Doddaballapura: National Farmers' Day celebrated in Karepur.. Honored to Farmers

ದೊಡ್ಡಬಳ್ಳಾಪುರ: ಕಾರೇಪುರದಲ್ಲಿ ರಾಷ್ಟ್ರೀಯ ರೈತ ದಿನಾಚರಣೆ.. ಪ್ರಗತಿ ಪರ ರೈತರಿಗೆ ಸನ್ಮಾನ

ದೊಡ್ಡಬಳ್ಳಾಪುರ: ಕೃಷಿ ಇಲಾಖೆ ಮತ್ತು ತಾಲ್ಲೂಕು ಕೃಷಿಕ ಸಮಾಜ ವತಿಯಿಂದ ತಾಲ್ಲೂಕಿನ ದೊಡ್ಡಬೆಳವಂಗಲ ಹೋಬಳಿಯ ಕಾರೇಪುರ ಗ್ರಾಮದಲ್ಲಿ ರಾಷ್ಟ್ರೀಯ ರೈತರ ದಿನಾಚರಣೆ (National Farmers’ Day) ಮತ್ತು ವಿವಿಧ ಇಲಾಖೆಗಳ ಕೃಷಿ ವಸ್ತು ಪ್ರದರ್ಶನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಸಹಾಯಕ ಕೃಷಿ ನಿರ್ದೇಶಕ ರಾಘವೇಂದ್ರ ಪಿ ಮಾತನಾಡಿ, ಪ್ರತಿವರ್ಷ ಡಿಸೆಂಬರ್ 23 ರಂದು ಮಾಜಿ ಪ್ರಧಾನ ಮಂತ್ರಿಗಳಾದ ಚೌಧರಿ ಚರಣ್ ಸಿಂಗ್ ಅವರು ಕೃಷಿಗೆ ಅಪಾರ ಸೇವೆಯನ್ನು ನೀಡಿರುವ ಸಲುವಾಗಿ ಜನ್ಮ ದಿನವನ್ನು ರಾಷ್ಟೀಯ ರೈತರ ದಿನವನ್ನಾಗಿ ದೇಶದ್ಯಾಂತ 2001 ರಿಂದ ಆಚರಿಸುತ್ತಿದ್ದಾರೆ.

ಚೌಧರಿ ಚರಣ್ ಸಿಂಗ್ ಅವರು ಕೃಷಿಗೆ ಸಂಬಂಧಿಸಿದ ಕಾಯಿದೆ ಮತ್ತು ಮಸೂದೆಗಳನ್ನು ಜಾರಿ ಮಾಡಿರುವ ರೈತರ ಕಲ್ಯಾಣಕ್ಕೆ ಅವರು ತಂದ ಯೋಜನೆಗಳು ಇಂದಿಗೂ ಜನಪ್ರಿಯ. ರೈತ ನಮ್ಮ ದೇಶದ ಬೆನ್ನಲುಬಾಗಿದ್ದು ಪ್ರತಿದಿನ ರೈತರ ನೆನಯಬೇಕು ಎಂದು ಸ್ಮರಿಸಿದರು.

ಶಾಸಕ ಧೀರಜ್ ಮುನಿರಾಜು ಅವರು ರಾಶಿ ಪೂಜೆ ಮಾಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ದೊಡ್ಡಬಳ್ಳಾಪುರ: ಕಾರೇಪುರದಲ್ಲಿ ರಾಷ್ಟ್ರೀಯ ರೈತ ದಿನಾಚರಣೆ.. ಪ್ರಗತಿ ಪರ ರೈತರಿಗೆ ಸನ್ಮಾನ

ಬಳಿಕ ಮಾತನಾಡಿ, ರೈತರನ್ನು ಪ್ರತಿದಿನ ನೆನಯಬೇಕು. ರೈತ ನಮ್ಮ ದೇಶದ ಬೆನ್ನುಲುಬು. ರೈತರಿಗಾಗಿ ಹಲವು ಕಾರ್ಯಕ್ರಮಗಳನ್ನು ಕೃಷಿ ಇಲಾಖೆಯಿಂದ ಆಯೋಜಿಸುತ್ತಿದ್ದು, ರೈತರು ಸದರಿ ಕಾರ್ಯಕ್ರಮದ ಮತ್ತು ಇಲಾಖೆಯ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು ಹಾಗೂ ಕೃಷಿಯಲ್ಲಿ ರೈತರು ವಿವಿಧ ತಾಂತ್ರಿಕತೆಗಳನ್ನು ಅಳವಡಿಸಿಕೊಂಡು ಸ್ವಾವಲಂಬಿಗಳಾಗಬೇಕು ಎಂದು ತಿಳಿಸಿದರು.

ಕೃಷಿ ವಿಜ್ಞಾನ ಕೇಂದ್ರ ವಿಜ್ಞಾನಿ ಕುಮಾರಿ ಸುಪ್ರಿಯಾ, ಗೋಪಿಕಾ ಮಾತನಾಡಿ, ರೈತರು ಸಮಗ್ರ ಕೃಷಿ ಪದ್ದತಿಗಳನ್ನು ಅಳವಡಿಸಿ, ಬೀಜೋತ್ಪಾದನೆಯ ಮುಖಾಂತರ ಕೃಷಿಯಲ್ಲಿ ಹೆಚ್ಚು ಲಾಭಗಳಿಸುವುದರ ಜೊತೆಗೆ ತಮಗೆ ಬೇಕಾಗುವ ಬಿತ್ತನೆ ಬೀಜಗಳನ್ನು ತಮ್ಮ ಜಮೀನಿನಲ್ಲೇ ಬೆಳೆದುಕೊಳ್ಳಬಹುದೆಂದು ತಿಳಿಸಿದರು.

ತಾಲ್ಲೂಕು ಕೃಷಿಕ ಸಮಾಜದ ಅಧ್ಯಕ್ಷ ಮುರಳಿಧರ್, ರೈತ ಸಂಘದ ಜಿಲ್ಲಾ ಅಧ್ಯಕರಾದ ಪ್ರಸನ್ನ ಮಾತನಾಡಿದರು.

ಕಾರ್ಯಕ್ರಮದಲ್ಲಿ ಪ್ರಗತಿ ಪರ ರೈತರನ್ನು ಸನ್ಮಾನಿಸಿಲಾಯಿತು. ನಂತರ ತುಂತುರು ನೀರಾವರಿ ಘಟಕ, ಕೃಷಿ ಯಾಂತ್ರೀಕರಣ ಯೋಜನೆಯಡಿ ರೋಟೋವೇಟರ್ ಗಳನ್ನು ಫಲಾನುಭವಿ ರೈತರಿಗೆ ವಿತರಿಸಲಾಯಿತು.

ದೊಡ್ಡಬಳ್ಳಾಪುರ: ಕಾರೇಪುರದಲ್ಲಿ ರಾಷ್ಟ್ರೀಯ ರೈತ ದಿನಾಚರಣೆ.. ಪ್ರಗತಿ ಪರ ರೈತರಿಗೆ ಸನ್ಮಾನ

ದೊಡ್ಡಬಳ್ಳಾಪುರ ತಾಲ್ಲೂಕು ಕೃಷಿಕ ಸಮಾಜದ ಉಪಾಧ್ಯಕ್ಷ ಅರಸೇಗೌಡ ಸೇರಿದಂತೆ, ತಾಲ್ಲೂಕು ಕೃಷಿಕ ಸಮಾಜದ ನಿರ್ದೇಶಕರುಗಳು, ರೈತ ಸಂಘದ ಮುಖಂಡರಾದ ಹನುಮೇಗೌಡ, ಹನುಮಂತರಾಯಪ್ಪ, ಕೇಶವಮೂರ್ತಿರವರು, ದೊಡ್ಡಬೆಳವಂಗಲ ಗ್ರಾಮ ಪಂಚಾಯಿತಿಯ ಅಧ್ಯಕ್ಷೆ ಕಲಾವತಿ ಸೇರಿದಂತೆ ಸದಸ್ಯರುಗಳು, ಕೃಷಿ ಸಂಬಂಧಿತ ಇಲಾಖೆಯ ಎಲ್ಲಾ ಅಧಿಕಾರಿಗಳು, ಕೃಷಿ ಅಧಿಕಾರಿಗಳು, ಆತ್ಮ ಸಿಬ್ಬಂದಿಗಳು, ಪ್ರಗತಿ ಪರ ರೈತರು ಮತ್ತು ರೈತ ಬಾಂಧವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ರಾಜಕೀಯ

ಮುನೇಗೌಡ ಗೈರು..?!; ದೊಡ್ಡಬಳ್ಳಾಪುರದಲ್ಲಿ ಜೆಡಿಎಸ್ ನೂತನ ಜಿಲ್ಲಾಧ್ಯಕ್ಷ ಸಭೆ..!

ಮುನೇಗೌಡ ಗೈರು..?!; ದೊಡ್ಡಬಳ್ಳಾಪುರದಲ್ಲಿ ಜೆಡಿಎಸ್ ನೂತನ ಜಿಲ್ಲಾಧ್ಯಕ್ಷ ಸಭೆ..!

ಜೆಡಿಎಸ್ (JDS) ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ಸ್ಥಾನದ ಆಯ್ಕೆ ಪ್ರಕ್ರಿಯೆ ಬಳಿಕ ದೊಡ್ಡಬಳ್ಳಾಪುರ ಜೆಡಿಎಸ್ ಬಣಗಳ ಅಂತರ ಹೆಚ್ಚಾಗುತ್ತಿದೆ.

[ccc_my_favorite_select_button post_id="119451"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ನೆಲಮಂಗಲ ಹೆದ್ದಾರಿಯ ಜಿಂದಾಲ್ ಮೇಲ್ಸೇತುವೆ ಬಳಿ ಸಂಭವಿಸಿದ ಕೆಎಸ್ ಆರ್ ಟಿಸಿ ಬಸ್​​ (KSRTC Bus) ಮತ್ತು ಇಂಡಿಕ ಕಾರಿನ (Indica Car) ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ (Accident) ದೊಡ್ಡಬಳ್ಳಾಪುರದ ಐವರು ಯುವಕರು

[ccc_my_favorite_select_button post_id="119422"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!