The festive Sri Varaprada Bete festival of Ranganathaswamy

ಸಂಭ್ರಮದ ಶ್ರೀ ವರಪ್ರದ ಬೇಟೆ ರಂಗನಾಥಸ್ವಾಮಿ ಜಾತ್ರೆ

ದೊಡ್ಡಬಳ್ಳಾಪುರ: ತಾಲ್ಲೂಕಿನ ಹುಲಿಕುಂಟೆ ಗ್ರಾಮದಲ್ಲಿನ ಇತಿಹಾಸ ಪ್ರಸಿದ್ಧ ಶ್ರೀ ವರಪ್ರದ ಬೇಟೆ ರಂಗನಾಥಸ್ವಾಮಿ ಬೇಟೆ ಜಾತ್ರಾ ಮಹೋತ್ಸವ (Sri Varaprada bete festival) ಗುರುವಾರ ವಿಜೃಂಭಣೆಯಿಂದ ನಡೆಯಿತು.

ಹುಲಿಕುಂಟೆ ಗ್ರಾಮದ ಬೇಟೆ ಕೊಡುವ ಕದಿರು ಆಲದ ಮರದ ದಿನ್ನೆಯವರೆಗೆ ಸಾಗಿದ ರಂಗನಾಥಸ್ವಾಮಿ ಉತ್ಸವದಲ್ಲಿ ರಾಜ್ಯದ ವಿವಿಧಡೆಗಳಿಂದ ಆಗಮಿಸಿದ್ದ ಸಹಸ್ರಾರು ಜನ ಭಕ್ತಾದಿಗಳು ಭಾಗವಹಿಸಿದ್ದರು.

ಪೇಟಧಾರಿ ಬೇಟೆ ರಂಗನಾಥಸ್ವಾಮಿಯನ್ನು ಹೂವುಗಳಿಂದ ಸಿಂಗರಿಸಲಾಗಿತ್ತು.

ಹುಲಿಕುಂಟೆ, ಮಾವಿನಕುಂಟೆ, ಸೀತಕಲ್ಲು, ಚಿಕ್ಕಬೆಳವಂಗಲ ಮತ್ತಿತರೆ ಗ್ರಾಮಗಳಿಂದ ಕೋಲು ಹಿಡಿದುಕೊಂಡು ತಂಡೋಪ ತಂಡವಾಗಿ ಆಗಮಿಸಿ ಕೋಲು ಬೇಟೆ ಸಂಪ್ರದಾಯವನ್ನು ಸಾಂಕೇತಿಕವಾಗಿ ಆಚರಿಸಿದರು.

ದೇವಾಲಯದಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳು ನಡೆದವು.

ಕೋಲುಬೇಟೆ ಜಾತ್ರೆಯಲ್ಲಿ ವಿವಿಧ ರೀತಿಯ ತಿಂಡಿ ತಿನಿಸುಗಳ ಅಂಗಡಿಗಳು ಗಮನ ಸೆಳೆದವು.

ಸುಮಾರು 600 ವರ್ಷಗಳ ಇತಿಹಾಸವಿರುವ ಚೋಳರ ಕಾಲದ ಇತಿಹಾಸ ಹೊಂದಿರುವ ಹುಲಿಕುಂಟೆ ಕೋಲುಬೇಟೆ ಕಾರಣಕ್ಕೆ ಮಹತ್ವದ್ದೆನಿಸಿದೆ.

ಮಾಗಡಿ ತಾಲ್ಲೂಕಿನ ಜನತೆಯ ಆರಾದ್ಯ ದೈವವಾದ ಮಾಗಡಿ ರಂಗನಾಥ, ದೊಡ್ಡಬಳ್ಳಾಪುರ ತಾಲ್ಲೂಕಿನ ಹಣಬೆ ಗ್ರಾಮದ ಸುತ್ತಲಿನ ಜನರು ಪೂಜಿಸುವ ಹಣಬೆ ರಂಗನಾಥ ಮತ್ತು ಹುಲಿಕುಂಟೆ ಸುತ್ತಲಿನ ಜನತೆಯ ಆರಾದ್ಯ ದೈವ ಹುಲಿಕುಂಟೆ ಬೇಟೆ ರಂಗನಾಥ ಈ ಮೂರು ಐತಿಹಾಸಿಕ ವ್ಯಕ್ತಿಗಳ ಶಕ್ತಿ ಸಂಚಯನದ ಸಾಕಾರ ರೂಪವೇ ಹುಲಿಕುಂಟೆ ಬೇಟೆ ರಂಗನಾಥ.

ಮೂರೂ ಜನ ವ್ಯಕ್ತಿಗಳು ಸೇರಿ ತಮ್ಮ ಶಕ್ತಿಯನ್ನು ಕ್ರೋಢೀಕರಿಸಿ ಹುಲಿಕುಂಟೆಯಲ್ಲಿ ‘ಬೇಟೆ ರಂಗನಾಥಸ್ವಾಮಿ’ ಹೆಸರಿನ ಗುಡಿಯೊಂದನ್ನು ಕಟ್ಟಿ ವಿಗ್ರಹವೊಂದನ್ನು ಸ್ಥಾಪಿಸಿ ಯುದ್ಧವೊಂದಕ್ಕೆ ಸಿದ್ಧರಾಗುತ್ತಾರೆ.

ರಂಗನಾಥಸ್ವಾಮಿಯೇ ಬೇಟೆಯ ನಾಯಕ ಎಂದು ಈ ಆಚರಣೆಯನ್ನು ಸಾಂಕೇತಿಕವಾಗಿ ಈಗಲೂ ನಡೆಸುತ್ತ ಬರಲಾಗುತ್ತಿದೆ. ಅಲ್ಲಿಂದ ಸ್ವಲ್ಪ ದೂರದಲ್ಲಿ ರಂಗನಾಥಸ್ವಾಮಿಗೆ ಮೊದಲ ಬಲಿ ಸಿಗುತ್ತದೆ. ಆ ಮೊದಲ ಬಲಿ ಸಿಕ್ಕ ಜಾಗದಲ್ಲಿ ಒಂದು ಮಂಟಪ ಕಟ್ಟಿ ಸ್ವಾಮಿಯನ್ನು ಶಾಂತಗೊಳಿಸಲಾಗುತ್ತದೆ.

ಈಗಲೂ ಅದೇ ಜಾಗದಲ್ಲಿ ಬೇಟೆ ಮುಗಿಸಿಕೊಂಡು ಬಂದ ಬೇಟೆ ರಂಗನಾಥಸ್ವಾಮಿಗೆ ಪೂಜೆ ನಡೆಯುತ್ತದೆ. ಈ ಕುರಿತ ಆಚರಣೆಗೆ ‘ಕೋಲು ಬೇಟೆ’ ಎಂದೇ ಕರೆಯಲಾಗುತ್ತದೆ. ಪ್ರತಿ ವರ್ಷದ ಶೂನ್ಯ ಮಾಸದ ಕಡೆಯ ಗುರುವಾರ ಈ ಆಚರಣೆ ನಡೆಯುತ್ತದೆ.

ಬೆಳೆಗಳ ಕೊಯ್ಲು ಮುಗಿದು ದಾನ್ಯ ಮನೆಗೆ ಬರುವ ಕಾಲವಾದ್ದರಿಂದ ದಾನ್ಯಗಳನ್ನು ಹೊಲಗಳಲ್ಲಿಯೇ ಕೂಡಿಡುವ ಪರಿಪಾಟವಿದ್ದುದರಿಂದ ಸುತ್ತಲಿನ ಪ್ರದೇಶದ ಪ್ರಾಣಿಗಳನ್ನು ನಿಯಂತ್ರಿಸುವ ಕಾರಣಕ್ಕೆ ಸುತ್ತಲಿನ ಜನ ಬೇಟೆಯಾಡಿ ಪ್ರಾಣಿಗಳನ್ನು ನಿಯಂತ್ರಿಸುವ ಪದ್ಧತಿ ಬೆಳೆದು ಬಂದಿರಬಹುದು ಎನ್ನಲಾಗಿದೆ.

ಹಳ್ಳಿಗಳ ಜನ ಸುತ್ತಲಿನ ಕಾಡುಗಳನ್ನು ತಿರುಗಿ, ಕೋಲು ಹಿಡಿದುಕೊಂಡು ಈ ಸ್ಥಳಕ್ಕೆ ಬಂದು ಸೇರಿ ಸಾಂಪ್ರದಾಯಿಕ ಕೋಲು ಬೇಟೆ ಆಚರಣೆಯನ್ನು ಮಾಡಲಾಗುತ್ತದೆ.

ರಾಜಕೀಯ

ದೊಡ್ಡಬಳ್ಳಾಪುರಕ್ಕೆ ಹೆಚ್ಚಾದ GBA ತ್ಯಾಜ್ಯದ ಆತಂಕ..!: ಕಸ ತಂದ ಲಾರಿಗಳ ಪರಿಶೀಲನೆ

ದೊಡ್ಡಬಳ್ಳಾಪುರಕ್ಕೆ ಹೆಚ್ಚಾದ GBA ತ್ಯಾಜ್ಯದ ಆತಂಕ..!: ಕಸ ತಂದ ಲಾರಿಗಳ ಪರಿಶೀಲನೆ

ದೊಡ್ಡಬಳ್ಳಾಪುರ ತಾಲ್ಲೂಕಿನ ಚಿಗರೇನಹಳ್ಳಿಯಲ್ಲಿನ ಎಂ.ಎಸ್.ಜಿ.ಪಿ‌ (MSGP) ಕಸ ವಿಲೇವಾರಿ ಘಟಕಕ್ಕೆ ಬೃಹತ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯಿಂದ ಕಸ ತುಂಬಿಕೊಂಡು‌ ಹೆಚ್ಚುವರಿ ಲಾರಿಗಳು ಬರುತ್ತವೆ ಎಂಬ ಆತಂಕದ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ನ ತಾಲೂಕಿನ ದೊಡ್ಡಮಂಕಲಾಳ

[ccc_my_favorite_select_button post_id="119498"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಮರಕ್ಕೆ ಕಾರು ಡಿಕ್ಕಿ: ಸಬ್‌ಇನ್ಸ್‌ಪೆಕ್ಟರ್ ಸಾವು

ಮರಕ್ಕೆ ಕಾರು ಡಿಕ್ಕಿ: ಸಬ್‌ಇನ್ಸ್‌ಪೆಕ್ಟರ್ ಸಾವು

ಆರೋಪಿಯನ್ನು ಹಿಡಿಯಲು ಹೋದ ಪೊಲೀಸರು ಪ್ರಯಾಣಿಸುತ್ತಿದ್ದ ಕಾರೊಂದು ರಸ್ತೆಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ (Accident) ಸಬ್‌ಇನ್ಸ್‌ಪೆಕ್ಟರ್ ಸಾವನ್ನಪ್ಪಿ, ಇನ್ಸ್‌ಪೆಕ್ಟರ್ ಸೇರಿ ಐವರು ಪೊಲೀಸರು ಗಾಯಗೊಂಡಿರುವ ಘಟನೆ ಉತ್ತರಪ್ರದೇಶದ ಮಹಾರಾಜಗಂಜ್ ಗೋರಖ್‌ಪುರ ಮುಖ್ಯ ರಸ್ತೆಯಲ್ಲಿ ಇಂದು ಬೆಳಿಗ್ಗೆ ನಡೆದಿದೆ.

[ccc_my_favorite_select_button post_id="119478"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಖಾಸಗಿ ಕಾರ್ಖಾನೆಯ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ (Accident), ದ್ವಿಚಕ್ರ ವಾಹನ ಸವಾರ ಸಾವನಪ್ಪಿರುವ ಘಟನೆ ತಾಲೂಕಿನ ಗೊಲ್ಲಹಳ್ಳಿ ಕ್ರಾಸ್ ಬಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆ ಸಮೀಪ ಇಂದು ಸಂಜೆ

[ccc_my_favorite_select_button post_id="119492"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!