Results of various town panchayat elections are a sign of Congress' failure: B.Y. Vijayendra

ವಿವಿಧ ಪಟ್ಟಣ ಪಂಚಾಯಿತಿ ಚುನಾವಣೆ ಫಲಿತಾಂಶ ಕಾಂಗ್ರೆಸ್ ವೈಫಲ್ಯಕ್ಕೆ ದಿಕ್ಸೂಚಿ: ಬಿ.ವೈ.ವಿಜಯೇಂದ್ರ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ (Cmsiddaramaiah) ಆಡಳಿತಕ್ಕೆ ಜನರು ಹಿಡಿಶಾಪ ಹಾಕುತ್ತಿದ್ದಾರೆ. ರಾಜ್ಯದ ಪಟ್ಟಣ ಪಂಚಾಯಿತಿಗಳ ಚುನಾವಣೆ ಫಲಿತಾಂಶವು ಅವರ ವೈಫಲ್ಯಕ್ಕೆ ದಿಕ್ಸೂಚಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (B.Y. Vijayendra) ಅವರು ವಿಶ್ಲೇಷಿಸಿದ್ದಾರೆ.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ವೀರ ಬಾಲಕರ ದಿನ ಕಾರ್ಯಕ್ರಮದ ಅಂಗವಾಗಿ ಪುಷ್ಪಾರ್ಚನೆ ನೆರವೇರಿಸಿ ಅವರು ಮಾತನಾಡಿದರು.

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರದ ಬಗ್ಗೆ ಯಾರೂ ಸಂತಸದಿಂದಿಲ್ಲ. ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿದ್ದ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದ 48 ಗಂಟೆಗಳಲ್ಲಿ ತಮ್ಮ ಮುಖವಾಡ ಕಳಚಿತ್ತು. ಪ್ರಧಾನಿ ಮೋದಿಜೀ ಅವರು ಕಿಸಾನ್ ಸಮ್ಮಾನ್ ಯೋಜನೆಯಡಿ 6 ಸಾವಿರ, ಯಡಿಯೂರಪ್ಪ ಅವರು 4 ಸಾವಿರ ನೀಡುತ್ತಿದ್ದರು. ಅದಕ್ಕೆ ಕಲ್ಲು ಹಾಕಿದರು ಎಂದು ಟೀಕಿಸಿದರು.

ಬಸವರಾಜ ಬೊಮ್ಮಾಯಿ ಅವರು ರೈತರ ಮಕ್ಕಳಿಗಾಗಿ ಆರಂಭಿಸಿದ ವಿದ್ಯಾನಿಧಿ ಯೋಜನೆಗೂ ಕಲ್ಲು ಹಾಕಿದ್ದಾರೆ ಎಂದು ಆಕ್ಷೇಪಿಸಿದರು. ಉತ್ತರ ಕರ್ನಾಟಕದ ಭೀಕರ ಅತಿವೃಷ್ಟಿ ಇದ್ದರೂ ಸಚಿವರು ಕನಿಷ್ಠ ಸೌಜನ್ಯಕ್ಕಾದರೂ ಸ್ಥಳಕ್ಕೆ ಭೇಟಿ ನೀಡಿ ರೈತರ ಸಂಕಷ್ಟ ಅರಿಯುವ ಪ್ರಯತ್ನ ಮಾಡಿಲ್ಲ ಎಂದು ಆಕ್ಷೇಪಿಸಿದರು.

ಮೊನ್ನೆ ನಡೆದ ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ನಮ್ಮ ನಿರೀಕ್ಷೆಗೂ ಮೀರಿ ಬಿಜೆಪಿ ಯಶಸ್ಸು ಪಡೆದಿದೆ. ದಕ್ಷಿಣ ಕನ್ನಡದ ಬಜೆಪೆ, ಕಿನ್ನಿಗೋಳಿ ಪಟ್ಟಣ ಪಂಚಾಯಿತಿ, ಉತ್ತರ ಕನ್ನಡದ ಮಂಕಿ ಪಟ್ಟಣ ಪಂಚಾಯಿತಿ, ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗಳಲ್ಲಿ ಬಹುಮತ ಪಡೆದಿದೆ ಎಂದು ತಿಳಿಸಿದರು.

ವಿವಿಧ ಪಟ್ಟಣ ಪಂಚಾಯಿತಿ ಚುನಾವಣೆ ಫಲಿತಾಂಶ ಕಾಂಗ್ರೆಸ್ ವೈಫಲ್ಯಕ್ಕೆ ದಿಕ್ಸೂಚಿ: ಬಿ.ವೈ.ವಿಜಯೇಂದ್ರ

ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತ್ ಚುನಾವಣೆಯಲ್ಲಿ ಜಯಶೀಲರಾದ ಅಭ್ಯರ್ಥಿಗಳನ್ನು ಅಭಿನಂದಿಸಿ, ಸನ್ಮಾನಿಸಿದರು.

ಬಿಜೆಪಿ ಮುಂದುವರಿದ ಜನಾಂಗಕ್ಕೆ ಸೇರಿದ ಪಕ್ಷ ಎಂದು ಕಾಂಗ್ರೆಸ್ಸಿನವರು ಟೀಕಿಸುತ್ತಾರೆ. ಎಲ್ಲ ಎಸ್‍ಸಿ, ಎಸ್‍ಟಿ, ಹಿಂದುಳಿದ ಸಮಾಜದ ನ್ಯಾಯ ಕೊಡುವ ಕೆಲಸವನ್ನು ಬಿಜೆಪಿ ಮಾಡಿದೆ. ನರೇಂದ್ರ ಮೋದಿಜೀ, ಯಡಿಯೂರಪ್ಪನವರು, ನಮ್ಮ ಸರಕಾರದ ಅವಧಿಯಲ್ಲಿ ಆಗಿದೆ ಎಂಬುದು ಋಜುವಾತಾಗಿದೆ ಎಂದು ಹೇಳಿದರು. ಪಟ್ಟಣ ಪಂಚಾಯಿತಿ ಚುನಾವಣಾ ವಿಜೇತರನ್ನು ಅಭಿನಂದಿಸಿದ ಅವರು, ಪರಾಭವಗೊಂಡವರು ಆತಂಕ ಪಡಬೇಕಿಲ್ಲ ಎಂದು ಕಿವಿಮಾತು ಹೇಳಿದರು.

ಮೋದಿಜೀ ಅವರು ಯಾವುದೇ ರಾಜಕೀಯ ಕುಟುಂಬದ ಹಿನ್ನೆಲೆ ಇದ್ದವರಲ್ಲ. ಬೂತ್ ಅಧ್ಯಕ್ಷರಾಗಿದ್ದು, ಕಾರ್ಯಕರ್ತರ ಸಂಘಟನೆ ಮಾಡಿ, ಗುಜರಾತ್ ರಾಜ್ಯದ ಮುಖ್ಯಮಂತ್ರಿಗಳಾಗಿ 14 ವರ್ಷ ಸೇವೆ ಸಲ್ಲಿಸಿದ್ದಾರೆ. 11 ವರ್ಷ ಸತತ ಕೇಂದ್ರದಲ್ಲಿ ಪ್ರಧಾನಿಯಾಗಿ ದೇಶವನ್ನು ಮುನ್ನಡೆಸುತ್ತಿದ್ದಾರೆ. ಜನಸೇವಕ ಎಂಬ ಭಾವನೆ ಅವರದು. ಅಂಥ ಬಿಜೆಪಿ ಕಾರ್ಯಕರ್ತ ಎಂಬುದು ನಾವು ಹೆಮ್ಮೆ ಪಡಬೇಕಾದ ವಿಚಾರ ಎಂದು ತಿಳಿಸಿದರು.

ವೀರ ಬಾಲಕರ ಬಲಿದಾನದ ಜ್ಞಾಪಕಾರ್ಥವಾಗಿ ಇಂದಿನ ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಪುಟ್ಟ ಬಾಲಕರು 8ನೇ ವಯಸ್ಸಿನಲ್ಲಿ ಮತಾಂತರ ಆಗಬೇಕೆಂದು ಏನೇ ಒತ್ತಡ ಬಂದರೂ ಅದಕ್ಕೆ ಒಪ್ಪದೇ ವೀರ ಮರಣ ಹೊಂದಿದ ಘಟನೆ ನಡೆದಿತ್ತು ಎಂದು ವಿವರಿಸಿದರು.

ಪ್ರಧಾನಿ ನರೇಂದ್ರ ಮೋದಿಜೀ ಅವರು ಈ ವೀರಮರಣವನ್ನು ಮತ್ತು ಬಲಿದಾನವನ್ನು ದೇಶಕ್ಕೆ ಪರಿಚಯಿಸುವ ಕೆಲಸ ಮಾಡಿದ್ದಾರೆ ಎಂದರು. ಬಾಶೆಟ್ಟಿಹಳ್ಳಿ ಪಂಚಾಯಿತಿಯಲ್ಲಿ ಗೆಲುವಿನ ಹಿನ್ನೆಲೆಯಲ್ಲಿ ಬಿ.ವೈ.ವಿಜಯೇಂದ್ರ ಅವರನ್ನು ಇದೇ ವೇಳೆ ಅಭಿನಂದಿಸಿ ಗೌರವಿಸಲಾಯಿತು.

ವಿಧಾನಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್. ರವಿಕುಮಾರ್, ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡ, ರಾಜ್ಯ ಕಾರ್ಯದರ್ಶಿಗಳಾದ ಡಾ. ಲಕ್ಷ್ಮೀ ಅಶ್ವಿನ್ ಗೌಡ, ಶರಣು ತಳ್ಳಿಕೇರಿ, ಶಾಸಕ ಧೀರಜ್ ಮುನಿರಾಜು, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್, ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ರಾಮಕೃಷ್ಣಪ್ಪ ಮತ್ತು ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

ರಾಜಕೀಯ

ಆರನೇ ಗ್ಯಾರಂಟಿಯಾಗಿ ಭೂಮಿ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

ಆರನೇ ಗ್ಯಾರಂಟಿಯಾಗಿ ಭೂಮಿ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

“ತುಂಗಭದ್ರಾ ಅಣೆಕಟ್ಟಿನ 30 ಟಿಎಂಸಿ ನೀರು ಸಮುದ್ರಕ್ಕೆ ಸೇರುತ್ತಿರುವುದನ್ನು ತಪ್ಪಿಸಲು ಈ ಭಾಗದ ನಾಯಕರು ನನ್ನ ಮೇಲೆ ಒತ್ತಡ ಹಾಕುತ್ತಿದ್ದಾರೆ. ನಾನು ಇದಕ್ಕೆ ಬದ್ಧನಾಗಿದ್ದೇನೆ. ಆದರೆ ಆಂಧ್ರ ಸಿಎಂ ಈ ವಿಚಾರವಾಗಿ ಚರ್ಚೆ ಮಾಡಲು

[ccc_my_favorite_select_button post_id="119228"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

RCB: ಮತ್ತೆ ಕಪ್ ನಮ್ದು

RCB: ಮತ್ತೆ ಕಪ್ ನಮ್ದು

4ನೇ ಆವೃತ್ತಿಯ ಮಹಿಳಾ ಪ್ರೀಮಿ ಯರ್ ಲೀಗ್ (ಡಬ್ಲ್ಯೂಪಿ ಎಲ್) ಟೂರ್ನಿಯಲ್ಲಿ ಸ್ಮೃತಿ ಮಂಧಾನಾ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಚಾಂಪಿಯನ್ ಆಗಿ ಹೊರ ಹೊಮ್ಮಿದ್ದು, ಸಿಎಂ ಸಿದ್ದರಾಮಯ್ಯ (Cmsiddaramaiah), ಡಿಸಿಎಂ

[ccc_my_favorite_select_button post_id="119174"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ದೊಡ್ಡಬಳ್ಳಾಪುರ: ಅಪಘಾತ.. ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಬೈಕ್ ಸವಾರ ಮಸಣಕ್ಕೆ…!

ದೊಡ್ಡಬಳ್ಳಾಪುರ: ಅಪಘಾತ.. ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಬೈಕ್ ಸವಾರ ಮಸಣಕ್ಕೆ…!

ಖಾಸಗಿ ಕಂಪನಿಯಲ್ಲಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ದ್ವಿಚಕ್ರ ವಾಹನ ಸಾವರ ರಸ್ತೆ ಬದಿಯ ಹಳ್ಳಕ್ಕೆ ಬಿದ್ದು ಸಾವನಪ್ಪಿರುವ ಘಟನೆ (Accident) ತಾಲೂಕಿನ ಮಾಕಳಿ ಬಳಿ ಇಂದು ಮುಂಜಾನೆ ಸಂಭವಿಸಿದೆ.

[ccc_my_favorite_select_button post_id="119217"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!