ನಾನು ಬರೀ ವೇದಿಕೇಲಿ ಕೂತು ಭಾಷಣ ಮಾಡಿಲ್ಲ, ಪಕ್ಷದ ಎಲ್ಲ ಕೆಲಸ ಮಾಡಿದ್ದೇನೆ: ಡಿ.ಕೆ‌.ಶಿವಕುಮಾರ್

I didn't just sit on the podium and make speeches, I did all the party's work: D.K. Shivakumar

ಬೆಂಗಳೂರು: “ನಾನು ಕೇವಲ ವೇದಿಕೆಯಲ್ಲಿ ಕುಳಿತು, ಭಾಷಣ ಮಾಡಿಕೊಂಡು ಹೋಗಿಲ್ಲ. ಪಕ್ಷದಲ್ಲಿ ಎಲ್ಲಾ ಕೆಲಸ ಮಾಡಿದ್ದೇನೆ (ಐ ಹ್ಯಾವ್ ಡನ್ ಎವೆರಿ ವರ್ಕ್ ಇನ್ ದ ಪಾರ್ಟಿ), ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ ನಂತರ ಹಾಗೂ ಸದಾಶಿವನಗರದ ತಮ್ಮ ನಿವಾಸದ ಬಳಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾಧ್ಯಮಗಳಿಗೆ ಗುರುವಾರ ಪ್ರತಿಕ್ರಿಯೆ ನೀಡಿದರು.

ಪಕ್ಷದ ಕಾರ್ಯಕರ್ತನಾಗಿಯೇ ಇರಲು ಬಯಸುತ್ತೇನೆ ಎಂದು ದೆಹಲಿಯಲ್ಲಿ ಹೇಳಿಕೆ ನೀಡಿದ್ದರ ಬಗ್ಗೆ ಕೇಳಿದಾಗ, “ನಾನು ಲೈಫ್ ಟೈಮ್ ಕಾರ್ಯಕರ್ತ. ನಾನು ಒಬ್ಬ ವರ್ಕರ್. ಅಧ್ಯಕ್ಷನಾದಾಗಲೂ ಪಕ್ಷದ ಬಾವುಟ ಕಟ್ಟಿದ್ದೇ‌ನೆ. ಕಾರ್ಯಕರ್ತನಾದಾಗಲೂ ಬಾವುಟ ಕಟ್ಟಿದ್ದೇನೆ, ಪೋಸ್ಟರ್ ಅಂಟಿಸಿದ್ದೇನೆ, ಕಸ ಗುಡಿಸಿದ್ದೇನೆ. ಕಾಂಗ್ರೆಸ್ ಪಕ್ಷಕ್ಕೆ ಏನೇನು ಬೇಕೋ ಎಲ್ಲವನ್ನೂ ಮಾಡಿದ್ದೇನೆ” ಎಂದರು.

ದೆಹಲಿಯಲ್ಲಿ ನಡೆಯುವ ಸಿಡಬ್ಲ್ಯೂಸಿ ಸಭೆಗೆ ತಾವು ತೆರಳುವಿರಾ ಎಂದು ಕೇಳಿದಾಗ, “ನನ್ನನ್ನು ಕರೆದರೆ ಖಂಡಿತಾ ಹೋಗುತ್ತೇನೆ. ಆದರೆ ಇದುವರೆಗೂ ಕರೆದಿಲ್ಲ” ಎಂದರು.

ಮುಖ್ಯಮಂತ್ರಿಯವರನ್ನು ಸಭೆಗೆ ಆಹ್ವಾನಿಸಲಾಗಿದೆಯಲ್ಲ ಎಂದು ಹೇಳಿದಾಗ, “ಇರಬಹುದು, ಮೂವರು ಸಿಎಂಗೆ ಆಹ್ವಾನ ನೀಡಿದ್ದಾರೆ ಎಂದು ನನಗೂ ಗೊತ್ತಿದೆ. ಆದರೆ ಡೆಪ್ಯುಟಿ ಸಿಎಂಗೆ ಕರೆದಿಲ್ಲ” ಎಂದು ತಿಳಿಸಿದರು.

ಪಿಸಿಸಿ ಅಧ್ಯಕ್ಷರಿಗೆ ಆಹ್ವಾನವಿಲ್ಲವೇ ಎಂದು ಕೇಳಿದಾಗ, “ಸಮಿತಿಯ ವಿಸ್ತರಿತ ಸಭೆಗೆ ಕರೆಯುತ್ತಾರೆ” ಎಂದರು.

ಒಂದೊಮ್ಮೆ ಸಭೆಗೆ ಕರೆದರೆ ಹೋಗುವಿರಾ ಎಂದು ಕೇಳಿದಾಗ, “ಕರೆದರೆ ಹೋಗಬೇಕಾಗುತ್ತದೆ. ಕರೆದಾಗ ಹೋಗದೇ ಇರಲು ಆಗುತ್ತದೆಯೇ” ಎಂದು ಹೇಳಿದರು.

ಖರ್ಗೆ ಅವರ ಜತೆ ನಾಯಕತ್ವ ವಿಚಾರವಾಗಿ ಚರ್ಚೆ ನಡೆಸಿದರಾ ಎಂದು ಕೇಳಿದಾಗ, “ಯಾವ ವಿಚಾರವಾಗಿಯೂ ಚರ್ಚೆ ನಡೆಸಿಲ್ಲ. ನಾನು ಚರ್ಚೆ ಮಾಡುವುದೂ ಇಲ್ಲ. ಮಾಡುವ ಅವಶ್ಯಕತೆಯೂ ಇಲ್ಲ.‌ ನಾನು ಮತ್ತು ಸಿದ್ದರಾಮಯ್ಯ ಅವರು ಈಗಾಗಲೇ ಇದರ ಬಗ್ಗೆ ಹೇಳಿದ್ದೇವೆ. ಹೈಕಮಾಂಡ್ ಏನು ಹೇಳುತ್ತದೆಯೋ ಅದರಂತೆ ಕೆಲಸ ಮಾಡಿಕೊಂಡು ಹೋಗುತ್ತೇವೆ. ಅವರು ಏನು ಹೇಳುತ್ತಾರೋ ಆ ರೀತಿ ಕೇಳಿಕೊಂಡು ಹೋಗುತ್ತೇವೆ” ಎಂದರು.

ಸ್ಥಳೀಯ ಮಟ್ಟದಲ್ಲಿ ಗೊಂದಲ ಬಗೆಹರಿಸಿಕೊಳ್ಳಿ ಎಂದು ಮಲ್ಲಿಕಾರ್ಜುನ ಖರ್ಗೆ ಅವರು ಹೇಳಿರುವ ಬಗ್ಗೆ ಕೇಳಿದಾಗ, “ಹಿರಿಯರು ಮಾರ್ಗದರ್ಶನ ನೀಡುತ್ತಾರೆ” ಎಂದರು.

ಶುಕ್ರವಾರದಂದು ಕಾಂಗ್ರೆಸ್ ಕಾರ್ಯಕಾರಿಣಿ ಸಮಿತಿ ಸಭೆಯಿದೆ. ಈ ಸಭೆಯಲ್ಲಿ ಮನರೇಗಾ ಯೋಜನೆಯ ಹೆಸರು ಬದಲಾವಣೆ, ಅನುದಾನದಲ್ಲಿ ರಾಜ್ಯದ ಪಾಲನ್ನು ಶೇ.40ಕ್ಕೆ ಹೆಚ್ಚಿಸಿರುವುದು ಸೇರಿದಂತೆ ರೈತರಿಗೆ ಮಾರಕವಾದಂತಹ ಬದಲಾವಣೆಗಳನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿದೆ. ಈ ವಿಚಾರವಾಗಿ ಒಂದು ರಾಜ್ಯದ ಅಧ್ಯಕ್ಷನಾಗಿ ನನ್ನ ಅಭಿಪ್ರಾಯಗಳನ್ನು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ತಿಳಿಸಿದ್ದೇನೆ. ಅವರ ಜತೆ ಯಾವ ರಾಜಕೀಯ ಮಾತುಕತೆಯೂ ಮಾಡಿಲ್ಲ” ಎಂದು ಸ್ಪಷ್ಟನೆ ನೀಡಿದರು.

“ಮನರೇಗಾ ಯೋಜನೆಯಿಂದ ಪಂಚಾಯತಿಗಳಿಗೆ ಅನುಕೂಲವಾಗುತ್ತಿತ್ತು. ಪಂಚಾಯತಿ ಸದಸ್ಯರುಗಳಿಗೆ ಶಕ್ತಿಯಿತ್ತು‌. ಪ್ರತಿ ಕೂಲಿ ಕಾರ್ಮಿಕರ ಖಾತೆಗೆ ಹಣ ಸಂದಾಯವಾಗಿತ್ತಿತ್ತು. ಪ್ರತಿಯೊಬ್ಬರು ಚರ್ಚೆ ನಡೆಸಿ ತಮ್ಮ ಊರಿಗೆ ಯಾವ ಕೆಲಸಗಳನ್ನು ತೆಗೆದುಕೊಳ್ಳಬೇಕು ಎನ್ನುವ ಅವಕಾಶವಿತ್ತು. ಆದರೆ ಈಗ ಕೇಂದ್ರ ಸರ್ಕಾರವೇ ಯಾವ ಜಿಲ್ಲೆಯಲ್ಲಿ ಯಾವ ಕೆಲಸ ತೆಗೆದುಕೊಳ್ಳಬೇಕು ಎಂದು ತೀರ್ಮಾನ ಮಾಡುತ್ತದಂತೆ” ಎಂದು ಹೇಳಿದರು.

“ರೈತರು ತಮ್ಮ ಸ್ವಂತ ಜಮೀನಿನಲ್ಲಿ ಕೆಲಸ ಮಾಡಿಕೊಳ್ಳಲು, ಇಂಗುಗುಂಡಿ ತೋಡಿಕೊಳ್ಳಲು, ಕೊಟ್ಟಿಗೆ ಕಟ್ಟಿಕೊಳ್ಳಲು – ಹೀಗೆ ಅನೇಕ ಕೆಲಸಗಳನ್ನು ಮಾಡಿಕೊಳ್ಳಲು ಅನುಕೂಲವಾಗುತ್ತಿತ್ತು. ಇಂತಹ ಅದ್ಬುತವಾದ ಕಾರ್ಯಕ್ರಮವನ್ನು ಸೋನಿಯಾಗಾಂಧಿ ಅವರ ಮಾರ್ಗದರ್ಶನದಲ್ಲಿ ಮನಮೋಹನ್ ಸಿಂಗ್ ಅವರು ನೀಡಿದ್ದರು. ಮುಂದಿನ 2026 ರ ಫೆಬ್ರವರಿ‌ ವೇಳೆಗೆ ಈ ಯೋಜನೆಗೆ 20 ವರ್ಷ ತುಂಬಲಿದೆ. ಆದ ಕಾರಣ ದೊಡ್ಡ ಹೋರಾಟವನ್ನು ಹಮ್ಮಿಕೊಳ್ಳಲು ಆಲೋಚಿಸಲಾಗಿದೆ” ಎಂದು ಹೇಳಿದರು.

ನಿಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗುತ್ತದೆಯೇ ಎಂದು ಕೇಳಿದಾಗ, “ನೀವು (ಮಾಧ್ಯಮಗಳು) ಹೇಳಿದ್ದಕ್ಕೆಲ್ಲಾ ಉತ್ತರ ನೀಡಲು ಆಗುವುದಿಲ್ಲ. ನಾನು ಹೇಳುವುದನ್ನೂ ಕೇಳಿ” ಎಂದರು.

ಚಿತ್ರದುರ್ಗದ ಹಿರಿಯೂರಿನ ಬಳಿ ರಸ್ತೆ ಅಪಘಾತದಲ್ಲಿ ಬಸ್ ಬೆಂಕಿಗಾಹುತಿಯಾದ ಬಗ್ಗೆ ಕೇಳಿದಾಗ, “ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಕೆಲಸ ಮಾಡುತ್ತಿದ್ದಾರೆ. ನನಗೆ ತುಂಬಾ ದುಃಖವಾಗಿದ್ದು, ಏನು ಹೇಳಬೇಕು ಎಂದು ತೋಚದಂತಾಗಿದ್ದೇನೆ.‌ ಕುಟುಂಬಸ್ಥರಿಗೆ ಸಾಂತ್ವಾನ ತಿಳಿಸುತ್ತೇನೆ. ಮೃತರ ಆತ್ಮಕ್ಕೆ ಶಾಂತಿ ದೊರಕಲಿ. ಘಟನೆಗೆ ಕಾರಣ ಏನು ಎಂದು ವರದಿ ನೀಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ.‌ ಪರಿಹಾರ ನೀಡಲು ಕ್ರಮ ತೆಗೆದುಕೊಳ್ಳಲಾಗಿದೆ” ಎಂದರು.

ರಾಜಕೀಯ

ಡಾಕ್ಟರೇಟ್ ನಿರಾಕರಿಸಿ ಮಾದರಿಯಾದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಡಾಕ್ಟರೇಟ್ ನಿರಾಕರಿಸಿ ಮಾದರಿಯಾದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಡಾಕ್ಟರೇಟ್ ಪಡೆಯಲು ತರಾವರಿ ಪ್ರಯತ್ನ ನಡೆಸುವವರ ನಡುವೆ, ಹಾವೇರಿ ವಿಶ್ವವಿದ್ಯಾಲಯವು ನೀಡಲು ಮುಂದಾಗಿದ್ದ ಗೌರವ ಡಾಕ್ಟರೇಟ್ ಅನ್ನು, ಸಾರ್ವಜನಿಕ ಸೇವೆಯಲ್ಲಿ ಇರುವುದರಿಂದ, ಸಾರ್ವಜನಿಕ ಸೇವೆಗೆ ಯಾವುದೇ ಪ್ರಶಸ್ತಿಯನ್ನು ಅಪೇಕ್ಷಿಸುವುದಿಲ್ಲ ಎಂದು ನಿರಾಕರಿಸುವ ಮೂಲಕ ಮಾಜಿ

[ccc_my_favorite_select_button post_id="120744"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆ (Marriage) ಮಾಡಿಲ್ಲವೆಂದು ಜಗಳ ತಗೆದ ಮಗ (Son) ಸ್ವಂತ ತಾಯಿಯನ್ನೇ (Mother) ಹೊಡೆದು ಕೊಂದಿರುವ (Murder) ಘಟನೆ ವರದಿಯಾಗಿದೆ.

[ccc_my_favorite_select_button post_id="120643"]
ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ (Accident) ಪಲ್ಟಿಯಾದ ಪರಿಣಾಮ 9 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ನಡೆದಿದೆ.

[ccc_my_favorite_select_button post_id="120735"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]