Doddaballapura: Water problem in Arudi.. appeal to tankers

ದೊಡ್ಡಬಳ್ಳಾಪುರ: ಆರೂಢಿಯಲ್ಲಿ ನೀರಿಗೆ ಪರದಾಟ.. ಟ್ಯಾಂಕರ್‌ಗಳಿಗೆ ಮೊರೆ

ದೊಡ್ಡಬಳ್ಳಾಪುರ: ಬೇಸಿಗೆ ಆರಂಭಕ್ಕೂ ಮುನ್ನವೇ ತಾಲೂಕಿನ ಆರೂಢಿ ಗ್ರಾಮದಲ್ಲಿ ನೀರಿನ ಬವಣೆ (Water problem) ತೀವ್ರವಾಗಿದೆ, ಇದು ಇಂದಿನದ್ದು ಮಾತ್ರ ಎಂದುಕೊಂಡರೆ ತಪ್ಪು, ಹಲವು ತಿಂಗಳಿಂದ ಆರೂಢಿ ಗ್ರಾಮದ ಒಂದು ವಾರ್ಡ್ ಜನತೆ ಇದೇ ಸಮಸ್ಯೆಯಿಂದ ಪರದಾಡುತ್ತಿದ್ದಾರೆ.

ಇನ್ನೂ ಆರೂಢಿಯಲ್ಲಿ ನೀರಿನ ಕೊರತೆ ಇದೆಯಾ ಎಂದರೆ ಅದು ಸುಳ್ಳು, ಏಕೆಂದರೆ ಅಗತ್ಯ ಬೋರ್‌ವೆಲ್ ಗಳಿದ್ದು, ಹೆಚ್ಚುವರಿ ಬೋರ್ವೆಲ್ ಕೂಡ ಇದೆ.

ಮತ್ತೆ ಸಮಸ್ಯೆ ಹೇಗೆ..? ಎಲ್ಲಿ..? ಎಂಬುದು ನೋಡುವುದಾದರೆ, ಆರೂಢಿಯ ಗ್ರಾಮದೇವತೆ ವಡಸಲಮ್ಮ ದೇವಿ ರಸ್ತೆಯಲ್ಲಿನ ಡಾಲರ್ಸ್ ಕಾಲೋನಿ ಜನತೆ ಬಹು ತಿಂಗಳಿಂದ ನೀರಿನ ಸಮಸ್ಯೆ ಎದುರಿಸುತ್ತಿದ್ದಾರೆ.

ಈ ವ್ಯಾಪ್ತಿಗೆ ಸುಮಾರು ಮುಕ್ಕಾಲು ಕಿಲೋಮೀಟರ್ ದೂರದಿಂದ ನೀರು ಪೂರೈಸಲಾಗುತ್ತದೆ. ಆದರೆ ಗ್ರಾಮದ ಮೂಲಕ ಹಾದು ಹೋಗಿ, ಈ ವ್ಯಾಪ್ತಿಗೆ ನೀರು ಬರುವುದು ತೀರ ಕಡಿಮೆ ಪ್ರಮಾಣ.

ಇದರಿಂದಾಗಿ ಈ ವ್ಯಾಪ್ತಿಯಲ್ಲಿ ವಾಸವಾಗಿರುವ ಸುಮಾರು 100 ಕ್ಕೂ ಮನೆಗಳ ಜನತೆ ಪರದಾಟ, ನೀರಿಗಾಗಿ ಮಹಿಳೆಯರ ನಡುವೆ ಮಾತಿನ ಚಕಮಕಿ ನಡೆಯುತ್ತಿದೆ.

ಈ ಕುರಿತಂತೆ ಹಲವು ಬಾರಿ ಗ್ರಾಮಪಂಚಾಯಿತಿಗೆ ಮನವಿ ಸಲ್ಲಿಸಲಾಗಿದ್ದು, ಗ್ರಾಪಂ ಅಧ್ಯಕ್ಷೆ ಗಂಗರಾಜಮ್ಮ ರಾಮಕೃಷ್ಣಪ್ಪ, ಸದಸ್ಯ ನವೀನ್ ಕುಮಾರ್, ಪಿಡಿಒ ಮಲ್ಲೇಶ್ ಅವರುಗಳು ಈ ವ್ಯಾಪ್ತಿಯಲ್ಲಿ ಶಾಶ್ವತ ಪರಿಹಾರ ದೊರಕಿಸಲು ಶಾಸಕರ ಅನುದಾನದಲ್ಲಿ ನೂತನ ಬೋರ್ ವೆಲ್ ಕೊರೆಸಿದ್ದು, ಕೆಲವೇ ಅಡಿಯಲ್ಲಿ ಭರ್ಜರಿ ನೀರು ಸಿಕ್ಕಿದ್ದು, ಅಂತೆಯೇ ಕೆಲವೇ ದಿನಗಳಲ್ಲಿ ಮೋಟರ್, ಪಂಪಸೆಟ್ ಅಳವಡಿಕೆ ಕೂಡ ನಡೆದಿದೆ. ಆದರೆ ವಿದ್ಯುತ್..?

ಇದೇ ಈಗ ಯಕ್ಷ ಪ್ರಶ್ನೆಯಾಗಿ ಉಳಿದಿದೆ. ಈ ಬೋರ್ವೆಲ್ಗೆ ವಿದ್ಯುತ್ ಪೂರೈಕೆ ಮಾಡಲು ಟಿಸಿ ಅಗತ್ಯವಾಗಿದೆ. ಆದರೆ ಸಮೀಪದಲ್ಲಿ ಯಾವುದೇ ಟಿಸಿ ಇಲ್ಲದೆ ಇರುವುದು, ಬೋರ್ ವೆಲ್ ಕೊರೆಸಿ ತಿಂಗಳುಗಳು ಕಳೆದರು ಪ್ರಯೋಜನಕ್ಕೆ ಇಲ್ಲವಾದಂತಾಗಿದೆ.

ಇನ್ನೂ ತ್ವರಿತವಾಗಿ ಟಿಸಿ ಅಳವಡಿಸಲು, ತಾತ್ಕಾಲಿಕ ಸಂಪರ್ಕ ಪಡೆದುಕೊಳ್ಳಲು ಬೆಸ್ಕಾಂನಿಂದ ಅನುಮತಿ ದೊಡ್ಡಬಳ್ಳಾಪುರ ತಾಲೂಕು ಪಂಚಾಯತಿ ಇಒ ಅವರಿಗೆ ಗ್ರಾಮಪಂಚಾಯಿತಿ ವತಿಯಿಂದ ಪತ್ರ ಬರೆಯಲಾಗಿದೆ. ಆದರೆ ಅದೂ ಕೂಡ ದಿನ ತಳ್ಳುತ್ತಲೆ ಇದೆ.

ಕಡಿಮೆ ಪ್ರಮಾಣ ನೀರಿನ ಪೂರೈಕೆಯಿಂದಾಗಿ ಈ ವಾರ್ಡ್ ಜನತೆ ನೀರಿಗಾಗಿ ವಿಧಿಯಿಲ್ಲದೆ ಟ್ಯಾಂಕರ್ ನೀರಿಗೆ ಆಶ್ರಯಿಸಬೇಕಾದ ಅನಿರ್ವಾರ್ಯತೆ ಎದುರಾಗಿದೆ. ಈ ಕುರಿತಂತೆ ಕೂಡಲೇ ದೊಡ್ಡಬಳ್ಳಾಪುರ ತಾಪಂ ಇಒ ಅವರು ಬೆಸ್ಕಾಂ ಮೂಲಕ ಅನುಮತಿ ದೊರಕಿಸಿದರೆ ಈ ವ್ಯಾಪ್ತಿಯ ಜನರಿಗೆ ಶಾಶ್ವತ ಪರಿಹಾರ ದೊರಕಲಿದೆ ಎಂಬ ನಿರೀಕ್ಷೆಯಲ್ಲಿದ್ದಾರೆ.

ರಾಜಕೀಯ

ಕೇಂದ್ರ ಬಿಜೆಪಿ ಸರ್ಕಾರ ಕರ್ನಾಟಕಕ್ಕೆ ಕೊಟ್ಟ ಖಾಲಿ ಟ್ರಂಕ್ ಹಿಡಿದಿರುವ ತೇಜಸ್ವಿ ಸೂರ್ಯ: ಡಿ.ಕೆ. ಸುರೇಶ್ ವ್ಯಂಗ್ಯ

ಕೇಂದ್ರ ಬಿಜೆಪಿ ಸರ್ಕಾರ ಕರ್ನಾಟಕಕ್ಕೆ ಕೊಟ್ಟ ಖಾಲಿ ಟ್ರಂಕ್ ಹಿಡಿದಿರುವ ತೇಜಸ್ವಿ ಸೂರ್ಯ:

"ಕಳೆದ 12 ವರ್ಷಗಳಿಂದ ಕೇಂದ್ರ ಬಿಜೆಪಿ ಸರ್ಕಾರ ಕರ್ನಾಟಕಕ್ಕೆ ಕೊಟ್ಟಿರುವ ಖಾಲಿ ಟ್ರಂಕ್ ಅನ್ನು ಸಂಸದ ತೇಜಸ್ವಿ ಸೂರ್ಯ ಅವರು ಹಿಡಿದಿರುವುದು" ಎಂದು ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ (D.K. Suresh) ಅವರು ತಿರುಗೇಟು

[ccc_my_favorite_select_button post_id="119275"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

RCB: ಮತ್ತೆ ಕಪ್ ನಮ್ದು

RCB: ಮತ್ತೆ ಕಪ್ ನಮ್ದು

4ನೇ ಆವೃತ್ತಿಯ ಮಹಿಳಾ ಪ್ರೀಮಿ ಯರ್ ಲೀಗ್ (ಡಬ್ಲ್ಯೂಪಿ ಎಲ್) ಟೂರ್ನಿಯಲ್ಲಿ ಸ್ಮೃತಿ ಮಂಧಾನಾ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಚಾಂಪಿಯನ್ ಆಗಿ ಹೊರ ಹೊಮ್ಮಿದ್ದು, ಸಿಎಂ ಸಿದ್ದರಾಮಯ್ಯ (Cmsiddaramaiah), ಡಿಸಿಎಂ

[ccc_my_favorite_select_button post_id="119174"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ದೊಡ್ಡಬಳ್ಳಾಪುರ: ಪತ್ನಿಗೆ ಚಿಕಿತ್ಸೆ ಕೊಡಿಸಿ ಮನೆಗೆ ಕರೆದೊಯ್ಯುತ್ತಿದ್ದವ ಅಪಘಾತದಲ್ಲಿ ಸಾವು.‌.!

ದೊಡ್ಡಬಳ್ಳಾಪುರ: ಪತ್ನಿಗೆ ಚಿಕಿತ್ಸೆ ಕೊಡಿಸಿ ಮನೆಗೆ ಕರೆದೊಯ್ಯುತ್ತಿದ್ದವ ಅಪಘಾತದಲ್ಲಿ ಸಾವು.‌.!

ಮಡದಿಗೆ ಉಂಟಾಗಿದ್ದ ಅನಾರೋಗ್ಯ ಕಾರಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಮನೆಗೆ ಕರೆದೊಯ್ಯುತ್ತಿದ್ದ ವ್ಯಕ್ತಿ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಸಾವನಪ್ಪಿರುವ ಘಟನೆ (Accident) ತಾಲೂಕಿನಲ್ಲಿ ಸಂಭವಿಸಿದೆ.

[ccc_my_favorite_select_button post_id="119259"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!