Doddaballapura: Water problem in Arudi.. appeal to tankers

ದೊಡ್ಡಬಳ್ಳಾಪುರ: ಆರೂಢಿಯಲ್ಲಿ ನೀರಿಗೆ ಪರದಾಟ.. ಟ್ಯಾಂಕರ್‌ಗಳಿಗೆ ಮೊರೆ

ದೊಡ್ಡಬಳ್ಳಾಪುರ: ಬೇಸಿಗೆ ಆರಂಭಕ್ಕೂ ಮುನ್ನವೇ ತಾಲೂಕಿನ ಆರೂಢಿ ಗ್ರಾಮದಲ್ಲಿ ನೀರಿನ ಬವಣೆ (Water problem) ತೀವ್ರವಾಗಿದೆ, ಇದು ಇಂದಿನದ್ದು ಮಾತ್ರ ಎಂದುಕೊಂಡರೆ ತಪ್ಪು, ಹಲವು ತಿಂಗಳಿಂದ ಆರೂಢಿ ಗ್ರಾಮದ ಒಂದು ವಾರ್ಡ್ ಜನತೆ ಇದೇ ಸಮಸ್ಯೆಯಿಂದ ಪರದಾಡುತ್ತಿದ್ದಾರೆ.

ಇನ್ನೂ ಆರೂಢಿಯಲ್ಲಿ ನೀರಿನ ಕೊರತೆ ಇದೆಯಾ ಎಂದರೆ ಅದು ಸುಳ್ಳು, ಏಕೆಂದರೆ ಅಗತ್ಯ ಬೋರ್‌ವೆಲ್ ಗಳಿದ್ದು, ಹೆಚ್ಚುವರಿ ಬೋರ್ವೆಲ್ ಕೂಡ ಇದೆ.

ಮತ್ತೆ ಸಮಸ್ಯೆ ಹೇಗೆ..? ಎಲ್ಲಿ..? ಎಂಬುದು ನೋಡುವುದಾದರೆ, ಆರೂಢಿಯ ಗ್ರಾಮದೇವತೆ ವಡಸಲಮ್ಮ ದೇವಿ ರಸ್ತೆಯಲ್ಲಿನ ಡಾಲರ್ಸ್ ಕಾಲೋನಿ ಜನತೆ ಬಹು ತಿಂಗಳಿಂದ ನೀರಿನ ಸಮಸ್ಯೆ ಎದುರಿಸುತ್ತಿದ್ದಾರೆ.

ಈ ವ್ಯಾಪ್ತಿಗೆ ಸುಮಾರು ಮುಕ್ಕಾಲು ಕಿಲೋಮೀಟರ್ ದೂರದಿಂದ ನೀರು ಪೂರೈಸಲಾಗುತ್ತದೆ. ಆದರೆ ಗ್ರಾಮದ ಮೂಲಕ ಹಾದು ಹೋಗಿ, ಈ ವ್ಯಾಪ್ತಿಗೆ ನೀರು ಬರುವುದು ತೀರ ಕಡಿಮೆ ಪ್ರಮಾಣ.

ಇದರಿಂದಾಗಿ ಈ ವ್ಯಾಪ್ತಿಯಲ್ಲಿ ವಾಸವಾಗಿರುವ ಸುಮಾರು 100 ಕ್ಕೂ ಮನೆಗಳ ಜನತೆ ಪರದಾಟ, ನೀರಿಗಾಗಿ ಮಹಿಳೆಯರ ನಡುವೆ ಮಾತಿನ ಚಕಮಕಿ ನಡೆಯುತ್ತಿದೆ.

ಈ ಕುರಿತಂತೆ ಹಲವು ಬಾರಿ ಗ್ರಾಮಪಂಚಾಯಿತಿಗೆ ಮನವಿ ಸಲ್ಲಿಸಲಾಗಿದ್ದು, ಗ್ರಾಪಂ ಅಧ್ಯಕ್ಷೆ ಗಂಗರಾಜಮ್ಮ ರಾಮಕೃಷ್ಣಪ್ಪ, ಸದಸ್ಯ ನವೀನ್ ಕುಮಾರ್, ಪಿಡಿಒ ಮಲ್ಲೇಶ್ ಅವರುಗಳು ಈ ವ್ಯಾಪ್ತಿಯಲ್ಲಿ ಶಾಶ್ವತ ಪರಿಹಾರ ದೊರಕಿಸಲು ಶಾಸಕರ ಅನುದಾನದಲ್ಲಿ ನೂತನ ಬೋರ್ ವೆಲ್ ಕೊರೆಸಿದ್ದು, ಕೆಲವೇ ಅಡಿಯಲ್ಲಿ ಭರ್ಜರಿ ನೀರು ಸಿಕ್ಕಿದ್ದು, ಅಂತೆಯೇ ಕೆಲವೇ ದಿನಗಳಲ್ಲಿ ಮೋಟರ್, ಪಂಪಸೆಟ್ ಅಳವಡಿಕೆ ಕೂಡ ನಡೆದಿದೆ. ಆದರೆ ವಿದ್ಯುತ್..?

ಇದೇ ಈಗ ಯಕ್ಷ ಪ್ರಶ್ನೆಯಾಗಿ ಉಳಿದಿದೆ. ಈ ಬೋರ್ವೆಲ್ಗೆ ವಿದ್ಯುತ್ ಪೂರೈಕೆ ಮಾಡಲು ಟಿಸಿ ಅಗತ್ಯವಾಗಿದೆ. ಆದರೆ ಸಮೀಪದಲ್ಲಿ ಯಾವುದೇ ಟಿಸಿ ಇಲ್ಲದೆ ಇರುವುದು, ಬೋರ್ ವೆಲ್ ಕೊರೆಸಿ ತಿಂಗಳುಗಳು ಕಳೆದರು ಪ್ರಯೋಜನಕ್ಕೆ ಇಲ್ಲವಾದಂತಾಗಿದೆ.

ಇನ್ನೂ ತ್ವರಿತವಾಗಿ ಟಿಸಿ ಅಳವಡಿಸಲು, ತಾತ್ಕಾಲಿಕ ಸಂಪರ್ಕ ಪಡೆದುಕೊಳ್ಳಲು ಬೆಸ್ಕಾಂನಿಂದ ಅನುಮತಿ ದೊಡ್ಡಬಳ್ಳಾಪುರ ತಾಲೂಕು ಪಂಚಾಯತಿ ಇಒ ಅವರಿಗೆ ಗ್ರಾಮಪಂಚಾಯಿತಿ ವತಿಯಿಂದ ಪತ್ರ ಬರೆಯಲಾಗಿದೆ. ಆದರೆ ಅದೂ ಕೂಡ ದಿನ ತಳ್ಳುತ್ತಲೆ ಇದೆ.

ಕಡಿಮೆ ಪ್ರಮಾಣ ನೀರಿನ ಪೂರೈಕೆಯಿಂದಾಗಿ ಈ ವಾರ್ಡ್ ಜನತೆ ನೀರಿಗಾಗಿ ವಿಧಿಯಿಲ್ಲದೆ ಟ್ಯಾಂಕರ್ ನೀರಿಗೆ ಆಶ್ರಯಿಸಬೇಕಾದ ಅನಿರ್ವಾರ್ಯತೆ ಎದುರಾಗಿದೆ. ಈ ಕುರಿತಂತೆ ಕೂಡಲೇ ದೊಡ್ಡಬಳ್ಳಾಪುರ ತಾಪಂ ಇಒ ಅವರು ಬೆಸ್ಕಾಂ ಮೂಲಕ ಅನುಮತಿ ದೊರಕಿಸಿದರೆ ಈ ವ್ಯಾಪ್ತಿಯ ಜನರಿಗೆ ಶಾಶ್ವತ ಪರಿಹಾರ ದೊರಕಲಿದೆ ಎಂಬ ನಿರೀಕ್ಷೆಯಲ್ಲಿದ್ದಾರೆ.

ರಾಜಕೀಯ

ಹಿಂದೂ ವಿರೋಧಿ ನೀತಿ, ಗ್ಯಾರಂಟಿ ಹೆಸರಿನಲ್ಲಿ ರಾಜ್ಯಕ್ಕೆ ಅನ್ಯಾಯ: ಬಿ.ವೈ.ವಿಜಯೇಂದ್ರ

ಹಿಂದೂ ವಿರೋಧಿ ನೀತಿ, ಗ್ಯಾರಂಟಿ ಹೆಸರಿನಲ್ಲಿ ರಾಜ್ಯಕ್ಕೆ ಅನ್ಯಾಯ: ಬಿ.ವೈ.ವಿಜಯೇಂದ್ರ

ಮುಖ್ಯಮಂತ್ರಿ ಸಿದ್ದರಾಮಯ್ಯನವರ (Cmsiddaramaiah) ನೇತೃತ್ವದ ಸರಕಾರವು ಗೊಂದಲದ ಹಾಗೂ ಹಿಂದೂ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ. ಗ್ಯಾರಂಟಿ ಹೆಸರು ಹೇಳಿಕೊಂಡು ರಾಜ್ಯಕ್ಕೆ ಅನ್ಯಾಯ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (B.Y. Vijayendra)

[ccc_my_favorite_select_button post_id="117898"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದ ಎಂ.ಆ‌ರ್.ಜಾಹ್ನವಿಗೆ ಬಾಲ ವಿಕಾಸ ಅಕಾಡೆಮಿ ಪ್ರಶಸ್ತಿ

ದೊಡ್ಡಬಳ್ಳಾಪುರದ ಎಂ.ಆ‌ರ್.ಜಾಹ್ನವಿಗೆ ಬಾಲ ವಿಕಾಸ ಅಕಾಡೆಮಿ ಪ್ರಶಸ್ತಿ

ಇಲ್ಲಿನ ನಿಸರ್ಗ ಯೋಗ ಕೇಂದ್ರದ ಯೋಗಪಟು ಎಂ. ಆರ್. ಜಾಹ್ನವಿ (M.R. Jahnavi) ಅವರಿಗೆ ಧಾರವಾಡದ ಕರ್ನಾಟಕ ಬಾಲ ವಿಕಾಸ ಅಕಾಡೆಮಿ ವತಿಯಿಂದ 2023-24ನೇ ಸಾಲಿಗೆ ನೀಡಲಾಗುವ ಅಕಾಡೆಮಿ ಬಾಲ ಗೌರವ ಪ್ರಶಸ್ತಿ ಬಾಲ

[ccc_my_favorite_select_button post_id="117462"]
ದೊಡ್ಡಬಳ್ಳಾಪುರ: ಕಾಣೆಯಾಗಿದ್ದ ಬಾಲಕ ಶವವಾಗಿ ಪತ್ತೆ..!

ದೊಡ್ಡಬಳ್ಳಾಪುರ: ಕಾಣೆಯಾಗಿದ್ದ ಬಾಲಕ ಶವವಾಗಿ ಪತ್ತೆ..!

ಇದೇ ತಿಂಗಳ 15 ರಂದು ಕಾಣೆಯಾಗಿದ್ದ ಬಾಲಕನ ಶವ ತಾಲೂಕಿನ ತೂಬಗೆರೆ ಹೋಬಳಿಯ ಸಾಧುಮಠ ರಸ್ತೆಯ ಬಳಿ ಪತ್ತೆಯಾಗಿದೆ (Missing boy found dead)

[ccc_my_favorite_select_button post_id="117857"]
ಅಪಘಾತ: 4 ಯುವಕರ ಸಾವು ಪ್ರಕರಣ.. ಸಿಎಂ ಪರಿಹಾರ ಘೋಷಣೆ

ಅಪಘಾತ: 4 ಯುವಕರ ಸಾವು ಪ್ರಕರಣ.. ಸಿಎಂ ಪರಿಹಾರ ಘೋಷಣೆ

ಅಜ್ಜವಾರ ರಸ್ತೆಯಲ್ಲಿ ನಿನ್ನೆ ತಡರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ (Accident) ನಾಲ್ವರು ಯುವಕರು ಸಾವಿಗೀಡಾದ ವಿಚಾರ ತಿಳಿದು ಅತೀವ ದುಃಖವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah)

[ccc_my_favorite_select_button post_id="117854"]

ಆರೋಗ್ಯ

ಸಿನಿಮಾ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

ಹಿರಿಯ ಚಲನಚಿತ್ರ ಕಲಾವಿದರು, ನಿರ್ದೇಶಕರು ನಿರ್ಮಾಪಕ ಪ್ರಕಾಶ್ ರಾಜ್ (Prakash Raj) ಅವರನ್ನು 17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ (Brand Ambassador) ಆಗಿ ನೇಮಿಸಲಾಗಿದೆ.

[ccc_my_favorite_select_button post_id="117722"]
error: Content is protected !!