Renowned journalist Arnab Goswami returns

ಲಯಕ್ಕೆ ಮರಳಿದ ಖ್ಯಾತ ಪತ್ರಕರ್ತ ಅರ್ನಬ್ ಗೋಸ್ವಾಮಿ.. ಬಿಜೆಪಿಗರಲ್ಲಿ ತಳಮಳ

ಕೆ.ಎಂ.ಸಂತೋಷ್, ಆರೂಢಿ (ದೊಡ್ಡಬಳ್ಳಾಪುರ): ಖ್ಯಾತ ಪತ್ರಕರ್ತ ಅರ್ನಬ್ ಗೋಸ್ವಾಮಿ (Arnab Goswami) ಮತ್ತೆ ಲಯಕ್ಕೆ ಮರಳಿರುವುದು ಬಿಜೆಪಿಗರಿಗೆ ಆತಂಕಕ್ಕೆ ಕಾರಣವಾಗಿದ್ದರೆ, ಪತ್ರಕರ್ತರು, ವಿರೋಧ ಪಕ್ಷಗಳಲ್ಲಿ ಆಶ್ಚರ್ಯಕ್ಕೆ ಕಾರಣವಾಗಿದೆ.

ಹೌದು ರಾಷ್ಟ್ರೀಯ ವಾದಿ ಪತ್ರಕರ್ತ, ರಿಪಬ್ಲಿಕ್ ಟಿವಿಯ ಅರ್ನಬ್ ಗೋಸ್ವಾಮಿ ಅವರನ್ನು ತಮ್ಮ ವೃತ್ತಿಜೀವನದ ಬಹುಪಾಲು ಕಾಲ ಬಿಜೆಪಿಯನ್ನು ಬೆಂಬಲಿಸುವ ಮತ್ತು ವಿರೋಧ ಪಕ್ಷಗಳನ್ನು, ವಿಶೇಷವಾಗಿ ಕಾಂಗ್ರೆಸ್ ಪಕ್ಷವನ್ನು ತೀವ್ರವಾಗಿ ಟೀಕಿಸುವ ಪತ್ರಕರ್ತ ಎಂದು ವ್ಯಾಪಕವಾಗಿ ಗ್ರಹಿಸಲಾಗಿದೆ.

ಆದಾಗ್ಯೂ, ಇಂಡಿಗೋ ವಿಮಾನಯಾನ ಬಿಕ್ಕಟ್ಟು ನಿರ್ವಹಣೆ, ಅರಾವಳಿ ಬೆಟ್ಟಗಳಲ್ಲಿನ ಪರಿಸರ ನಾಶ ಮತ್ತು ದೆಹಲಿಯ ಮಾಲಿನ್ಯ ಬಿಕ್ಕಟ್ಟಿನಂತಹ ವಿಷಯಗಳ ಕುರಿತು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವನ್ನು ಗುರಿಯಾಗಿಸಿಕೊಂಡು ಅವರು ಇತ್ತೀಚೆಗೆ ಮಾಡಿದ ವರದಿಗಳು ರಾಷ್ಟ್ರ ರಾಜಕಾರಣ ಮತ್ತು ಮಾಧ್ಯಮ ವಲಯಗಳಲ್ಲಿ ತೀವ್ರ ಚರ್ಚೆಗೆ ನಾಂದಿ ಹಾಡಿವೆ.

ರಾಜಕೀಯ ವಿಶ್ಲೇಷಕರು ಮತ್ತು ಸಾಮಾಜಿಕ ಮಾಧ್ಯಮ ವರದಿಗಳ ಪ್ರಕಾರ, ಅರ್ನಬ್ ಅವರ ಈ ಬದಲಾವಣೆಯನ್ನು ಹಠಾತ್ ಸೈದ್ಧಾಂತಿಕ ವಿರಾಮವಲ್ಲ, ಬದಲಾಗಿ ಅರ್ನಾಬ್ ಗೋಸ್ವಾಮಿಯವರ ರಾಷ್ಟ್ರೀಯವಾದ ಜಾಗೃತವಾಗಿದೆ ಎಂದು ವ್ಯಾಖ್ಯಾನಿಸಲಾಗುತ್ತಿದೆ.

ಅರ್ನಬ್ ಗೋಸ್ವಾಮಿ ಅವರ ಇತ್ತೀಚಿನ ಟೀಕೆಗಳು ಹೆಚ್ಚಾಗಿ ವಿಷಯಾಧಾರಿತವಾಗಿದ್ದು, ವಿಮಾನ ಪ್ರಯಾಣಿಕರಿಗೆ ಅನಾನುಕೂಲತೆ ಮತ್ತು ಪರಿಸರ ನಾಶದಂತಹ ಸಾರ್ವಜನಿಕ ಜೀವನದ ಮೇಲೆ ನೇರವಾಗಿ ದೇಶದ ಮೇಲೆ ಪರಿಣಾಮ ಬೀರುವ ವಿಷಯಗಳ ಮೇಲೆ ಕೇಂದ್ರೀಕರಿಸಿದೆ.

ದೇಶದಲ್ಲಿ ಈಗಾಗಲೇ ಮೋದಿ ನೇತೃತ್ವದ ಕೇಂದ್ರ ಸರ್ಕಾರವನ್ನು ಪ್ರಶ್ನಿಸುವ ಪತ್ರಕರ್ತರು ಇಲ್ಲದೆ, ಗೋದಿ ಮೀಡಿಯಾ ಎಂದು ರಾಷ್ಟ್ರೀಯ ಮಾಧ್ಯಮಗಳನ್ನು ಲೇವಡಿ ಮಾಡಲಾಗುತ್ತಿದೆ.

ಇದರ ನಡುವೆ “ಜನರೇ ನಿಜವಾದ ವಿರೋಧ ಪಕ್ಷ” ಎಂಬ ಅರ್ನಬ್ ಅವರ ಮಾತು ಅವರ ಹಿಂದಿನ “ಜನಪರ ಪತ್ರಕರ್ತ” ಇಮೇಜ್ ಅನ್ನು ಮರಳಿ ಪಡೆಯುವ ಪ್ರಯತ್ನವಾಗಿದೆ ಎನ್ನಲಾಗುತ್ತಿದೆ.

“ಗೋದಿ ಮೀಡಿಯಾ” ಎಂಬ ಟ್ಯಾಗ್ ಅನ್ನು ತೊಡೆದುಹಾಕಲು ಅರ್ನಾಬ್ ಅವರ ವಿಶ್ವಾಸಾರ್ಹತೆ ನಿರ್ವಹಣೆಯ ಭಾಗವಾಗಿರಬಹುದು ಮತ್ತು ಭವಿಷ್ಯದ ಚುನಾವಣಾ ಚಕ್ರಗಳಿಗೆ ಮುಂಚಿತವಾಗಿ, ವಿಶೇಷವಾಗಿ 2029 ರಲ್ಲಿ, ಸಂಪಾದಕೀಯ ಸ್ವಾತಂತ್ರ್ಯವನ್ನು ಪ್ರದರ್ಶಿಸುವ ಮೂಲಕ ರಿಪಬ್ಲಿಕ್ ಟಿವಿಯ ವಿಶ್ವಾಸಾರ್ಹತೆಯನ್ನು ಬಲಪಡಿಸಲು ಅವರು ಪ್ರಯತ್ನಿಸುತ್ತಿರಬಹುದು ಎಂದು ಮತ್ತೊಬ್ಬ ವಿಶ್ಲೇಷಕರು ಹೇಳುತ್ತಾರೆ.

ಆದಾಗ್ಯೂ, ಅರ್ನಬ್ ಬಿಜೆಪಿಯ ಮೇಲೆ ನೇರವಾಗಿ ಮುಗಿಬಿದ್ದಿದ್ದಾರೆ. ಮೋದಿ ಸರ್ಕಾರ ವ್ಯವಸ್ಥಿತ ವೈಫಲ್ಯಗಳು, ಅಧಿಕಾರಶಾಹಿ ವೈಫಲ್ಯಗಳು ಅಥವಾ ನಿರ್ದಿಷ್ಟ ಸಚಿವಾಲಯಗಳನ್ನು ಕಾರ್ಯತಂತ್ರವಾಗಿ ಗುರಿಯಾಗಿಸಿಕೊಂಡಿದ್ದಾರೆ.

ಆ ಮೂಲಕ ಮೋದಿ ಅವರಿಂದ ಬದಲಾವಣೆ ಸಾಧ್ಯ ಎಂದು ನಂಬಿದ್ದ ಪತ್ರಕರ್ತರು, ಕಳೆದ 12 ವರ್ಷಗಳಿಂದ ದೇಶದ ದುಸ್ಥಿಯ ನೋಡಿ ಬೇಸತ್ತು, ತೇಜೋವಧೆ ಮಾಡುವ ಐಟಿ ಸೆಲ್‌ಗೂ ಬೆದರದೇ ಅನೇಕ ಪತ್ರಕರ್ತರು ಮೋದಿ ಸರ್ಕಾರದ ವಿರುದ್ಧ ತಿರುಗಿಬಿದ್ದಿದ್ದಾರೆ.

ಇದರ ನಡುವೆ ಈಗ ರಿಪಬ್ಲಿಕ್ ಟಿವಿ “ಗೋದಿ ಮೀಡಿಯಾ” ಎಂಬ ಹಣೆಪಟ್ಟಿಯಿಂದ ಹೊರಬರಲು ಖ್ಯಾತ ಪತ್ರಕರ್ತ ಅರ್ನಬ್ ಅವರು ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವೈಪಲ್ಯ, ಲೋಪಗಳ ಪ್ರಶ್ನೆ ಮಾಡುತ್ತಿರುವುದು ನಿಷ್ಠಾವಂತ ಪತ್ರಕರ್ತರ ಆತ್ಮಸ್ಥೈರ್ಯ ಹೆಚ್ಚಿಸಿದೆ‌.

ರಾಜಕೀಯ

ಕೇಂದ್ರ ಬಿಜೆಪಿ ಸರ್ಕಾರ ಕರ್ನಾಟಕಕ್ಕೆ ಕೊಟ್ಟ ಖಾಲಿ ಟ್ರಂಕ್ ಹಿಡಿದಿರುವ ತೇಜಸ್ವಿ ಸೂರ್ಯ: ಡಿ.ಕೆ. ಸುರೇಶ್ ವ್ಯಂಗ್ಯ

ಕೇಂದ್ರ ಬಿಜೆಪಿ ಸರ್ಕಾರ ಕರ್ನಾಟಕಕ್ಕೆ ಕೊಟ್ಟ ಖಾಲಿ ಟ್ರಂಕ್ ಹಿಡಿದಿರುವ ತೇಜಸ್ವಿ ಸೂರ್ಯ:

"ಕಳೆದ 12 ವರ್ಷಗಳಿಂದ ಕೇಂದ್ರ ಬಿಜೆಪಿ ಸರ್ಕಾರ ಕರ್ನಾಟಕಕ್ಕೆ ಕೊಟ್ಟಿರುವ ಖಾಲಿ ಟ್ರಂಕ್ ಅನ್ನು ಸಂಸದ ತೇಜಸ್ವಿ ಸೂರ್ಯ ಅವರು ಹಿಡಿದಿರುವುದು" ಎಂದು ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ (D.K. Suresh) ಅವರು ತಿರುಗೇಟು

[ccc_my_favorite_select_button post_id="119275"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

RCB: ಮತ್ತೆ ಕಪ್ ನಮ್ದು

RCB: ಮತ್ತೆ ಕಪ್ ನಮ್ದು

4ನೇ ಆವೃತ್ತಿಯ ಮಹಿಳಾ ಪ್ರೀಮಿ ಯರ್ ಲೀಗ್ (ಡಬ್ಲ್ಯೂಪಿ ಎಲ್) ಟೂರ್ನಿಯಲ್ಲಿ ಸ್ಮೃತಿ ಮಂಧಾನಾ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಚಾಂಪಿಯನ್ ಆಗಿ ಹೊರ ಹೊಮ್ಮಿದ್ದು, ಸಿಎಂ ಸಿದ್ದರಾಮಯ್ಯ (Cmsiddaramaiah), ಡಿಸಿಎಂ

[ccc_my_favorite_select_button post_id="119174"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ದೊಡ್ಡಬಳ್ಳಾಪುರ: ಪತ್ನಿಗೆ ಚಿಕಿತ್ಸೆ ಕೊಡಿಸಿ ಮನೆಗೆ ಕರೆದೊಯ್ಯುತ್ತಿದ್ದವ ಅಪಘಾತದಲ್ಲಿ ಸಾವು.‌.!

ದೊಡ್ಡಬಳ್ಳಾಪುರ: ಪತ್ನಿಗೆ ಚಿಕಿತ್ಸೆ ಕೊಡಿಸಿ ಮನೆಗೆ ಕರೆದೊಯ್ಯುತ್ತಿದ್ದವ ಅಪಘಾತದಲ್ಲಿ ಸಾವು.‌.!

ಮಡದಿಗೆ ಉಂಟಾಗಿದ್ದ ಅನಾರೋಗ್ಯ ಕಾರಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಮನೆಗೆ ಕರೆದೊಯ್ಯುತ್ತಿದ್ದ ವ್ಯಕ್ತಿ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಸಾವನಪ್ಪಿರುವ ಘಟನೆ (Accident) ತಾಲೂಕಿನಲ್ಲಿ ಸಂಭವಿಸಿದೆ.

[ccc_my_favorite_select_button post_id="119259"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!