ಗುಡ್ಮಾರ್ನಿಂಗ್ ನ್ಯೂಸ್: ಇಂದು ಘಾಟಿ ಸುಬ್ರಮಣ್ಯ ಬ್ರಹ್ಮರಥೋತ್ಸವ.. ವಿಶೇಷ ಪೂಜೆ

Today is Ghati Subramanya Brahma Rathotsava.

ದೊಡ್ಡಬಳ್ಳಾಪುರ; ಇತಿಹಾಸ ಪ್ರಸಿದ್ಧ ದೊಡ್ಡಬಳ್ಳಾಪುರದ ಶ್ರೀ ಘಾಟಿ ಸುಬ್ರಮಣ್ಯ (Ghati Subramanya) ಕ್ಷೇತ್ರದಲ್ಲಿ ಇಂದು ಬ್ರಹ್ಮರಥೋತ್ಸವ (Brahmarathotsava) ನಡೆಯಲಿದೆ.

ಪ್ರತಃ ಕಾಲ 02:00 ಗಂಟೆಗೆ ದೇವಾಲಯ ತೆರೆಯಲಾಗಿದ್ದು, 02:30 ಗಂಟೆಗೆ ಅಭಿಷೇಕ ಪ್ರಾರಂಭವಾಗಿ ಬೆಳಗೆ, 04:30 ಗಂಟೆಗೆ ಮಹಾ ಮಂಗಳಾರತಿ ನೆರಿಸಲಾಗಿದೆ.

ಬೆಳಗೆ, 05:00 ರಿಂದ 06:00 ಗಂಟೆಗಳ ವರೆಗೆ ಸ್ಥಳೀಯರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದ್ದು, 06:00 ಗಂಟೆಯಿಂದ ಭಕ್ತಾಧಿಗಳಿಗಾಗಿ ಧರ್ಮ ದರ್ಶನ ಮತ್ತು ರೂ. 50 ರ ವಿಶೇಷ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.

ಇಂದು ಮಧ್ಯಾಹ್ನ 12.00 ರಿಂದ 12.15 ಗಂಟೆಯ ಶುಭ ಮೂಹರ್ತದಲ್ಲಿ ಬ್ರಹ್ಮರಥೋತ್ಸವ ನಡೆಯಲಿದೆ. ಕಳೆದ ವರ್ಷ 1.50 ಲಕ್ಷದವರೆಗೂ ಭಕ್ತಾದಿಗಳು ಭಾಗಿಯಾಗಿದ್ದರು.

ಈ ಬಾರಿ ಬ್ರಹ್ಮರಥೋತ್ಸವವು ರಜೆ ದಿನ ಬಂದಿರುವುದರಿಂದ ಸುಮಾರು ಎರಡು ಲಕ್ಷ ಭಕ್ತಾದಿಗಳು ಬರುವ ಸಾಧ್ಯತೆ ಇದೆ. ಟ್ರಾಫಿಕ್ ಸಮಸ್ಯೆ, ಜನಸಂದಣಿ ನಿಯಂತ್ರಿಸಲು ಹಲವು ಕ್ರಮ ಕೈಗೊಳ್ಳಲಾಗಿದೆ.

ಘಾಟಿ ಕ್ಷೇತ್ರಕ್ಕೆ ಆಗಮಿಸಲು ಪ್ರಮುಖವಾಗಿ ಎರಡು ರಸ್ತೆ ಸಂಪರ್ಕಗಳಿದ್ದು ಮಾಕಳಿ ಹಾಗೂ ಕಂಟನಕುಂಟೆ ರಸ್ತೆಗಳಲ್ಲಿ ಸ್ವಚ್ಚತೆ ಕಾರ್ಯ, ಫುಟ್ ಪಾತ್ ಒತ್ತುವರಿ ತೆರವು ಮಾಡಲಾಗಿದೆ. ಇಲ್ಲಿ ಮೂಲಸೌಕರ್ಯ ವ್ಯವಸ್ಥೆ ಮಾಡಲಾಗಿದೆ.

ದೇವಾಲಯ ಸುತ್ತಮುತ್ತಲಿನ ಫುಟ್ ಪಾತ್ ಮೇಲಿನ ಅಂಗಡಿಗಳನ್ನು ತೆರವುಮಾಡಲಾಗಿದ್ದು ಭಕ್ತರ ಸಂಚಾರಕ್ಕೆ ಯಾವುದೇ ಸಮಸ್ಯೆ ಆಗದಂತೆ ಕ್ರಮವಹಿಸಲಾಗಿದೆ.

ಭಕ್ತರಿಗೆ ಉಚಿತ ಬಸ್ ವ್ಯವಸ್ಥೆ

ರಥೋತ್ಸವಕ್ಕೆ ಬರುವ ಭಕ್ತಾದಿಗಳ ವಾಹನಗಳಿಗೆ ಕಂಟನಕುಂಟೆ ಮಾರ್ಗ ಹಾಗು ಮಾಕಳಿ ಮಾರ್ಗ ಬಳಿ ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಅಲ್ಲಿಯೇ ಭಕ್ತಾದಿಗಳು ತಮ್ಮ ವಾಹನಗಳನ್ನು ನಿಲ್ಲಿಸಬೇಕು.

ಪಾರ್ಕಿಂಗ್ ಸ್ಥಳದಿಂದ ದೇವಾಲಯದ ಬಳಿಗೆ ತೆರಳಲು ಜಿಲ್ಲಾಡಳಿತದಿಂದ ಉಚಿತ ಬಸ್ ವ್ಯವಸ್ಥೆ ಮಾಡಲಾಗಿದ್ದು ಭಕ್ತಾದಿಗಳು ಆ ಬಸ್ ಗಳ ಮೂಲಕವೇ ಬಂದು ದರ್ಶನ ಪಡೆದು ಮತ್ತೇ ಅದೇ ಬಸ್ ಗಳ ಮೂಲಕ ಮರಳಬಹುದು.

ದೇವಾಲಯದ ಬಳಿ ವಾಹನ ಸಂಚಾರ ದಟ್ಟಣೆ, ಸಂಚಾರಕ್ಕೆ ತೊಂದರೆ ಆಗಬಾರದು ಎನ್ನುವ ಕಾರಣಕ್ಕೆ ಈ ಕ್ರಮ ಕೈಗೊಳ್ಳಲಾಗಿದೆ.

2026ರ ಜನವರಿ 31 ರವರೆಗೆ ಶ್ರೀ ಕ್ಷೇತ್ರಕ್ಕೆ ಬರುವ ವಾಹನಗಳಿಗೆ ಸುಂಕ ವಿನಾಯಿತಿ ನೀಡಲಾಗಿದೆ. ಭಕ್ತರಿಗೆ ಸುಗಮ ದರ್ಶನ ವ್ಯವಸ್ಥೆಗಾಗಿ ಧರ್ಮ ದರ್ಶನ ಮತ್ತು 50 ರೂಪಾಯಿಯ ವಿಶೇಷ ದರ್ಶನ ವ್ಯವಸ್ಥೆ ಇರಲಿದೆ.

ಡಿಸೆಂಬರ್ 28 ರವರೆಗೆ ಕ್ಷೇತ್ರದಲ್ಲಿ ವಿಶೇಷ ದೀಪಾಲಂಕಾರ ಮಾಡಲಾಗಿದ್ದು, ಬ್ರಹ್ಮರಥೋತ್ಸವಕ್ಕೆ ಬರುವ ಭಕ್ತರಿಗೆ ಉತ್ತಮ ಅನುಭವ ನೀಡುವ ನಿಟ್ಟಿನಲ್ಲಿ ಅಗತ್ಯಸಿದ್ದತೆ ಮಾಡಿಕೊಳ್ಳಲಾಗಿದೆ.

ಪ್ರತಿ ವರ್ಷದಂತೆ ಬ್ರಹ್ಮರಥೋತ್ಸವದಲ್ಲಿ ಎರಡು ಲಕ್ಷದವರೆಗೂ ಸಾರ್ವಜನಿಕರು ಸೇರುವ ನಿರೀಕ್ಷೆ ಇದೆ. ಭಕ್ತರಿಗೆ ಪಾರ್ಕಿಂಗ್ ಸಮಸ್ಯೆ ಬಗೆ ಹರಿಸಲು ಕ್ರಮ ವಹಿಸಲಾಗಿದೆ‌.

ಕಾರು ಸೇರಿದಂತೆ ಇತರೆ ವಾಹನಗಳಿಗೆ 14 ಪಾರ್ಕಿಂಗ್ ಸ್ಥಳ, ದ್ವಿಚಕ್ರ ವಾಹನಗಳಿಗೆ 4 ಪಾರ್ಕಿಂಗ್ ಸ್ಥಳಗಳನ್ನು ಗುರುತಿಸಲಾಗಿದೆ. ಭದ್ರತೆಗಾಗಿ ಈ ವರ್ಷ 1000 ಮಂದಿ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ, ಅಗ್ನಿಶಾಮಕ ವಾಹನ ವ್ಯವಸ್ಥೆ ಮಾಡಲಾಗಿದೆ.

ಜತೆಗೆ 100 ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಲಾಗಿದ್ದು ಅದರ ವೀಕ್ಷಣೆಗೆ ಕಂಟ್ರೋಲ್ ರೂಂ ಕೂಡ ಸ್ಥಾಪಿಸಲಾಗಿದೆ.

ರಾಜಕೀಯ

ದೊಡ್ಡಬಳ್ಳಾಪುರ BJPಗೆ ಶಾಕ್: ನಗರಸಭೆ ಸದಸ್ಯ ದಿಢೀರ್ ರಾಜೀನಾಮೆ..?

ದೊಡ್ಡಬಳ್ಳಾಪುರ BJPಗೆ ಶಾಕ್: ನಗರಸಭೆ ಸದಸ್ಯ ದಿಢೀರ್ ರಾಜೀನಾಮೆ..?

ಅಚ್ಚರಿಯ ಬೆಳವಣಿಗೆಯಲ್ಲಿ ಎಸ್. ಪದ್ಮನಾಭ (S. Padmanabha) ಅವರು ದೊಡ್ಡಬಳ್ಳಾಪುರ ನಗರಸಭೆ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ದೊಡ್ಡಬಳ್ಳಾಪುರ ಬಿಜೆಪಿಗೆ (Doddaballapur BJP) ಶಾಕ್ ನೀಡಿದ್ದಾರೆ

[ccc_my_favorite_select_button post_id="120682"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆ (Marriage) ಮಾಡಿಲ್ಲವೆಂದು ಜಗಳ ತಗೆದ ಮಗ (Son) ಸ್ವಂತ ತಾಯಿಯನ್ನೇ (Mother) ಹೊಡೆದು ಕೊಂದಿರುವ (Murder) ಘಟನೆ ವರದಿಯಾಗಿದೆ.

[ccc_my_favorite_select_button post_id="120643"]
ದೊಡ್ಡಬಳ್ಳಾಪುರ: ಪಾಲನಜೋಗಿಹಳ್ಳಿ ಬಳಿ ಮತ್ತೆ ಅಪಘಾತ.. ಇಬ್ಬರಿಗೆ ಗಾಯ..!

ದೊಡ್ಡಬಳ್ಳಾಪುರ: ಪಾಲನಜೋಗಿಹಳ್ಳಿ ಬಳಿ ಮತ್ತೆ ಅಪಘಾತ.. ಇಬ್ಬರಿಗೆ ಗಾಯ..!

ನಿನ್ನೆಯಷ್ಟೆ ಕೆಎಸ್‌ಆರ್‌ಟಿಸಿ ಬಸ್ ಹರಿದು ಬೈಕ್ ಸವಾರ ಸಾವನಪ್ಪಿರುವ ಬೆನ್ನಲ್ಲೇ, ರಸ್ತೆ ಬದಿ ನಿಂತಿದ್ದ ಆಟೋಗೆ ದ್ವಿಚಕ್ರ ವಾಹನ ಡಿಕ್ಕಿ (Accident) ಹೊಡೆದ ಪರಿಣಾಮ, ಬೈಕ್ ಸವಾರ ಹಾಗೂ ರಸ್ತೆಯ ಬದಿ ನಿಂತಿದ್ದ ಮಹಿಳೆಗೆ

[ccc_my_favorite_select_button post_id="120677"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]