Rs. 25 crore for each assembly constituency: Cmsiddaramaiah

ಸಿಎಂ‌ ಸಿದ್ದರಾಮಯ್ಯ ನೇತೃತ್ವದಲ್ಲಿ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಇಂದು ಕೃಷ್ಣಾದಲ್ಲಿ ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆ ಹಾಗೂ ರೈಲ್ವೇ ಯೋಜನೆಗಳ ಭೂಸ್ವಾಧಿನ ಕುರಿತು ನಡೆಸಿದ ಪ್ರಗತಿ ಪರಿಶೀಲನಾ ಸಭೆ ನಡೆಸಲಾಯಿತು.

ಸಭೆಯ ಮುಖ್ಯಾಂಶಗಳು:

  1. 2023-24 ರಲ್ಲಿ ಮುಖ್ಯಮಂತ್ರಿಗಳ ವಿಶೇಷ ಅನುದಾನ ಯೋಜನೆಯಡಿ ಪ್ರತಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ತಲಾ ರೂ.25 ಕೋಟಿಯಂತೆ ಒಟ್ಟು ರೂ. 3510 ಕೋಟಿ ಬಿಡುಗಡೆಗೆ ಅನುಮೋದನೆ ನೀಡಲಾಗಿತ್ತು.

ಇದರಲ್ಲಿ ಈಗಾಗಲೇ ರೂ. 2040 ಕೋಟಿ ಮೊತ್ತದಲ್ಲಿ ಶೇ.58ರಷ್ಟು ಕಾಮಗಾರಿಗಳು ಪೂರ್ಣಗೊಂಡಿದ್ದು, ರೂ.920 ಕೋಟಿ ವೆಚ್ಚ ಭರಿಸಲಾಗಿದೆ.

ಇನ್ನೂ ರೂ. 1205 ಕೋಟಿ ಬಿಡುಗಡೆ ಮಾಡಲು ಬೆಳಗಾವಿ ವಿಧಾನ ಮಂಡಲದ ಅಧಿವೇಶನದ ಸಂದರ್ಭದಲ್ಲಿ ಆದೇಶ ನೀಡಲಾಗಿದೆ.

ಅನುಷ್ಠಾನ ಪೂರ್ಣಗೊಂಡಿರುವ ಕಾಮಗಾರಿಗಳ ಬಿಲ್ಲುಗಳನ್ನು ಪಾವತಿಸಲು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಅವರು ಸೂಚನೆ ನೀಡಿದರು.

  1. 2024-25ರಲ್ಲಿ ಮಳೆ ಹಾನಿಯಿಂದ ಉಂಟಾದ ರಸ್ತೆ ದುರಸ್ತಿಗಾಗಿ ರೂ.1890 ಕೋಟಿ ಮೊತ್ತಕ್ಕೆ ಅನುಮೋದನೆ ನೀಡಲಾಗಿದ್ದು, ರೂ.250 ಕೋಟಿ ಬಿಡುಗಡೆ ಮಾಡಲಾಗಿದೆ.
  2. ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ 2025-26 ನೇ ಸಾಲಿನಲ್ಲಿ ರೂ. 8666.50 ಕೋಟಿ ಅನುಮೋದನೆ ನೀಡಲಾಗಿದ್ದು, ಈಗಾಗಲೇ ರೂ.1 ಸಾವಿರ ಕೋಟಿ ಬಿಡುಗಡೆ ಮಾಡಲಾಗಿದೆ.
  3. ಎಲ್ಲಾ ಕಾಮಗಾರಿಗಳನ್ನು ನಿಗದಿತ ಅವಧಿಯ ಒಳಗಾಗಿ ಪೂರ್ಣಗೊಳಿಸಿ, ಅನುದಾನ ಪಾವತಿಸುವುದು ಆಯಾ ಜಿಲ್ಲಾಧಿಕಾರಿಗಳ ಜವಾಬ್ದಾರಿಯಾಗಿದೆ.

ಕಾಮಗಾರಿಗಳ ಗುಣಮಟ್ಟದಲ್ಲಿ ಯಾವುದೇ ರಾಜಿ ಆಗಬಾರದು. ಜಿಲ್ಲಾ ಉಸ್ತುವಾರಿ ಸಚಿವರು ಎಲ್ಲಾ ಕಾಮಗಾರಿಗಳ ಪ್ರಗತಿ ಪರಿಶೀಲನೆಯನ್ನು ಮಾಡಬೇಕು ಎಂದು ಮುಖ್ಯಮಂತ್ರಿ ಅವರು ತಿಳಿಸಿದರು.

  1. 2024-25 ನೇ ಸಾಲಿನಲ್ಲಿ 205 ವಿಧಾನಸಭಾ ಕ್ಷೇತ್ರಗಳಿಗೆ ಮುಖ್ಯಮಂತ್ರಿ ವಿಶೇಷ ಅನುದಾನ ಯೋಜನೆಯಡಿ ಒಟ್ಟು ರೂ. 8666.50 ಕೋಟಿ ಅನುದಾನ ಹಂಚಿಕೆ ಮಾಡಲಾಗಿದೆ.

ಇನ್ನು ಬಾಕಿಯಿರುವ 19 ಕ್ಷೇತ್ರಗಳಿಂದ ಪ್ರಸ್ತಾವನೆಗಳನ್ನು ಪಡೆದ ಬಳಿಕ ಬಿಡುಗಡೆಗೆ ಕ್ರಮ ಕೈಗೊಳ್ಳಬೇಕು. ಎಲ್ಲಾ ಟೆಂಡರ್‌ ಪ್ರಕ್ರಿಯೆಗಳನ್ನು ಜನವರಿ 10ರೊಳಗಾಗಿ ಪೂರ್ಣಗೊಳಿಸಲು ಮುಖ್ಯಮಂತ್ರಿ ಅವರು ಸೂಚನೆ ನೀಡಿದರು.

ಮೂಲಸೌಲಭ್ಯ ಅಭಿವೃದ್ಧಿ, (ರೈಲ್ವೇ ಮತ್ತು ವಿಮಾನ ನಿಲ್ದಾಣ)

  1. ರೈಲ್ವೇ ಕಾಮಗಾರಿಗಳಿಗೆ ಬಾಕಿಯಿರುವ ಭೂಸ್ವಾಧೀನ ಪ್ರಕ್ರಿಯೆಗಳನ್ನು ಆದ್ಯತೆ ಮೇರೆಗೆ ಪೂರ್ಣಗೊಳಿಸಬೇಕು.

ಕುಡಚಿ-ಬಾಗಲಕೋಟೆ, ತುಮಕೂರು-ದಾವಣಗೆರೆ, ಬೇಲೂರು-ಹಾಸನ, ಶಿವಮೊಗ್ಗ-ರಾಣೆಬೆನ್ನೂರು, ಧಾರವಾಡ-ಬೆಳಗಾವಿ ರೈಲ್ವೇ ಮಾರ್ಗಗಳ ನಿರ್ಮಾಣ ಕಾಮಗಾರಿ ನಿಗದಿತ ಅವಧಿಯೊಳಗಾಗಿ ಕೈಗೊಳ್ಳಲು ಎಲ್ಲಾ ಅಗತ್ಯ ಪ್ರಕ್ರಿಯೆಗಳನ್ನು ತ್ವರಿತಗೊಳಿಸಬೇಕು ಎಂದು ಮುಖ್ಯಮಂತ್ರಿ ಅವರು ಸೂಚನೆ ನೀಡಿದರು.

ರಾಜಕೀಯ

ಪ್ರತಿಪಕ್ಷದ ವೈಫಲ್ಯವೇ ಆಡಳಿತ ಪಕ್ಷಕ್ಕೆ ಲಾಭ: ವಿಜಯೇಂದ್ರ ವಿರುದ್ಧ ಯತ್ನಾಳ್ ವಾಗ್ದಾಳಿ

ಪ್ರತಿಪಕ್ಷದ ವೈಫಲ್ಯವೇ ಆಡಳಿತ ಪಕ್ಷಕ್ಕೆ ಲಾಭ: ವಿಜಯೇಂದ್ರ ವಿರುದ್ಧ ಯತ್ನಾಳ್ ವಾಗ್ದಾಳಿ

ಅಬಕಾರಿ ಹಗರಣದ ಬಗ್ಗೆ ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (B.Y. Vijayendra) ಏನೂ ಮಾತನಾಡಿಲ್ಲ. ಹೋರಾಟ ತಾರ್ಕಿಕ ಅಂತ್ಯ ಕಂಡಿಲ್ಲ. ವಿರೋಧ ಪಕ್ಷದ ವೈಫಲ್ಯದ ಲಾಭಆಡಳಿತ ಪಕ್ಷಕ್ಕೆ ಸಿಕ್ಕಿದೆ ಎಂದು ಶಾಸಕ ಬಸನಗೌಡ

[ccc_my_favorite_select_button post_id="119407"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ನೆಲಮಂಗಲ ಹೆದ್ದಾರಿಯ ಜಿಂದಾಲ್ ಮೇಲ್ಸೇತುವೆ ಬಳಿ ಸಂಭವಿಸಿದ ಕೆಎಸ್ ಆರ್ ಟಿಸಿ ಬಸ್​​ (KSRTC Bus) ಮತ್ತು ಇಂಡಿಕ ಕಾರಿನ (Indica Car) ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ (Accident) ದೊಡ್ಡಬಳ್ಳಾಪುರದ ಐವರು ಯುವಕರು

[ccc_my_favorite_select_button post_id="119422"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!