Bashettihalli election results: 8 BJP, 1 Congress, 1 independent candidate wins

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಫಲಿತಾಂಶ; “ಕೈ” ಹಿಡಿಯಲಿಲ್ಲ ಗ್ಯಾರಂಟಿ ಯೋಜನೆಗಳು..! ಉಪ ಚುನಾವಣೆ ಶೀಘ್ರ..?!

ಕೆ.ಎಂ.ಸಂತೋಷ್, ಆರೂಢಿ (ದೊಡ್ಡಬಳ್ಳಾಪುರ); ಬಾಶೆಟ್ಟಿಹಳ್ಳಿ ಗ್ರಾಮ ಪಂಚಾಯಿತಿಯಿಂದ, ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೇರಿದ ಬಳಿಕ ನಡೆದ ಮೊದಲ ಚುನಾವಣೆಯಲ್ಲೇ (Bashettihalli election) ಬಿಜೆಪಿ ಅಧಿಕಾರದ ಗದ್ದುಗೆ ಏರಿದೆ.

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ 19 ವಾರ್ಡ್ಗಳಲ್ಲಿ ಬಿಜೆಪಿ 14 ರಲ್ಲಿ ಜಯಗಳಿಸಿ ಅಧಿಕಾರ ಪಡೆದಿದೆ. ಕಾಂಗ್ರೆಸ್ ಮೂರು ಸ್ಥಾನ, ಜೆಡಿಎಸ್ ಹಾಗೂ ಸ್ವತಂತ್ರ ಅಭ್ಯರ್ಥಿ ಒಂದು ಕ್ಷೇತ್ರದಲ್ಲಿ ಜಯ ಸಾಧಿಸಿದ್ದಾರೆ.

ನಗರಸಭೆಯ 21ನೇ ವಾರ್ಡ್ಗೆ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ನವೀನ್ ಕುಮಾರ್ ಜಯಗಳಿಸಿದ್ದಾರೆ.

ಡಿ.21 ರಂದು ನಡೆದಿದ್ದ ಪಟ್ಟಣ ಪಂಚಾಯಿತಿ ಚುನಾವಣೆಯ ಮತಗಳ ಎಣಿಕೆ ಬುಧವಾರ ಬೆಳಿಗ್ಗೆ 8 ಗಂಟೆಯಿಂದ ನಗರದ ಕೊಂಗಾಡಿಯಪ್ಪ ಪ್ರೌಢ ಶಾಲೆಯಲ್ಲಿ ನಡೆಯಿತು.

ಮತಗಳ ಎಣಿಕೆ ಕೇಂದ್ರದ ಬಳಿ ಬಿಜೆಪಿ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸುವ ಮೂಲಕ ಪ್ರತಿ ವಾರ್ಡ್ನ ಫಲಿತಾಂಶ ಘೋಷಣೆಯಾಗುತ್ತಿದ್ದಂತೆ ಪಕ್ಷದ ಬಾವುಟ ಬೀಸುವ ಮೂಲಕ ಜೈಕಾರ ಹಾಕಿ ಸಂಭ್ರಮಿಸಿದರು.

ಬಾಶೆಟ್ಟಿಹಳ್ಳಿ ಗ್ರಾಮ ಪಂಚಾಯಿತಿ ಇದುವರೆಗೂ ಜೆಡಿಎಸ್ ಭದ್ರಕೋಟೆಯಾಗಿತ್ತು. 15 ವರ್ಷಗಳ ಕಾಲ ಜೆಡಿಎಸ್ ಅಭ್ಯರ್ಥಿಗಳೆ ಅಧ್ಯಕ್ಷರಾಗಿ ಆಡಳಿತ ನಡೆಸಿದ್ದರು. ಆದರೆ ಕ್ಷೇತ್ರದಲ್ಲಿ ಬದಲಾದ ರಾಜಕೀಯ, ತಾಲ್ಲೂಕು ಮುಖಂಡರಲ್ಲಿ ಇಲ್ಲದ ಒಗ್ಗಟ್ಟು ಹಾಗೂ ಸಂಘಟನೆ ಕೋರತೆಯಿಂದಾಗಿ ಅತ್ಯಂತ ಹೀನಾಯ ಸ್ಥಿತಿಯಲ್ಲಿ ಕೇಲವ ಒಬ್ಬ ಅಭ್ಯರ್ಥಿ ಮಾತ್ರ ಜಯಗಳಿಸಲು ಸಾಧ್ಯವಾಗಿದೆ.

ಜಿದ್ದಾಜಿದ್ದಿನ ಹಾಗೂ ‘ಸಕಲ’ವ್ಯವಸ್ಥೆಗಳ ರಾಜಕೀಯ ಹೋರಾಟದ ನಡುವೆಯೂ ಒಬ್ಬ ಅಭ್ಯರ್ಥಿ ಸ್ವತಂತ್ರವಾಗಿ ಆಯ್ಕೆಯಾಗಿರುವುದು ಅಭ್ಯರ್ಥಿಯ ಸ್ವಂತ ವರ್ಚಸ್ಸು ಕಾರಣವಾಗಿದೆ.

ಕಾರ್ಯಕರ್ತರ ಸಂಭ್ರಮ

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಪಡೆಯುವ ಮೂಲಕ ಅಧಿಕಾರದ ಗದ್ದುಗೆ ಪಡೆಯುವುದು ಖಚಿತವಾಗುತ್ತಿದ್ದಂತೆ ಶಾಸಕ ಹಾಗೂ ಬಿಜೆಪಿ ಯುವ ಮೋರ್ಚಾರ ರಾಜ್ಯ ಘಟಕದ ಅಧ್ಯಕ್ಷ ಧೀರಜ್ ಮುನಿರಾಜು ಮತ ಎಣೀಕೆ ಕೇಂದ್ರದ ಬಳಿ ಬಂದರು.

ಕಾರ್ಯಕರ್ತರು ಶಾಸಕರು ಹಾಗೂ ಅಭ್ಯರ್ಥಿಗಳನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸುವ ಮೂಲಕ ಮೆರವಣಿಗೆ ನಡೆಸಿದರು.

ಕೈ ಹಿಡಿಯಲಿಲ್ಲ ಗ್ಯಾರಂಟಿ ಯೋಜನೆಗಳು

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣ ಪ್ರಚಾರ ಸಭೆಗಳಲ್ಲಿ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ರಾಜ್ಯ ಸರ್ಕಾರದ ಪಂಚ ಗ್ಯಾರಂಟಿಗಳು ಅದರಲ್ಲೂ ಗೃಹಲಕ್ಷ್ಮೀ, ಉಚಿತ ವಿದ್ಯುತ್ ನೀಡುತ್ತಿರುವ ಬಗ್ಗೆಯೇ ಹೇಳುತ್ತಿದ್ದರು. ಆದರೆ ಜನತೆ ಗ್ಯಾರಂಟಿ ಮರೆತು, ಚುನಾವಣೆ ಹಿಂದಿನ ದಿನವೇ ಮುಖ್ಯ ಎಂಬಂತಿದ್ದ ಕಾರಣ ಮತಗಳಾಗಿ ಪರಿವರ್ತನೆಯಾಗುವಲ್ಲಿ ವಿಫಲವಾಗಿದ್ದು, ಕಾಂಗ್ರೆಸ್ ಮೂರು ಸ್ಥಾನಗಳಿಗೆ ತೃಪ್ತಿಪಟ್ಟುಕೊಳ್ಳುವಂತಾಗಿದೆ ಎಂಬ ಮಾತು ವ್ಯಾಪಕವಾಗಿದೆ.

ಯಶಸ್ಸು ಕಾಣದ ಭಿನ್ನಮತ

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಬಿಜೆಪಿ ಪಾಲಿಗೆ ಸಂಘಟನೆಗೆ ಹೊಸ ಉತ್ಸಾಹ ಮೂಡಿಸಿರುವುದು ಒಂದು ಕಡೆಯಾದರೆ, ಇಲ್ಲಿಂದ ಮುಂದೆ ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ನಡೆಯಲಿರುವ ಗ್ರಾಮ ಪಂಚಾಯಿತಿ, ಜಿಲ್ಲಾ ಪಂಚಾಯಿತಿ ನಂತರದ ವಿಧಾನಸಭೆ ಚುನಾವಣೆಗೂ ಭಿನ್ನಮತದ ಮುನ್ನುಡಿ ಬರೆದಿದೆ ಎನ್ನಲಾಗುತ್ತಿದೆ.

ಬಾಶೆಟ್ಟಿಹಳ್ಳಿ ಭಾಗದಲ್ಲಿ ತಮ್ಮ ಪ್ರಭಾವ ಹೊಂದಿರುವ ಬಿಜೆಪಿ ಮುಖಂಡ ಹಾಗೂ ಬಮೂಲ್ ನಿರ್ದೇಶಕ ಬಿ.ಸಿ.ಆನಂದಕುಮಾರ್ ಪಕ್ಷದ ಪರವಾಗಿ ಎಲ್ಲೂ ಶಾಸಕ ಧೀರಜ್ ಅವರೊಂದಿಗೆ ಪ್ರಚಾರದಲ್ಲಿ ಕಾಣಿಸಿಕೊಂಡಿಲ್ಲ.

ಬದಲಿಗೆ ತಮ್ಮ ಹತ್ತಿರದ ಸಂಬಂಧಿ ಎಳ್ಳುಪುರ ವಾರ್ಡ್ನಲ್ಲಿ ಅಂಬರೀಶ್ ಸೇರಿದಂತೆ ಮೂರು ವಾರ್ಡ್ಗಳಲ್ಲಿ ಸ್ವತಂತ್ರ ಅಭ್ಯರ್ಥಿಗಳನ್ನು ಬೆಂಬಲಿಸುವ ಮೂಲಕ ಕೆಲ ಫೇಸ್‌ಬುಕ್‌ ಮಾಧ್ಯಮಗಳಲ್ಲಿ ಪ್ರಚಾರವನ್ನು ನಡೆಸಿದರು ಎಂದು ವರದಿಯಾಗಿದೆ.

ಇದರಿಂದಾಗಿ ನಿರಾಯಸವಾಗಿ ಜಯಗಳಿಸುವ ಅವಕಾಶ ಇದ್ದ ಬಿಜೆಪಿ ಅಭ್ಯರ್ಥಿಗಳು ಹಾಗೂ ಮುಖಂಡರು ತೀವ್ರ ತರಹನಾದ ಕಸರತ್ತುಗಳನ್ನು ನಡೆಸುವಂತೆ ಹಾಗೂ ಅಭ್ಯರ್ಥಿಗಳಿಗೆ ಚುನಾವಣೆ ದುಬಾರಿಯಾಗುವಂತೆ ಮಾಡಿತ್ತು.

ಅಂತಿಮವಾಗಿ ಬಿಜೆಪಿ ಹೆಚ್ಚು ಸ್ಥಾನಗಳನ್ನು ಗಳಿಸುವ ಮೂಲಕ ಅಧಿಕಾರದ ಚುಕ್ಕಣಿ ಹಿಡಿದಿದೆ. ಆದರೆ ಈ ಭಿನ್ನಮತ ಶಮನವಾಗುತ್ತದ ಕಾದು ನೋಡಬೇಕಿದೆ.

ಉಪ ಚುನಾವಣೆ ಶೀಘ್ರ

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಅಧ್ಯಕ್ಷ ಸ್ಥಾನ ಎಸ್.ಟಿ ಅಭ್ಯರ್ಥಿಗೆ, ಉಪಾಧ್ಯಕ್ಷ ಸ್ಥಾನ ಬಿಸಿಎಂ ‘ಎ’ ಅಭ್ಯರ್ಥಿಗೆ ಮೀಸಲಾಗಿದೆ. ಹೀಗಾಗಿ ಎಸ್.ಟಿ ಅಭ್ಯರ್ಥಿ ಗೆದ್ದರೆ ಅಧ್ಯಕ್ಷ ಸ್ಥಾನ ಖಚಿತ ಎನ್ನುವ ಕಾರಣದಿಂದಾಗಿ ಎಸ್.ಟಿ.ಸಮುದಾಯದ ಮುಖಂಡ ಪ್ರೇಮ್ ಕುಮಾರ್ ವಾರ್ಡ್ ಸಂಖ್ಯೆ 2 ಹಾಗೂ 14 ಎರಡೂ ಕಡೆಯಲ್ಲೂ ಬಿಜೆಪಿ ವತಿಯಿಂದ ಸ್ಪರ್ಧಿಸಿದ್ದರು. ಈ ಎರಡೂ ವಾರ್ಡ್ಗಳಲ್ಲಿ ಜಯಗಳಿಸಿದ್ದಾರೆ.

ಒಟ್ಟಾರೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಫಲಿತಾಂಶ ಒಂದು ಉಪಚುನಾವಣೆ ಸೇರಿದಂತೆ ಮುಂಬರುವ ದಿನಗಳಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಹಲವು ರಾಜಕೀಯ ಬದಲಾವಣೆ ಕಾರಣವಾಗಲಿದೆ ಎಂಬ ಮಾತು ವ್ಯಾಪಕವಾಗಿದೆ.

ರಾಜಕೀಯ

ಕೇಂದ್ರ ಸರ್ಕಾರದ ವಿರುದ್ಧ ಕಾರ್ಮಿಕ ಸಂಘಟನೆಗಳ ಸಾರ್ವತ್ರಿಕ ಮುಷ್ಕರ: ದೊಡ್ಡಬಳ್ಳಾಪುರ ಬಂದ್‌ಗೆ ವರ್ತಕರ ಬೆಂಬಲ

ಕೇಂದ್ರ ಸರ್ಕಾರದ ವಿರುದ್ಧ ಕಾರ್ಮಿಕ ಸಂಘಟನೆಗಳ ಸಾರ್ವತ್ರಿಕ ಮುಷ್ಕರ: ದೊಡ್ಡಬಳ್ಳಾಪುರ ಬಂದ್‌ಗೆ ವರ್ತಕರ

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕಾರ್ಮಿಕ ವಿರೋಧಿ ಸಂಹಿತೆಗಳನ್ನು ಹಿಂಪಡೆಯುವುದು ಸೇರಿದಂತೆ ಕಾರ್ಮಿಕ ವಿರೋಧಿ ಮಸೂದೆ ಗಳನ್ನು ರದ್ದುಪಡಿಸುವಂತೆ ಹಾಗೂ ಮನ್ರೇಗಾ ಮರು ಜಾರಿ, ಸಾರ್ವಜನಿಕ ಸೇವೆಗಳ ಖಾಸಗೀಕರಣ ರದ್ದತಿಗೆ ಒತ್ತಾಯಿಸಿ, ಕಾರ್ಮಿಕ ಸಂಘಟನೆಗಳ

[ccc_my_favorite_select_button post_id="119366"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ದೊಡ್ಡಬಳ್ಳಾಪುರ: ಪತ್ನಿಗೆ ಚಿಕಿತ್ಸೆ ಕೊಡಿಸಿ ಮನೆಗೆ ಕರೆದೊಯ್ಯುತ್ತಿದ್ದವ ಅಪಘಾತದಲ್ಲಿ ಸಾವು.‌.!

ದೊಡ್ಡಬಳ್ಳಾಪುರ: ಪತ್ನಿಗೆ ಚಿಕಿತ್ಸೆ ಕೊಡಿಸಿ ಮನೆಗೆ ಕರೆದೊಯ್ಯುತ್ತಿದ್ದವ ಅಪಘಾತದಲ್ಲಿ ಸಾವು.‌.!

ಮಡದಿಗೆ ಉಂಟಾಗಿದ್ದ ಅನಾರೋಗ್ಯ ಕಾರಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಮನೆಗೆ ಕರೆದೊಯ್ಯುತ್ತಿದ್ದ ವ್ಯಕ್ತಿ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಸಾವನಪ್ಪಿರುವ ಘಟನೆ (Accident) ತಾಲೂಕಿನಲ್ಲಿ ಸಂಭವಿಸಿದೆ.

[ccc_my_favorite_select_button post_id="119259"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!