ನಟಿಯರ ತುಂಡುಡುಗೆ: ಸಂಚಲನ ಸೃಷ್ಟಿಸಿದ ನಟ ಶಿವಾಜಿ ಹೇಳಿಕೆ..!

ಕೆ.ಎಂ.ಸಂತೋಷ್, ಆರೂಢಿ (ದೊಡ್ಡಬಳ್ಳಾಪುರ): ಮುಂಬರುವ ತೆಲುಗು ಚಿತ್ರ ‘ಧಂಡೋರಾ’ ಬಿಡುಗಡೆ ಪೂರ್ವ ಕಾರ್ಯಕ್ರಮದಲ್ಲಿ, ತೆಲುಗು ನಟ ಶಿವಾಜಿ (Shivaji) ಮಹಿಳೆಯರು ಮತ್ತು ನಾಯಕಿಯರು ಅಶ್ಲೀಲವಾಗಿ ಕಾಣುವ ತುಂಡುಡುಗೆ ತೊಡದೆ, ಮೈ ತುಂಬ ಉಡುಗೆ ತೊಡುವಂತೆ ಸಲಹೆ ನೀಡಿದ್ದು ವ್ಯಾಪಕ ಪರ – ವಿರೋಧಕ್ಕೆ ಕಾರಣವಾಗಿದೆ.

ಮಿಸ್ಸಮ್ಮ, ಸತ್ಯಭಾಮ ಮತ್ತು ಕೋರ್ಟ್ – ಸ್ಟೇಟ್ vs ಎ ನೋಬಡಿ ಮತ್ತು ಬಿಗ್ ಬಾಸ್ ತೆಲುಗು 7 ಕಾರ್ಯಕ್ರಮಗಳ ಪ್ರಸಿದ್ದ 54 ವರ್ಷದ ನಟ ಶಿವಾಜಿ ನಟಿಯರ ತುಂಡುಡುಗೆ ಕುರಿತು ನೀಡಿರುವ ಹೇಳಿಕೆ ವ್ಯಾಪಕ ಪ್ರಶಂಸೆಗೆ ಒಳಗಾಗಿದ್ದರು, ಮಹಿಳಾ ಆಯೋಗ ನೋಟಿಸ್ ನೀಡಿದೆ.

ಇಷ್ಟಕ್ಕೂ ಶಿವಾಜಿ ನೀಡಿದ ಹೇಳಿಕೆಯನ್ನು ಗಮನಿಸುವುದಾದರೆ, “ಎಲ್ಲಾ ನಾಯಕಿಯರು ದೇಹದ ಭಾಗಗಳನ್ನು ಕಾಣುವಂತೆ ಉಡುಪುಗಳನ್ನು ಧರಿಸಬೇಡಿ ಎಂದು ನಾನು ವಿನಂತಿಸುತ್ತೇನೆ. ದಯವಿಟ್ಟು ಸೀರೆ ಅಥವಾ ದೇಹವನ್ನು ಸಂಪೂರ್ಣವಾಗಿ ಮುಚ್ಚುವ ಉಡುಪುಗಳನ್ನು ಧರಿಸಿ. ಸೌಂದರ್ಯವು ಸಂಪೂರ್ಣ ಉಡುಗೆ ಅಥವಾ ಸೀರೆಯಲ್ಲಿದೆ, ದೇಹವನ್ನು ( ತೆಲು ಭಾಷೆಯಲ್ಲಿ ಶಿವಾಜಿ ಬಳಸಿದ ಪದ ಸಾಮಾನುಲು) ಪ್ರದರ್ಶಿಸುವುದರಲ್ಲಿ ಅಲ್ಲ ಎಂದಿದ್ದರು.

ಜನರು ಬಹಿರಂಗವಾಗಿ ಏನನ್ನೂ ಹೇಳದಿರಬಹುದು ಏಕೆಂದರೆ ಅದು ನಿಮ್ಮ ಸ್ವಾತಂತ್ರ್ಯ ಎಂದು ಅವರು ಭಾವಿಸುತ್ತಾರೆ, ಆದರೆ ಒಳಗೆ ಅವರಿಗೆ ಅದು ಇಷ್ಟವಾಗದಿರಬಹುದು.

https://twitter.com/i/status/2004435173090512962

ಮಹಿಳೆ ಪ್ರಕೃತಿಯಂತೆ. ಪ್ರಕೃತಿ ಸುಂದರವಾಗಿದ್ದಾಗ, ನಾವು ಅದನ್ನು ಗೌರವಿಸುತ್ತೇವೆ. ಮಹಿಳೆ ನನ್ನ ತಾಯಿಯಂತೆ, ಅವರನ್ನು ನಾನು ನನ್ನ ಹೃದಯಕ್ಕೆ ಹತ್ತಿರವಾಗಿರಿಸುತ್ತೇನೆ ಎಂದು ಅವರು ಹೇಳಿದರು.

ದಂತಕಥೆ ನಟಿಯರಾದ ಸಾವಿತ್ರಿ ಮತ್ತು ಸೌಂದರ್ಯ, ಅನುಷ್ಕಾ, ಮೀರಾ ಜಾಸ್ಮಿನ್ ಮತ್ತು ಉದಯೋನ್ಮುಖ ತಾರೆ ರಶ್ಮಿಕಾ ಅವರ ಉದಾಹರಣೆಯನ್ನು ಉಲ್ಲೇಖಿಸಿ ಅವರ ಬಗ್ಗೆ ಯಾರಾದ್ರೂ ಕೆಟ್ಟ ದೃಷ್ಟಿಯಿಂದ ನೋಡಲು ಸಾಧ್ಯವೆ..? ಎಂದು ಪ್ರಶ್ನಿಸಿದರು.

ಶಿವಾಜಿ ನಟಿಯರಿಗೆ ಹೊರಗೆ ಹೋಗುವಾಗ ತಮಗೆ ಅನಿಸುವ ಯಾವುದೇ ಬಟ್ಟೆ ಧರಿಸಬೇಡಿ ಏಕೆಂದರೆ ಅದರ ಪರಿಣಾಮಗಳನ್ನು ಅವರು ಅನುಭವಿಸಬೇಕಾಗುತ್ತದೆ ಎಂದು, ಇತ್ತೀಚೆಗೆ ನಟಿಯೋರ್ವರಿಗೆ ಕಿಡಿಗೇಡಿಗಳು ನೀಡಿದ ಉಪಟಳದ ಬಗ್ಗೆ ಎಚ್ಚರಿಕೆ ನೀಡಿ, ಮೇಲಿನಂತೆ ಸಲಹೆ ನೀಡಿದ್ದರು.

ಈ ಹೇಳಿಕೆ ಕುರಿತಂತೆ ವ್ಯಾಪಕ ಬೆಂಬಲ ದೊರೆತಿದ್ದು, ಕೆಲ ನಟಿಯರ ವಿರೋಧಕ್ಕೆ ಕಾರಣವಾಗಿದ್ದು,

ಕ್ಷಮೆ ಯಾಚನೆ

ಅಂತಿಮವಾಗಿ ಇಂದು ಶಿವಾಜಿ ಅವರು ಎಕ್ಸ್ ಖಾತೆಯಲ್ಲಿ ಈ ಮುಂಚೆ ಕಾರ್ಯಕ್ರಮದಲ್ಲಿ ತಾವು ಹೇಳಿದ್ದಕ್ಕೆ ಕ್ಷಮೆಯಾಚಿಸುವ ವೀಡಿಯೊವನ್ನು ಹಂಚಿಕೊಂಡಿದ್ದಾರೆ.

ಈ ಕ್ಲಿಪ್‌ನಲ್ಲಿ, ಅವರು “ಅಸಂಸದೀಯ ಪದಗಳನ್ನು” ಬಳಸಬಾರದಿತ್ತು ಎಂದು ಹೇಳಿದ್ದಾರೆ. ನಾನು ಎಲ್ಲಾ ಮಹಿಳೆಯರ ಬಗ್ಗೆ ಮಾತನಾಡುತ್ತಿಲ್ಲ, ನಟಿಯರ ಬಗ್ಗೆ ಮಾತ್ರ ಮಾತನಾಡುತ್ತಿರುವುದಾಗಿ ಸ್ಪಷ್ಟಪಡಿಸಿದರು. ಅವರು ಎಚ್ಚರಿಕೆಯಿಂದ ಉಡುಗೆ ತೊಟ್ಟಿದ್ದರೆ ಅವರಿಗೆ ಅನಾನುಕೂಲವಾಗುತ್ತಿರಲಿಲ್ಲ ಎಂದು ಅವರು ಹೇಳಿದರು.

ಯಾವುದೇ ವ್ಯಕ್ತಿಯನ್ನು ಕೀಳಾಗಿ ಕಾಣುವುದು ತಮ್ಮ ಉದ್ದೇಶವಲ್ಲ, ಆದರೆ ಆ ಪದಗಳನ್ನು ಬಳಸಿದ್ದರಿಂದ ಕ್ಷಮೆಯಾಚಿಸಲು ಬಯಸಿದ್ದೇನೆ ಎಂದು ನಟ ವ್ಯಕ್ತಪಡಿಸಿದರು.

ರಾಜಕೀಯ

ಬಿಜೆಪಿ-ಜೆಡಿಎಸ್ ಮೈತ್ರಿ: ಪಕ್ಷ ಉಳಿಸಲು ಹೆಚ್.ಡಿ. ದೇವೇಗೌಡರ ತೀಕ್ಷ್ಣ ಸಂದೇಶ

ಬಿಜೆಪಿ-ಜೆಡಿಎಸ್ ಮೈತ್ರಿ: ಪಕ್ಷ ಉಳಿಸಲು ಹೆಚ್.ಡಿ. ದೇವೇಗೌಡರ ತೀಕ್ಷ್ಣ ಸಂದೇಶ

ಕರ್ನಾಟಕದಲ್ಲಿ ಲೋಕಸಭೆ, ವಿಧಾನಸಭೆಗಷ್ಟೇ ಬಿಜೆಪಿ (BJP), ಜೆಡಿಎಸ್ (JDS) ಮೈತ್ರಿ ಆಗಿದೆ. ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಜೆಡಿಎಸ್ ಸ್ವತಂತ್ರವಾಗಿ ಸ್ಪರ್ಧೆ ಮಾಡಲಿದೆ ಎಂದು ಮಾಜಿ ಪ್ರಧಾನಿಗಳು, ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ. ದೇವೇಗೌಡ (H.D.

[ccc_my_favorite_select_button post_id="117875"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದ ಎಂ.ಆ‌ರ್.ಜಾಹ್ನವಿಗೆ ಬಾಲ ವಿಕಾಸ ಅಕಾಡೆಮಿ ಪ್ರಶಸ್ತಿ

ದೊಡ್ಡಬಳ್ಳಾಪುರದ ಎಂ.ಆ‌ರ್.ಜಾಹ್ನವಿಗೆ ಬಾಲ ವಿಕಾಸ ಅಕಾಡೆಮಿ ಪ್ರಶಸ್ತಿ

ಇಲ್ಲಿನ ನಿಸರ್ಗ ಯೋಗ ಕೇಂದ್ರದ ಯೋಗಪಟು ಎಂ. ಆರ್. ಜಾಹ್ನವಿ (M.R. Jahnavi) ಅವರಿಗೆ ಧಾರವಾಡದ ಕರ್ನಾಟಕ ಬಾಲ ವಿಕಾಸ ಅಕಾಡೆಮಿ ವತಿಯಿಂದ 2023-24ನೇ ಸಾಲಿಗೆ ನೀಡಲಾಗುವ ಅಕಾಡೆಮಿ ಬಾಲ ಗೌರವ ಪ್ರಶಸ್ತಿ ಬಾಲ

[ccc_my_favorite_select_button post_id="117462"]
ದೊಡ್ಡಬಳ್ಳಾಪುರ: ಕಾಣೆಯಾಗಿದ್ದ ಬಾಲಕ ಶವವಾಗಿ ಪತ್ತೆ..!

ದೊಡ್ಡಬಳ್ಳಾಪುರ: ಕಾಣೆಯಾಗಿದ್ದ ಬಾಲಕ ಶವವಾಗಿ ಪತ್ತೆ..!

ಇದೇ ತಿಂಗಳ 15 ರಂದು ಕಾಣೆಯಾಗಿದ್ದ ಬಾಲಕನ ಶವ ತಾಲೂಕಿನ ತೂಬಗೆರೆ ಹೋಬಳಿಯ ಸಾಧುಮಠ ರಸ್ತೆಯ ಬಳಿ ಪತ್ತೆಯಾಗಿದೆ (Missing boy found dead)

[ccc_my_favorite_select_button post_id="117857"]
ಅಪಘಾತ: 4 ಯುವಕರ ಸಾವು ಪ್ರಕರಣ.. ಸಿಎಂ ಪರಿಹಾರ ಘೋಷಣೆ

ಅಪಘಾತ: 4 ಯುವಕರ ಸಾವು ಪ್ರಕರಣ.. ಸಿಎಂ ಪರಿಹಾರ ಘೋಷಣೆ

ಅಜ್ಜವಾರ ರಸ್ತೆಯಲ್ಲಿ ನಿನ್ನೆ ತಡರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ (Accident) ನಾಲ್ವರು ಯುವಕರು ಸಾವಿಗೀಡಾದ ವಿಚಾರ ತಿಳಿದು ಅತೀವ ದುಃಖವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah)

[ccc_my_favorite_select_button post_id="117854"]

ಆರೋಗ್ಯ

ಸಿನಿಮಾ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

ಹಿರಿಯ ಚಲನಚಿತ್ರ ಕಲಾವಿದರು, ನಿರ್ದೇಶಕರು ನಿರ್ಮಾಪಕ ಪ್ರಕಾಶ್ ರಾಜ್ (Prakash Raj) ಅವರನ್ನು 17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ (Brand Ambassador) ಆಗಿ ನೇಮಿಸಲಾಗಿದೆ.

[ccc_my_favorite_select_button post_id="117722"]
error: Content is protected !!