Will the Modi government give in if Doddaballapura Bandh?!

ದೊಡ್ಡಬಳ್ಳಾಪುರ ಬಂದ್ ಮಾಡಿದರೆ ಮೋದಿ ಸರ್ಕಾರ ಮಣಿಯುವುದೇ..!; ನೇಕಾರರ ಸಮಸ್ಯೆಗೆ ಪರಿಹಾರ ಎಂದು..?

ಕೆ.ಎಂ.ಸಂತೋಷ್, ಆರೂಢಿ (ದೊಡ್ಡಬಳ್ಳಾಪುರ): ಸೂರತ್ನಿಂದ ದೊಡ್ಡಬಳ್ಳಾಪುರಕ್ಕೆ ಬರುತ್ತಿರುವ ಸೀರೆಗಳ ಹಾವಳಿಯಿಂದ ನೇಕಾರಿಕೆ ಉದ್ಯಮದಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಸರಿಪಡಿಸುವಂತೆ ಆಗ್ರಹಿಸಿ ಜ.5 ರಂದು ವಿವಿಧ ನೇಕಾರ ಸಂಘಟನೆಗಳ (weavers’ organizations) ವತಿಯಿಂದ ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಸ್ವಯಂ ಪ್ರೇರಿತ ಬಂದ್ಗೆ (Doddaballapura Bandh) ಕರೆ ನೀಡಲಾಗಿದೆ.

ಈ ಕುರಿತಂತೆ ನಿನ್ನೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖಂಡರು, ನಗರದಲ್ಲಿ ಸುಮಾರು 25 ಸಾವಿರ ವಿದ್ಯುತ್ ಮಗ್ಗಗಳು ಇವೆ. ಇವುಗಳನ್ನು ಅವಲಂಭಿಸಿ ಸಾವಿರಾರು ಕುಟುಂಬಗಳು ಹಾಗೂ ಹಲವಾರು ಉದ್ಯಮಗಳು ಅವಲಂಭಿಸಿವೆ. ಆದರೆ ಈಗ ಸೂರತ್ನಿಂದ ಕಡಿಮೆ ಬೆಲೆಗೆ ಸೀರೆಗಳನ್ನು ತಂದು ಇಲ್ಲಿ ಮಾರಾಟ ಮಾಡುತ್ತಿರುವುದರಿಂದ ಇಲ್ಲಿ ನೇಯಲಾಗುತ್ತಿರುವ ಸೀರೆಗಳನ್ನು ಖರೀದಿಸುವವರೆ ಇಲ್ಲದಂತಾಗಿದೆ.

ಎಂಪಿ, ಎಂಎಲ್‌ಎ ಮಾತನಾಡಿಲ್ಲ..!

ಈ ಬಿಕ್ಕಟಿನ ಕುರಿತು ಸಂಸತ್ ಸದಸ್ಯರು, ಶಾಸಕರು, ಜಿಲ್ಲಾ ಉಸ್ತುವಾರಿ ಸಚಿವರು, ಜವಳಿ ಸಚಿವರು ಹಾಗೂ ಮುಖ್ಯಮಂತ್ರಿಗಳವರೆಗೂ ಮನವಿಗಳನ್ನು ಸಲ್ಲಿಸಲಾಗಿದೆ. ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ವಿದ್ಯುತ್ ಮಗ್ಗಗಳ ನೇಕಾರರ ಸಂಕಷ್ಟದ ಬಗ್ಗೆ ಸ್ಥಳೀಯ ಶಾಸಕರಿಂದ ಮೊದಲುಗೊಂಡು ಯಾರೂ ಸಹ ಮಾತನಾಡಿಲ್ಲ.

ಈ ಹಿನ್ನೆಲೆಯಲ್ಲಿ ವಿದ್ಯುತ್ ಮಗ್ಗಗಳ ನೇಕಾರಿಕೆ ಉಳಿವಿಗಾಗಿ ಆಗ್ರಹಿ ಜ.5 ರಂದು ದೊಡ್ಡಬಳ್ಳಾಪುರ ಸ್ವಯಂ ಪ್ರೇರಿತ ಬಂದ್ಗೆ ಕರೆ ನೀಡಲಾಗಿದೆ. ಈಗಾಗಲೇ ರೈತ ಸಂಘಟನೆಗಳು, ಕಾರ್ಮಿಕ ಸಂಘಟನೆ, ವಿವಿಧ ರಾಜಕೀಯ ಪಕ್ಷಗಳು, ವರ್ತಕರು, ಕನ್ನಡಪರ ಸಂಘಟನೆ ಸೇರಿದಂತೆ ಹಲವಾರು ಮುಖಂಡರೊಂದಿಗೆ ಸಭೆಗಳನ್ನು ನಡೆಸಲಾಗಿದ್ದು ಎಲ್ಲರು ಬಂದ್ಗೆ ಬೆಂಬಲ ಸೂಚಿಸಿದ್ದಾರೆ.

ಇದಲ್ಲದೆ ನೇಕಾರಿಕೆ ಉದ್ಯಮ ಇರುವ ರಾಜ್ಯದ ವಿವಿಧ ತಾಲ್ಲೂಕುಗಳಲ್ಲಿನ ನೇಕಾರರು ಸಹ ಜ.5 ರಂದು ನಮ್ಮ ಬಂದ್ ಬೆಂಬಲಿಸಿ ಹಾಗೂ ನೇಕಾರಿಕೆ ಬಿಕ್ಕಟ್ಟಿನ ಪರಿಹಾರಕ್ಕೆ ರಾಜ್ಯ ಸರ್ಕಾರ ಮುಂದಾಗುವಂತೆ ಆಗ್ರಹಿಸಿ ಅಲ್ಲಿನ ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿಗಳನ್ನು ಸಲ್ಲಿಸಲಿದ್ದಾರೆ ಎಂದಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ನೇಕಾರರ ಸಂಬಂಧಿಸಿದ ಅನೇಕ ಸಂಘಟನೆಗಳ ಮುಖಂಡರು ಹಾಜರಿದ್ದರು.

ದೊಡ್ಡಬಳ್ಳಾಪುರ ಬಂದ್ ಮಾಡಿದರೆ ಮೋದಿ ಸರ್ಕಾರ ಮಣಿಯುವುದೇ..?

ದೊಡ್ಡಬಳ್ಳಾಪುರ ನೇಕಾರಿಗೆ ಪ್ರಸಿದ್ಧಿ ಪಡೆದಿದೆ. ಇತ್ತೀಚೆಗೆ ಹೊರ ರಾಜ್ಯದ ಕಾರ್ಮಿಕರ ಹಾವಳಿ ಬಳಿಕ ರೇಪಿಯಾರ್ ಮಗ್ಗದ ಕುರಿತು ಚರ್ಚೆ, ಪ್ರತಿಭಟನೆ ತೀವ್ರವಾಗಿದೆ.

ಇನ್ನೂ ಪ್ರಮುಖವಾಗಿ ನೇಕಾರಿಕೆ ಬಗ್ಗೆ ಸರಳವಾಗಿ ಹೇಳುವುದಾದರೆ, ಕೈಮಗ್ಗ, ವಿದ್ಯುತ್ ಮಗ್ಗ, ರೇಪಿಯರ್ ಮಗ್ಗ ಚರ್ಚಿತ ವಿಚಾರವಾಗಿದೆ.

ಇದಕ್ಕೆ ಪೂರಕ ಅಂಶ ನೆನಪಿಸುವುದಾದರೆ ಕೈಮಗ್ಗ ಮೀಸಲಾತಿ ಅಧಿನಿಯಮ 1985 ಅಡಿಯಲ್ಲಿ 11 ನಮೂನೆಯ ಬಟ್ಟೆಗಳನ್ನು ವಿದ್ಯುತ್ ಮಗ್ಗಗಳಲ್ಲಿ ಸೀರೆಗಳನ್ನು ನೇಯುವಂತಿಲ್ಲ. ಅದೇ ರೀತಿ ವಿದ್ಯುತ್ ಮಗ್ಗಗಳಲ್ಲಿ ನೇಯಲಾಗುವ ಸೀರೆಗಳನ್ನು ರೇಪಿಯಾರ್ ಮಗ್ಗಗಳಲ್ಲಿ ನೇಯದಂತೆ ನಿಯಮವನ್ನು ಕೇಂದ್ರ ಸರ್ಕಾರ ರೂಪಿಸಬೇಕು ಎಂಬ ಒತ್ತಾಯ ಇಲ್ಲಿ ನೇಕಾರರದ್ದಾಗಿದೆ.

ಇನ್ನೂ ಕರ್ನಾಟಕದ ದೊಡ್ಡಬಳ್ಳಾಪುರ, ಬೆಳಗಾವಿ ಸೇರಿದಂತೆ ಆಂಧ್ರಪ್ರದೇಶ, ತಮಿಳುನಾಡು, ಮಹಾರಾಷ್ಟ್ರಗಳಲ್ಲಿ ಕೂಡ ನೇಕಾರರು ವಿದ್ಯುತ್ ಮಗ್ಗಗಳನ್ನು ಅವಲಂಭಿಸಿ ಜೀವನ ನಡೆಸುತ್ತಿದ್ದಾರೆ.

ಈ ಕಾರಣ ರೇಪಿಯಾರ್ ಮಗ್ಗಗಳನ್ನು ಗುಡಿ ಕೈಗಾರಿಕೆ ಯೋಜನೆಯಿಂದ ಹೊರಗಿಡುವುದು, ರೇಪಿಯರ್ ಮಗ್ಗಗಳ ಸ್ಥಾಪನೆ ಮಾಡುವುದನ್ನು ತಡೆಯಬೇಕೆಂಬುದು ನೇಕಾರರ ಆಗ್ರಹ.

ಆದರೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಇಂದಿನ ಜಾಗತೀಕರಣ ಹಾಗೂ ಮುಕ್ತ ವ್ಯಾಪಾರದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನೇಕಾರರ ಸಮಸ್ಯೆಗೆ ಎಷ್ಟು ಮನ್ನಣೆ ನೀಡುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

ರಾಜಕೀಯ

ದೊಡ್ಡಬಳ್ಳಾಪುರದಲ್ಲಿ ನಾಳೆ ಸೋಮನಾಥ ಜ್ಯೋತಿರ್ಲಿಂಗ ದರ್ಶನ: 100 ದಂಪತಿಗಳಿಂದ ವಿಶೇಷ ರುದ್ರಾರ್ಚನೆ

ದೊಡ್ಡಬಳ್ಳಾಪುರದಲ್ಲಿ ನಾಳೆ ಸೋಮನಾಥ ಜ್ಯೋತಿರ್ಲಿಂಗ ದರ್ಶನ: 100 ದಂಪತಿಗಳಿಂದ ವಿಶೇಷ ರುದ್ರಾರ್ಚನೆ

ಸಾವಿರ ವರ್ಷಗಳ ಇತಿಹಾಸವಿರುವ ಪವಿತ್ರ ಸೋಮನಾಥ ಜ್ಯೋತಿರ್ಲಿಂಗ (Somnath Jyotirlinga Darshan) ಮಾರ್ಚ್ 14ರಂದು ದೊಡ್ಡಬಳ್ಳಾಪುರಕ್ಕೆ ಆಗಮಿಸುತ್ತಿದ್ದು, ಈ ಜ್ಯೋತಿರ್ಲಿಂಗ ದರ್ಶನಕ್ಕೆ ನಗರದ ಸೋಮೇಶ್ವರ ದೇವಾಲಯದಲ್ಲಿ ಭಕ್ತಾದಿಗಳಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ಆರ್ಟ್ ಆಫ್

[ccc_my_favorite_select_button post_id="120187"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!