District administration all set for Ghati Subramanya Brahmarathotsava: DC

ಘಾಟಿ ಸುಬ್ರಮಣ್ಯ ಬ್ರಹ್ಮರಥೋತ್ಸವಕ್ಕೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ: ಜಿಲ್ಲಾಧಿಕಾರಿ

ಬೆಂ.ಗ್ರಾ.ಜಿಲ್ಲೆ; ಇತಿಹಾಸ ಪ್ರಸಿದ್ಧ ದೊಡ್ಡಬಳ್ಳಾಪುರದ ಶ್ರೀ ಘಾಟಿ ಸುಬ್ರಮಣ್ಯ (Ghati Subramanya) ಕ್ಷೇತ್ರದಲ್ಲಿ ಡಿಸೆಂಬರ್ 25 ರಂದು ಬ್ರಹ್ಮರಥೋತ್ಸವ (Brahmarathotsava) ನಡೆಯಲಿದ್ದು ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಡೆಸಲು ಜಿಲ್ಲಾಡಳಿತ ವತಿಯಿಂದ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಎಬಿ ಬಸವರಾಜು ಅವರು ಮಾಹಿತಿ ನೀಡಿದರು.

ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ ಡಿಸೆಂಬರ್ 25 ರಂದು ಮಧ್ಯಾಹ್ನ 12.00 ರಿಂದ 12.15 ಗಂಟೆಯ ಶುಭ ಮೂಹರ್ತದಲ್ಲಿ ಬ್ರಹ್ಮರಥೋತ್ಸವ ನಡೆಯಲಿದೆ. ಕಳೆದ ವರ್ಷ 1.50 ಲಕ್ಷದವರೆಗೂ ಭಕ್ತಾದಿಗಳು ಭಾಗಿಯಾಗಿದ್ದರು.

ಈ ಬಾರಿ ಬ್ರಹ್ಮರಥೋತ್ಸವವು ರಜೆ ದಿನ ಬಂದಿರುವುದರಿಂದ ಸುಮಾರು ಎರಡು ಲಕ್ಷ ಭಕ್ತಾದಿಗಳು ಬರುವ ಸಾಧ್ಯತೆ ಇದೆ. ಟ್ರಾಫಿಕ್ ಸಮಸ್ಯೆ, ಜನಸಂದಣಿ ನಿಯಂತ್ರಿಸಲು ಹಲವು ಕ್ರಮ ಕೈಗೊಳ್ಳಲಾಗಿದೆ ಎಂದರು.

ಘಾಟಿ ಕ್ಷೇತ್ರಕ್ಕೆ ಆಗಮಿಸಲು ಪ್ರಮುಖವಾಗಿ ಎರಡು ರಸ್ತೆ ಸಂಪರ್ಕಗಳಿದ್ದು ಮಾಕಳಿ ಹಾಗೂ ಕಂಟನಕುಂಟೆ ರಸ್ತೆಗಳಲ್ಲಿ ಸ್ವಚ್ಚತೆ ಕಾರ್ಯ, ಫುಟ್ ಪಾತ್ ಒತ್ತುವರಿ ತೆರವು ಮಾಡಲಾಗಿದೆ. ಇಲ್ಲಿ ಮೂಲಸೌಕರ್ಯ ವ್ಯವಸ್ಥೆ ಮಾಡಲಾಗಿದೆ. ದೇವಾಲಯ ಸುತ್ತಮುತ್ತಲಿನ ಫುಟ್ ಪಾತ್ ಮೇಲಿನ ಅಂಗಡಿಗಳನ್ನು ತೆರವುಮಾಡಲಾಗಿದ್ದು ಭಕ್ತರ ಸಂಚಾರಕ್ಕೆ ಯಾವುದೇ ಸಮಸ್ಯೆ ಆಗದಂತೆ ಕ್ರಮವಹಿಸಲಾಗಿದೆ ಎಂದರು.

ಭಕ್ತರಿಗೆ ಉಚಿತ ಬಸ್ ವ್ಯವಸ್ಥೆ

ರಥೋತ್ಸವಕ್ಕೆ ಬರುವ ಭಕ್ತಾದಿಗಳ ವಾಹನಗಳಿಗೆ ಕಂಟನಕುಂಟೆ ಮಾರ್ಗ ಹಾಗು ಮಾಕಳಿ ಮಾರ್ಗ ಬಳಿ ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಅಲ್ಲಿಯೇ ಭಕ್ತಾದಿಗಳು ತಮ್ಮ ವಾಹನಗಳನ್ನು ನಿಲ್ಲಿಸಬೇಕು.

ಪಾರ್ಕಿಂಗ್ ಸ್ಥಳದಿಂದ ದೇವಾಲಯದ ಬಳಿಗೆ ತೆರಳಲು ಜಿಲ್ಲಾಡಳಿತದಿಂದ ಉಚಿತ ಬಸ್ ವ್ಯವಸ್ಥೆ ಮಾಡಲಾಗಿದ್ದು ಭಕ್ತಾದಿಗಳು ಆ ಬಸ್ ಗಳ ಮೂಲಕವೇ ಬಂದು ದರ್ಶನ ಪಡೆದು ಮತ್ತೇ ಅದೇ ಬಸ್ ಗಳ ಮೂಲಕ ಮರಳಬಹುದು.

ದೇವಾಲಯದ ಬಳಿ ವಾಹನ ಸಂಚಾರ ದಟ್ಟಣೆ, ಸಂಚಾರಕ್ಕೆ ತೊಂದರೆ ಆಗಬಾರದು ಎನ್ನುವ ಕಾರಣಕ್ಕೆ ಈ ಕ್ರಮ ಕೈಗೊಳ್ಳಲಾಗಿದ್ದು ಭಕ್ತಾದಿಗಳು ಸಹಕರಿಸಬೇಕು ಎಂದರು.

2026ರ ಜನವರಿ 31 ರವರೆಗೆ ಶ್ರೀ ಕ್ಷೇತ್ರಕ್ಕೆ ಬರುವ ವಾಹನಗಳಿಗೆ ಸುಂಕ ವಿನಾಯಿತಿ ನೀಡಲಾಗಿದೆ. ಭಕ್ತರಿಗೆ ಸುಗಮ ದರ್ಶನ ವ್ಯವಸ್ಥೆಗಾಗಿ ಧರ್ಮ ದರ್ಶನ ಮತ್ತು 50 ರೂಪಾಯಿಯ ವಿಶೇಷ ದರ್ಶನ ವ್ಯವಸ್ಥೆ ಇರಲಿದೆ.

ಡಿಸೆಂಬರ್ 28 ರವರೆಗೆ ಕ್ಷೇತ್ರದಲ್ಲಿ ವಿಶೇಷ ದೀಪಾಲಂಕಾರ ಮಾಡಲಾಗಿದ್ದು, ಬ್ರಹ್ಮರಥೋತ್ಸವಕ್ಕೆ ಬರುವ ಭಕ್ತರಿಗೆ ಉತ್ತಮ ಅನುಭವ ನೀಡುವ ನಿಟ್ಟಿನಲ್ಲಿ ಅಗತ್ಯಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಡಿಸಿ ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ ಬಾಬಾ ಅವರು ಮಾತನಾಡಿ, ಪ್ರತಿ ವರ್ಷದಂತೆ ಬ್ರಹ್ಮರಥೋತ್ಸವದಲ್ಲಿ ಎರಡು ಲಕ್ಷದವರೆಗೂ ಸಾರ್ವಜನಿಕರು ಸೇರುವ ನಿರೀಕ್ಷೆ ಇದೆ. ಭಕ್ತರಿಗೆ ಪಾರ್ಕಿಂಗ್ ಸಮಸ್ಯೆ ಬಗೆ ಹರಿಸಲು ಕ್ರಮ ವಹಿಸಲಾಗಿದೆ‌.

ಕಾರು ಸೇರಿದಂತೆ ಇತರೆ ವಾಹನಗಳಿಗೆ 14 ಪಾರ್ಕಿಂಗ್ ಸ್ಥಳ, ದ್ವಿಚಕ್ರ ವಾಹನಗಳಿಗೆ 4 ಪಾರ್ಕಿಂಗ್ ಸ್ಥಳಗಳನ್ನು ಗುರುತಿಸಲಾಗಿದೆ. ಭದ್ರತೆಗಾಗಿ ಈ ವರ್ಷ 1000 ಮಂದಿ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ, ಅಗ್ನಿಶಾಮಕ ವಾಹನ ವ್ಯವಸ್ಥೆ ಮಾಡಲಾಗಿದೆ.

ಜತೆಗೆ 100 ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಲಾಗಿದ್ದು ಅದರ ವೀಕ್ಷಣೆಗೆ ಕಂಟ್ರೋಲ್ ರೂಂ ಕೂಡ ಸ್ಥಾಪಿಸಲಾಗಿದೆ ಎಂದರು.

ಜಿಲ್ಲಾ ಪಂಚಾಯಿತಿ ಸಿಇಒ ಡಾ.ಕೆ.ಎನ್ ಅನುರಾಧ ಅವರು ಮಾತನಾಡಿ, ಬ್ರಹ್ಮರಥೋತ್ಸವದ ಹಿನ್ನಲೆ ಘಾಟಿಯ ರಂಗ ಮಂದಿರದಲ್ಲಿ ಡಿಸೆಂಬರ್ 24, 25 ರಂದು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

ಒಟ್ಟು 70 ಕಲಾ ತಂಡಗಳು ನೋಂದಣಿ ಆಗಿದ್ದು ಸ್ಥಳೀಯ ಕಲಾವಿದರಿಗೆ ಆದ್ಯತೆ ನೀಡಲಾಗಿದೆ. ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಈಗಲೂ ಅವಕಾಶವಿದ್ದು ರಂಗ ಮಂದಿರ ಬಳಿ ಸಂಬಂಧಪಟ್ಟ ಅಧಿಕಾರಿಗಳನ್ನು ಭೇಟಿ ಆಗಿ ನೋಂದಾಯಿಸಬಹುದಾಗಿದೆ ಎಂದರು.

ಕಂಟನಕುಂಟೆ , ಹಾಡೋನಹಳ್ಳಿ ಗ್ರಾಪಂ ವ್ಯಾಪ್ತಿಯ ರಸ್ತೆಗಳಲ್ಲಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ರಸ್ತೆ ಬದಿಯ ಅಂಗಡಿಗಳನ್ನು ತೆರವುಗೊಳಿಸಲಾಗಿದೆ. ಫುಟ್ ಪಾತ್ ಸ್ವಚ್ಚತೆ, ಅಂಗಡಿಗಳ ತೆರವು ಮಾಡಲಾಗಿದೆ.

ಪಾರ್ಕಿಂಗ್ ಸ್ಥಳಗಳಲ್ಲಿ ಹಾಗೂ ತುರ್ತು ಸೇವೆಗಳ ನಿಮಿತ್ತ 04 ಅಂಬುಲೆನ್ಸ್ ವ್ಯವಸ್ಥೆ, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಪ್ರಥಮ ಚಿಕಿತ್ಸೆ, ಹೆಚ್ಚುವರಿ ಆರೋಗ್ಯ ಸಿಬ್ಬಂದಿ ನೇಮಿಸಲಾಗಿದೆ, ಪಾರ್ಕಿಂಗ್ ಸ್ಲಾಟ್ ಗಳು, ಸಾರ್ವಜನಿಕ ಸ್ಥಳಗಳಲ್ಲಿ ಕುಡಿಯುವ ನೀರು, ಮೊಬೈಲ್ ಶೌಚಾಲಯ ವ್ಯವಸ್ಥೆ ಮಾಡಲಾಗಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಅಪರ ಜಿಲ್ಲಾಧಿಕಾರಿ ಸೈಯೀದಾ ಆಯಿಷಾ, ಘಾಟಿ ಸುಬ್ರಮಣ್ಯ ದೇವಾಲಯದ ಕಾರ್ಯದರ್ಶಿ ದಿನೇಶ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪನಿರ್ದೇಶಕರಾದ ಅಶೋಕ್ ಕುಮಾರ್ ಡಿ, ಡಿವೈಎಸ್ಪಿ ಪಾಂಡುರಂಗ, ಇನ್ಸ್ಪೆಕ್ಟರ್ ಸಾಧಿಕ್ ಪಾಷಾ ಮುಜರಾಯಿ ಇಲಾಖೆ ಅಧಿಕಾರಿಗಳು ಹಾಜರಿದ್ದರು.

ರಾಜಕೀಯ

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದ ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ಮಿತ್ರಪಕ್ಷ ಅಧಿಕಾರದಲ್ಲಿರುವ ಆಂಧ್ರಪ್ರದೇಶದ ಹೊರತುಪಡಿಸಿ ದಕ್ಷಿಣ ಭಾರತದ ರಾಜ್ಯಗಳಿಗೆ ನಿರ್ಲಕ್ಷ್ಯ ತೋರಿದೆ ಎಂಬ ಆಕ್ರೋಶ ವ್ಯಾಪಕವಾಗಿದೆ.

[ccc_my_favorite_select_button post_id="119088"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

2025-26 ನೇ ಸಾಲಿನ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ (K.H. Muniyappa) ಮಾತನಾಡಿದರು.

[ccc_my_favorite_select_button post_id="118983"]
ಭೀಕರ ಜೋಡಿ ಕೊಲೆ ಪ್ರಕರಣ: ದಂಡುಪಾಳ್ಯ ಗ್ಯಾಂಗ್‌ನ ಮತ್ತೊಬ್ಬನ ಬಂಧನ.!

ಭೀಕರ ಜೋಡಿ ಕೊಲೆ ಪ್ರಕರಣ: ದಂಡುಪಾಳ್ಯ ಗ್ಯಾಂಗ್‌ನ ಮತ್ತೊಬ್ಬನ ಬಂಧನ.!

ಭೀಕರ ಜೋಡಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ದಂಡುಪಾಳ್ಯ ಗ್ಯಾಂಗ್‌ನ (Dandupalya gang) ಚಿಕ್ಕ ಹನುಮಂತಪ್ಪ (ಅಲಿಯಾಸ್ ಕೆ.ಕೃಷ್ಣಪ್ಪ) ಎಂಬಾತನನ್ನು ಆಂಧ್ರಪ್ರದೇಶದ ಮದನಪಳ್ಳೆ ಗ್ರಾಮದಲ್ಲಿ ಬಂಧಿಸಲಾಗಿದೆ.

[ccc_my_favorite_select_button post_id="118778"]
ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ಪೆಟ್ಟಿ ಅಂಗಡಿ ಬಳಿ ಕುಳಿತಿದ್ದ ವೃದ್ಧನಿಗೆ ನಿಯಂತ್ರಣ ತಪ್ಪಿದ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ (Accident) ವೃದ್ಧ ತೀವ್ರವಾಗಿ ಗಾಯಗೊಂಡಿರುವ ಘಟನೆ ತಾಲೂಕಿ‌ನ ****** ಇಂದು ಮಧ್ಯಾಹ್ನ ನಡೆದಿದೆ

[ccc_my_favorite_select_button post_id="119094"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!