ನಟಿಯರ ತುಂಡುಡುಗೆ: ಸಂಚಲನ ಸೃಷ್ಟಿಸಿದ ನಟ ಶಿವಾಜಿ ಹೇಳಿಕೆ..!

ಕೆ.ಎಂ.ಸಂತೋಷ್, ಆರೂಢಿ (ದೊಡ್ಡಬಳ್ಳಾಪುರ): ಮುಂಬರುವ ತೆಲುಗು ಚಿತ್ರ ‘ಧಂಡೋರಾ’ ಬಿಡುಗಡೆ ಪೂರ್ವ ಕಾರ್ಯಕ್ರಮದಲ್ಲಿ, ತೆಲುಗು ನಟ ಶಿವಾಜಿ (Shivaji) ಮಹಿಳೆಯರು ಮತ್ತು ನಾಯಕಿಯರು ಅಶ್ಲೀಲವಾಗಿ ಕಾಣುವ ತುಂಡುಡುಗೆ ತೊಡದೆ, ಮೈ ತುಂಬ ಉಡುಗೆ ತೊಡುವಂತೆ ಸಲಹೆ ನೀಡಿದ್ದು ವ್ಯಾಪಕ ಪರ – ವಿರೋಧಕ್ಕೆ ಕಾರಣವಾಗಿದೆ.

ಮಿಸ್ಸಮ್ಮ, ಸತ್ಯಭಾಮ ಮತ್ತು ಕೋರ್ಟ್ – ಸ್ಟೇಟ್ vs ಎ ನೋಬಡಿ ಮತ್ತು ಬಿಗ್ ಬಾಸ್ ತೆಲುಗು 7 ಕಾರ್ಯಕ್ರಮಗಳ ಪ್ರಸಿದ್ದ 54 ವರ್ಷದ ನಟ ಶಿವಾಜಿ ನಟಿಯರ ತುಂಡುಡುಗೆ ಕುರಿತು ನೀಡಿರುವ ಹೇಳಿಕೆ ವ್ಯಾಪಕ ಪ್ರಶಂಸೆಗೆ ಒಳಗಾಗಿದ್ದರು, ಮಹಿಳಾ ಆಯೋಗ ನೋಟಿಸ್ ನೀಡಿದೆ.

ಇಷ್ಟಕ್ಕೂ ಶಿವಾಜಿ ನೀಡಿದ ಹೇಳಿಕೆಯನ್ನು ಗಮನಿಸುವುದಾದರೆ, “ಎಲ್ಲಾ ನಾಯಕಿಯರು ದೇಹದ ಭಾಗಗಳನ್ನು ಕಾಣುವಂತೆ ಉಡುಪುಗಳನ್ನು ಧರಿಸಬೇಡಿ ಎಂದು ನಾನು ವಿನಂತಿಸುತ್ತೇನೆ. ದಯವಿಟ್ಟು ಸೀರೆ ಅಥವಾ ದೇಹವನ್ನು ಸಂಪೂರ್ಣವಾಗಿ ಮುಚ್ಚುವ ಉಡುಪುಗಳನ್ನು ಧರಿಸಿ. ಸೌಂದರ್ಯವು ಸಂಪೂರ್ಣ ಉಡುಗೆ ಅಥವಾ ಸೀರೆಯಲ್ಲಿದೆ, ದೇಹವನ್ನು ( ತೆಲು ಭಾಷೆಯಲ್ಲಿ ಶಿವಾಜಿ ಬಳಸಿದ ಪದ ಸಾಮಾನುಲು) ಪ್ರದರ್ಶಿಸುವುದರಲ್ಲಿ ಅಲ್ಲ ಎಂದಿದ್ದರು.

ಜನರು ಬಹಿರಂಗವಾಗಿ ಏನನ್ನೂ ಹೇಳದಿರಬಹುದು ಏಕೆಂದರೆ ಅದು ನಿಮ್ಮ ಸ್ವಾತಂತ್ರ್ಯ ಎಂದು ಅವರು ಭಾವಿಸುತ್ತಾರೆ, ಆದರೆ ಒಳಗೆ ಅವರಿಗೆ ಅದು ಇಷ್ಟವಾಗದಿರಬಹುದು.

https://twitter.com/i/status/2004435173090512962

ಮಹಿಳೆ ಪ್ರಕೃತಿಯಂತೆ. ಪ್ರಕೃತಿ ಸುಂದರವಾಗಿದ್ದಾಗ, ನಾವು ಅದನ್ನು ಗೌರವಿಸುತ್ತೇವೆ. ಮಹಿಳೆ ನನ್ನ ತಾಯಿಯಂತೆ, ಅವರನ್ನು ನಾನು ನನ್ನ ಹೃದಯಕ್ಕೆ ಹತ್ತಿರವಾಗಿರಿಸುತ್ತೇನೆ ಎಂದು ಅವರು ಹೇಳಿದರು.

ದಂತಕಥೆ ನಟಿಯರಾದ ಸಾವಿತ್ರಿ ಮತ್ತು ಸೌಂದರ್ಯ, ಅನುಷ್ಕಾ, ಮೀರಾ ಜಾಸ್ಮಿನ್ ಮತ್ತು ಉದಯೋನ್ಮುಖ ತಾರೆ ರಶ್ಮಿಕಾ ಅವರ ಉದಾಹರಣೆಯನ್ನು ಉಲ್ಲೇಖಿಸಿ ಅವರ ಬಗ್ಗೆ ಯಾರಾದ್ರೂ ಕೆಟ್ಟ ದೃಷ್ಟಿಯಿಂದ ನೋಡಲು ಸಾಧ್ಯವೆ..? ಎಂದು ಪ್ರಶ್ನಿಸಿದರು.

ಶಿವಾಜಿ ನಟಿಯರಿಗೆ ಹೊರಗೆ ಹೋಗುವಾಗ ತಮಗೆ ಅನಿಸುವ ಯಾವುದೇ ಬಟ್ಟೆ ಧರಿಸಬೇಡಿ ಏಕೆಂದರೆ ಅದರ ಪರಿಣಾಮಗಳನ್ನು ಅವರು ಅನುಭವಿಸಬೇಕಾಗುತ್ತದೆ ಎಂದು, ಇತ್ತೀಚೆಗೆ ನಟಿಯೋರ್ವರಿಗೆ ಕಿಡಿಗೇಡಿಗಳು ನೀಡಿದ ಉಪಟಳದ ಬಗ್ಗೆ ಎಚ್ಚರಿಕೆ ನೀಡಿ, ಮೇಲಿನಂತೆ ಸಲಹೆ ನೀಡಿದ್ದರು.

ಈ ಹೇಳಿಕೆ ಕುರಿತಂತೆ ವ್ಯಾಪಕ ಬೆಂಬಲ ದೊರೆತಿದ್ದು, ಕೆಲ ನಟಿಯರ ವಿರೋಧಕ್ಕೆ ಕಾರಣವಾಗಿದ್ದು,

ಕ್ಷಮೆ ಯಾಚನೆ

ಅಂತಿಮವಾಗಿ ಇಂದು ಶಿವಾಜಿ ಅವರು ಎಕ್ಸ್ ಖಾತೆಯಲ್ಲಿ ಈ ಮುಂಚೆ ಕಾರ್ಯಕ್ರಮದಲ್ಲಿ ತಾವು ಹೇಳಿದ್ದಕ್ಕೆ ಕ್ಷಮೆಯಾಚಿಸುವ ವೀಡಿಯೊವನ್ನು ಹಂಚಿಕೊಂಡಿದ್ದಾರೆ.

ಈ ಕ್ಲಿಪ್‌ನಲ್ಲಿ, ಅವರು “ಅಸಂಸದೀಯ ಪದಗಳನ್ನು” ಬಳಸಬಾರದಿತ್ತು ಎಂದು ಹೇಳಿದ್ದಾರೆ. ನಾನು ಎಲ್ಲಾ ಮಹಿಳೆಯರ ಬಗ್ಗೆ ಮಾತನಾಡುತ್ತಿಲ್ಲ, ನಟಿಯರ ಬಗ್ಗೆ ಮಾತ್ರ ಮಾತನಾಡುತ್ತಿರುವುದಾಗಿ ಸ್ಪಷ್ಟಪಡಿಸಿದರು. ಅವರು ಎಚ್ಚರಿಕೆಯಿಂದ ಉಡುಗೆ ತೊಟ್ಟಿದ್ದರೆ ಅವರಿಗೆ ಅನಾನುಕೂಲವಾಗುತ್ತಿರಲಿಲ್ಲ ಎಂದು ಅವರು ಹೇಳಿದರು.

ಯಾವುದೇ ವ್ಯಕ್ತಿಯನ್ನು ಕೀಳಾಗಿ ಕಾಣುವುದು ತಮ್ಮ ಉದ್ದೇಶವಲ್ಲ, ಆದರೆ ಆ ಪದಗಳನ್ನು ಬಳಸಿದ್ದರಿಂದ ಕ್ಷಮೆಯಾಚಿಸಲು ಬಯಸಿದ್ದೇನೆ ಎಂದು ನಟ ವ್ಯಕ್ತಪಡಿಸಿದರು.

ರಾಜಕೀಯ

ಪ್ರತಿಪಕ್ಷದ ವೈಫಲ್ಯವೇ ಆಡಳಿತ ಪಕ್ಷಕ್ಕೆ ಲಾಭ: ವಿಜಯೇಂದ್ರ ವಿರುದ್ಧ ಯತ್ನಾಳ್ ವಾಗ್ದಾಳಿ

ಪ್ರತಿಪಕ್ಷದ ವೈಫಲ್ಯವೇ ಆಡಳಿತ ಪಕ್ಷಕ್ಕೆ ಲಾಭ: ವಿಜಯೇಂದ್ರ ವಿರುದ್ಧ ಯತ್ನಾಳ್ ವಾಗ್ದಾಳಿ

ಅಬಕಾರಿ ಹಗರಣದ ಬಗ್ಗೆ ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (B.Y. Vijayendra) ಏನೂ ಮಾತನಾಡಿಲ್ಲ. ಹೋರಾಟ ತಾರ್ಕಿಕ ಅಂತ್ಯ ಕಂಡಿಲ್ಲ. ವಿರೋಧ ಪಕ್ಷದ ವೈಫಲ್ಯದ ಲಾಭಆಡಳಿತ ಪಕ್ಷಕ್ಕೆ ಸಿಕ್ಕಿದೆ ಎಂದು ಶಾಸಕ ಬಸನಗೌಡ

[ccc_my_favorite_select_button post_id="119407"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ನೆಲಮಂಗಲ ಹೆದ್ದಾರಿಯ ಜಿಂದಾಲ್ ಮೇಲ್ಸೇತುವೆ ಬಳಿ ಸಂಭವಿಸಿದ ಕೆಎಸ್ ಆರ್ ಟಿಸಿ ಬಸ್​​ (KSRTC Bus) ಮತ್ತು ಇಂಡಿಕ ಕಾರಿನ (Indica Car) ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ (Accident) ದೊಡ್ಡಬಳ್ಳಾಪುರದ ಐವರು ಯುವಕರು

[ccc_my_favorite_select_button post_id="119422"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!