Canara Bank manager cheats in Lucky Bhaskar movie style..!

ಲಕ್ಕಿ ಭಾಸ್ಕರ್ ಸಿನಿಮಾ ಶೈಲಿಯಲ್ಲಿ ಕೆನರಾ ಬ್ಯಾಂಕ್ ಮ್ಯಾನೇಜರ್‌ನಿಂದ ವಂಚನೆ..!

ಬೆಂಗಳೂರು: ಪ್ರಸಿದ್ಧ ಲಕ್ಕಿ ಭಾಸ್ಕರ್ ಸಿನಿಮಾ (Lucky Bhaskar) ಶೈಲಿಯಲ್ಲಿ ಬೇಲಿಯೇ ಎದ್ದು ಹೊಲಮೇಯ್ದಂತೆ ರಾಷ್ಟ್ರೀಕೃತ ಬ್ಯಾಂಕಿನ ಮ್ಯಾನೇಜರ್ ಒಬ್ಬರು ತಮ್ಮ ಗ್ರಾಹಕರನ್ನು ನಂಬಿಸಿ ಅವರ ಹೆಸರಿನಲ್ಲಿ ಮೂರು ಕೋಟಿ ರುಪಾಯಿಗೂ ಹೆಚ್ಚಿನ ಮೊತ್ತದ ಚಿನ್ನಾಭರಣ ಅಡಮಾನ ಸಾಲ ಪಡೆದು, ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.

ಮಲ್ಲೇಶ್ವರದ 15ನೇ ಕ್ರಾಸ್‌ನಲ್ಲಿರುವ ಕೆನರಾ ಬ್ಯಾಂಕಿನಲ್ಲಿ ಲಕ್ಕಿ ಬಾಸ್ಕರ್ ಸಿನಿಮಾ ಶೈಲಿಯಲ್ಲಿ ಬಾರಿ ವಂಚನೆಯಾಗಿರುವುದು ವರದಿಯಾಗಿದೆ.

ಬ್ಯಾಂಕ್‌ನ ಶಾಖಾ ವ್ಯವಸ್ಥಾಪಕರು ಕೋಟ್ಯಂತರ ರುಪಾಯಿಗಳೊಂದಿಗೆ ನಾಪತ್ತೆಯಾಗಿದ್ದಾರೆ.

ಚಿನ್ನವನ್ನೇ ಇಡದ 41 ಖಾತೆಗಳಿಂದ ಒಟ್ಟು 3,11,54,000 ಸಾಲ ಪಡೆದಿರುವುದು ಪತ್ತೆ ಯಾಗಿದೆ. ಶಾಖೆಯಲ್ಲಿ ಹಿರಿಯ ವ್ಯವಸ್ಥಾಪಕರಾಗಿದ್ದ ಎನ್‌.ರಘು ತಮ ಬ್ಯಾಂಕಿನ ಗ್ರಾಹಕರಗಳನ್ನ ನಂಬಿಸಿ ಅವರಿಂದ ಖಾಲಿ ಚಿಕ್ಕುಗಳು ಮತ್ತು ಒಟಿಪಿಗಳನ್ನು ಪಡೆದು ಚಿನ್ನದ ಸಾಲ ಪಡೆದಿದ್ದಾರೆ.

ವಂಚನೆಗೆ ಒಳಗಾದ ವ್ಯಕ್ತಿಯೊಬ್ಬರು ಮಾಧ್ಯಮಗಳೊಂದಿಗೆ ಮಾತನಾಡಿ, ಕೆಲ ದಿನಗಳ ಹಿಂದೆ ಗೃಹ ಸಾಲ ಮಂಜೂರಾಗಿತ್ತು. ಅದೇ ವಿಶ್ವಾಸದ ಮೇಲೆ ಬ್ಯಾಂಕ್ ಮ್ಯಾನೇಜರ್ ರಘು ತಮ್ಮ ತಂದೆಗೆ ಹುಷಾರಿಲ್ಲ ಎಂದು ಹೇಳಿ ಮೂರು ಲಕ್ಷ ರೂ. ಖಾಸಗಿ ಸಾಲ ಪಡೆದುಕೊಂಡಿದ್ದರು. ಅದರಲ್ಲಿ 1.30 ಲಕ್ಷ ರುಪಾಯಿ ವಾಪಸ್ ನೀಡಿದ್ದಾರೆ. 1.70 ಲಕ್ಷಗಳನ್ನು ಕೊಡುವುದಾಗಿ ಹೇಳುತ್ತಲೇ ಕಾಲ ಹರಣ ಮಾಡಿದ್ದಾರೆ.

ಈ ನಡುವೆ ಗ್ರಾಹಕರ ಬಳಿ ಬಂದ ರಘು, ತಮಗೆ ಹಣದ ಅವಶ್ಯಕತೆ ಹೆಚ್ಚಿದೆ. ನನ್ನ ತಾಯಿಯ ಚಿನ್ನವನ್ನು ನಿಮ್ಮ ಖಾತೆಯಲ್ಲಿ ಇಟ್ಟು ಚಿನ್ನದ ಸಾಲ ಪಡೆದುಕೊಳ್ಳುತ್ತೇನೆ. ಆ ಸಾಲವನ್ನು ನಾನೇ ತೀರಿಸಿಕೊಳ್ಳುತ್ತೆನೆ. ಸಾಲ ಪಡೆಯಲು ಬ್ಯಾಂಕ್ ನಿಯಮಗಳ ಪ್ರಕಾರ ಖಾಲಿ ಚೆಕ್ ಮತ್ತು ಮೊಬೈಲ್ ನಂಬರ್‌ಗೆ ಬರುವ ಒಟಿಪಿ ನೀಡುವಂತೆ ಮನವೊಲಿಸಿದ್ದಾರೆ.

ನಿಮ್ಮದೇ ಖಾತೆಯಲ್ಲಿ ನೀವು ಚಿನ್ನ ಅಡಮಾನ ಮಾಡಿ ಸಾಲ ಪಡೆಯಬಹುದಲ್ಲ ಎಂದು ಗ್ರಾಹಕರು ಹೇಳಿದಾಗ. ನಾವು ಬ್ಯಾಂಕ್ ಅಧಿಕಾರಿಗಳಾಗಿರುವುದರಿಂದ ನಮ್ಮದೇ ಬ್ಯಾಂಕಿನಲ್ಲಿ ಆ ರೀತಿ ವ್ಯವಹಾರ ಮಾಡಲು ಅವಕಾಶ ಇಲ್ಲ. ಒಂದು ವೇಳೆ ಆ ರೀತಿ ಮಾಡಿದರೆ ಕೆಲಸ ಕಳೆದುಕೊಳ್ಳಬೇಕಾಗುತ್ತದೆ ಎಂದು ಹೇಳಿದ್ದರಂತೆ, ಇದನ್ನು ನಂಬಿದ ಗ್ರಾಹಕರು ಸಹಾಯ ಮಾಡಿದ್ದಾರೆ.

ಗೃಹ ಸಾಲ ಪಡೆಯಲು ಸಹಾಯ ಮಾಡಿದ್ದಕ್ಕೆ ಪ್ರತಿಯಾಗಿ ಚಿನ್ನದ ಸಾಲಕ್ಕೆ ಸಹಾಯ ಮಾಡಿದ್ದಾರೆ. ನೋಂದ ವ್ಯಕ್ತಿ ತಮ್ಮ ಖಾಲಿ ಚೆಕ್ ಮತ್ತು ಮತ್ತು ತಾಯಿಯ ಮೊಬೈಲ್ ಗೆ ಬಂದ ಒಟಿಪಿಯನ್ನು ವ್ಯವಸ್ಥಾಪಕರಿಗೆ ನೀಡಿದ್ದಾರೆ. ಅದನ್ನು ಬಳಸಿಕೊಂಡು ರಘು ಅವರು ಒಬ್ಬರ ಖಾತೆಯಿಂದಲೇ 32 ಲಕ್ಷ ರೂ. ಚಿನ್ನದ ಸಾಲ ಪಡೆದುಕೊಂಡಿದ್ದಾರೆ.

ಬ್ಯಾಂಕಿನಲ್ಲಿ ಲೆಕ್ಕಪರಿಶೋಧನೆ ಮಾಡಿದ ವೇಳೆಯಲ್ಲಿ ಕಳೆದ ಅಕ್ಟೋಬರ್ 4 ರಿಂದ ಡಿಸೆಂಬರ್ 9 ರವರೆಗೆ ಈ ರೀತಿ 3.11 ಕೋಟಿ ರುಪಾಯಿ ವಂಚನೆ ಆಗಿರಬಹುದು ಪತ್ತೆಯಾಗಿದೆ. ಈ ಬಗ್ಗೆ ಎನ್ ರಘು ಅವರನ್ನು ಡಿಸೆಂಬರ್ 10 ರಂದು ವಿಚಾರಿಸಿದಾಗ ಅವರು, ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದರು.

ಆದರೆ ಮಾರನೇ ದಿನ ಯಾವುದೇ ಮಾಹಿತಿ ನೀಡದೆ ಬ್ಯಾಂಕ್ ಕರ್ತವ್ಯಕ್ಕೆ ಗೈರು ಹಾಜರಾಗಿದ್ದಾರೆ ಎಂದು ಹೇಳಲಾಗಿದೆ. ಕೆನರಾ ಬ್ಯಾಂಕಿನ ಕೇಂದ್ರ ಕಚೇರಿಯ ಹಿರಿಯ ವ್ಯವಸ್ಥಾಪಕರು ಪೊಲೀಸರಿಗೆ ದೂರು ನೀಡಿದ್ದಾರೆ. ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ವರದಿಯಾಗಿದೆ.

ರಾಜಕೀಯ

ಮುಂದೆ ಬಿಜೆಪಿ, ಜೆಡಿಎಸ್ ವಿಲೀನ ಸಾಧ್ಯತೆ: ಡಿಸಿಎಂ ಡಿ.ಕೆ. ಶಿವಕುಮಾರ್

ಮುಂದೆ ಬಿಜೆಪಿ, ಜೆಡಿಎಸ್ ವಿಲೀನ ಸಾಧ್ಯತೆ: ಡಿಸಿಎಂ ಡಿ.ಕೆ. ಶಿವಕುಮಾರ್

“ಕುಮಾರಸ್ವಾಮಿ ಅವರ ಧೋರಣೆ ನೋಡುತ್ತಿದ್ದರೆ, ಸದ್ಯದಲ್ಲೇ ಜೆಡಿಎಸ್ ಪಕ್ಷ ಬಿಜೆಪಿ ಜತೆ ವಿಲೀನವಾಗುವ ಸಾಧ್ಯತೆ ಇದೆ. ವಿಲೀನವಾದರೆ ನಮಗೂ ಒಳ್ಳೆಯದೇ. ನಾವೂ ನೇರವಾಗಿ ಬಿಜೆಪಿ ಜೊತೆ ಹೋರಾಟ ಮಾಡಬಹುದು. ಆಗ 'ಆಟಕ್ಕೆ ಮೂರು ಪಕ್ಷ,

[ccc_my_favorite_select_button post_id="118247"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ದೊಡ್ಡಬಳ್ಳಾಪುರ: ಕಿಡಿಗೇಡಿಗಳ ಹಾವಳಿ.. ಕಾರಿನ ಗಾಜು ಪುಡಿಪುಡಿ..!

ದೊಡ್ಡಬಳ್ಳಾಪುರ: ಕಿಡಿಗೇಡಿಗಳ ಹಾವಳಿ.. ಕಾರಿನ ಗಾಜು ಪುಡಿಪುಡಿ..!

ಮನೆಯ ಮುಂದೆ ನಿಲ್ಲಿಸಿದ್ದ ಕಾರಿನ ಗಾಜನ್ನು ಹೊಡೆಯುವ ಮೂಲಕ ಕಿಡಿಗೇಡಿಗಳು ಉಪಟಳ (Miscreant's annoyance) ಮೆರೆದಿರುವ ಘಟನೆ ಬುಧವಾರ ರಾತ್ರಿ ತಾಲೂಕಿನ ಆರೂಢಿ ಗ್ರಾಮದಲ್ಲಿ ನಡೆ

[ccc_my_favorite_select_button post_id="118236"]
ದೊಡ್ಡಬಳ್ಳಾಪುರ: ಕಾರು ಡಿಕ್ಕಿ.. ಮಹಿಳೆಗೆ ತೀವ್ರ ಗಾಯ

ದೊಡ್ಡಬಳ್ಳಾಪುರ: ಕಾರು ಡಿಕ್ಕಿ.. ಮಹಿಳೆಗೆ ತೀವ್ರ ಗಾಯ

ಇತ್ತೀಚೆಗಷ್ಟೇ ಜೆಸಿಬಿಗೆ (JCB) ಕಾರು (Car) ಡಿಕ್ಕಿ ಹೊಡೆದಿದ್ದ ಘಟನೆ ಮಾಸುವ ಮುನ್ನವೇ, ಅದೇ ಸ್ಥಳದಲ್ಲಿ ಕಾರು ಮಹಿಳೆಗೆ ಡಿಕ್ಕಿ ಹೊಡೆದು (Accident) ಪರಾರಿಯಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ ಮೆಣಸಿ ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="118137"]

ಆರೋಗ್ಯ

ಸಿನಿಮಾ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

ಹಿರಿಯ ಚಲನಚಿತ್ರ ಕಲಾವಿದರು, ನಿರ್ದೇಶಕರು ನಿರ್ಮಾಪಕ ಪ್ರಕಾಶ್ ರಾಜ್ (Prakash Raj) ಅವರನ್ನು 17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ (Brand Ambassador) ಆಗಿ ನೇಮಿಸಲಾಗಿದೆ.

[ccc_my_favorite_select_button post_id="117722"]
error: Content is protected !!