Violence against Hindus in Bangladesh; Sadhguru questions silence

ಬಾಂಗ್ಲಾ ಹಿಂದೂಗಳ ವಿರುದ್ಧದ ಹಿಂಸಾಚಾರ; ಮೌನವನ್ನು ಪ್ರಶ್ನಿಸಿದ ಸದ್ಗುರು

ಕೆ.ಎಂ.ಸಂತೋಷ್, ಆರೂಢಿ (ದೊಡ್ಡಬಳ್ಳಾಪುರ): ಸದ್ಗುರು ಸನ್ನಿಧಿ ಬೆಂಗಳೂರಿನಲ್ಲಿ ಭಾನುವಾರ ನಡೆದ ಸತ್ಸಂಗದಲ್ಲಿ, “ಚಿಕನ್ ನೆಕ್” ಎಂದು ಕರೆಯಲಾಗುವ ಸಿಲಿಗುರಿ ಕಾರಿಡಾರ್ ಕುರಿತ ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ಹೇಳಿಕೆಗಳ ಬಗ್ಗೆ ಪ್ರೇಕ್ಷಕರ ಪ್ರಶ್ನೆಗೆ ಪ್ರತಿಕ್ರಿಯಿಸುತ್ತಾ, ಸದ್ಗುರು (Sadhguru) ಅವರು ಭಾರತದ ಈಶಾನ್ಯ ರಾಜ್ಯಗಳಿಗೆ ಇರುವ ಕಿರಿದಾದ ಭೂ ಸಂಪರ್ಕವಾದ ಸಿಲಿಗುರಿ ಕಾರಿಡಾರ್ ಅನ್ನು, 1971 ರಲ್ಲಿ ಭಾರತ ಸರಿಪಡಿಸಲು ವಿಫಲವಾದ “78 ವರ್ಷಗಳ ಹಳೆಯ ಅಸಂಬದ್ಧತೆ” ಎಂದು ವಿವರಿಸಿದ್ದಾರೆ.

ಸಾಮಾಜಿಕ ಮಾಧ್ಯಮ X ನಲ್ಲಿ ಸದ್ಗುರುಗಳು ನಂತರ ಈ ರೀತಿಯಾಗಿ ಹಂಚಿಕೊಂಡಿದ್ದು, “ಸಿಲಿಗುರಿ ಕಾರಿಡಾರ್ ಭಾರತದ ವಿಭಜನೆಯಿಂದ ಸೃಷ್ಟಿಯಾದ 78 ವರ್ಷಗಳಷ್ಟು ಹಳೆಯ ಅಸಂಬದ್ಧತೆಯಾಗಿದೆ, ಇದನ್ನು 1971ರಲ್ಲೇ ಸರಿಪಡಿಸಬೇಕಿತ್ತು. ಈಗ ದೇಶದ ಸಾರ್ವಭೌಮತ್ವಕ್ಕೆ ಬಹಿರಂಗ ಬೆದರಿಕೆ ಇರುವುದರಿಂದ, ಚಿಕನ್ ನೆಕ್ ಎನ್ನಲಾಗುವ ಈ ಭಾಗವನ್ನು ಪೋಷಿಸಿ ಅದನ್ನು ಆನೆಯಂತೆ ವಿಕಸಿಸಲು ಬಿಡುವ ಸಮಯ ಬಂದಿದೆ ಎಂದು ಸದ್ಗುರು ಹೇಳಿದ್ದಾರೆ

1971 ರ ವಿಮೋಚನಾ ಯುದ್ಧದ ನಂತರ ತಪ್ಪಿದ ಅವಕಾಶಗಳನ್ನು ಉಲ್ಲೇಖಿಸುತ್ತಾ ಸದ್ಗುರುಗಳು, ಈ ಅಸಂಬದ್ಧತೆಯನ್ನು ದಶಕಗಳ ಹಿಂದೆಯೇ ಸರಿಪಡಿಸಬೇಕಿತ್ತು ಎಂದು ಹೇಳಿದರು. “ಬಹುಶಃ 1946-47 ರಲ್ಲಿ ಅದನ್ನು ಮಾಡಲು ನಮಗೆ ಅಧಿಕಾರವಿರಲಿಲ್ಲ, ಆದರೆ 1972ರಲ್ಲಿ ನಮಗೆ ಅಧಿಕಾರವಿತ್ತು, ನಾವು ಅದನ್ನು ಮಾಡಲಿಲ್ಲ. ಈಗ ‘ಚಿಕನ್ ನೆಕ್’ ಬಗ್ಗೆ ಜನರು ಮಾತನಾಡಲು ಪ್ರಾರಂಭಿಸಿದ್ದಾರೆ, ನಾವು ಈ ‘ಚಿಕನ್ ನೆಕ್’ ಅನ್ನು ಬೇಗನೆ ಆನೆಯಾಗಿ ವಿಕಸಿಸುವಂತೆ ಪೋಷಿಸುವ ಸಮಯ ಬಂದಿದೆ”.

ಭಾರತದ ಪ್ರಾದೇಶಿಕ ಸಮಗ್ರತೆಯನ್ನು ಬಲಪಡಿಸಲು ನಿರ್ಣಾಯಕ ಕ್ರಮಕ್ಕೆ ಕರೆ ನೀಡಿದ ಸದ್ಗುರುಗಳು, ದುರ್ಬಲತೆಯು ದೇಶದ ಆಧಾರವಾಗಲು ಸಾಧ್ಯವಿಲ್ಲ ಎಂದು ಒತ್ತಿ ಹೇಳಿದರು. ಆದ್ದರಿಂದ ದೇಶಗಳನ್ನು ಕೇವಲ ‘ಚಿಕನ್’ ಆಗಿ ಇರುವುದರಿಂದ ನಿರ್ಮಿಸಲು ಸಾಧ್ಯವಿಲ್ಲ. ಅದು ಆನೆಯಾಗಿ ಬೆಳೆಯಬೇಕು. ಬಹುಶಃ ಅದಕ್ಕೆ ಪೋಷಣೆ ಬೇಕು. ಬಹುಶಃ ಅದಕ್ಕೆ ಕೆಲವು ಸ್ಟೀರಾಯ್ಡ್‌ಗಳು ಬೇಕು. ಏನೇ ಬೇಕಾದರೂ, ನಾವು ಮಾಡಬೇಕು… ನಾವು ಮಾಡಲು ಪ್ರಯತ್ನಿಸುವ ಯಾವುದೇ ವಿಷಯಕ್ಕೆ ವೆಚ್ಚವಿದೆ, ಯಾವಾಗಲೂ ಬೆಲೆ ತೆರಬೇಕಾಗುತ್ತದೆ ಎಂದು ಸದ್ಗುರುಗಳು ಹೇಳಿದ್ದಾರೆ.

ಈ ವಿಷಯವನ್ನು ವಿಶಾಲವಾದ ಜಾಗತಿಕ ಮತ್ತು ನಾಗರಿಕತೆಯ ಸಂದರ್ಭದಲ್ಲಿ ಇರಿಸುತ್ತಾ, ಗಡಿರಹಿತ ಪ್ರಪಂಚ ಒಂದು ಆಕಾಂಕ್ಷೆಯಾಗಿದ್ದರೂ, ಅದನ್ನು ಅಕಾಲಿಕವಾಗಿ ಹೇರಲು ಸಾಧ್ಯವಿಲ್ಲ ಎಂದು ಸದ್ಗುರುಗಳು ವಿಶ್ಲೇಷಿಸಿದ್ದಾರೆ.

“ಪ್ರಪಂಚದಲ್ಲಿ ಯಾವುದೇ ರಾಷ್ಟ್ರಗಳಿಲ್ಲದಿದ್ದರೆ, ಪ್ರಪಂಚದಲ್ಲಿ ಯಾವುದೇ ಗಡಿಗಳಿಲ್ಲದಿದ್ದರೆ ಅದ್ಭುತವಾಗಿರುತ್ತಿತ್ತು… ಆದರೆ ನಾವು ಇನ್ನೂ ಅಸ್ತಿತ್ವದ ಯಾವ ಮಟ್ಟದಲ್ಲಿದ್ದೇವೆಂದರೆ, ಇದ್ದಕ್ಕಿದ್ದಂತೆ ನಾಳೆ ನಾವು ಎಲ್ಲರೊಂದಿಗೆ ಆದರದಿಂದ ಕೂಡಿ ಅದ್ಭುತವಾಗಿ ಬದುಕುತ್ತೇವೆ ಎಂದು ಊಹಿಸಲು ಸಾಧ್ಯವಿಲ್ಲ. ಈ ಸಮಯದಲ್ಲಿ ಅದೊಂದು ಮೂರ್ಖತನದ ಆಲೋಚನೆ.”

“ಹೇಗಾದರೂ, ಈ ಅಸಂಬದ್ಧತೆ ಕೇವಲ 78 ವರ್ಷಗಳ ಹಿಂದೆ ಸಂಭವಿಸಿತು. ಕೆಲವು ತಿದ್ದುಪಡಿ ಅಗತ್ಯವಿದೆ. ತಿದ್ದುಪಡಿ ಆಗಲೇಬೇಕು. ನಾವು ‘ಚಿಕನ್’ ಅನ್ನು ಚೆನ್ನಾಗಿ ಪೋಷಿಸಿ ಅದನ್ನು ಆನೆಯನ್ನಾಗಿ ಮಾಡಬೇಕು ಎಂದು ನಾನು ಭಾವಿಸುತ್ತೇನೆ. ಆನೆಯ ಕುತ್ತಿಗೆಯನ್ನು ನಿಭಾಯಿಸುವುದು ಸುಲಭ,” ಎಂದು ಸದ್ಗುರುಗಳು ವಿವರಿಸಿದರು.

ಸದ್ಗುರುಗಳು ಹಿಂದಿನ ಅನೇಕ ಸಂದರ್ಭಗಳಲ್ಲಿ ಬಾಂಗ್ಲಾದೇಶದಲ್ಲಿನ ಬೆಳವಣಿಗೆಗಳ ಬಗ್ಗೆ ಸಾರ್ವಜನಿಕವಾಗಿ ಮಾತನಾಡಿದ್ದಾರೆ, ವಿಶೇಷವಾಗಿ ಹಿಂದೂ ಅಲ್ಪಸಂಖ್ಯಾತರ ವಿರುದ್ಧದ ಪುನರಾವರ್ತಿತ ಹಿಂಸಾಚಾರ ಘಟನೆಗಳು ಮತ್ತು ದೇವಾಲಯಗಳ ನಾಶದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.

ವಿಭಜನೆಯ ಸಮಯದಲ್ಲಿ ಸೃಷ್ಟಿಯಾದ ಬಗೆಹರಿಯದ ನಾಗರಿಕ ಮತ್ತು ಭೌಗೋಳಿಕ ರಾಜಕೀಯ ಬಿರುಕುಗಳಿಂದ ಅವು ಉದ್ಭವಿಸಿದಾಗ ಅಂತಹ ಸಮಸ್ಯೆಗಳನ್ನು ಆಂತರಿಕ ವಿಷಯಗಳೆಂದು ತಳ್ಳಿಹಾಕಲು ಸಾಧ್ಯವಿಲ್ಲ ಎಂದು ಪ್ರತಿಪಾದಿಸಿದ್ದಾರೆ.

ಹಿಂದೂಗಳ ವಿರುದ್ಧದ ಹಿಂಸಾಚಾರ, ದೇವಾಲಯಗಳ ನಾಶ ಮತ್ತು ಅಲ್ಪಸಂಖ್ಯಾತರನ್ನು ಪಲಾಯನ ಮಾಡಲು ಒತ್ತಾಯಿಸುವ ಜನಸಂಖ್ಯಾ ಒತ್ತಡದ ಸುತ್ತಲಿನ ದೀರ್ಘಕಾಲದ ಮೌನವನ್ನು ಸಾರ್ವಜನಿಕವಾಗಿ ಪ್ರಶ್ನಿಸಿದ್ದಾರೆ.

ರಾಜಕೀಯ

ಕೇಂದ್ರ ಬಿಜೆಪಿ ಸರ್ಕಾರ ಕರ್ನಾಟಕಕ್ಕೆ ಕೊಟ್ಟ ಖಾಲಿ ಟ್ರಂಕ್ ಹಿಡಿದಿರುವ ತೇಜಸ್ವಿ ಸೂರ್ಯ: ಡಿ.ಕೆ. ಸುರೇಶ್ ವ್ಯಂಗ್ಯ

ಕೇಂದ್ರ ಬಿಜೆಪಿ ಸರ್ಕಾರ ಕರ್ನಾಟಕಕ್ಕೆ ಕೊಟ್ಟ ಖಾಲಿ ಟ್ರಂಕ್ ಹಿಡಿದಿರುವ ತೇಜಸ್ವಿ ಸೂರ್ಯ:

"ಕಳೆದ 12 ವರ್ಷಗಳಿಂದ ಕೇಂದ್ರ ಬಿಜೆಪಿ ಸರ್ಕಾರ ಕರ್ನಾಟಕಕ್ಕೆ ಕೊಟ್ಟಿರುವ ಖಾಲಿ ಟ್ರಂಕ್ ಅನ್ನು ಸಂಸದ ತೇಜಸ್ವಿ ಸೂರ್ಯ ಅವರು ಹಿಡಿದಿರುವುದು" ಎಂದು ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ (D.K. Suresh) ಅವರು ತಿರುಗೇಟು

[ccc_my_favorite_select_button post_id="119275"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

RCB: ಮತ್ತೆ ಕಪ್ ನಮ್ದು

RCB: ಮತ್ತೆ ಕಪ್ ನಮ್ದು

4ನೇ ಆವೃತ್ತಿಯ ಮಹಿಳಾ ಪ್ರೀಮಿ ಯರ್ ಲೀಗ್ (ಡಬ್ಲ್ಯೂಪಿ ಎಲ್) ಟೂರ್ನಿಯಲ್ಲಿ ಸ್ಮೃತಿ ಮಂಧಾನಾ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಚಾಂಪಿಯನ್ ಆಗಿ ಹೊರ ಹೊಮ್ಮಿದ್ದು, ಸಿಎಂ ಸಿದ್ದರಾಮಯ್ಯ (Cmsiddaramaiah), ಡಿಸಿಎಂ

[ccc_my_favorite_select_button post_id="119174"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ದೊಡ್ಡಬಳ್ಳಾಪುರ: ಪತ್ನಿಗೆ ಚಿಕಿತ್ಸೆ ಕೊಡಿಸಿ ಮನೆಗೆ ಕರೆದೊಯ್ಯುತ್ತಿದ್ದವ ಅಪಘಾತದಲ್ಲಿ ಸಾವು.‌.!

ದೊಡ್ಡಬಳ್ಳಾಪುರ: ಪತ್ನಿಗೆ ಚಿಕಿತ್ಸೆ ಕೊಡಿಸಿ ಮನೆಗೆ ಕರೆದೊಯ್ಯುತ್ತಿದ್ದವ ಅಪಘಾತದಲ್ಲಿ ಸಾವು.‌.!

ಮಡದಿಗೆ ಉಂಟಾಗಿದ್ದ ಅನಾರೋಗ್ಯ ಕಾರಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಮನೆಗೆ ಕರೆದೊಯ್ಯುತ್ತಿದ್ದ ವ್ಯಕ್ತಿ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಸಾವನಪ್ಪಿರುವ ಘಟನೆ (Accident) ತಾಲೂಕಿನಲ್ಲಿ ಸಂಭವಿಸಿದೆ.

[ccc_my_favorite_select_button post_id="119259"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!