿಯ ಮಹಿಳಾ ಪ್ರೀಮಿ ಯರ್ ಲೀಗ್ (ಡಬ್ಲ್ಯೂಪಿ ಎಲ್) ಟೂರ್ನಿಯಲ್ಲಿ ಸ್ಮೃತಿ ಮಂಧಾನಾ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಚಾಂಪಿಯನ್ ಆಗಿ ಹೊರ ಹೊಮ್ಮಿದ್ದು, ಸಿಎಂ ಸಿದ್ದರಾಮಯ್ಯ (Cmsiddaramaiah), ಡಿಸಿಎಂ

[ccc_my_favorite_select_button post_id="119174"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ದೊಡ್ಡಬಳ್ಳಾಪುರ: ಪತ್ನಿಗೆ ಚಿಕಿತ್ಸೆ ಕೊಡಿಸಿ ಮನೆಗೆ ಕರೆದೊಯ್ಯುತ್ತಿದ್ದವ ಅಪಘಾತದಲ್ಲಿ ಸಾವು.‌.!

ದೊಡ್ಡಬಳ್ಳಾಪುರ: ಪತ್ನಿಗೆ ಚಿಕಿತ್ಸೆ ಕೊಡಿಸಿ ಮನೆಗೆ ಕರೆದೊಯ್ಯುತ್ತಿದ್ದವ ಅಪಘಾತದಲ್ಲಿ ಸಾವು.‌.!

ಮಡದಿಗೆ ಉಂಟಾಗಿದ್ದ ಅನಾರೋಗ್ಯ ಕಾರಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಮನೆಗೆ ಕರೆದೊಯ್ಯುತ್ತಿದ್ದ ವ್ಯಕ್ತಿ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಸಾವನಪ್ಪಿರುವ ಘಟನೆ (Accident) ತಾಲೂಕಿನಲ್ಲಿ ಸಂಭವಿಸಿದೆ.

[ccc_my_favorite_select_button post_id="119259"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!